Homeಕರ್ನಾಟಕಕಾಲೇಜು ಆರಂಭವಾಗಿ 2 ತಿಂಗಳಾದರೂ ಹಾಸ್ಟೆಲ್‌ನಲ್ಲಿ ಊಟವಿಲ್ಲ: ಮಹಾರಾಣಿ ವಿದ್ಯಾರ್ಥಿನಿಯರ ಪ್ರತಿಭಟನೆ

ಕಾಲೇಜು ಆರಂಭವಾಗಿ 2 ತಿಂಗಳಾದರೂ ಹಾಸ್ಟೆಲ್‌ನಲ್ಲಿ ಊಟವಿಲ್ಲ: ಮಹಾರಾಣಿ ವಿದ್ಯಾರ್ಥಿನಿಯರ ಪ್ರತಿಭಟನೆ

- Advertisement -
- Advertisement -

ಮೈಸೂರಿನ ಮಹಾರಾಣಿ ವಿದ್ಯಾರ್ಥಿನಿಲಯದಲ್ಲಿ ಎರಡು ತಿಂಗಳಿಂದ ಊಟ ನೀಡುತ್ತಿಲ್ಲ, ಕುಡಿಯುವ ನೀರಿನ ವ್ಯವಸ್ಥೆಯನ್ನೂ ಮಾಡಿಲ್ಲ. ಕಾಲೇಜು ಆರಂಭವಾಗಿ ಎರಡು ತಿಂಗಳಾದರೂ ಊಟದ ವ್ಯವಸ್ಥೆಯಾಗಿಲ್ಲ ಎಂದು ಆರೋಪಿಸಿ ಮಹಾರಾಣಿ ವಿಜ್ಞಾನ ಕಾಲೇಜು ಹಾಸ್ಟೆಲ್ ವಿದ್ಯಾರ್ಥಿನಿಯರು ಮಂಗಳವಾರ ಪ್ರತಿಭಟನೆ ನಡೆಸಿದರು.

ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಸೇರಿದ ನೂರಾರು ವಿದ್ಯಾರ್ಥಿನಿಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅ.18ರಿಂದ ಕಾಲೇಜು ಪುನಾರಾರಂಭಗೊಂಡಿದೆ. ಹೀಗಿದ್ದರೂ, ವಿದ್ಯಾರ್ಥಿನಿಲಯದಲ್ಲಿ ಊಟದ ವ್ಯವಸ್ಥೆಯನ್ನು ಇನ್ನೂ ಮಾಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಎರಡು ತಿಂಗಳಿಂದ ಹೋಟೆಲ್‌ನಲ್ಲಿ ಊಟ ಮಾಡುತ್ತಿದೇವೆ. ಹೋಟೆಲ್ ಊಟದಿಂದ ಬಹುತೇಕ ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಏರುಪೇರಾಗಿ, ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಇದರಿಂದ ವಿದ್ಯಾಭ್ಯಾಸಕ್ಕೂ ತೊಂದರೆಯಾಗಿದೆ. ಎಲ್ಲ ವಿದ್ಯಾರ್ಥಿನಿಯರು ದಿನದ ಮೂರು ಹೊತ್ತು ಹೋಟೆಲ್‌ನಲ್ಲಿಯೇ ತಿನ್ನುವಷ್ಟು ಸ್ಥಿತಿವಂತರಲ್ಲ ಎಂದು ತಿಳಿಸಿದರು.

ಎಷ್ಟೋ ವಿದ್ಯಾರ್ಥಿನಿಯರು ಒಂದೆರಡು ದಿನ ಉಪವಾಸ ಮಾಡಿದ್ದಾರೆ. ಮನೆಯಿಂದ ಬರುವ ವಿದ್ಯಾರ್ಥಿನಿಯರು ಊಟ ತಂದು ಕೊಟ್ಟಿದ್ದಾರೆ. ಒಟ್ಟಾರೆ ಎರಡು ತಿಂಗಳಿಂದ ವಿದ್ಯಾರ್ಥಿನಿಯರ ಪಾಡು ಹೇಳತೀರದಾಗಿದೆ ಎಂದು ಪ್ರತಿಭಟನಾನಿತರ ವಿದ್ಯಾರ್ಥಿನಿಯರು ಅಳಲು ತೋಡಿಕೊಂಡರು. ಅದಷ್ಟು ಬೇಗ ಊಟದ ವ್ಯವಸ್ಥೆ ಆರಂಭಿಸಬೇಕು ಎಂದು ಒತ್ತಾಯಿಸಿದರು.

ವಿದ್ಯಾರ್ಥಿನಿಲಯದಲ್ಲಿ ಕುಡಿಯುವ ನೀರಿನ ವ್ಯವಸ್ಥೆಯಿಲ್ಲದ ಪರದಾಡಬೇಕಿದೆ. ಹಣ ಕೊಟ್ಟು ಪ್ರತಿನಿತ್ಯ ಹೊರಗಿನಿಂದ ನೀರು ತರಬೇಕಾದ ದುಸ್ಥಿತಿ ನಮ್ಮದು. ಶೀಘ್ರವೇ ಕುಡಿಯವ ನೀರಿನ ವ್ಯವಸ್ಥೆ ಮಾಡಬೇಕಿದೆ. ವಾರ್ಡನ್‌ ಹಾಗೂ ಕಾಲೇಜು ಪ್ರಾಂಶುಪಾಲರಿಗೆ ದೂರು ನೀಡಿದ್ದೇವೆ. ಪ್ರಾಂಶುಪಾಲರು ವಿದ್ಯಾರ್ಥಿನಿಯರ ಪರವಾಗಿ ಅವರ ಕೈಯಲ್ಲಿ ಆದ ಪ್ರಯತ್ನ ಮಾಡುತ್ತಿದ್ದಾರೆ. ಆದರೂ ಈ ಸಮಸ್ಯೆ ಬಗೆಹರಿಯುವ ಲಕ್ಷಣ ಕಾಣುತ್ತಿಲ್ಲ . ಹಾಗಾಗೀ ವಸತಿ ನಿಲಯದ ಎಲ್ಲಾ ವಿದ್ಯಾರ್ಥಿನಿಯರು ಇಲ್ಲಿ ಸೇರಿದ್ದೇವೆ ಎಂದು ತಿಳಿಸಿದರು.

