Homeಅಂತರಾಷ್ಟ್ರೀಯNo Kings : ಅಮೆರಿಕದಾದ್ಯಂತ ಟ್ರಂಪ್ ವಿರುದ್ಧ ಬೃಹತ್ ಪ್ರತಿಭಟನೆ; ಬೀದಿಗಿಳಿದ ಲಕ್ಷಾಂತರ ಜನರು

No Kings : ಅಮೆರಿಕದಾದ್ಯಂತ ಟ್ರಂಪ್ ವಿರುದ್ಧ ಬೃಹತ್ ಪ್ರತಿಭಟನೆ; ಬೀದಿಗಿಳಿದ ಲಕ್ಷಾಂತರ ಜನರು

- Advertisement -
- Advertisement -

ಡೊನಾಲ್ಡ್ ಟ್ರಂಪ್ ಆಡಳಿತದ ವಿರುದ್ಧ ಅಮೆರಿಕದಾದ್ಯಂತ ಶನಿವಾರ (ಮಾ. 28) ದೊಡ್ಡ ಮಟ್ಟದ ‘ನೋ ಕಿಂಗ್ಸ್’ ಪ್ರತಿಭಟನೆಗಳು ನಡೆದಿವೆ.

ಟ್ರಂಪ್ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಾಳಿಗೆ ತೂರಿ, ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಜನರು ಲಕ್ಷಾಂತರ ಸಂಖ್ಯೆಯಲ್ಲಿ ಬೀದಿಗಿಳಿದಿದ್ದರು.

ವರದಿಗಳ ಪ್ರಕಾರ, ಅಮೆರಿಕದ ಎಲ್ಲಾ 50 ರಾಜ್ಯಗಳ ಸುಮಾರು 3,100ಕ್ಕೂ ಹೆಚ್ಚು ಸ್ಥಳಗಳಲ್ಲಿ ಪ್ರತಿಭಟನೆಗಳು ನಡೆದಿದ್ದು, ಅಂದಾಜು 90 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ್ದಾರೆ.

ನ್ಯೂಯಾರ್ಕ್, ವಾಷಿಂಗ್ಟನ್ ಡಿಸಿ, ಚಿಕಾಗೋ, ಲಾಸ್ ಏಂಜಲೀಸ್, ಸಿಯಾಟಲ್ ಮತ್ತು ಮಿನ್ನಿಯಾಪೋಲಿಸ್ ಸೇರಿದಂತೆ ಪ್ರಮುಖ ನಗರಗಳಲ್ಲಿ ಬೃಹತ್ ರ‍್ಯಾಲಿಗಳು ನಡೆದಿವೆ.

ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್‌ನ ಮಿಲಿಟರಿ ದಾಳಿ ಹಾಗೂ ಯುದ್ಧದ ನೀತಿಗಳ ವಿರುದ್ಧ ಪ್ರತಿಭಟನೆಯಲ್ಲಿ ಪಾಲ್ಗೊಂಡ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟ್ರಂಪ್ ಆಡಳಿತ ಸರ್ವಾಧಿಕಾರದ ಹಾದಿ ಹಿಡಿದಿದೆ ಮತ್ತು ನಾಗರಿಕ ಸ್ವಾತಂತ್ರ್ಯವನ್ನು ಹತ್ತಿಕ್ಕುತ್ತಿದೆ ಎಂದು ಆರೋಪಿಸಿದ್ದಾರೆ.

‘50501 ಮೂವ್‌ಮೆಂಟ್’, ‘ಇಂಡಿವಿಸಿಬಲ್’ ಮತ್ತು ‘ಮೂವ್ ಆನ್’ ನಂತಹ ನಾಗರಿಕ ಸಂಘಟನೆಗಳು ಪ್ರತಿಭಟನೆಗಳನ್ನು ಆಯೋಜಿಸಿದ್ದವು. ಡೆಮೋಕ್ರಾಟಿಕ್ ಪಕ್ಷದ ಪ್ರಮುಖ ನಾಯಕರಾದ ಬರ್ನಿ ಸ್ಯಾಂಡರ್ಸ್ ಮತ್ತು ಅಲೆಕ್ಸಾಂಡ್ರಿಯಾ ಒಕಾಸಿಯೊ-ಕಾರ್ಟೆಜ್ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರು.

ಅಮೆರಿಕ ಮಾತ್ರವಲ್ಲದೆ, ಲಂಡನ್ ಮತ್ತು ಪ್ಯಾರಿಸ್ ಸೇರಿದಂತೆ ಯುರೋಪಿನ ಹಲವು ಪ್ರಮುಖ ನಗರಗಳಲ್ಲೂ ಈ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ರ‍್ಯಾಲಿಗಳನ್ನು ನಡೆಸಲಾಗಿದೆ ಎಂದು ವರದಿಯಾಗಿದೆ.

