Homeಅಂತರಾಷ್ಟ್ರೀಯNo Kings : ಅಮೆರಿಕದಾದ್ಯಂತ ಟ್ರಂಪ್ ವಿರುದ್ಧ ಬೃಹತ್ ಪ್ರತಿಭಟನೆ; ಬೀದಿಗಿಳಿದ ಲಕ್ಷಾಂತರ ಜನರು

No Kings : ಅಮೆರಿಕದಾದ್ಯಂತ ಟ್ರಂಪ್ ವಿರುದ್ಧ ಬೃಹತ್ ಪ್ರತಿಭಟನೆ; ಬೀದಿಗಿಳಿದ ಲಕ್ಷಾಂತರ ಜನರು

- Advertisement -
- Advertisement -

ಡೊನಾಲ್ಡ್ ಟ್ರಂಪ್ ಆಡಳಿತದ ವಿರುದ್ಧ ಅಮೆರಿಕದಾದ್ಯಂತ ಶನಿವಾರ (ಮಾ. 28) ದೊಡ್ಡ ಮಟ್ಟದ ‘ನೋ ಕಿಂಗ್ಸ್’ ಪ್ರತಿಭಟನೆಗಳು ನಡೆದಿವೆ.

ಟ್ರಂಪ್ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಾಳಿಗೆ ತೂರಿ, ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಜನರು ಲಕ್ಷಾಂತರ ಸಂಖ್ಯೆಯಲ್ಲಿ ಬೀದಿಗಿಳಿದಿದ್ದರು.

ವರದಿಗಳ ಪ್ರಕಾರ, ಅಮೆರಿಕದ ಎಲ್ಲಾ 50 ರಾಜ್ಯಗಳ ಸುಮಾರು 3,100ಕ್ಕೂ ಹೆಚ್ಚು ಸ್ಥಳಗಳಲ್ಲಿ ಪ್ರತಿಭಟನೆಗಳು ನಡೆದಿದ್ದು, ಅಂದಾಜು 90 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ್ದಾರೆ.

ನ್ಯೂಯಾರ್ಕ್, ವಾಷಿಂಗ್ಟನ್ ಡಿಸಿ, ಚಿಕಾಗೋ, ಲಾಸ್ ಏಂಜಲೀಸ್, ಸಿಯಾಟಲ್ ಮತ್ತು ಮಿನ್ನಿಯಾಪೋಲಿಸ್ ಸೇರಿದಂತೆ ಪ್ರಮುಖ ನಗರಗಳಲ್ಲಿ ಬೃಹತ್ ರ‍್ಯಾಲಿಗಳು ನಡೆದಿವೆ.

ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್‌ನ ಮಿಲಿಟರಿ ದಾಳಿ ಹಾಗೂ ಯುದ್ಧದ ನೀತಿಗಳ ವಿರುದ್ಧ ಪ್ರತಿಭಟನೆಯಲ್ಲಿ ಪಾಲ್ಗೊಂಡ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟ್ರಂಪ್ ಆಡಳಿತ ಸರ್ವಾಧಿಕಾರದ ಹಾದಿ ಹಿಡಿದಿದೆ ಮತ್ತು ನಾಗರಿಕ ಸ್ವಾತಂತ್ರ್ಯವನ್ನು ಹತ್ತಿಕ್ಕುತ್ತಿದೆ ಎಂದು ಆರೋಪಿಸಿದ್ದಾರೆ.

‘50501 ಮೂವ್‌ಮೆಂಟ್’, ‘ಇಂಡಿವಿಸಿಬಲ್’ ಮತ್ತು ‘ಮೂವ್ ಆನ್’ ನಂತಹ ನಾಗರಿಕ ಸಂಘಟನೆಗಳು ಪ್ರತಿಭಟನೆಗಳನ್ನು ಆಯೋಜಿಸಿದ್ದವು. ಡೆಮೋಕ್ರಾಟಿಕ್ ಪಕ್ಷದ ಪ್ರಮುಖ ನಾಯಕರಾದ ಬರ್ನಿ ಸ್ಯಾಂಡರ್ಸ್ ಮತ್ತು ಅಲೆಕ್ಸಾಂಡ್ರಿಯಾ ಒಕಾಸಿಯೊ-ಕಾರ್ಟೆಜ್ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರು.

ಅಮೆರಿಕ ಮಾತ್ರವಲ್ಲದೆ, ಲಂಡನ್ ಮತ್ತು ಪ್ಯಾರಿಸ್ ಸೇರಿದಂತೆ ಯುರೋಪಿನ ಹಲವು ಪ್ರಮುಖ ನಗರಗಳಲ್ಲೂ ಈ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ರ‍್ಯಾಲಿಗಳನ್ನು ನಡೆಸಲಾಗಿದೆ ಎಂದು ವರದಿಯಾಗಿದೆ.

