Homeಕರ್ನಾಟಕಕಾಲೇಜು ಆರಂಭವಾಗಿ 2 ತಿಂಗಳಾದರೂ ಹಾಸ್ಟೆಲ್‌ನಲ್ಲಿ ಊಟವಿಲ್ಲ: ಮಹಾರಾಣಿ ವಿದ್ಯಾರ್ಥಿನಿಯರ ಪ್ರತಿಭಟನೆ

ಕಾಲೇಜು ಆರಂಭವಾಗಿ 2 ತಿಂಗಳಾದರೂ ಹಾಸ್ಟೆಲ್‌ನಲ್ಲಿ ಊಟವಿಲ್ಲ: ಮಹಾರಾಣಿ ವಿದ್ಯಾರ್ಥಿನಿಯರ ಪ್ರತಿಭಟನೆ

- Advertisement -
- Advertisement -

ಮೈಸೂರಿನ ಮಹಾರಾಣಿ ವಿದ್ಯಾರ್ಥಿನಿಲಯದಲ್ಲಿ ಎರಡು ತಿಂಗಳಿಂದ ಊಟ ನೀಡುತ್ತಿಲ್ಲ, ಕುಡಿಯುವ ನೀರಿನ ವ್ಯವಸ್ಥೆಯನ್ನೂ ಮಾಡಿಲ್ಲ. ಕಾಲೇಜು ಆರಂಭವಾಗಿ ಎರಡು ತಿಂಗಳಾದರೂ ಊಟದ ವ್ಯವಸ್ಥೆಯಾಗಿಲ್ಲ ಎಂದು ಆರೋಪಿಸಿ ಮಹಾರಾಣಿ ವಿಜ್ಞಾನ ಕಾಲೇಜು ಹಾಸ್ಟೆಲ್ ವಿದ್ಯಾರ್ಥಿನಿಯರು ಮಂಗಳವಾರ ಪ್ರತಿಭಟನೆ ನಡೆಸಿದರು.

ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಸೇರಿದ ನೂರಾರು ವಿದ್ಯಾರ್ಥಿನಿಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅ.18ರಿಂದ ಕಾಲೇಜು ಪುನಾರಾರಂಭಗೊಂಡಿದೆ. ಹೀಗಿದ್ದರೂ, ವಿದ್ಯಾರ್ಥಿನಿಲಯದಲ್ಲಿ ಊಟದ ವ್ಯವಸ್ಥೆಯನ್ನು ಇನ್ನೂ ಮಾಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಎರಡು ತಿಂಗಳಿಂದ ಹೋಟೆಲ್‌ನಲ್ಲಿ ಊಟ ಮಾಡುತ್ತಿದೇವೆ. ಹೋಟೆಲ್ ಊಟದಿಂದ ಬಹುತೇಕ ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಏರುಪೇರಾಗಿ, ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಇದರಿಂದ ವಿದ್ಯಾಭ್ಯಾಸಕ್ಕೂ ತೊಂದರೆಯಾಗಿದೆ. ಎಲ್ಲ ವಿದ್ಯಾರ್ಥಿನಿಯರು ದಿನದ ಮೂರು ಹೊತ್ತು ಹೋಟೆಲ್‌ನಲ್ಲಿಯೇ ತಿನ್ನುವಷ್ಟು ಸ್ಥಿತಿವಂತರಲ್ಲ ಎಂದು ತಿಳಿಸಿದರು.

ಎಷ್ಟೋ ವಿದ್ಯಾರ್ಥಿನಿಯರು ಒಂದೆರಡು ದಿನ ಉಪವಾಸ ಮಾಡಿದ್ದಾರೆ. ಮನೆಯಿಂದ ಬರುವ ವಿದ್ಯಾರ್ಥಿನಿಯರು ಊಟ ತಂದು ಕೊಟ್ಟಿದ್ದಾರೆ. ಒಟ್ಟಾರೆ ಎರಡು ತಿಂಗಳಿಂದ ವಿದ್ಯಾರ್ಥಿನಿಯರ ಪಾಡು ಹೇಳತೀರದಾಗಿದೆ ಎಂದು ಪ್ರತಿಭಟನಾನಿತರ ವಿದ್ಯಾರ್ಥಿನಿಯರು ಅಳಲು ತೋಡಿಕೊಂಡರು. ಅದಷ್ಟು ಬೇಗ ಊಟದ ವ್ಯವಸ್ಥೆ ಆರಂಭಿಸಬೇಕು ಎಂದು ಒತ್ತಾಯಿಸಿದರು.

ವಿದ್ಯಾರ್ಥಿನಿಲಯದಲ್ಲಿ ಕುಡಿಯುವ ನೀರಿನ ವ್ಯವಸ್ಥೆಯಿಲ್ಲದ ಪರದಾಡಬೇಕಿದೆ. ಹಣ ಕೊಟ್ಟು ಪ್ರತಿನಿತ್ಯ ಹೊರಗಿನಿಂದ ನೀರು ತರಬೇಕಾದ ದುಸ್ಥಿತಿ ನಮ್ಮದು. ಶೀಘ್ರವೇ ಕುಡಿಯವ ನೀರಿನ ವ್ಯವಸ್ಥೆ ಮಾಡಬೇಕಿದೆ. ವಾರ್ಡನ್‌ ಹಾಗೂ ಕಾಲೇಜು ಪ್ರಾಂಶುಪಾಲರಿಗೆ ದೂರು ನೀಡಿದ್ದೇವೆ. ಪ್ರಾಂಶುಪಾಲರು ವಿದ್ಯಾರ್ಥಿನಿಯರ ಪರವಾಗಿ ಅವರ ಕೈಯಲ್ಲಿ ಆದ ಪ್ರಯತ್ನ ಮಾಡುತ್ತಿದ್ದಾರೆ. ಆದರೂ ಈ ಸಮಸ್ಯೆ ಬಗೆಹರಿಯುವ ಲಕ್ಷಣ ಕಾಣುತ್ತಿಲ್ಲ . ಹಾಗಾಗೀ ವಸತಿ ನಿಲಯದ ಎಲ್ಲಾ ವಿದ್ಯಾರ್ಥಿನಿಯರು ಇಲ್ಲಿ ಸೇರಿದ್ದೇವೆ ಎಂದು ತಿಳಿಸಿದರು.