ಅಮೆರಿಕದ ಹೊರತಾಗಿಯೂ, ಸುಮಾರು 15ಕ್ಕೂ ಹೆಚ್ಚು ದೇಶಗಳಲ್ಲಿ ಪ್ರತಿಭಟನೆಗಳು ನಡೆದಿವೆ. ಸಾಂಪ್ರದಾಯಿಕ ರಾಜಪ್ರಭುತ್ವವಿರುವ ದೇಶಗಳಲ್ಲಿ ಈ ಚಳವಳಿಯನ್ನು “ನೋ ಟೈರಂಟ್ಸ್” ಎಂಬ ಹೆಸರಿನಡಿ ಆಯೋಜಿಸಲಾಗಿತ್ತು. 

ಅಮೆರಿಕದ ಕೇವಲ ದೊಡ್ಡ ನಗರಗಳಲ್ಲದೆ, ಇಡಾಹೊ ಮತ್ತು ವ್ಯೋಮಿಂಗ್‌ನಂತಹ ಸಂಪ್ರದಾಯವಾದಿ ರಾಜ್ಯಗಳ ಸಣ್ಣ ಗ್ರಾಮಗಳಲ್ಲೂ ‘ನೋ ಕಿಂಗ್ಸ್’ ರ‍್ಯಾಲಿಗಳು ನಡೆದಿವೆ ಎಂದು ವರದಿಗಳು ಹೇಳಿವೆ.

ಶ್ವೇತಭವನ ಈ ಪ್ರತಿಭಟನೆಗಳನ್ನು ‘ಎಡಪಂಥೀಯ ನಿಧಿ ಜಾಲಗಳ ಉತ್ಪನ್ನ’ ಎಂದು ವ್ಯಗ್ಯಂವಾಡಿದೆ. ಟ್ರಂಪ್ ಬೆಂಬಲಿಗರು ಪ್ರತಿಭಟನೆಯಲ್ಲಿ ಪಾಲ್ಗೊಂಡವರನ್ನು ಮತ್ತು ಬೆಂಬಲಿಸಿದವರನ್ನು ಟೀಕಿಸಿದ್ದಾರೆ.

ಶ್ವೇತಭವನದ ವಕ್ತಾರರು ಈ ಪ್ರತಿಭಟನೆಗಳನ್ನು “ಟ್ರಂಪ್ ಡರೇಂಜ್‌ಮೆಂಟ್ ಥೆರಪಿ ಸೆಷನ್ಸ್” ಎಂದು ಕರೆದು ಲೇವಡಿ ಮಾಡಿದ್ದಾರೆ.

ಡಲ್ಲಾಸ್‌ನಂತಹ ಕೆಲವು ನಗರಗಳಲ್ಲಿ ಪ್ರತಿಭಟನಾಕಾರರು ಮತ್ತು ಟ್ರಂಪ್ ಬೆಂಬಲಿಗರ (Proud Boys ನಂತಹ ಸಂಘಟನೆಗಳು) ನಡುವೆ ಸಣ್ಣ ಮಟ್ಟದ ಘರ್ಷಣೆಗಳು ನಡೆದು, ಹಲವರನ್ನು ಬಂಧಿಸಲಾಗಿದೆ.

ಪ್ರತಿಭಟನೆಗೆ ಕಾರಣವೇನು?

ಅಮೆರಿಕ ಮತ್ತು ಇಸ್ರೇಲ್‌ನ ಇರಾನ್ ಮೇಲಿನ ಮಿಲಿಟರಿ ಕ್ರಮ ಪ್ರತಿಭಟನೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಸಿಕ್ಕ ಸಿಕ್ಕ ರಾಷ್ಟ್ರಗಳ ಮೇಲೆ ದಾಳಿ ಮಾಡುವ ಟ್ರಂಪ್‌ನ ಯುದ್ಧ ನೀತಿಯ ವಿರುದ್ದ ಜನಾಕ್ರೋಶ ಭುಗಿಲೆದ್ದಿದೆ.

ಇದರ ಜೊತೆಗೆ, ಇತ್ತೀಚೆಗೆ ಮಿನ್ನಿಯಾಪೋಲಿಸ್‌ನಲ್ಲಿ ನಡೆದ ಐಸಿಇ ಏಜೆಂಟ್‌ಗಳ ಗುಂಡಿನ ದಾಳಿಯಲ್ಲಿ ಅಲೆಕ್ಸ್ ಪ್ರೆಟ್ಟಿ ಸೇರಿದಂತೆ ಮೂವರು ನಾಗರಿಕರ ಸಾವಿನ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಹಾಗೂ, ಅಮೆರಿಕದಲ್ಲಿ ಏರುತ್ತಿರುವ ಹಣದುಬ್ಬರ ಮತ್ತು ಮೂಲಭೂತ ವಸ್ತುಗಳ ಬೆಲೆ ಏರಿಕೆಯನ್ನು ಪ್ರತಿಭಟನಾಕಾರರು ವಿರೋಧಿಸಿದ್ದಾರೆ.

ಈ ಪ್ರತಿಭಟನೆಯು ಮುಂದಿನ ಅಮೆರಿಕದ ಮಧ್ಯಂತರ ಚುನಾವಣೆಗಳ ಮೇಲೆ ಭಾರಿ ಪ್ರಭಾವ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...