Homeಮುಖಪುಟನೀವೆಷ್ಟೇ ಸಮಯ ನೀಡಿದರೂ ನನ್ನ ಹೇಳಿಕೆ ಬದಲಿಸುವುದಿಲ್ಲ: ಪ್ರಶಾಂತ್ ಭೂಷಣ್

ನೀವೆಷ್ಟೇ ಸಮಯ ನೀಡಿದರೂ ನನ್ನ ಹೇಳಿಕೆ ಬದಲಿಸುವುದಿಲ್ಲ: ಪ್ರಶಾಂತ್ ಭೂಷಣ್

"ಉನ್ನತ ನ್ಯಾಯಾಂಗದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಹೇಳಿರುವ 9 ನ್ಯಾಯಾಧೀಶರ ಪಟ್ಟಿ ನನ್ನ ಬಳಿ ಇದೆ. 1987ರಲ್ಲಿ ನಾನು ಕೂಡ ಹೇಳಿದ್ದೆ" ಎಂದು ಅಟಾರ್ನಿ ಜನರಲ್ ಹೇಳುತ್ತಿರುವಾಗ ಮಧ್ಯಪ್ರವೇಶಿಸಿದ ನ್ಯಾಯಮೂರ್ತಿ ಮಿಶ್ರಾರವರು "ಅದನ್ನೆಲ್ಲ ಕೇಳಲು ನಾವು ಇಲ್ಲಿ ಕೂತಿಲ್ಲ  ಸರ್" ಎಂದು ಹೇಳುವ ಮೂಲಕ ತಡೆದರು.

- Advertisement -
- Advertisement -

ಪ್ರಶಾಂತ್ ಭೂಷಣ್ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿದ್ದ ಸುಪ್ರೀಂನಲ್ಲಿ ಇಂದು ಶಿಕ್ಷೆ ಘೋಷಿಸುವ ವಿಚಾರಣೆಯ ಹಲವು ಗಂಟೆಗಳ ಕಾಲ ನಡೆಯಿತು. ಶಿಕ್ಷೆ ಘೋಷಿಸುವ ವಿಚಾರಣೆಯನ್ನು ಮುಂದೂಡಲು ನಿರಾಕರಿಸಿದ ಸುಪ್ರೀಂ, ಪ್ರಶಾಂತ್ ಭೂಷಣ್ ತಮ್ಮ ಹೇಳಿಕೆ ಸಲ್ಲಿಸಲು ಅವಕಾಶ ನೀಡಿತು.

“ನಾನು ಯಾವುದೇ ಕ್ಷಮೆಯನ್ನು ಕೋರುವುದಿಲ್ಲ. ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಯಾವ ಮನವಿ ಸಹ ಮಾಡುವುದಿಲ್ಲ. ನ್ಯಾಯಾಲಯವು ನೀಡುವ ಯಾವುದೇ ಶಿಕ್ಷೆಯನ್ನು ಹೆಮ್ಮೆಯಿಂದ ಸ್ವೀಕರಿಸುತ್ತೇನೆ” ಎಂದು ಮಹಾತ್ಮ ಗಾಂಧಿಯನ್ನು ಉಲ್ಲೇಖಿಸಿ ಪ್ರಶಾಂತ್ ಭೂಷಣ್ ಹೇಳಿದರು.

ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರು ‘ಶಿಕ್ಷೆ ವಿಧಿಸಬಾರದು’ ಎಂದು ಮನವಿ ಮಾಡಿಕೊಂಡರು. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಗವಾಯಿಯವರು “ನೀವು ನಿಮ್ಮ ಹೇಳಿಕೆಯನ್ನು ಮರುಪರಿಶೀಲಿಸುತ್ತೀರಾ?” ಎಂದು ಪ್ರಶಾಂತ್ ಭೂಷಣ್‌ರವರಗೆ ಪ್ರಶ್ನಿಸಿ 2-3 ದಿನ ಸಮಯ ನೀಡುವುದಾಗಿ ಹೇಳಿದರು.

ಇದಕ್ಕೆ ಉತ್ತರಿಸಿದ ಪ್ರಶಾಂತ್ ಭೂಷಣ್‌ರವರು “ಬಹಳಷ್ಟು ಯೋಚಿಸಿ ನನ್ನ ಹೇಳಿಕೆ ನೀಡಿದ್ದೇನೆ. ಅದನ್ನು ಮರಪರಿಶೀಲಿಸುವ ಪ್ರಶ್ನೆಯಿಲ್ಲ. ನೀವು ನನಗೆ ನನ್ನ ಹೇಳಿಕೆ ಬದಲಿಸಲು ಸಮಯ ನೀಡುವುದರಿಂದ ಯಾವುದೇ ಪ್ರಯೋಜನವಿಲ್ಲ” ಎಂದಿದ್ದಾರೆ.

