Homeಮುಖಪುಟಕಾಂಗ್ರೆಸ್‌ನಲ್ಲಿ ನಾಯಕತ್ವ ಬಿಕ್ಕಟ್ಟಿಲ್ಲ, ಸೋನಿಯಾ- ರಾಹುಲ್‌ಗೆ ಬೆಂಬಲವಿದೆ: ಸಲ್ಮಾನ್ ಖುರ್ಷಿದ್

ಕಾಂಗ್ರೆಸ್‌ನಲ್ಲಿ ನಾಯಕತ್ವ ಬಿಕ್ಕಟ್ಟಿಲ್ಲ, ಸೋನಿಯಾ- ರಾಹುಲ್‌ಗೆ ಬೆಂಬಲವಿದೆ: ಸಲ್ಮಾನ್ ಖುರ್ಷಿದ್

ತಮ್ಮ ವಿಚಾರಗಳ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಲು ಕಾಂಗ್ರೆಸ್‌ನಲ್ಲಿ ಸಾಕಷ್ಟು ವೇದಿಕೆಗಳಿವೆ. ಕಾಂಗ್ರೆಸ್ ನಾಯಕತ್ವವು ನನ್ನ ಮಾತುಗಳನ್ನು ಕೇಳುತ್ತದೆ, ನನಗೆ ಅವಕಾಶ ನೀಡಲಾಗಿದೆ.

- Advertisement -
- Advertisement -

ಬಿಹಾರ ಚುನಾವಣೆ ಮತ್ತು ವಿಧಾನಸಭೆ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಕಳಪೆ ಪ್ರದರ್ಶನದ ಬಗ್ಗೆ ಪಕ್ಷದ ಕೆಲವು ರಾಜ್ಯಗಳ ನಾಯಕರ ಟೀಕೆಗಳನ್ನು ರಾಹುಲ್ ಗಾಂಧಿ ಮತ್ತು ಅಧ್ಯಕ್ಷೆ ಸೋನಿಯಾ ಗಾಂಧಿ ಎದುರಿಸಿದ್ದರು. ಈಗ ಪಕ್ಷದ ಹಿರಿಯ ನಾಯಕ ಸಲ್ಮಾನ್ ಖುರ್ಷಿದ್, ಪಕ್ಷದಲ್ಲಿ ಯಾವುದೇ ನಾಯಕತ್ವ ಬಿಕ್ಕಟ್ಟು ಇಲ್ಲ. ಯಾರೂ ಸೋನಿಯಾ ಗಾಂಧಿ ಮತ್ತು ರಾಹುಲ್ ಅವರಿಗೆ ಕುರುಡುತನದಿಂದ ಬೆಂಬಲಿಸುತ್ತಿಲ್ಲ ಎಂದು ಹೇಳಿದ್ದಾರೆ.

ತಮ್ಮ ವಿಚಾರಗಳ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಲು ಕಾಂಗ್ರೆಸ್‌ನಲ್ಲಿ ಸಾಕಷ್ಟು ವೇದಿಕೆಗಳಿವೆ. “ಕಾಂಗ್ರೆಸ್ ನಾಯಕತ್ವವು ನನ್ನ ಮಾತುಗಳನ್ನು ಕೇಳುತ್ತದೆ, ನನಗೆ ಅವಕಾಶ ನೀಡಲಾಗಿದೆ, ಮಾಧ್ಯಮಗಳಲ್ಲಿ ಟೀಕಿಸುವವರಿಗೂ ಅವಕಾಶ ನೀಡಲಾಗುತ್ತದೆ. ಆದರೆ ನಾಯಕತ್ವ ತಮ್ಮ ಮಾತುಗಳನ್ನು ಕೇಳುತ್ತಿಲ್ಲ ಎಂಬ ವಿಚಾರಗಳು ಎಲ್ಲಿಂದ ಬರುತ್ತವೆ ಎಂಬುದು ಗೊತ್ತಿಲ್ಲ” ಎಂದು ಖುರ್ಷಿದ್ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಇತ್ತೀಚೆಗೆ, ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್, ಜನರು ಇನ್ನು ಮುಂದೆ ಪಕ್ಷವನ್ನು “ಪರಿಣಾಮಕಾರಿ ಪರ್ಯಾಯ” ವಾಗಿ ನೋಡುತ್ತಿಲ್ಲ. ಈ ಕುರಿತು ಪಕ್ಷದ ನಾಯಕತ್ವವು ಈ ಸಮಸ್ಯೆಯನ್ನು ಬಗೆಹರಿಸುತ್ತಿಲ್ಲ ಎಂದು ಸಾರ್ವಜನಿಕವಾಗಿ ಹೇಳಿದರು. “ಕಾಂಗ್ರೆಸ್‌ಗೆ ಅದು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಉತ್ತರಗಳು ಸಹ ತಿಳಿದಿದೆ, ಆದರೆ ಅವುಗಳನ್ನು ಗುರುತಿಸಲು ನಾಯಕತ್ವ ಸಿದ್ಧವಿಲ್ಲ” ಎಂದು ಹೇಳಿದರು. ಇದನ್ನೇ ಸಂಸದರಾದ ವಿವೇಕ್ ತಂಖಾ ಮತ್ತು ಕಾರ್ತಿ ಚಿದಂಬರಂ ಕೂಡ ಪುನರುಚ್ಚರಿಸಿದ್ದರು.

