Homeಮುಖಪುಟಭ್ರಷ್ಟರು ಎಷ್ಟೇ ಪ್ರಭಾವಿಗಳಾದರೂ ಸಿಬಿಐ ಕ್ರಮ ಜರುಗಿಸಬೇಕು: ಮೋದಿ

ಭ್ರಷ್ಟರು ಎಷ್ಟೇ ಪ್ರಭಾವಿಗಳಾದರೂ ಸಿಬಿಐ ಕ್ರಮ ಜರುಗಿಸಬೇಕು: ಮೋದಿ

- Advertisement -
- Advertisement -

ಎಷ್ಟೇ ಪ್ರಭಾವಿಗಳಾದರೂ ಭ್ರಷ್ಟರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕೇಂದ್ರೀಯ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.

ಕೇಂದ್ರೀಯ ತನಿಖಾ ದಳದ ವಜ್ರಮಹೋತ್ಸವ ಸಮಾರಂಭದಲ್ಲಿ ಮಾತನಾಡಿರುವ ಅವರು, “ಪ್ರಜಾಪ್ರಭುತ್ವ ಮತ್ತು ನ್ಯಾಯ ವ್ಯವಸ್ಥೆಗೆ ಭ್ರಷ್ಟಚಾರದಿಮದ ದೊಡ್ಡ ಅಡ್ಡಿಯಾಗಿದೆ” ಎಂದು ತಿಳಿಸಿದ್ದಾರೆ.

ಭಾರತವನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸುವುದು ಕೇಂದ್ರೀಯ ತನಿಖಾ ದಳದ ಮುಖ್ಯ ಕಾರ್ಯವಾಗಿದೆ ಎಂದಿದ್ದಾರೆ.

“ಯಾವುದೇ ಭ್ರಷ್ಟರನ್ನು ಬಿಡಬಾರದು” ಎಂದು ಒತ್ತಿ ಹೇಳಿರುವ ಮೋದಿ, “ನಮ್ಮ ಪ್ರಯತ್ನಗಳಲ್ಲಿ ಯಾವುದೇ ಸಡಿಲಿಕೆ ಇರಬಾರದು. ಇದು ದೇಶದ ಜನತೆಯ ಆಶಯ. ದೇಶ, ಕಾನೂನು ಮತ್ತು ಸಂವಿಧಾನ ನಿಮ್ಮೊಂದಿಗಿದೆ. ಇಂದು ದೇಶದಲ್ಲಿ ಭ್ರಷ್ಟಾಚಾರದ ವಿರುದ್ಧ ಕ್ರಮ ಕೈಗೊಳ್ಳಲು ರಾಜಕೀಯ ಇಚ್ಛಾಶಕ್ತಿಯ ಕೊರತೆ ಇಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಕೇಂದ್ರೀಯ ಸಂಸ್ಥೆ ನ್ಯಾಯದ ಬ್ರಾಂಡ್ ಅಂಬಾಸಿಡರ್ ಆಗಿದೆ. ಇಂದಿಗೂ ಪ್ರಕರಣ ಇತ್ಯರ್ಥವಾಗದೆ ಇದ್ದ ಸಂದರ್ಭದಲ್ಲಿ, ಅದನ್ನು ಸಿಬಿಐಗೆ ಹಸ್ತಾಂತರಿಸಬೇಕೆಂಬ ಬೇಡಿಕೆಗಳಿವೆ. ಎಲ್ಲರ ಬಾಯಲ್ಲೂ ಸಿಬಿಐ ಹೆಸರು ಇದೆ. ಯಾವುದೇ ಮಹತ್ವದ ಅಪರಾಧ ನಡೆದರೆ ಅದನ್ನು ಸಿಬಿಐಗೆ ಒಪ್ಪಿಸಬೇಕೆಂದುಪಂಚಾಯತಿ ಮಟ್ಟದಲ್ಲಿಯೂ ಜನರು ಬಯಸುತ್ತಾರೆ” ಎಂದಿದ್ದಾರೆ.

“ದಶಕಗಳ ಕಾಲ ಭ್ರಷ್ಟಾಚಾರದಿಂದ ಲಾಭ ಪಡೆದವರು ಕೇಂದ್ರ ತನಿಖಾ ಸಂಸ್ಥೆಗಳನ್ನು ಟಾರ್ಗೆಟ್ ಮಾಡುತ್ತಿದ್ದಾರೆ” ಎಂದು ಮೋದಿ ಆರೋಪಿಸಿದ್ದಾರೆ.

