Homeಮುಖಪುಟಕಾಂಗ್ರೆಸ್‌ನಲ್ಲಿ ನಾಯಕತ್ವ ಬಿಕ್ಕಟ್ಟಿಲ್ಲ, ಸೋನಿಯಾ- ರಾಹುಲ್‌ಗೆ ಬೆಂಬಲವಿದೆ: ಸಲ್ಮಾನ್ ಖುರ್ಷಿದ್

ಕಾಂಗ್ರೆಸ್‌ನಲ್ಲಿ ನಾಯಕತ್ವ ಬಿಕ್ಕಟ್ಟಿಲ್ಲ, ಸೋನಿಯಾ- ರಾಹುಲ್‌ಗೆ ಬೆಂಬಲವಿದೆ: ಸಲ್ಮಾನ್ ಖುರ್ಷಿದ್

ತಮ್ಮ ವಿಚಾರಗಳ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಲು ಕಾಂಗ್ರೆಸ್‌ನಲ್ಲಿ ಸಾಕಷ್ಟು ವೇದಿಕೆಗಳಿವೆ. ಕಾಂಗ್ರೆಸ್ ನಾಯಕತ್ವವು ನನ್ನ ಮಾತುಗಳನ್ನು ಕೇಳುತ್ತದೆ, ನನಗೆ ಅವಕಾಶ ನೀಡಲಾಗಿದೆ.

- Advertisement -
- Advertisement -

ಬಿಹಾರ ಚುನಾವಣೆ ಮತ್ತು ವಿಧಾನಸಭೆ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಕಳಪೆ ಪ್ರದರ್ಶನದ ಬಗ್ಗೆ ಪಕ್ಷದ ಕೆಲವು ರಾಜ್ಯಗಳ ನಾಯಕರ ಟೀಕೆಗಳನ್ನು ರಾಹುಲ್ ಗಾಂಧಿ ಮತ್ತು ಅಧ್ಯಕ್ಷೆ ಸೋನಿಯಾ ಗಾಂಧಿ ಎದುರಿಸಿದ್ದರು. ಈಗ ಪಕ್ಷದ ಹಿರಿಯ ನಾಯಕ ಸಲ್ಮಾನ್ ಖುರ್ಷಿದ್, ಪಕ್ಷದಲ್ಲಿ ಯಾವುದೇ ನಾಯಕತ್ವ ಬಿಕ್ಕಟ್ಟು ಇಲ್ಲ. ಯಾರೂ ಸೋನಿಯಾ ಗಾಂಧಿ ಮತ್ತು ರಾಹುಲ್ ಅವರಿಗೆ ಕುರುಡುತನದಿಂದ ಬೆಂಬಲಿಸುತ್ತಿಲ್ಲ ಎಂದು ಹೇಳಿದ್ದಾರೆ.

ತಮ್ಮ ವಿಚಾರಗಳ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಲು ಕಾಂಗ್ರೆಸ್‌ನಲ್ಲಿ ಸಾಕಷ್ಟು ವೇದಿಕೆಗಳಿವೆ. “ಕಾಂಗ್ರೆಸ್ ನಾಯಕತ್ವವು ನನ್ನ ಮಾತುಗಳನ್ನು ಕೇಳುತ್ತದೆ, ನನಗೆ ಅವಕಾಶ ನೀಡಲಾಗಿದೆ, ಮಾಧ್ಯಮಗಳಲ್ಲಿ ಟೀಕಿಸುವವರಿಗೂ ಅವಕಾಶ ನೀಡಲಾಗುತ್ತದೆ. ಆದರೆ ನಾಯಕತ್ವ ತಮ್ಮ ಮಾತುಗಳನ್ನು ಕೇಳುತ್ತಿಲ್ಲ ಎಂಬ ವಿಚಾರಗಳು ಎಲ್ಲಿಂದ ಬರುತ್ತವೆ ಎಂಬುದು ಗೊತ್ತಿಲ್ಲ” ಎಂದು ಖುರ್ಷಿದ್ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಇತ್ತೀಚೆಗೆ, ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್, ಜನರು ಇನ್ನು ಮುಂದೆ ಪಕ್ಷವನ್ನು “ಪರಿಣಾಮಕಾರಿ ಪರ್ಯಾಯ” ವಾಗಿ ನೋಡುತ್ತಿಲ್ಲ. ಈ ಕುರಿತು ಪಕ್ಷದ ನಾಯಕತ್ವವು ಈ ಸಮಸ್ಯೆಯನ್ನು ಬಗೆಹರಿಸುತ್ತಿಲ್ಲ ಎಂದು ಸಾರ್ವಜನಿಕವಾಗಿ ಹೇಳಿದರು. “ಕಾಂಗ್ರೆಸ್‌ಗೆ ಅದು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಉತ್ತರಗಳು ಸಹ ತಿಳಿದಿದೆ, ಆದರೆ ಅವುಗಳನ್ನು ಗುರುತಿಸಲು ನಾಯಕತ್ವ ಸಿದ್ಧವಿಲ್ಲ” ಎಂದು ಹೇಳಿದರು. ಇದನ್ನೇ ಸಂಸದರಾದ ವಿವೇಕ್ ತಂಖಾ ಮತ್ತು ಕಾರ್ತಿ ಚಿದಂಬರಂ ಕೂಡ ಪುನರುಚ್ಚರಿಸಿದ್ದರು.