ಇದನ್ನೂ ಓದಿ: ಬಿಹಾರದ ಹಂಗಾಮಿ ಸ್ಪೀಕರ್‌ ಆಗಿ ಜಿತನ್ ರಾಮ್ ಮಾಂಜಿ ಪ್ರಮಾಣ ವಚನ- ಯಾರಿವರು ?

“ಚುನಾವಣೆಗಳ ನಂತರ ವಿಶ್ಲೇಷಣೆ ಮಾಡಲಾಗುತ್ತದೆ, ವಿಶ್ಲೇಷಣೆಯ ಬಗ್ಗೆ ಯಾವುದೇ ಜಗಳವಿಲ್ಲ. ಎಲ್ಲರೂ ಒಟ್ಟಾಗಿ ಈ ಕುರಿತು, ನಾವು ಹೇಗೆ ಸುಧಾರಿಸಬಹುದು, ಎಲ್ಲಿ ತಪ್ಪಾಗಿರಬಹುದು ಎಂಬ ಬಗ್ಗೆ ಚರ್ಚೆ ಮಾಡಬಜಹುದು ಇದನ್ನು ಸಾರ್ವಜನಿಕವಾಗಿ ಹೇಳುವ ಅಗತ್ಯವಿಲ್ಲ” ಎಂದು ಅಸಹನೆ ವ್ಯಕ್ತಪಡಿಸಿದ್ದಾರೆ.

ಪಕ್ಷಕ್ಕೆ ಒಬ್ಬ ಅಧಿಕೃತ ಅಧ್ಯಕ್ಷರನ್ನು ಮಾಡಬೇಕಲ್ಲವೆ ಎಂಬುದಕ್ಕೆ, “ಬಹುಜನ ಸಮಾಜವಾದಿ ಪಕ್ಷದಲ್ಲಿ ಅಧ್ಯಕ್ಷರು ಇಲ್ಲ, ಎಡಪಂಥೀಯ ಪಕ್ಷಗಳಲ್ಲಿ ಅಧ್ಯಕ್ಷರು ಇಲ್ಲ, ಪ್ರಧಾನ ಕಾರ್ಯದರ್ಶಿಗಳು ಮಾತ್ರ ಇದೆ. ಪ್ರತಿ ಪಕ್ಷವೂ ಒಂದೇ ಮಾದರಿಯನ್ನು ಅನುಸರಿಸಲು ಸಾಧ್ಯವಿಲ್ಲ”ಎಂದು ಸಲ್ಮಾನ್ ಖುರ್ಷಿದ್ ತಿಳಿಸಿದ್ದಾರೆ.

ಇನ್ನು, ಕಾಂಗ್ರೆಸ್‌ನಲ್ಲಿ ಎಲ್ಲರೂ ತಮ್ಮ ನಾಯಕರಾಗಿ ರಾಹುಲ್ ಗಾಂಧಿಯವರನ್ನು ಬೆಂಬಲಿಸುತ್ತಾರೆಯೇ ಎಂಬ ಪ್ರಶ್ನೆಗೆ, ಖುರ್ಷಿದ್, “ಯಾರಿಗಾದರೂ ಇದು ಸ್ಪಷ್ಟವಾಗಿದೆ ಎಂದು ನಾನು ಭಾವಿಸುತ್ತೇನೆ,  ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಜೀ ಮತ್ತು ರಾಹುಲ್ ಗಾಂಧಿಯನ್ನು ಎಲ್ಲರೂ ಸಂಪೂರ್ಣವಾಗಿ ಬೆಂಬಲಿಸುತ್ತಾರೆ” ಎಂದಿದ್ದಾರೆ.


ಇದನ್ನೂ ಓದಿ: ಬಿಹಾರ ಮಹಾಘಟಬಂಧನ್‌ನಲ್ಲಿ ಬಿರುಕು: ಚುನಾವಣೆಯ ಸಮಯದಲ್ಲಿ ರಾಹುಲ್ ಪಿಕ್‌ನಿಕ್‌ನಲ್ಲಿದ್ದರು ಎಂದ RJD ನಾಯಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...