“ನೀವು ಯಾರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೀರೋ ಅವರು ತುಂಬಾ ಪ್ರಭಾವಿಗಳು ಎಂದು ನನಗೆ ತಿಳಿದಿದೆ, ಅವರು ಹಲವು ವರ್ಷಗಳಿಂದ ಸರ್ಕಾರ ಮತ್ತು ವ್ಯವಸ್ಥೆಯ ಭಾಗವಾಗಿದ್ದಾರೆ. ಆದರೆ ಭ್ರಷ್ಟರ ಪ್ರಭಾವ ನೋಡಿ ಏಜೆನ್ಸಿಗಳು ಹಿಂಜರಿಯಬಾರದು” ಎಂದು ಸಲಹೆ ನೀಡಿದ್ದಾರೆ.

ಸಿಬಿಐ ದುರ್ಬಳಕೆ; ಪ್ರತಿಪಕ್ಷಗಳ ಆರೋಪ

ಕೇಂದ್ರೀಯ ತನಿಖಾ ದಳವನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿವೆ.

ಮಾರ್ಚ್ 5ರಂದು ಎಂಟು ವಿರೋಧ ಪಕ್ಷಗಳ ನಾಯಕರು ಮೋದಿಯವರಿಗೆ ಪತ್ರ ಬರೆದು, “ತನಿಖಾ ಸಂಸ್ಥೆಗಳ ದುರುಪಯೋಗವು ನಾವು ಪ್ರಜಾಪ್ರಭುತ್ವದಿಂದ ನಿರಂಕುಶಾಧಿಕಾರಕ್ಕೆ ಹೋಗುತ್ತಿದ್ದೇವೆ ಎಂದು ಸೂಚಿಸುತ್ತದೆ” ಎಂದಿದ್ದವು.

ದೆಹಲಿಯಲ್ಲಿ ರದ್ದಾದ ಮದ್ಯ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಕೇಂದ್ರ ತನಿಖಾ ದಳ ಬಂಧಿಸಿದ ನಂತರ ಪ್ರತಿಪಕ್ಷಗಳು ಟೀಕಿಸಿದ್ದವು.

ಇದನ್ನೂ ಓದಿರಿ: ಮೋದಿ ಪದವಿ ಪ್ರಮಾಣಪತ್ರ ಒದಗಿಸುವ ಅಗತ್ಯವಿಲ್ಲ: ಕೇಜ್ರಿವಾಲ್‌ಗೆ 25,000 ದಂಡ ವಿಧಿಸಿದ ಗುಜರಾತ್ ಹೈಕೋರ್ಟ್

‘ಮೋದಿ ಉಪನಾಮ’ಕ್ಕೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾದ ನಂತರ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಸೇಡಿನ ರಾಜಕೀಯ ವಿರುದ್ಧ ವಿರೋಧ ಪಕ್ಷಗಳು ಒಟ್ಟಾಗಿ ರ್‍ಯಾಲಿ ನಡೆಸಿವೆ.

ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಗೆ ಜೈಲು ಶಿಕ್ಷೆಗೆ ಗುರಿಯಾದ ಜನಪ್ರತಿನಿಧಿಗಳು ಶಿಕ್ಷೆಯ ದಿನಾಂಕದಿಂದ ಆರು ವರ್ಷಗಳ ಅವಧಿಯ ನಂತರ ಅನರ್ಹರಾಗುತ್ತಾರೆ ಎಂದು ಪ್ರಜಾಪ್ರತಿನಿಧಿ ಕಾಯಿದೆ, 1951 ಹೇಳುತ್ತದೆ.

ಪ್ರತಿಪಕ್ಷಗಳ ಒಗ್ಗಟ್ಟಿನ ನಿಟ್ಟಿನಲ್ಲಿ, ತೃಣಮೂಲ ಕಾಂಗ್ರೆಸ್, ಸಮಾಜವಾದಿ ಪಕ್ಷ, ಭಾರತ್ ರಾಷ್ಟ್ರ ಸಮಿತಿ ಮತ್ತು ಆಮ್ ಆದ್ಮಿಯಂತಹ ಪಕ್ಷಗಳ ನಾಯಕರು ರಾಹುಲ್ ಗಾಂಧಿಯವರ ಅನರ್ಹತೆಯ ವಿರುದ್ಧ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಸೋಮವಾರ ಪಾಲ್ಗೊಂಡಿದ್ದರು. ಬಿಜೆಪಿಯ ಪ್ರಬಲ ವಿರೋಧಿ ಪಕ್ಷವೆಂದರೆ ಕಾಂಗ್ರೆಸ್ ಎಂಬ ವಾದವನ್ನು ಇಲ್ಲಿನ ಕೆಲವು ಪ್ರತಿಪಕ್ಷಗಳು ಒಪ್ಪಿಕೊಳ್ಳಲು ಸಿದ್ಧವಿಲ್ಲ ಎಂಬುದು ಗಮನಾರ್ಹ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...