Homeಮುಖಪುಟನೀವೆಷ್ಟೇ ಸಮಯ ನೀಡಿದರೂ ನನ್ನ ಹೇಳಿಕೆ ಬದಲಿಸುವುದಿಲ್ಲ: ಪ್ರಶಾಂತ್ ಭೂಷಣ್

ನೀವೆಷ್ಟೇ ಸಮಯ ನೀಡಿದರೂ ನನ್ನ ಹೇಳಿಕೆ ಬದಲಿಸುವುದಿಲ್ಲ: ಪ್ರಶಾಂತ್ ಭೂಷಣ್

"ಉನ್ನತ ನ್ಯಾಯಾಂಗದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಹೇಳಿರುವ 9 ನ್ಯಾಯಾಧೀಶರ ಪಟ್ಟಿ ನನ್ನ ಬಳಿ ಇದೆ. 1987ರಲ್ಲಿ ನಾನು ಕೂಡ ಹೇಳಿದ್ದೆ" ಎಂದು ಅಟಾರ್ನಿ ಜನರಲ್ ಹೇಳುತ್ತಿರುವಾಗ ಮಧ್ಯಪ್ರವೇಶಿಸಿದ ನ್ಯಾಯಮೂರ್ತಿ ಮಿಶ್ರಾರವರು "ಅದನ್ನೆಲ್ಲ ಕೇಳಲು ನಾವು ಇಲ್ಲಿ ಕೂತಿಲ್ಲ  ಸರ್" ಎಂದು ಹೇಳುವ ಮೂಲಕ ತಡೆದರು.

- Advertisement -
- Advertisement -

ಪ್ರಶಾಂತ್ ಭೂಷಣ್ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿದ್ದ ಸುಪ್ರೀಂನಲ್ಲಿ ಇಂದು ಶಿಕ್ಷೆ ಘೋಷಿಸುವ ವಿಚಾರಣೆಯ ಹಲವು ಗಂಟೆಗಳ ಕಾಲ ನಡೆಯಿತು. ಶಿಕ್ಷೆ ಘೋಷಿಸುವ ವಿಚಾರಣೆಯನ್ನು ಮುಂದೂಡಲು ನಿರಾಕರಿಸಿದ ಸುಪ್ರೀಂ, ಪ್ರಶಾಂತ್ ಭೂಷಣ್ ತಮ್ಮ ಹೇಳಿಕೆ ಸಲ್ಲಿಸಲು ಅವಕಾಶ ನೀಡಿತು.

“ನಾನು ಯಾವುದೇ ಕ್ಷಮೆಯನ್ನು ಕೋರುವುದಿಲ್ಲ. ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಯಾವ ಮನವಿ ಸಹ ಮಾಡುವುದಿಲ್ಲ. ನ್ಯಾಯಾಲಯವು ನೀಡುವ ಯಾವುದೇ ಶಿಕ್ಷೆಯನ್ನು ಹೆಮ್ಮೆಯಿಂದ ಸ್ವೀಕರಿಸುತ್ತೇನೆ” ಎಂದು ಮಹಾತ್ಮ ಗಾಂಧಿಯನ್ನು ಉಲ್ಲೇಖಿಸಿ ಪ್ರಶಾಂತ್ ಭೂಷಣ್ ಹೇಳಿದರು.

ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರು ‘ಶಿಕ್ಷೆ ವಿಧಿಸಬಾರದು’ ಎಂದು ಮನವಿ ಮಾಡಿಕೊಂಡರು. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಗವಾಯಿಯವರು “ನೀವು ನಿಮ್ಮ ಹೇಳಿಕೆಯನ್ನು ಮರುಪರಿಶೀಲಿಸುತ್ತೀರಾ?” ಎಂದು ಪ್ರಶಾಂತ್ ಭೂಷಣ್‌ರವರಗೆ ಪ್ರಶ್ನಿಸಿ 2-3 ದಿನ ಸಮಯ ನೀಡುವುದಾಗಿ ಹೇಳಿದರು.

ಇದಕ್ಕೆ ಉತ್ತರಿಸಿದ ಪ್ರಶಾಂತ್ ಭೂಷಣ್‌ರವರು “ಬಹಳಷ್ಟು ಯೋಚಿಸಿ ನನ್ನ ಹೇಳಿಕೆ ನೀಡಿದ್ದೇನೆ. ಅದನ್ನು ಮರಪರಿಶೀಲಿಸುವ ಪ್ರಶ್ನೆಯಿಲ್ಲ. ನೀವು ನನಗೆ ನನ್ನ ಹೇಳಿಕೆ ಬದಲಿಸಲು ಸಮಯ ನೀಡುವುದರಿಂದ ಯಾವುದೇ ಪ್ರಯೋಜನವಿಲ್ಲ” ಎಂದಿದ್ದಾರೆ.

ಪ್ರಶಾಂತ್ ಭೂಷಣ್‌ ತಮ್ಮ ಹೇಳಿಕೆಯನ್ನು ಮರುಪರಿಶೀಲಿಸದ ಹೊರತು ಅವರನ್ನು ಶಿಕ್ಷಿಸಬೇಡಿ ಎಂಬ ನಿಮ್ಮ ಮನವಿಯನ್ನು ಪರಿಗಣಿಸಲಾಗುವುದಿಲ್ಲ ಎಂದು ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್‌ರವರಿಗೆ ನ್ಯಾಯಮೂರ್ತಿ ಮಿಶ್ರಾ ಹೇಳಿದ್ದಾರೆ.

ಪ್ರಶಾಂತ್ ಭೂಷಣ್‌ರವರ ಟ್ವೀಟ್‌ಗಳು ನ್ಯಾಯಾಲಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿವೆ ಎಂದು ಸಾಕ್ಷಿ ಸಮೇತ ನ್ಯಾಯಾಲಯವು ವಿವರಿಸದಿದ್ದರೆ ನ್ಯಾಯಾಂಗ ನಿಂದನೆ ಕಾಯ್ದೆಯ ಸೆಕ್ಷನ್ 13ರ ಉದ್ದೇಶಗಳಿಗೆ ಸೋಲುಂಟಾಗುತ್ತದೆ ಎಂದು ಡಾ.ರಾಜೀವ್ ಧವನ್ ವಾದ ಮಂಡಿಸಿದರು.

ನಾವು ಶಿಕ್ಷೆ ಪ್ರಮಾಣದ ವಿಚಾರಣೆ ನಡೆಸುವಾಗ ವ್ಯಕ್ತಿಯು ತಾನು ಏನಾದರೂ ತಪ್ಪು ಮಾಡಿದ್ದರೆ ಅದನ್ನು ಒಪ್ಪಿಕೊಳ್ಳಬೇಕು, ಅದು ಅವರ ಮನದಾಳದಿಂದ ಬರಬೇಕು ಎಂದು ನ್ಯಾಯಮೂರ್ತಿ ಮಿಶ್ರಾ ಹೇಳಿದರು.

ಪ್ರಶಾಂತ್ ಭೂಷಣ್‌ರವರ ಹೇಳಿಕೆಯು ನ್ಯಾಯಮೂರ್ತಿಗಳಾದ ಲೋಧಾ, ಎ.ಪಿ ಶಾ, ಮದನ್ ಲೋಕುರ್ ಮತ್ತು ಜೋಸೆಫ್‌ರವರ ಹೇಳಿಕೆಗಳನ್ನು ಪ್ರತಿಧ್ವನಿಸಿದೆ. ಹಾಗೆಂದು ಅವರ ವಿಚಾರಣೆಗಳನ್ನು ತಪ್ಪೆನ್ನಲು ಸಾಧ್ಯವೇ? ಎಂದು ಧವನ್ ವಾದಿಸಿದರು ಅದನ್ನು ನ್ಯಾಯಮೂರ್ತಿ ಮಿಶ್ರಾ ತಡೆದರು.

“ಉನ್ನತ ನ್ಯಾಯಾಂಗದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಹೇಳಿರುವ 9 ನ್ಯಾಯಾಧೀಶರ ಪಟ್ಟಿ ನನ್ನ ಬಳಿ ಇದೆ. 1987ರಲ್ಲಿ ನಾನು ಕೂಡ ಹೇಳಿದ್ದೆ” ಎಂದು ಅಟಾರ್ನಿ ಜನರಲ್ ಹೇಳುತ್ತಿರುವಾಗ ಮಧ್ಯಪ್ರವೇಶಿಸಿದ ನ್ಯಾಯಮೂರ್ತಿ ಮಿಶ್ರಾರವರು “ಅದನ್ನೆಲ್ಲ ಕೇಳಲು ನಾವು ಇಲ್ಲಿ ಕೂತಿಲ್ಲ  ಸರ್” ಎಂದು ಹೇಳುವ ಮೂಲಕ ತಡೆದರು.

ಡಾ. ಧವನ್‌ರವರು ತಮ್ಮ ವಾದವನ್ನು ಮುಗಿಸಿದ್ದಾರೆ. ಸದ್ಯದಲ್ಲಿಯೇ ಸುಪ್ರೀಂ ತೀರ್ಪು ಪ್ರಕಟಿಸಲಿದೆ.


ಇದನ್ನೂ ಓದಿ: ಕ್ಷಮೆಯಾಚಿಸುವುದಿಲ್ಲ, ಖುಷಿಯಿಂದ ಶಿಕ್ಷೆ ಸ್ವೀಕರಿಸುತ್ತೇನೆ: ಸುಪ್ರೀಂಕೋರ್ಟಿನಲ್ಲಿ ಪ್ರಶಾಂತ್ ಭೂಷಣ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಪ್ರಶಾಂತ ಬೂಶಣ್ ಅವರಂತಹ ದೀರ ವ್ಯಕ್ತಿಗಳು ಈ ದೇಶಕ್ಕಿಂದು ಅತ್ಯಗತ್ಯವಾಗಿ ಬೇಕಾಗಿದ್ದಾರೆ.

  2. Dear Prashantaji,
    I appreciate your courage and conviction. I hope lot of people like you ( including me ) would rise up in the society to fight against injustice and lowering of democratic values. Long live PRASHANTAJI.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...