Homeಮುಖಪುಟಕಾಂಗ್ರೆಸ್‌ನಲ್ಲಿ ನಾಯಕತ್ವ ಬಿಕ್ಕಟ್ಟಿಲ್ಲ, ಸೋನಿಯಾ- ರಾಹುಲ್‌ಗೆ ಬೆಂಬಲವಿದೆ: ಸಲ್ಮಾನ್ ಖುರ್ಷಿದ್

ಕಾಂಗ್ರೆಸ್‌ನಲ್ಲಿ ನಾಯಕತ್ವ ಬಿಕ್ಕಟ್ಟಿಲ್ಲ, ಸೋನಿಯಾ- ರಾಹುಲ್‌ಗೆ ಬೆಂಬಲವಿದೆ: ಸಲ್ಮಾನ್ ಖುರ್ಷಿದ್

ತಮ್ಮ ವಿಚಾರಗಳ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಲು ಕಾಂಗ್ರೆಸ್‌ನಲ್ಲಿ ಸಾಕಷ್ಟು ವೇದಿಕೆಗಳಿವೆ. ಕಾಂಗ್ರೆಸ್ ನಾಯಕತ್ವವು ನನ್ನ ಮಾತುಗಳನ್ನು ಕೇಳುತ್ತದೆ, ನನಗೆ ಅವಕಾಶ ನೀಡಲಾಗಿದೆ.

- Advertisement -
- Advertisement -

ಬಿಹಾರ ಚುನಾವಣೆ ಮತ್ತು ವಿಧಾನಸಭೆ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಕಳಪೆ ಪ್ರದರ್ಶನದ ಬಗ್ಗೆ ಪಕ್ಷದ ಕೆಲವು ರಾಜ್ಯಗಳ ನಾಯಕರ ಟೀಕೆಗಳನ್ನು ರಾಹುಲ್ ಗಾಂಧಿ ಮತ್ತು ಅಧ್ಯಕ್ಷೆ ಸೋನಿಯಾ ಗಾಂಧಿ ಎದುರಿಸಿದ್ದರು. ಈಗ ಪಕ್ಷದ ಹಿರಿಯ ನಾಯಕ ಸಲ್ಮಾನ್ ಖುರ್ಷಿದ್, ಪಕ್ಷದಲ್ಲಿ ಯಾವುದೇ ನಾಯಕತ್ವ ಬಿಕ್ಕಟ್ಟು ಇಲ್ಲ. ಯಾರೂ ಸೋನಿಯಾ ಗಾಂಧಿ ಮತ್ತು ರಾಹುಲ್ ಅವರಿಗೆ ಕುರುಡುತನದಿಂದ ಬೆಂಬಲಿಸುತ್ತಿಲ್ಲ ಎಂದು ಹೇಳಿದ್ದಾರೆ.

ತಮ್ಮ ವಿಚಾರಗಳ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಲು ಕಾಂಗ್ರೆಸ್‌ನಲ್ಲಿ ಸಾಕಷ್ಟು ವೇದಿಕೆಗಳಿವೆ. “ಕಾಂಗ್ರೆಸ್ ನಾಯಕತ್ವವು ನನ್ನ ಮಾತುಗಳನ್ನು ಕೇಳುತ್ತದೆ, ನನಗೆ ಅವಕಾಶ ನೀಡಲಾಗಿದೆ, ಮಾಧ್ಯಮಗಳಲ್ಲಿ ಟೀಕಿಸುವವರಿಗೂ ಅವಕಾಶ ನೀಡಲಾಗುತ್ತದೆ. ಆದರೆ ನಾಯಕತ್ವ ತಮ್ಮ ಮಾತುಗಳನ್ನು ಕೇಳುತ್ತಿಲ್ಲ ಎಂಬ ವಿಚಾರಗಳು ಎಲ್ಲಿಂದ ಬರುತ್ತವೆ ಎಂಬುದು ಗೊತ್ತಿಲ್ಲ” ಎಂದು ಖುರ್ಷಿದ್ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಇತ್ತೀಚೆಗೆ, ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್, ಜನರು ಇನ್ನು ಮುಂದೆ ಪಕ್ಷವನ್ನು “ಪರಿಣಾಮಕಾರಿ ಪರ್ಯಾಯ” ವಾಗಿ ನೋಡುತ್ತಿಲ್ಲ. ಈ ಕುರಿತು ಪಕ್ಷದ ನಾಯಕತ್ವವು ಈ ಸಮಸ್ಯೆಯನ್ನು ಬಗೆಹರಿಸುತ್ತಿಲ್ಲ ಎಂದು ಸಾರ್ವಜನಿಕವಾಗಿ ಹೇಳಿದರು. “ಕಾಂಗ್ರೆಸ್‌ಗೆ ಅದು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಉತ್ತರಗಳು ಸಹ ತಿಳಿದಿದೆ, ಆದರೆ ಅವುಗಳನ್ನು ಗುರುತಿಸಲು ನಾಯಕತ್ವ ಸಿದ್ಧವಿಲ್ಲ” ಎಂದು ಹೇಳಿದರು. ಇದನ್ನೇ ಸಂಸದರಾದ ವಿವೇಕ್ ತಂಖಾ ಮತ್ತು ಕಾರ್ತಿ ಚಿದಂಬರಂ ಕೂಡ ಪುನರುಚ್ಚರಿಸಿದ್ದರು.