ಪ್ರಶಾಂತ್ ಭೂಷಣ್‌ ತಮ್ಮ ಹೇಳಿಕೆಯನ್ನು ಮರುಪರಿಶೀಲಿಸದ ಹೊರತು ಅವರನ್ನು ಶಿಕ್ಷಿಸಬೇಡಿ ಎಂಬ ನಿಮ್ಮ ಮನವಿಯನ್ನು ಪರಿಗಣಿಸಲಾಗುವುದಿಲ್ಲ ಎಂದು ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್‌ರವರಿಗೆ ನ್ಯಾಯಮೂರ್ತಿ ಮಿಶ್ರಾ ಹೇಳಿದ್ದಾರೆ.

ಪ್ರಶಾಂತ್ ಭೂಷಣ್‌ರವರ ಟ್ವೀಟ್‌ಗಳು ನ್ಯಾಯಾಲಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿವೆ ಎಂದು ಸಾಕ್ಷಿ ಸಮೇತ ನ್ಯಾಯಾಲಯವು ವಿವರಿಸದಿದ್ದರೆ ನ್ಯಾಯಾಂಗ ನಿಂದನೆ ಕಾಯ್ದೆಯ ಸೆಕ್ಷನ್ 13ರ ಉದ್ದೇಶಗಳಿಗೆ ಸೋಲುಂಟಾಗುತ್ತದೆ ಎಂದು ಡಾ.ರಾಜೀವ್ ಧವನ್ ವಾದ ಮಂಡಿಸಿದರು.

ನಾವು ಶಿಕ್ಷೆ ಪ್ರಮಾಣದ ವಿಚಾರಣೆ ನಡೆಸುವಾಗ ವ್ಯಕ್ತಿಯು ತಾನು ಏನಾದರೂ ತಪ್ಪು ಮಾಡಿದ್ದರೆ ಅದನ್ನು ಒಪ್ಪಿಕೊಳ್ಳಬೇಕು, ಅದು ಅವರ ಮನದಾಳದಿಂದ ಬರಬೇಕು ಎಂದು ನ್ಯಾಯಮೂರ್ತಿ ಮಿಶ್ರಾ ಹೇಳಿದರು.

ಪ್ರಶಾಂತ್ ಭೂಷಣ್‌ರವರ ಹೇಳಿಕೆಯು ನ್ಯಾಯಮೂರ್ತಿಗಳಾದ ಲೋಧಾ, ಎ.ಪಿ ಶಾ, ಮದನ್ ಲೋಕುರ್ ಮತ್ತು ಜೋಸೆಫ್‌ರವರ ಹೇಳಿಕೆಗಳನ್ನು ಪ್ರತಿಧ್ವನಿಸಿದೆ. ಹಾಗೆಂದು ಅವರ ವಿಚಾರಣೆಗಳನ್ನು ತಪ್ಪೆನ್ನಲು ಸಾಧ್ಯವೇ? ಎಂದು ಧವನ್ ವಾದಿಸಿದರು ಅದನ್ನು ನ್ಯಾಯಮೂರ್ತಿ ಮಿಶ್ರಾ ತಡೆದರು.

“ಉನ್ನತ ನ್ಯಾಯಾಂಗದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಹೇಳಿರುವ 9 ನ್ಯಾಯಾಧೀಶರ ಪಟ್ಟಿ ನನ್ನ ಬಳಿ ಇದೆ. 1987ರಲ್ಲಿ ನಾನು ಕೂಡ ಹೇಳಿದ್ದೆ” ಎಂದು ಅಟಾರ್ನಿ ಜನರಲ್ ಹೇಳುತ್ತಿರುವಾಗ ಮಧ್ಯಪ್ರವೇಶಿಸಿದ ನ್ಯಾಯಮೂರ್ತಿ ಮಿಶ್ರಾರವರು “ಅದನ್ನೆಲ್ಲ ಕೇಳಲು ನಾವು ಇಲ್ಲಿ ಕೂತಿಲ್ಲ  ಸರ್” ಎಂದು ಹೇಳುವ ಮೂಲಕ ತಡೆದರು.

ಡಾ. ಧವನ್‌ರವರು ತಮ್ಮ ವಾದವನ್ನು ಮುಗಿಸಿದ್ದಾರೆ. ಸದ್ಯದಲ್ಲಿಯೇ ಸುಪ್ರೀಂ ತೀರ್ಪು ಪ್ರಕಟಿಸಲಿದೆ.


ಇದನ್ನೂ ಓದಿ: ಕ್ಷಮೆಯಾಚಿಸುವುದಿಲ್ಲ, ಖುಷಿಯಿಂದ ಶಿಕ್ಷೆ ಸ್ವೀಕರಿಸುತ್ತೇನೆ: ಸುಪ್ರೀಂಕೋರ್ಟಿನಲ್ಲಿ ಪ್ರಶಾಂತ್ ಭೂಷಣ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಪ್ರಶಾಂತ ಬೂಶಣ್ ಅವರಂತಹ ದೀರ ವ್ಯಕ್ತಿಗಳು ಈ ದೇಶಕ್ಕಿಂದು ಅತ್ಯಗತ್ಯವಾಗಿ ಬೇಕಾಗಿದ್ದಾರೆ.

  2. Dear Prashantaji,
    I appreciate your courage and conviction. I hope lot of people like you ( including me ) would rise up in the society to fight against injustice and lowering of democratic values. Long live PRASHANTAJI.

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...