ಅಮೆರಿಕದ ಹೊರತಾಗಿಯೂ, ಸುಮಾರು 15ಕ್ಕೂ ಹೆಚ್ಚು ದೇಶಗಳಲ್ಲಿ ಪ್ರತಿಭಟನೆಗಳು ನಡೆದಿವೆ. ಸಾಂಪ್ರದಾಯಿಕ ರಾಜಪ್ರಭುತ್ವವಿರುವ ದೇಶಗಳಲ್ಲಿ ಈ ಚಳವಳಿಯನ್ನು “ನೋ ಟೈರಂಟ್ಸ್” ಎಂಬ ಹೆಸರಿನಡಿ ಆಯೋಜಿಸಲಾಗಿತ್ತು. 

ಅಮೆರಿಕದ ಕೇವಲ ದೊಡ್ಡ ನಗರಗಳಲ್ಲದೆ, ಇಡಾಹೊ ಮತ್ತು ವ್ಯೋಮಿಂಗ್‌ನಂತಹ ಸಂಪ್ರದಾಯವಾದಿ ರಾಜ್ಯಗಳ ಸಣ್ಣ ಗ್ರಾಮಗಳಲ್ಲೂ ‘ನೋ ಕಿಂಗ್ಸ್’ ರ‍್ಯಾಲಿಗಳು ನಡೆದಿವೆ ಎಂದು ವರದಿಗಳು ಹೇಳಿವೆ.

ಶ್ವೇತಭವನ ಈ ಪ್ರತಿಭಟನೆಗಳನ್ನು ‘ಎಡಪಂಥೀಯ ನಿಧಿ ಜಾಲಗಳ ಉತ್ಪನ್ನ’ ಎಂದು ವ್ಯಗ್ಯಂವಾಡಿದೆ. ಟ್ರಂಪ್ ಬೆಂಬಲಿಗರು ಪ್ರತಿಭಟನೆಯಲ್ಲಿ ಪಾಲ್ಗೊಂಡವರನ್ನು ಮತ್ತು ಬೆಂಬಲಿಸಿದವರನ್ನು ಟೀಕಿಸಿದ್ದಾರೆ.

ಶ್ವೇತಭವನದ ವಕ್ತಾರರು ಈ ಪ್ರತಿಭಟನೆಗಳನ್ನು “ಟ್ರಂಪ್ ಡರೇಂಜ್‌ಮೆಂಟ್ ಥೆರಪಿ ಸೆಷನ್ಸ್” ಎಂದು ಕರೆದು ಲೇವಡಿ ಮಾಡಿದ್ದಾರೆ.

ಡಲ್ಲಾಸ್‌ನಂತಹ ಕೆಲವು ನಗರಗಳಲ್ಲಿ ಪ್ರತಿಭಟನಾಕಾರರು ಮತ್ತು ಟ್ರಂಪ್ ಬೆಂಬಲಿಗರ (Proud Boys ನಂತಹ ಸಂಘಟನೆಗಳು) ನಡುವೆ ಸಣ್ಣ ಮಟ್ಟದ ಘರ್ಷಣೆಗಳು ನಡೆದು, ಹಲವರನ್ನು ಬಂಧಿಸಲಾಗಿದೆ.

ಪ್ರತಿಭಟನೆಗೆ ಕಾರಣವೇನು?

ಅಮೆರಿಕ ಮತ್ತು ಇಸ್ರೇಲ್‌ನ ಇರಾನ್ ಮೇಲಿನ ಮಿಲಿಟರಿ ಕ್ರಮ ಪ್ರತಿಭಟನೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಸಿಕ್ಕ ಸಿಕ್ಕ ರಾಷ್ಟ್ರಗಳ ಮೇಲೆ ದಾಳಿ ಮಾಡುವ ಟ್ರಂಪ್‌ನ ಯುದ್ಧ ನೀತಿಯ ವಿರುದ್ದ ಜನಾಕ್ರೋಶ ಭುಗಿಲೆದ್ದಿದೆ.

ಇದರ ಜೊತೆಗೆ, ಇತ್ತೀಚೆಗೆ ಮಿನ್ನಿಯಾಪೋಲಿಸ್‌ನಲ್ಲಿ ನಡೆದ ಐಸಿಇ ಏಜೆಂಟ್‌ಗಳ ಗುಂಡಿನ ದಾಳಿಯಲ್ಲಿ ಅಲೆಕ್ಸ್ ಪ್ರೆಟ್ಟಿ ಸೇರಿದಂತೆ ಮೂವರು ನಾಗರಿಕರ ಸಾವಿನ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಹಾಗೂ, ಅಮೆರಿಕದಲ್ಲಿ ಏರುತ್ತಿರುವ ಹಣದುಬ್ಬರ ಮತ್ತು ಮೂಲಭೂತ ವಸ್ತುಗಳ ಬೆಲೆ ಏರಿಕೆಯನ್ನು ಪ್ರತಿಭಟನಾಕಾರರು ವಿರೋಧಿಸಿದ್ದಾರೆ.

ಈ ಪ್ರತಿಭಟನೆಯು ಮುಂದಿನ ಅಮೆರಿಕದ ಮಧ್ಯಂತರ ಚುನಾವಣೆಗಳ ಮೇಲೆ ಭಾರಿ ಪ್ರಭಾವ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...