Homeಮುಖಪುಟನೀವೆಷ್ಟೇ ಸಮಯ ನೀಡಿದರೂ ನನ್ನ ಹೇಳಿಕೆ ಬದಲಿಸುವುದಿಲ್ಲ: ಪ್ರಶಾಂತ್ ಭೂಷಣ್

ನೀವೆಷ್ಟೇ ಸಮಯ ನೀಡಿದರೂ ನನ್ನ ಹೇಳಿಕೆ ಬದಲಿಸುವುದಿಲ್ಲ: ಪ್ರಶಾಂತ್ ಭೂಷಣ್

"ಉನ್ನತ ನ್ಯಾಯಾಂಗದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಹೇಳಿರುವ 9 ನ್ಯಾಯಾಧೀಶರ ಪಟ್ಟಿ ನನ್ನ ಬಳಿ ಇದೆ. 1987ರಲ್ಲಿ ನಾನು ಕೂಡ ಹೇಳಿದ್ದೆ" ಎಂದು ಅಟಾರ್ನಿ ಜನರಲ್ ಹೇಳುತ್ತಿರುವಾಗ ಮಧ್ಯಪ್ರವೇಶಿಸಿದ ನ್ಯಾಯಮೂರ್ತಿ ಮಿಶ್ರಾರವರು "ಅದನ್ನೆಲ್ಲ ಕೇಳಲು ನಾವು ಇಲ್ಲಿ ಕೂತಿಲ್ಲ  ಸರ್" ಎಂದು ಹೇಳುವ ಮೂಲಕ ತಡೆದರು.

- Advertisement -
- Advertisement -

ಪ್ರಶಾಂತ್ ಭೂಷಣ್ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿದ್ದ ಸುಪ್ರೀಂನಲ್ಲಿ ಇಂದು ಶಿಕ್ಷೆ ಘೋಷಿಸುವ ವಿಚಾರಣೆಯ ಹಲವು ಗಂಟೆಗಳ ಕಾಲ ನಡೆಯಿತು. ಶಿಕ್ಷೆ ಘೋಷಿಸುವ ವಿಚಾರಣೆಯನ್ನು ಮುಂದೂಡಲು ನಿರಾಕರಿಸಿದ ಸುಪ್ರೀಂ, ಪ್ರಶಾಂತ್ ಭೂಷಣ್ ತಮ್ಮ ಹೇಳಿಕೆ ಸಲ್ಲಿಸಲು ಅವಕಾಶ ನೀಡಿತು.

“ನಾನು ಯಾವುದೇ ಕ್ಷಮೆಯನ್ನು ಕೋರುವುದಿಲ್ಲ. ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಯಾವ ಮನವಿ ಸಹ ಮಾಡುವುದಿಲ್ಲ. ನ್ಯಾಯಾಲಯವು ನೀಡುವ ಯಾವುದೇ ಶಿಕ್ಷೆಯನ್ನು ಹೆಮ್ಮೆಯಿಂದ ಸ್ವೀಕರಿಸುತ್ತೇನೆ” ಎಂದು ಮಹಾತ್ಮ ಗಾಂಧಿಯನ್ನು ಉಲ್ಲೇಖಿಸಿ ಪ್ರಶಾಂತ್ ಭೂಷಣ್ ಹೇಳಿದರು.

ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರು ‘ಶಿಕ್ಷೆ ವಿಧಿಸಬಾರದು’ ಎಂದು ಮನವಿ ಮಾಡಿಕೊಂಡರು. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಗವಾಯಿಯವರು “ನೀವು ನಿಮ್ಮ ಹೇಳಿಕೆಯನ್ನು ಮರುಪರಿಶೀಲಿಸುತ್ತೀರಾ?” ಎಂದು ಪ್ರಶಾಂತ್ ಭೂಷಣ್‌ರವರಗೆ ಪ್ರಶ್ನಿಸಿ 2-3 ದಿನ ಸಮಯ ನೀಡುವುದಾಗಿ ಹೇಳಿದರು.

ಇದಕ್ಕೆ ಉತ್ತರಿಸಿದ ಪ್ರಶಾಂತ್ ಭೂಷಣ್‌ರವರು “ಬಹಳಷ್ಟು ಯೋಚಿಸಿ ನನ್ನ ಹೇಳಿಕೆ ನೀಡಿದ್ದೇನೆ. ಅದನ್ನು ಮರಪರಿಶೀಲಿಸುವ ಪ್ರಶ್ನೆಯಿಲ್ಲ. ನೀವು ನನಗೆ ನನ್ನ ಹೇಳಿಕೆ ಬದಲಿಸಲು ಸಮಯ ನೀಡುವುದರಿಂದ ಯಾವುದೇ ಪ್ರಯೋಜನವಿಲ್ಲ” ಎಂದಿದ್ದಾರೆ.

