ಬಿಜೆಪಿಯವರು ಎಷ್ಟೇ ಚೀರಾಡಲಿ, ಬಟ್ಟೆ ಹರಿದುಕೊಳ್ಳಲಿ, ನಾನು ಮಾತ್ರ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸೋಮವಾರ ಸ್ಪಷ್ಟಪಡಿಸಿದ್ದಾರೆ. ಬೀದರ್ನ ಭಾಲ್ಕಿ ತಾಲ್ಲೂಕಿನ ಕಟ್ಟಿತುಗಾಂವ್ ಗ್ರಾಮದ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ಹೆಸರು ಕೇಳಿಬಂದಿರುವ ಹಿನ್ನಲೆ ಅವರು ರಾಜೀನಾಮೆ ನೀಡಬೇಕು ಎಂದು ವಿಪಕ್ಷ ಬಿಜೆಪಿ ಆಗ್ರಹಿಸಿತ್ತು.
ಈ ಬಗ್ಗೆ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿರುವ ಪ್ರಿಯಾಂಕ್ ಖರ್ಗೆ, “ಎಷ್ಟೇ ಚೀರಾಡಿಕೊಳ್ಳಲಿ, ಬಟ್ಟೆ ಹರಿದುಕೊಳ್ಳಲಿ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ನಾನು ಈ ಹಿಂದೆಯೂ ಹೇಳಿದ್ದೇನೆ. ಮೊದಲು ಸಾಕ್ಷಿ ತೋರಿಸಿ ನಂತರ ಮಾತನಾಡಲಿ. ಸುಮ್ಮನೆ ಗಾಳಿಯಲ್ಲಿ ಗುಂಡು ಹಾರಿಸಿದಂತೆ ಮಾತನಾಡುವುದಲ್ಲ” ಎಂದು ಹೇಳಿದ್ದಾರೆ. ಬಿಜೆಪಿಯವರು ಎಷ್ಟೇ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
“ಡಿಸೆಂಬರ್ 27ರಂದೇ ಗೃಹ ಸಚಿವರು, ಸಿಎಂಗೆ ಮನವಿ ಮಾಡಿದ್ದೇನೆ. ಈ ಪ್ರಕರಣದಲ್ಲಿ ಸ್ವತಂತ್ರ ತನಿಖೆ ಆಗಲಿ ಎಂದು ಹೇಳಿದ್ದೆ. ಸಿಎಂ ಭೇಟಿ ಮಾಡಿ ಮಾಹಿತಿ ನೀಡಿದ್ದೇನೆ, ಗೃಹ ಸಚಿವರನ್ನೂ ಕೂಡ ಭೇಟಿ ಮಾಡಿದ್ದೇನೆ. ರಾಜು ಕಪನೂರ್ ನನ್ನ ಆಪ್ತನಲ್ಲ ಎಂದು ನಾನು ಎಲ್ಲಿಯೂ ಹೇಳಿಲ್ಲ. ಬಿಜೆಪಿ ನಾರ್ತ್ ಅಭ್ಯರ್ಥಿ ಚಂದು ಪಾಟೀಲ್ ಜೊತೆಗೆ ರಾಜು ಕಪನೂರ್ ಇರುವ ಫೋಟೋ ನಮ್ಮ ಬಳಿಯೂ ಇದೆ. ಯಾಕೆಂದರೆ ಅವರು ಕಾಂಗ್ರೆಸ್ಗೆ ಬರುವ ಮುನ್ನ ಬಿಜೆಪಿಯಲ್ಲಿದ್ದರು. ರಾಜು ಕಪನೂರ್ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷರಾಗಿದ್ದರು” ಎಂದು ಅವರು ಹೇಳಿದ್ದಾರೆ.
“ನಾವು ಲಾಜಿಕ್ ಆಗಿಯೇ ಮಾತನಾಡುತ್ತಿದ್ದೇವೆ. ವಿಜಯೇಂದ್ರ ವಿರುದ್ದ ಮನಿ ಲಾಂಡರಿಂಗ್ ಪ್ರಕರಣ ಆಗಿದೆಯಲ್ಲ. ಹಾಗಿದ್ದರೆ ಅವರು ಯಾಕೆ ರಾಜೀನಾಮೆ ನೀಡುತ್ತಿಲ್ಲ” ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ್ ಸೇರಿದಂತೆ ಇತರೆ ಆರು ಜನರಿಂದ ಬೆದರಿಕೆ ಇರುವುದಾಗಿ ಡೆತ್ನೋಟ್ ಬರೆದಿಟ್ಟು ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಮಾಡಿಕೊಂಡಿದ್ದರು. ಈಗಾಗಲೇ ಈ ಪ್ರಕರಣವನ್ನು ಸಿಐಡಿಗೆ ಒಪ್ಪಿಸಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ. ಆದರೆ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು, ಜೊತೆಗೆ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂಬುದು ವಿಪಕ್ಷಗಳು ಆಗ್ರಹಿಸಿತ್ತು.
ಇದನ್ನೂ ಓದಿ: ಟ್ರಾವೆಲ್ ಏಜೆನ್ಸಿ ವಂಚನೆ – ಮದೀನಾದಲ್ಲಿ ಪರದಾಡುತ್ತಿರುವ ಕರಾವಳಿಯ 160 ಉಮ್ರಾ ಯಾತ್ರಾರ್ಥಿಗಳು
ಟ್ರಾವೆಲ್ ಏಜೆನ್ಸಿ ವಂಚನೆ – ಮದೀನಾದಲ್ಲಿ ಪರದಾಡುತ್ತಿರುವ ಕರಾವಳಿಯ 160 ಉಮ್ರಾ ಯಾತ್ರಾರ್ಥಿಗಳು


