Homeಮುಖಪುಟಭ್ರಷ್ಟರು ಎಷ್ಟೇ ಪ್ರಭಾವಿಗಳಾದರೂ ಸಿಬಿಐ ಕ್ರಮ ಜರುಗಿಸಬೇಕು: ಮೋದಿ

ಭ್ರಷ್ಟರು ಎಷ್ಟೇ ಪ್ರಭಾವಿಗಳಾದರೂ ಸಿಬಿಐ ಕ್ರಮ ಜರುಗಿಸಬೇಕು: ಮೋದಿ

- Advertisement -
- Advertisement -

ಎಷ್ಟೇ ಪ್ರಭಾವಿಗಳಾದರೂ ಭ್ರಷ್ಟರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕೇಂದ್ರೀಯ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.

ಕೇಂದ್ರೀಯ ತನಿಖಾ ದಳದ ವಜ್ರಮಹೋತ್ಸವ ಸಮಾರಂಭದಲ್ಲಿ ಮಾತನಾಡಿರುವ ಅವರು, “ಪ್ರಜಾಪ್ರಭುತ್ವ ಮತ್ತು ನ್ಯಾಯ ವ್ಯವಸ್ಥೆಗೆ ಭ್ರಷ್ಟಚಾರದಿಮದ ದೊಡ್ಡ ಅಡ್ಡಿಯಾಗಿದೆ” ಎಂದು ತಿಳಿಸಿದ್ದಾರೆ.

ಭಾರತವನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸುವುದು ಕೇಂದ್ರೀಯ ತನಿಖಾ ದಳದ ಮುಖ್ಯ ಕಾರ್ಯವಾಗಿದೆ ಎಂದಿದ್ದಾರೆ.

“ಯಾವುದೇ ಭ್ರಷ್ಟರನ್ನು ಬಿಡಬಾರದು” ಎಂದು ಒತ್ತಿ ಹೇಳಿರುವ ಮೋದಿ, “ನಮ್ಮ ಪ್ರಯತ್ನಗಳಲ್ಲಿ ಯಾವುದೇ ಸಡಿಲಿಕೆ ಇರಬಾರದು. ಇದು ದೇಶದ ಜನತೆಯ ಆಶಯ. ದೇಶ, ಕಾನೂನು ಮತ್ತು ಸಂವಿಧಾನ ನಿಮ್ಮೊಂದಿಗಿದೆ. ಇಂದು ದೇಶದಲ್ಲಿ ಭ್ರಷ್ಟಾಚಾರದ ವಿರುದ್ಧ ಕ್ರಮ ಕೈಗೊಳ್ಳಲು ರಾಜಕೀಯ ಇಚ್ಛಾಶಕ್ತಿಯ ಕೊರತೆ ಇಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಕೇಂದ್ರೀಯ ಸಂಸ್ಥೆ ನ್ಯಾಯದ ಬ್ರಾಂಡ್ ಅಂಬಾಸಿಡರ್ ಆಗಿದೆ. ಇಂದಿಗೂ ಪ್ರಕರಣ ಇತ್ಯರ್ಥವಾಗದೆ ಇದ್ದ ಸಂದರ್ಭದಲ್ಲಿ, ಅದನ್ನು ಸಿಬಿಐಗೆ ಹಸ್ತಾಂತರಿಸಬೇಕೆಂಬ ಬೇಡಿಕೆಗಳಿವೆ. ಎಲ್ಲರ ಬಾಯಲ್ಲೂ ಸಿಬಿಐ ಹೆಸರು ಇದೆ. ಯಾವುದೇ ಮಹತ್ವದ ಅಪರಾಧ ನಡೆದರೆ ಅದನ್ನು ಸಿಬಿಐಗೆ ಒಪ್ಪಿಸಬೇಕೆಂದುಪಂಚಾಯತಿ ಮಟ್ಟದಲ್ಲಿಯೂ ಜನರು ಬಯಸುತ್ತಾರೆ” ಎಂದಿದ್ದಾರೆ.

“ದಶಕಗಳ ಕಾಲ ಭ್ರಷ್ಟಾಚಾರದಿಂದ ಲಾಭ ಪಡೆದವರು ಕೇಂದ್ರ ತನಿಖಾ ಸಂಸ್ಥೆಗಳನ್ನು ಟಾರ್ಗೆಟ್ ಮಾಡುತ್ತಿದ್ದಾರೆ” ಎಂದು ಮೋದಿ ಆರೋಪಿಸಿದ್ದಾರೆ.

“ನೀವು ಯಾರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೀರೋ ಅವರು ತುಂಬಾ ಪ್ರಭಾವಿಗಳು ಎಂದು ನನಗೆ ತಿಳಿದಿದೆ, ಅವರು ಹಲವು ವರ್ಷಗಳಿಂದ ಸರ್ಕಾರ ಮತ್ತು ವ್ಯವಸ್ಥೆಯ ಭಾಗವಾಗಿದ್ದಾರೆ. ಆದರೆ ಭ್ರಷ್ಟರ ಪ್ರಭಾವ ನೋಡಿ ಏಜೆನ್ಸಿಗಳು ಹಿಂಜರಿಯಬಾರದು” ಎಂದು ಸಲಹೆ ನೀಡಿದ್ದಾರೆ.

ಸಿಬಿಐ ದುರ್ಬಳಕೆ; ಪ್ರತಿಪಕ್ಷಗಳ ಆರೋಪ

ಕೇಂದ್ರೀಯ ತನಿಖಾ ದಳವನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿವೆ.

ಮಾರ್ಚ್ 5ರಂದು ಎಂಟು ವಿರೋಧ ಪಕ್ಷಗಳ ನಾಯಕರು ಮೋದಿಯವರಿಗೆ ಪತ್ರ ಬರೆದು, “ತನಿಖಾ ಸಂಸ್ಥೆಗಳ ದುರುಪಯೋಗವು ನಾವು ಪ್ರಜಾಪ್ರಭುತ್ವದಿಂದ ನಿರಂಕುಶಾಧಿಕಾರಕ್ಕೆ ಹೋಗುತ್ತಿದ್ದೇವೆ ಎಂದು ಸೂಚಿಸುತ್ತದೆ” ಎಂದಿದ್ದವು.

ದೆಹಲಿಯಲ್ಲಿ ರದ್ದಾದ ಮದ್ಯ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಕೇಂದ್ರ ತನಿಖಾ ದಳ ಬಂಧಿಸಿದ ನಂತರ ಪ್ರತಿಪಕ್ಷಗಳು ಟೀಕಿಸಿದ್ದವು.

ಇದನ್ನೂ ಓದಿರಿ: ಮೋದಿ ಪದವಿ ಪ್ರಮಾಣಪತ್ರ ಒದಗಿಸುವ ಅಗತ್ಯವಿಲ್ಲ: ಕೇಜ್ರಿವಾಲ್‌ಗೆ 25,000 ದಂಡ ವಿಧಿಸಿದ ಗುಜರಾತ್ ಹೈಕೋರ್ಟ್

‘ಮೋದಿ ಉಪನಾಮ’ಕ್ಕೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾದ ನಂತರ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಸೇಡಿನ ರಾಜಕೀಯ ವಿರುದ್ಧ ವಿರೋಧ ಪಕ್ಷಗಳು ಒಟ್ಟಾಗಿ ರ್‍ಯಾಲಿ ನಡೆಸಿವೆ.

ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಗೆ ಜೈಲು ಶಿಕ್ಷೆಗೆ ಗುರಿಯಾದ ಜನಪ್ರತಿನಿಧಿಗಳು ಶಿಕ್ಷೆಯ ದಿನಾಂಕದಿಂದ ಆರು ವರ್ಷಗಳ ಅವಧಿಯ ನಂತರ ಅನರ್ಹರಾಗುತ್ತಾರೆ ಎಂದು ಪ್ರಜಾಪ್ರತಿನಿಧಿ ಕಾಯಿದೆ, 1951 ಹೇಳುತ್ತದೆ.

ಪ್ರತಿಪಕ್ಷಗಳ ಒಗ್ಗಟ್ಟಿನ ನಿಟ್ಟಿನಲ್ಲಿ, ತೃಣಮೂಲ ಕಾಂಗ್ರೆಸ್, ಸಮಾಜವಾದಿ ಪಕ್ಷ, ಭಾರತ್ ರಾಷ್ಟ್ರ ಸಮಿತಿ ಮತ್ತು ಆಮ್ ಆದ್ಮಿಯಂತಹ ಪಕ್ಷಗಳ ನಾಯಕರು ರಾಹುಲ್ ಗಾಂಧಿಯವರ ಅನರ್ಹತೆಯ ವಿರುದ್ಧ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಸೋಮವಾರ ಪಾಲ್ಗೊಂಡಿದ್ದರು. ಬಿಜೆಪಿಯ ಪ್ರಬಲ ವಿರೋಧಿ ಪಕ್ಷವೆಂದರೆ ಕಾಂಗ್ರೆಸ್ ಎಂಬ ವಾದವನ್ನು ಇಲ್ಲಿನ ಕೆಲವು ಪ್ರತಿಪಕ್ಷಗಳು ಒಪ್ಪಿಕೊಳ್ಳಲು ಸಿದ್ಧವಿಲ್ಲ ಎಂಬುದು ಗಮನಾರ್ಹ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...