15 ದಿನಗಳ ತಾತ್ಕಾಲಿಕ ಊಟದ ವ್ಯವಸ್ಥೆ: ಶಾಸಕ

ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ವಿದ್ಯಾರ್ಥಿನಿಯರ ಸಮಸ್ಯೆ ಆಲಿಸಿದರು. ಈ ವೇಳೆ ಮಾತನಾಡಿದ ಅವರು, “ಊಟದ ವ್ಯವಸ್ಥೆ ಆರಂಭಿಸಲು ಉಂಟಾಗಿರುವ ಸಮಸ್ಯೆ ಬಗೆಹರಿಸಲು ಕ್ರಮ ವಹಿಸಲಾಗುವುದು. ಈ ಕುರಿತು ಶಿಕ್ಷಣ ಇಲಾಖೆ ಆಯುಕ್ತ ಮಾತನಾಡದ್ದೇನೆ. ಇನ್ನೂ 15 ದಿನ ಕಾಲ ವಿದ್ಯಾರ್ಥಿನಿಯರಿಗೆ ತಾತ್ಕಾಲಿಕ ಊಟ ವ್ಯವಸ್ಥೆ ಮಾಡಲಾಗುವುದು” ಎಂದು ಭರವಸೆ ನೀಡಿದರು.

ಮಹಾರಾಣಿ ಕಾಲೇಜಿನಲ್ಲೇ ಓದಬೇಕೆಂಬ ಹಠ ಏಕೆ?

ಸರಕಾರ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಪದವಿ ಕಾಲೇಜು ಆರಂಭಿಸಿದೆ. ವಿದ್ಯಾರ್ಥಿನಿಯರು ತಮಗೆ ಹತ್ತಿರ ಆಗುವ ಕಾಲೇಜುಗಳಲ್ಲಿಯೇ ಸೇರಿಕೊಳ್ಳಬೇಕು. ಮಹಾರಾಣಿ ಕಾಲೇಜಿನಲ್ಲಿಯೇ ಓದಬೇಕೆಂಬುದು ಸರಿಯಾದ ವರ್ತನೆಯಲ್ಲ ಎಂದು ಶಾಸಕ ಎಲ್.ನಾಗೇಂದ್ರ ತಿಳಿಸಿದರು.

ಎನ್‌ಇಪಿ ಪಠ್ಯಕ್ರಮ ಬದಲು ಫಜೀತಿ

ಕಾಲೇಜು ಆರಂಭವಾಗಿ ಎರಡು ತಿಂಗಳಾದರೂ ಊಟದ ವ್ಯವಸ್ಥೆ ಮಾಡಿಲ್ಲ ಎಂಬುದು ಮಹಾರಾಣಿ ಕಾಲೇಜಿನ ಸಮಸ್ಯೆಯಾದರೆ, ತರಗತಿಗಳು ಆರಂಭವಾಗಿ ಒಂದು ತಿಂಗಳಾದ ಬಳಿಕ ಪಠ್ಯಕ್ರಮ ಬದಲಿಸಿ ಮತ್ತೊಂದು ಯಡವಟ್ಟು ಮಾಡಲು ಮೈಸೂರು ವಿವಿ ಹೊರಟಿದೆ. ಈ ದಿಢೀರ್‌ ಬದಲಾವಣೆಯನ್ನು ಖಂಡಿಸಿ ಇತ್ತೀಚೆಗೆ ಮೈಸೂರು ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು.

ಎನ್‌ಇಪಿ ಜಾರಿಯಲ್ಲಿ ಮುಂಚೂಣಿಯಲ್ಲಿರುವ ಮೈಸೂರು ವಿವಿಯು ಹಲವು ಎಡವಟ್ಟುಗಳನ್ನು ಮಾಡುತ್ತಲೇ ಇದೆ. ಬಹುಶಿಸ್ತೀಯ ಪಠ್ಯಕ್ರಮದ ಹೆಸರಲ್ಲಿ ವಿದ್ಯಾರ್ಥಿಗಳ ಆಯ್ಕೆಗೆ ವಿರುದ್ಧವಾಗಿ ಪಠ್ಯವನ್ನು ಹೇರಲು ಹೊರಟು ವಿವಿ ಈಗ ಸುದ್ದಿಯಲ್ಲಿದೆ. ಈ ಎಲ್ಲ ಬೆಳವಣಿಗೆಗಳನ್ನು ನೋಡುತ್ತಿದ್ದರೆ ಮೈಸೂರು ವಿವಿಯು ವಿದ್ಯಾರ್ಥಿಗಳ ಇಷ್ಟ-ಕಷ್ಟಗಳನ್ನು ಆಲಿಸುತ್ತಿಲ್ಲ ಅನಿಸುತ್ತದೆ ಎಂಬುದು ಪ್ರಜ್ಞಾವಂತರ ಅಭಿಪ್ರಾಯ.


ಇದನ್ನೂ ಓದಿರಿ: ದಿಢೀರ್‌ ಪಠ್ಯ ಬದಲಾವಣೆ ಸುತ್ತೋಲೆ: ಎನ್‌ಇಪಿಯಿಂದ ವಿದ್ಯಾರ್ಥಿಗಳು ಹೈರಾಣು


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...