15 ದಿನಗಳ ತಾತ್ಕಾಲಿಕ ಊಟದ ವ್ಯವಸ್ಥೆ: ಶಾಸಕ

ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ವಿದ್ಯಾರ್ಥಿನಿಯರ ಸಮಸ್ಯೆ ಆಲಿಸಿದರು. ಈ ವೇಳೆ ಮಾತನಾಡಿದ ಅವರು, “ಊಟದ ವ್ಯವಸ್ಥೆ ಆರಂಭಿಸಲು ಉಂಟಾಗಿರುವ ಸಮಸ್ಯೆ ಬಗೆಹರಿಸಲು ಕ್ರಮ ವಹಿಸಲಾಗುವುದು. ಈ ಕುರಿತು ಶಿಕ್ಷಣ ಇಲಾಖೆ ಆಯುಕ್ತ ಮಾತನಾಡದ್ದೇನೆ. ಇನ್ನೂ 15 ದಿನ ಕಾಲ ವಿದ್ಯಾರ್ಥಿನಿಯರಿಗೆ ತಾತ್ಕಾಲಿಕ ಊಟ ವ್ಯವಸ್ಥೆ ಮಾಡಲಾಗುವುದು” ಎಂದು ಭರವಸೆ ನೀಡಿದರು.

ಮಹಾರಾಣಿ ಕಾಲೇಜಿನಲ್ಲೇ ಓದಬೇಕೆಂಬ ಹಠ ಏಕೆ?

ಸರಕಾರ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಪದವಿ ಕಾಲೇಜು ಆರಂಭಿಸಿದೆ. ವಿದ್ಯಾರ್ಥಿನಿಯರು ತಮಗೆ ಹತ್ತಿರ ಆಗುವ ಕಾಲೇಜುಗಳಲ್ಲಿಯೇ ಸೇರಿಕೊಳ್ಳಬೇಕು. ಮಹಾರಾಣಿ ಕಾಲೇಜಿನಲ್ಲಿಯೇ ಓದಬೇಕೆಂಬುದು ಸರಿಯಾದ ವರ್ತನೆಯಲ್ಲ ಎಂದು ಶಾಸಕ ಎಲ್.ನಾಗೇಂದ್ರ ತಿಳಿಸಿದರು.

ಎನ್‌ಇಪಿ ಪಠ್ಯಕ್ರಮ ಬದಲು ಫಜೀತಿ

ಕಾಲೇಜು ಆರಂಭವಾಗಿ ಎರಡು ತಿಂಗಳಾದರೂ ಊಟದ ವ್ಯವಸ್ಥೆ ಮಾಡಿಲ್ಲ ಎಂಬುದು ಮಹಾರಾಣಿ ಕಾಲೇಜಿನ ಸಮಸ್ಯೆಯಾದರೆ, ತರಗತಿಗಳು ಆರಂಭವಾಗಿ ಒಂದು ತಿಂಗಳಾದ ಬಳಿಕ ಪಠ್ಯಕ್ರಮ ಬದಲಿಸಿ ಮತ್ತೊಂದು ಯಡವಟ್ಟು ಮಾಡಲು ಮೈಸೂರು ವಿವಿ ಹೊರಟಿದೆ. ಈ ದಿಢೀರ್‌ ಬದಲಾವಣೆಯನ್ನು ಖಂಡಿಸಿ ಇತ್ತೀಚೆಗೆ ಮೈಸೂರು ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು.

ಎನ್‌ಇಪಿ ಜಾರಿಯಲ್ಲಿ ಮುಂಚೂಣಿಯಲ್ಲಿರುವ ಮೈಸೂರು ವಿವಿಯು ಹಲವು ಎಡವಟ್ಟುಗಳನ್ನು ಮಾಡುತ್ತಲೇ ಇದೆ. ಬಹುಶಿಸ್ತೀಯ ಪಠ್ಯಕ್ರಮದ ಹೆಸರಲ್ಲಿ ವಿದ್ಯಾರ್ಥಿಗಳ ಆಯ್ಕೆಗೆ ವಿರುದ್ಧವಾಗಿ ಪಠ್ಯವನ್ನು ಹೇರಲು ಹೊರಟು ವಿವಿ ಈಗ ಸುದ್ದಿಯಲ್ಲಿದೆ. ಈ ಎಲ್ಲ ಬೆಳವಣಿಗೆಗಳನ್ನು ನೋಡುತ್ತಿದ್ದರೆ ಮೈಸೂರು ವಿವಿಯು ವಿದ್ಯಾರ್ಥಿಗಳ ಇಷ್ಟ-ಕಷ್ಟಗಳನ್ನು ಆಲಿಸುತ್ತಿಲ್ಲ ಅನಿಸುತ್ತದೆ ಎಂಬುದು ಪ್ರಜ್ಞಾವಂತರ ಅಭಿಪ್ರಾಯ.


ಇದನ್ನೂ ಓದಿರಿ: ದಿಢೀರ್‌ ಪಠ್ಯ ಬದಲಾವಣೆ ಸುತ್ತೋಲೆ: ಎನ್‌ಇಪಿಯಿಂದ ವಿದ್ಯಾರ್ಥಿಗಳು ಹೈರಾಣು


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...