ಪ್ರಶಾಂತ್ ಭೂಷಣ್‌ ತಮ್ಮ ಹೇಳಿಕೆಯನ್ನು ಮರುಪರಿಶೀಲಿಸದ ಹೊರತು ಅವರನ್ನು ಶಿಕ್ಷಿಸಬೇಡಿ ಎಂಬ ನಿಮ್ಮ ಮನವಿಯನ್ನು ಪರಿಗಣಿಸಲಾಗುವುದಿಲ್ಲ ಎಂದು ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್‌ರವರಿಗೆ ನ್ಯಾಯಮೂರ್ತಿ ಮಿಶ್ರಾ ಹೇಳಿದ್ದಾರೆ.

ಪ್ರಶಾಂತ್ ಭೂಷಣ್‌ರವರ ಟ್ವೀಟ್‌ಗಳು ನ್ಯಾಯಾಲಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿವೆ ಎಂದು ಸಾಕ್ಷಿ ಸಮೇತ ನ್ಯಾಯಾಲಯವು ವಿವರಿಸದಿದ್ದರೆ ನ್ಯಾಯಾಂಗ ನಿಂದನೆ ಕಾಯ್ದೆಯ ಸೆಕ್ಷನ್ 13ರ ಉದ್ದೇಶಗಳಿಗೆ ಸೋಲುಂಟಾಗುತ್ತದೆ ಎಂದು ಡಾ.ರಾಜೀವ್ ಧವನ್ ವಾದ ಮಂಡಿಸಿದರು.

ನಾವು ಶಿಕ್ಷೆ ಪ್ರಮಾಣದ ವಿಚಾರಣೆ ನಡೆಸುವಾಗ ವ್ಯಕ್ತಿಯು ತಾನು ಏನಾದರೂ ತಪ್ಪು ಮಾಡಿದ್ದರೆ ಅದನ್ನು ಒಪ್ಪಿಕೊಳ್ಳಬೇಕು, ಅದು ಅವರ ಮನದಾಳದಿಂದ ಬರಬೇಕು ಎಂದು ನ್ಯಾಯಮೂರ್ತಿ ಮಿಶ್ರಾ ಹೇಳಿದರು.

ಪ್ರಶಾಂತ್ ಭೂಷಣ್‌ರವರ ಹೇಳಿಕೆಯು ನ್ಯಾಯಮೂರ್ತಿಗಳಾದ ಲೋಧಾ, ಎ.ಪಿ ಶಾ, ಮದನ್ ಲೋಕುರ್ ಮತ್ತು ಜೋಸೆಫ್‌ರವರ ಹೇಳಿಕೆಗಳನ್ನು ಪ್ರತಿಧ್ವನಿಸಿದೆ. ಹಾಗೆಂದು ಅವರ ವಿಚಾರಣೆಗಳನ್ನು ತಪ್ಪೆನ್ನಲು ಸಾಧ್ಯವೇ? ಎಂದು ಧವನ್ ವಾದಿಸಿದರು ಅದನ್ನು ನ್ಯಾಯಮೂರ್ತಿ ಮಿಶ್ರಾ ತಡೆದರು.

“ಉನ್ನತ ನ್ಯಾಯಾಂಗದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಹೇಳಿರುವ 9 ನ್ಯಾಯಾಧೀಶರ ಪಟ್ಟಿ ನನ್ನ ಬಳಿ ಇದೆ. 1987ರಲ್ಲಿ ನಾನು ಕೂಡ ಹೇಳಿದ್ದೆ” ಎಂದು ಅಟಾರ್ನಿ ಜನರಲ್ ಹೇಳುತ್ತಿರುವಾಗ ಮಧ್ಯಪ್ರವೇಶಿಸಿದ ನ್ಯಾಯಮೂರ್ತಿ ಮಿಶ್ರಾರವರು “ಅದನ್ನೆಲ್ಲ ಕೇಳಲು ನಾವು ಇಲ್ಲಿ ಕೂತಿಲ್ಲ  ಸರ್” ಎಂದು ಹೇಳುವ ಮೂಲಕ ತಡೆದರು.

ಡಾ. ಧವನ್‌ರವರು ತಮ್ಮ ವಾದವನ್ನು ಮುಗಿಸಿದ್ದಾರೆ. ಸದ್ಯದಲ್ಲಿಯೇ ಸುಪ್ರೀಂ ತೀರ್ಪು ಪ್ರಕಟಿಸಲಿದೆ.


ಇದನ್ನೂ ಓದಿ: ಕ್ಷಮೆಯಾಚಿಸುವುದಿಲ್ಲ, ಖುಷಿಯಿಂದ ಶಿಕ್ಷೆ ಸ್ವೀಕರಿಸುತ್ತೇನೆ: ಸುಪ್ರೀಂಕೋರ್ಟಿನಲ್ಲಿ ಪ್ರಶಾಂತ್ ಭೂಷಣ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಪ್ರಶಾಂತ ಬೂಶಣ್ ಅವರಂತಹ ದೀರ ವ್ಯಕ್ತಿಗಳು ಈ ದೇಶಕ್ಕಿಂದು ಅತ್ಯಗತ್ಯವಾಗಿ ಬೇಕಾಗಿದ್ದಾರೆ.

  2. Dear Prashantaji,
    I appreciate your courage and conviction. I hope lot of people like you ( including me ) would rise up in the society to fight against injustice and lowering of democratic values. Long live PRASHANTAJI.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...