Homeಮುಖಪುಟಕಾಂಗ್ರೆಸ್‌ನಲ್ಲಿ ನಾಯಕತ್ವ ಬಿಕ್ಕಟ್ಟಿಲ್ಲ, ಸೋನಿಯಾ- ರಾಹುಲ್‌ಗೆ ಬೆಂಬಲವಿದೆ: ಸಲ್ಮಾನ್ ಖುರ್ಷಿದ್

ಕಾಂಗ್ರೆಸ್‌ನಲ್ಲಿ ನಾಯಕತ್ವ ಬಿಕ್ಕಟ್ಟಿಲ್ಲ, ಸೋನಿಯಾ- ರಾಹುಲ್‌ಗೆ ಬೆಂಬಲವಿದೆ: ಸಲ್ಮಾನ್ ಖುರ್ಷಿದ್

ತಮ್ಮ ವಿಚಾರಗಳ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಲು ಕಾಂಗ್ರೆಸ್‌ನಲ್ಲಿ ಸಾಕಷ್ಟು ವೇದಿಕೆಗಳಿವೆ. ಕಾಂಗ್ರೆಸ್ ನಾಯಕತ್ವವು ನನ್ನ ಮಾತುಗಳನ್ನು ಕೇಳುತ್ತದೆ, ನನಗೆ ಅವಕಾಶ ನೀಡಲಾಗಿದೆ.

- Advertisement -
- Advertisement -

ಬಿಹಾರ ಚುನಾವಣೆ ಮತ್ತು ವಿಧಾನಸಭೆ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಕಳಪೆ ಪ್ರದರ್ಶನದ ಬಗ್ಗೆ ಪಕ್ಷದ ಕೆಲವು ರಾಜ್ಯಗಳ ನಾಯಕರ ಟೀಕೆಗಳನ್ನು ರಾಹುಲ್ ಗಾಂಧಿ ಮತ್ತು ಅಧ್ಯಕ್ಷೆ ಸೋನಿಯಾ ಗಾಂಧಿ ಎದುರಿಸಿದ್ದರು. ಈಗ ಪಕ್ಷದ ಹಿರಿಯ ನಾಯಕ ಸಲ್ಮಾನ್ ಖುರ್ಷಿದ್, ಪಕ್ಷದಲ್ಲಿ ಯಾವುದೇ ನಾಯಕತ್ವ ಬಿಕ್ಕಟ್ಟು ಇಲ್ಲ. ಯಾರೂ ಸೋನಿಯಾ ಗಾಂಧಿ ಮತ್ತು ರಾಹುಲ್ ಅವರಿಗೆ ಕುರುಡುತನದಿಂದ ಬೆಂಬಲಿಸುತ್ತಿಲ್ಲ ಎಂದು ಹೇಳಿದ್ದಾರೆ.

ತಮ್ಮ ವಿಚಾರಗಳ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಲು ಕಾಂಗ್ರೆಸ್‌ನಲ್ಲಿ ಸಾಕಷ್ಟು ವೇದಿಕೆಗಳಿವೆ. “ಕಾಂಗ್ರೆಸ್ ನಾಯಕತ್ವವು ನನ್ನ ಮಾತುಗಳನ್ನು ಕೇಳುತ್ತದೆ, ನನಗೆ ಅವಕಾಶ ನೀಡಲಾಗಿದೆ, ಮಾಧ್ಯಮಗಳಲ್ಲಿ ಟೀಕಿಸುವವರಿಗೂ ಅವಕಾಶ ನೀಡಲಾಗುತ್ತದೆ. ಆದರೆ ನಾಯಕತ್ವ ತಮ್ಮ ಮಾತುಗಳನ್ನು ಕೇಳುತ್ತಿಲ್ಲ ಎಂಬ ವಿಚಾರಗಳು ಎಲ್ಲಿಂದ ಬರುತ್ತವೆ ಎಂಬುದು ಗೊತ್ತಿಲ್ಲ” ಎಂದು ಖುರ್ಷಿದ್ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಇತ್ತೀಚೆಗೆ, ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್, ಜನರು ಇನ್ನು ಮುಂದೆ ಪಕ್ಷವನ್ನು “ಪರಿಣಾಮಕಾರಿ ಪರ್ಯಾಯ” ವಾಗಿ ನೋಡುತ್ತಿಲ್ಲ. ಈ ಕುರಿತು ಪಕ್ಷದ ನಾಯಕತ್ವವು ಈ ಸಮಸ್ಯೆಯನ್ನು ಬಗೆಹರಿಸುತ್ತಿಲ್ಲ ಎಂದು ಸಾರ್ವಜನಿಕವಾಗಿ ಹೇಳಿದರು. “ಕಾಂಗ್ರೆಸ್‌ಗೆ ಅದು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಉತ್ತರಗಳು ಸಹ ತಿಳಿದಿದೆ, ಆದರೆ ಅವುಗಳನ್ನು ಗುರುತಿಸಲು ನಾಯಕತ್ವ ಸಿದ್ಧವಿಲ್ಲ” ಎಂದು ಹೇಳಿದರು. ಇದನ್ನೇ ಸಂಸದರಾದ ವಿವೇಕ್ ತಂಖಾ ಮತ್ತು ಕಾರ್ತಿ ಚಿದಂಬರಂ ಕೂಡ ಪುನರುಚ್ಚರಿಸಿದ್ದರು.

ಇದನ್ನೂ ಓದಿ: ಬಿಹಾರದ ಹಂಗಾಮಿ ಸ್ಪೀಕರ್‌ ಆಗಿ ಜಿತನ್ ರಾಮ್ ಮಾಂಜಿ ಪ್ರಮಾಣ ವಚನ- ಯಾರಿವರು ?

“ಚುನಾವಣೆಗಳ ನಂತರ ವಿಶ್ಲೇಷಣೆ ಮಾಡಲಾಗುತ್ತದೆ, ವಿಶ್ಲೇಷಣೆಯ ಬಗ್ಗೆ ಯಾವುದೇ ಜಗಳವಿಲ್ಲ. ಎಲ್ಲರೂ ಒಟ್ಟಾಗಿ ಈ ಕುರಿತು, ನಾವು ಹೇಗೆ ಸುಧಾರಿಸಬಹುದು, ಎಲ್ಲಿ ತಪ್ಪಾಗಿರಬಹುದು ಎಂಬ ಬಗ್ಗೆ ಚರ್ಚೆ ಮಾಡಬಜಹುದು ಇದನ್ನು ಸಾರ್ವಜನಿಕವಾಗಿ ಹೇಳುವ ಅಗತ್ಯವಿಲ್ಲ” ಎಂದು ಅಸಹನೆ ವ್ಯಕ್ತಪಡಿಸಿದ್ದಾರೆ.

ಪಕ್ಷಕ್ಕೆ ಒಬ್ಬ ಅಧಿಕೃತ ಅಧ್ಯಕ್ಷರನ್ನು ಮಾಡಬೇಕಲ್ಲವೆ ಎಂಬುದಕ್ಕೆ, “ಬಹುಜನ ಸಮಾಜವಾದಿ ಪಕ್ಷದಲ್ಲಿ ಅಧ್ಯಕ್ಷರು ಇಲ್ಲ, ಎಡಪಂಥೀಯ ಪಕ್ಷಗಳಲ್ಲಿ ಅಧ್ಯಕ್ಷರು ಇಲ್ಲ, ಪ್ರಧಾನ ಕಾರ್ಯದರ್ಶಿಗಳು ಮಾತ್ರ ಇದೆ. ಪ್ರತಿ ಪಕ್ಷವೂ ಒಂದೇ ಮಾದರಿಯನ್ನು ಅನುಸರಿಸಲು ಸಾಧ್ಯವಿಲ್ಲ”ಎಂದು ಸಲ್ಮಾನ್ ಖುರ್ಷಿದ್ ತಿಳಿಸಿದ್ದಾರೆ.

ಇನ್ನು, ಕಾಂಗ್ರೆಸ್‌ನಲ್ಲಿ ಎಲ್ಲರೂ ತಮ್ಮ ನಾಯಕರಾಗಿ ರಾಹುಲ್ ಗಾಂಧಿಯವರನ್ನು ಬೆಂಬಲಿಸುತ್ತಾರೆಯೇ ಎಂಬ ಪ್ರಶ್ನೆಗೆ, ಖುರ್ಷಿದ್, “ಯಾರಿಗಾದರೂ ಇದು ಸ್ಪಷ್ಟವಾಗಿದೆ ಎಂದು ನಾನು ಭಾವಿಸುತ್ತೇನೆ,  ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಜೀ ಮತ್ತು ರಾಹುಲ್ ಗಾಂಧಿಯನ್ನು ಎಲ್ಲರೂ ಸಂಪೂರ್ಣವಾಗಿ ಬೆಂಬಲಿಸುತ್ತಾರೆ” ಎಂದಿದ್ದಾರೆ.


ಇದನ್ನೂ ಓದಿ: ಬಿಹಾರ ಮಹಾಘಟಬಂಧನ್‌ನಲ್ಲಿ ಬಿರುಕು: ಚುನಾವಣೆಯ ಸಮಯದಲ್ಲಿ ರಾಹುಲ್ ಪಿಕ್‌ನಿಕ್‌ನಲ್ಲಿದ್ದರು ಎಂದ RJD ನಾಯಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...