ಇದನ್ನೂ ಓದಿ: ಬಿಹಾರದ ಹಂಗಾಮಿ ಸ್ಪೀಕರ್‌ ಆಗಿ ಜಿತನ್ ರಾಮ್ ಮಾಂಜಿ ಪ್ರಮಾಣ ವಚನ- ಯಾರಿವರು ?

“ಚುನಾವಣೆಗಳ ನಂತರ ವಿಶ್ಲೇಷಣೆ ಮಾಡಲಾಗುತ್ತದೆ, ವಿಶ್ಲೇಷಣೆಯ ಬಗ್ಗೆ ಯಾವುದೇ ಜಗಳವಿಲ್ಲ. ಎಲ್ಲರೂ ಒಟ್ಟಾಗಿ ಈ ಕುರಿತು, ನಾವು ಹೇಗೆ ಸುಧಾರಿಸಬಹುದು, ಎಲ್ಲಿ ತಪ್ಪಾಗಿರಬಹುದು ಎಂಬ ಬಗ್ಗೆ ಚರ್ಚೆ ಮಾಡಬಜಹುದು ಇದನ್ನು ಸಾರ್ವಜನಿಕವಾಗಿ ಹೇಳುವ ಅಗತ್ಯವಿಲ್ಲ” ಎಂದು ಅಸಹನೆ ವ್ಯಕ್ತಪಡಿಸಿದ್ದಾರೆ.

ಪಕ್ಷಕ್ಕೆ ಒಬ್ಬ ಅಧಿಕೃತ ಅಧ್ಯಕ್ಷರನ್ನು ಮಾಡಬೇಕಲ್ಲವೆ ಎಂಬುದಕ್ಕೆ, “ಬಹುಜನ ಸಮಾಜವಾದಿ ಪಕ್ಷದಲ್ಲಿ ಅಧ್ಯಕ್ಷರು ಇಲ್ಲ, ಎಡಪಂಥೀಯ ಪಕ್ಷಗಳಲ್ಲಿ ಅಧ್ಯಕ್ಷರು ಇಲ್ಲ, ಪ್ರಧಾನ ಕಾರ್ಯದರ್ಶಿಗಳು ಮಾತ್ರ ಇದೆ. ಪ್ರತಿ ಪಕ್ಷವೂ ಒಂದೇ ಮಾದರಿಯನ್ನು ಅನುಸರಿಸಲು ಸಾಧ್ಯವಿಲ್ಲ”ಎಂದು ಸಲ್ಮಾನ್ ಖುರ್ಷಿದ್ ತಿಳಿಸಿದ್ದಾರೆ.

ಇನ್ನು, ಕಾಂಗ್ರೆಸ್‌ನಲ್ಲಿ ಎಲ್ಲರೂ ತಮ್ಮ ನಾಯಕರಾಗಿ ರಾಹುಲ್ ಗಾಂಧಿಯವರನ್ನು ಬೆಂಬಲಿಸುತ್ತಾರೆಯೇ ಎಂಬ ಪ್ರಶ್ನೆಗೆ, ಖುರ್ಷಿದ್, “ಯಾರಿಗಾದರೂ ಇದು ಸ್ಪಷ್ಟವಾಗಿದೆ ಎಂದು ನಾನು ಭಾವಿಸುತ್ತೇನೆ,  ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಜೀ ಮತ್ತು ರಾಹುಲ್ ಗಾಂಧಿಯನ್ನು ಎಲ್ಲರೂ ಸಂಪೂರ್ಣವಾಗಿ ಬೆಂಬಲಿಸುತ್ತಾರೆ” ಎಂದಿದ್ದಾರೆ.


ಇದನ್ನೂ ಓದಿ: ಬಿಹಾರ ಮಹಾಘಟಬಂಧನ್‌ನಲ್ಲಿ ಬಿರುಕು: ಚುನಾವಣೆಯ ಸಮಯದಲ್ಲಿ ರಾಹುಲ್ ಪಿಕ್‌ನಿಕ್‌ನಲ್ಲಿದ್ದರು ಎಂದ RJD ನಾಯಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...