ಇದನ್ನೂ ಓದಿ: ಬಿಹಾರದ ಹಂಗಾಮಿ ಸ್ಪೀಕರ್‌ ಆಗಿ ಜಿತನ್ ರಾಮ್ ಮಾಂಜಿ ಪ್ರಮಾಣ ವಚನ- ಯಾರಿವರು ?

“ಚುನಾವಣೆಗಳ ನಂತರ ವಿಶ್ಲೇಷಣೆ ಮಾಡಲಾಗುತ್ತದೆ, ವಿಶ್ಲೇಷಣೆಯ ಬಗ್ಗೆ ಯಾವುದೇ ಜಗಳವಿಲ್ಲ. ಎಲ್ಲರೂ ಒಟ್ಟಾಗಿ ಈ ಕುರಿತು, ನಾವು ಹೇಗೆ ಸುಧಾರಿಸಬಹುದು, ಎಲ್ಲಿ ತಪ್ಪಾಗಿರಬಹುದು ಎಂಬ ಬಗ್ಗೆ ಚರ್ಚೆ ಮಾಡಬಜಹುದು ಇದನ್ನು ಸಾರ್ವಜನಿಕವಾಗಿ ಹೇಳುವ ಅಗತ್ಯವಿಲ್ಲ” ಎಂದು ಅಸಹನೆ ವ್ಯಕ್ತಪಡಿಸಿದ್ದಾರೆ.

ಪಕ್ಷಕ್ಕೆ ಒಬ್ಬ ಅಧಿಕೃತ ಅಧ್ಯಕ್ಷರನ್ನು ಮಾಡಬೇಕಲ್ಲವೆ ಎಂಬುದಕ್ಕೆ, “ಬಹುಜನ ಸಮಾಜವಾದಿ ಪಕ್ಷದಲ್ಲಿ ಅಧ್ಯಕ್ಷರು ಇಲ್ಲ, ಎಡಪಂಥೀಯ ಪಕ್ಷಗಳಲ್ಲಿ ಅಧ್ಯಕ್ಷರು ಇಲ್ಲ, ಪ್ರಧಾನ ಕಾರ್ಯದರ್ಶಿಗಳು ಮಾತ್ರ ಇದೆ. ಪ್ರತಿ ಪಕ್ಷವೂ ಒಂದೇ ಮಾದರಿಯನ್ನು ಅನುಸರಿಸಲು ಸಾಧ್ಯವಿಲ್ಲ”ಎಂದು ಸಲ್ಮಾನ್ ಖುರ್ಷಿದ್ ತಿಳಿಸಿದ್ದಾರೆ.

ಇನ್ನು, ಕಾಂಗ್ರೆಸ್‌ನಲ್ಲಿ ಎಲ್ಲರೂ ತಮ್ಮ ನಾಯಕರಾಗಿ ರಾಹುಲ್ ಗಾಂಧಿಯವರನ್ನು ಬೆಂಬಲಿಸುತ್ತಾರೆಯೇ ಎಂಬ ಪ್ರಶ್ನೆಗೆ, ಖುರ್ಷಿದ್, “ಯಾರಿಗಾದರೂ ಇದು ಸ್ಪಷ್ಟವಾಗಿದೆ ಎಂದು ನಾನು ಭಾವಿಸುತ್ತೇನೆ,  ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಜೀ ಮತ್ತು ರಾಹುಲ್ ಗಾಂಧಿಯನ್ನು ಎಲ್ಲರೂ ಸಂಪೂರ್ಣವಾಗಿ ಬೆಂಬಲಿಸುತ್ತಾರೆ” ಎಂದಿದ್ದಾರೆ.


ಇದನ್ನೂ ಓದಿ: ಬಿಹಾರ ಮಹಾಘಟಬಂಧನ್‌ನಲ್ಲಿ ಬಿರುಕು: ಚುನಾವಣೆಯ ಸಮಯದಲ್ಲಿ ರಾಹುಲ್ ಪಿಕ್‌ನಿಕ್‌ನಲ್ಲಿದ್ದರು ಎಂದ RJD ನಾಯಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...