Homeಮುಖಪುಟನೀವೆಷ್ಟೇ ಸಮಯ ನೀಡಿದರೂ ನನ್ನ ಹೇಳಿಕೆ ಬದಲಿಸುವುದಿಲ್ಲ: ಪ್ರಶಾಂತ್ ಭೂಷಣ್

ನೀವೆಷ್ಟೇ ಸಮಯ ನೀಡಿದರೂ ನನ್ನ ಹೇಳಿಕೆ ಬದಲಿಸುವುದಿಲ್ಲ: ಪ್ರಶಾಂತ್ ಭೂಷಣ್

"ಉನ್ನತ ನ್ಯಾಯಾಂಗದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಹೇಳಿರುವ 9 ನ್ಯಾಯಾಧೀಶರ ಪಟ್ಟಿ ನನ್ನ ಬಳಿ ಇದೆ. 1987ರಲ್ಲಿ ನಾನು ಕೂಡ ಹೇಳಿದ್ದೆ" ಎಂದು ಅಟಾರ್ನಿ ಜನರಲ್ ಹೇಳುತ್ತಿರುವಾಗ ಮಧ್ಯಪ್ರವೇಶಿಸಿದ ನ್ಯಾಯಮೂರ್ತಿ ಮಿಶ್ರಾರವರು "ಅದನ್ನೆಲ್ಲ ಕೇಳಲು ನಾವು ಇಲ್ಲಿ ಕೂತಿಲ್ಲ  ಸರ್" ಎಂದು ಹೇಳುವ ಮೂಲಕ ತಡೆದರು.

- Advertisement -
- Advertisement -

ಪ್ರಶಾಂತ್ ಭೂಷಣ್ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿದ್ದ ಸುಪ್ರೀಂನಲ್ಲಿ ಇಂದು ಶಿಕ್ಷೆ ಘೋಷಿಸುವ ವಿಚಾರಣೆಯ ಹಲವು ಗಂಟೆಗಳ ಕಾಲ ನಡೆಯಿತು. ಶಿಕ್ಷೆ ಘೋಷಿಸುವ ವಿಚಾರಣೆಯನ್ನು ಮುಂದೂಡಲು ನಿರಾಕರಿಸಿದ ಸುಪ್ರೀಂ, ಪ್ರಶಾಂತ್ ಭೂಷಣ್ ತಮ್ಮ ಹೇಳಿಕೆ ಸಲ್ಲಿಸಲು ಅವಕಾಶ ನೀಡಿತು.

“ನಾನು ಯಾವುದೇ ಕ್ಷಮೆಯನ್ನು ಕೋರುವುದಿಲ್ಲ. ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಯಾವ ಮನವಿ ಸಹ ಮಾಡುವುದಿಲ್ಲ. ನ್ಯಾಯಾಲಯವು ನೀಡುವ ಯಾವುದೇ ಶಿಕ್ಷೆಯನ್ನು ಹೆಮ್ಮೆಯಿಂದ ಸ್ವೀಕರಿಸುತ್ತೇನೆ” ಎಂದು ಮಹಾತ್ಮ ಗಾಂಧಿಯನ್ನು ಉಲ್ಲೇಖಿಸಿ ಪ್ರಶಾಂತ್ ಭೂಷಣ್ ಹೇಳಿದರು.

ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರು ‘ಶಿಕ್ಷೆ ವಿಧಿಸಬಾರದು’ ಎಂದು ಮನವಿ ಮಾಡಿಕೊಂಡರು. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಗವಾಯಿಯವರು “ನೀವು ನಿಮ್ಮ ಹೇಳಿಕೆಯನ್ನು ಮರುಪರಿಶೀಲಿಸುತ್ತೀರಾ?” ಎಂದು ಪ್ರಶಾಂತ್ ಭೂಷಣ್‌ರವರಗೆ ಪ್ರಶ್ನಿಸಿ 2-3 ದಿನ ಸಮಯ ನೀಡುವುದಾಗಿ ಹೇಳಿದರು.

ಇದಕ್ಕೆ ಉತ್ತರಿಸಿದ ಪ್ರಶಾಂತ್ ಭೂಷಣ್‌ರವರು “ಬಹಳಷ್ಟು ಯೋಚಿಸಿ ನನ್ನ ಹೇಳಿಕೆ ನೀಡಿದ್ದೇನೆ. ಅದನ್ನು ಮರಪರಿಶೀಲಿಸುವ ಪ್ರಶ್ನೆಯಿಲ್ಲ. ನೀವು ನನಗೆ ನನ್ನ ಹೇಳಿಕೆ ಬದಲಿಸಲು ಸಮಯ ನೀಡುವುದರಿಂದ ಯಾವುದೇ ಪ್ರಯೋಜನವಿಲ್ಲ” ಎಂದಿದ್ದಾರೆ.

ಪ್ರಶಾಂತ್ ಭೂಷಣ್‌ ತಮ್ಮ ಹೇಳಿಕೆಯನ್ನು ಮರುಪರಿಶೀಲಿಸದ ಹೊರತು ಅವರನ್ನು ಶಿಕ್ಷಿಸಬೇಡಿ ಎಂಬ ನಿಮ್ಮ ಮನವಿಯನ್ನು ಪರಿಗಣಿಸಲಾಗುವುದಿಲ್ಲ ಎಂದು ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್‌ರವರಿಗೆ ನ್ಯಾಯಮೂರ್ತಿ ಮಿಶ್ರಾ ಹೇಳಿದ್ದಾರೆ.

ಪ್ರಶಾಂತ್ ಭೂಷಣ್‌ರವರ ಟ್ವೀಟ್‌ಗಳು ನ್ಯಾಯಾಲಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿವೆ ಎಂದು ಸಾಕ್ಷಿ ಸಮೇತ ನ್ಯಾಯಾಲಯವು ವಿವರಿಸದಿದ್ದರೆ ನ್ಯಾಯಾಂಗ ನಿಂದನೆ ಕಾಯ್ದೆಯ ಸೆಕ್ಷನ್ 13ರ ಉದ್ದೇಶಗಳಿಗೆ ಸೋಲುಂಟಾಗುತ್ತದೆ ಎಂದು ಡಾ.ರಾಜೀವ್ ಧವನ್ ವಾದ ಮಂಡಿಸಿದರು.

ನಾವು ಶಿಕ್ಷೆ ಪ್ರಮಾಣದ ವಿಚಾರಣೆ ನಡೆಸುವಾಗ ವ್ಯಕ್ತಿಯು ತಾನು ಏನಾದರೂ ತಪ್ಪು ಮಾಡಿದ್ದರೆ ಅದನ್ನು ಒಪ್ಪಿಕೊಳ್ಳಬೇಕು, ಅದು ಅವರ ಮನದಾಳದಿಂದ ಬರಬೇಕು ಎಂದು ನ್ಯಾಯಮೂರ್ತಿ ಮಿಶ್ರಾ ಹೇಳಿದರು.

ಪ್ರಶಾಂತ್ ಭೂಷಣ್‌ರವರ ಹೇಳಿಕೆಯು ನ್ಯಾಯಮೂರ್ತಿಗಳಾದ ಲೋಧಾ, ಎ.ಪಿ ಶಾ, ಮದನ್ ಲೋಕುರ್ ಮತ್ತು ಜೋಸೆಫ್‌ರವರ ಹೇಳಿಕೆಗಳನ್ನು ಪ್ರತಿಧ್ವನಿಸಿದೆ. ಹಾಗೆಂದು ಅವರ ವಿಚಾರಣೆಗಳನ್ನು ತಪ್ಪೆನ್ನಲು ಸಾಧ್ಯವೇ? ಎಂದು ಧವನ್ ವಾದಿಸಿದರು ಅದನ್ನು ನ್ಯಾಯಮೂರ್ತಿ ಮಿಶ್ರಾ ತಡೆದರು.

“ಉನ್ನತ ನ್ಯಾಯಾಂಗದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಹೇಳಿರುವ 9 ನ್ಯಾಯಾಧೀಶರ ಪಟ್ಟಿ ನನ್ನ ಬಳಿ ಇದೆ. 1987ರಲ್ಲಿ ನಾನು ಕೂಡ ಹೇಳಿದ್ದೆ” ಎಂದು ಅಟಾರ್ನಿ ಜನರಲ್ ಹೇಳುತ್ತಿರುವಾಗ ಮಧ್ಯಪ್ರವೇಶಿಸಿದ ನ್ಯಾಯಮೂರ್ತಿ ಮಿಶ್ರಾರವರು “ಅದನ್ನೆಲ್ಲ ಕೇಳಲು ನಾವು ಇಲ್ಲಿ ಕೂತಿಲ್ಲ  ಸರ್” ಎಂದು ಹೇಳುವ ಮೂಲಕ ತಡೆದರು.

ಡಾ. ಧವನ್‌ರವರು ತಮ್ಮ ವಾದವನ್ನು ಮುಗಿಸಿದ್ದಾರೆ. ಸದ್ಯದಲ್ಲಿಯೇ ಸುಪ್ರೀಂ ತೀರ್ಪು ಪ್ರಕಟಿಸಲಿದೆ.


ಇದನ್ನೂ ಓದಿ: ಕ್ಷಮೆಯಾಚಿಸುವುದಿಲ್ಲ, ಖುಷಿಯಿಂದ ಶಿಕ್ಷೆ ಸ್ವೀಕರಿಸುತ್ತೇನೆ: ಸುಪ್ರೀಂಕೋರ್ಟಿನಲ್ಲಿ ಪ್ರಶಾಂತ್ ಭೂಷಣ್ 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

2 COMMENTS

  1. ಪ್ರಶಾಂತ ಬೂಶಣ್ ಅವರಂತಹ ದೀರ ವ್ಯಕ್ತಿಗಳು ಈ ದೇಶಕ್ಕಿಂದು ಅತ್ಯಗತ್ಯವಾಗಿ ಬೇಕಾಗಿದ್ದಾರೆ.

  2. Dear Prashantaji,
    I appreciate your courage and conviction. I hope lot of people like you ( including me ) would rise up in the society to fight against injustice and lowering of democratic values. Long live PRASHANTAJI.

LEAVE A REPLY

Please enter your comment!
Please enter your name here

- Advertisment -

Must Read

ಪ್ರಧಾನಿ ಮೋದಿ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಬಂಧ ವಿಧಿಸಲು ಕೋರಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

0
ಲೋಕಸಭೆ ಚುನಾವಣೆಗೆ "ದೇವರು ಮತ್ತು ಪೂಜಾ ಸ್ಥಳಗಳ" ಹೆಸರಿನಲ್ಲಿ ಮತ ಕೇಳುವ ಮೂಲಕ ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘಿಸಿರುವ ಆರೋಪದ ಮೇಲೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದೆಹಲಿ...