Homeಕರ್ನಾಟಕಕಾಲೇಜು ಆರಂಭವಾಗಿ 2 ತಿಂಗಳಾದರೂ ಹಾಸ್ಟೆಲ್‌ನಲ್ಲಿ ಊಟವಿಲ್ಲ: ಮಹಾರಾಣಿ ವಿದ್ಯಾರ್ಥಿನಿಯರ ಪ್ರತಿಭಟನೆ

ಕಾಲೇಜು ಆರಂಭವಾಗಿ 2 ತಿಂಗಳಾದರೂ ಹಾಸ್ಟೆಲ್‌ನಲ್ಲಿ ಊಟವಿಲ್ಲ: ಮಹಾರಾಣಿ ವಿದ್ಯಾರ್ಥಿನಿಯರ ಪ್ರತಿಭಟನೆ

- Advertisement -
- Advertisement -

ಮೈಸೂರಿನ ಮಹಾರಾಣಿ ವಿದ್ಯಾರ್ಥಿನಿಲಯದಲ್ಲಿ ಎರಡು ತಿಂಗಳಿಂದ ಊಟ ನೀಡುತ್ತಿಲ್ಲ, ಕುಡಿಯುವ ನೀರಿನ ವ್ಯವಸ್ಥೆಯನ್ನೂ ಮಾಡಿಲ್ಲ. ಕಾಲೇಜು ಆರಂಭವಾಗಿ ಎರಡು ತಿಂಗಳಾದರೂ ಊಟದ ವ್ಯವಸ್ಥೆಯಾಗಿಲ್ಲ ಎಂದು ಆರೋಪಿಸಿ ಮಹಾರಾಣಿ ವಿಜ್ಞಾನ ಕಾಲೇಜು ಹಾಸ್ಟೆಲ್ ವಿದ್ಯಾರ್ಥಿನಿಯರು ಮಂಗಳವಾರ ಪ್ರತಿಭಟನೆ ನಡೆಸಿದರು.

ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಸೇರಿದ ನೂರಾರು ವಿದ್ಯಾರ್ಥಿನಿಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅ.18ರಿಂದ ಕಾಲೇಜು ಪುನಾರಾರಂಭಗೊಂಡಿದೆ. ಹೀಗಿದ್ದರೂ, ವಿದ್ಯಾರ್ಥಿನಿಲಯದಲ್ಲಿ ಊಟದ ವ್ಯವಸ್ಥೆಯನ್ನು ಇನ್ನೂ ಮಾಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಎರಡು ತಿಂಗಳಿಂದ ಹೋಟೆಲ್‌ನಲ್ಲಿ ಊಟ ಮಾಡುತ್ತಿದೇವೆ. ಹೋಟೆಲ್ ಊಟದಿಂದ ಬಹುತೇಕ ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಏರುಪೇರಾಗಿ, ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಇದರಿಂದ ವಿದ್ಯಾಭ್ಯಾಸಕ್ಕೂ ತೊಂದರೆಯಾಗಿದೆ. ಎಲ್ಲ ವಿದ್ಯಾರ್ಥಿನಿಯರು ದಿನದ ಮೂರು ಹೊತ್ತು ಹೋಟೆಲ್‌ನಲ್ಲಿಯೇ ತಿನ್ನುವಷ್ಟು ಸ್ಥಿತಿವಂತರಲ್ಲ ಎಂದು ತಿಳಿಸಿದರು.

ಎಷ್ಟೋ ವಿದ್ಯಾರ್ಥಿನಿಯರು ಒಂದೆರಡು ದಿನ ಉಪವಾಸ ಮಾಡಿದ್ದಾರೆ. ಮನೆಯಿಂದ ಬರುವ ವಿದ್ಯಾರ್ಥಿನಿಯರು ಊಟ ತಂದು ಕೊಟ್ಟಿದ್ದಾರೆ. ಒಟ್ಟಾರೆ ಎರಡು ತಿಂಗಳಿಂದ ವಿದ್ಯಾರ್ಥಿನಿಯರ ಪಾಡು ಹೇಳತೀರದಾಗಿದೆ ಎಂದು ಪ್ರತಿಭಟನಾನಿತರ ವಿದ್ಯಾರ್ಥಿನಿಯರು ಅಳಲು ತೋಡಿಕೊಂಡರು. ಅದಷ್ಟು ಬೇಗ ಊಟದ ವ್ಯವಸ್ಥೆ ಆರಂಭಿಸಬೇಕು ಎಂದು ಒತ್ತಾಯಿಸಿದರು.

ವಿದ್ಯಾರ್ಥಿನಿಲಯದಲ್ಲಿ ಕುಡಿಯುವ ನೀರಿನ ವ್ಯವಸ್ಥೆಯಿಲ್ಲದ ಪರದಾಡಬೇಕಿದೆ. ಹಣ ಕೊಟ್ಟು ಪ್ರತಿನಿತ್ಯ ಹೊರಗಿನಿಂದ ನೀರು ತರಬೇಕಾದ ದುಸ್ಥಿತಿ ನಮ್ಮದು. ಶೀಘ್ರವೇ ಕುಡಿಯವ ನೀರಿನ ವ್ಯವಸ್ಥೆ ಮಾಡಬೇಕಿದೆ. ವಾರ್ಡನ್‌ ಹಾಗೂ ಕಾಲೇಜು ಪ್ರಾಂಶುಪಾಲರಿಗೆ ದೂರು ನೀಡಿದ್ದೇವೆ. ಪ್ರಾಂಶುಪಾಲರು ವಿದ್ಯಾರ್ಥಿನಿಯರ ಪರವಾಗಿ ಅವರ ಕೈಯಲ್ಲಿ ಆದ ಪ್ರಯತ್ನ ಮಾಡುತ್ತಿದ್ದಾರೆ. ಆದರೂ ಈ ಸಮಸ್ಯೆ ಬಗೆಹರಿಯುವ ಲಕ್ಷಣ ಕಾಣುತ್ತಿಲ್ಲ . ಹಾಗಾಗೀ ವಸತಿ ನಿಲಯದ ಎಲ್ಲಾ ವಿದ್ಯಾರ್ಥಿನಿಯರು ಇಲ್ಲಿ ಸೇರಿದ್ದೇವೆ ಎಂದು ತಿಳಿಸಿದರು.

15 ದಿನಗಳ ತಾತ್ಕಾಲಿಕ ಊಟದ ವ್ಯವಸ್ಥೆ: ಶಾಸಕ

ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ವಿದ್ಯಾರ್ಥಿನಿಯರ ಸಮಸ್ಯೆ ಆಲಿಸಿದರು. ಈ ವೇಳೆ ಮಾತನಾಡಿದ ಅವರು, “ಊಟದ ವ್ಯವಸ್ಥೆ ಆರಂಭಿಸಲು ಉಂಟಾಗಿರುವ ಸಮಸ್ಯೆ ಬಗೆಹರಿಸಲು ಕ್ರಮ ವಹಿಸಲಾಗುವುದು. ಈ ಕುರಿತು ಶಿಕ್ಷಣ ಇಲಾಖೆ ಆಯುಕ್ತ ಮಾತನಾಡದ್ದೇನೆ. ಇನ್ನೂ 15 ದಿನ ಕಾಲ ವಿದ್ಯಾರ್ಥಿನಿಯರಿಗೆ ತಾತ್ಕಾಲಿಕ ಊಟ ವ್ಯವಸ್ಥೆ ಮಾಡಲಾಗುವುದು” ಎಂದು ಭರವಸೆ ನೀಡಿದರು.

ಮಹಾರಾಣಿ ಕಾಲೇಜಿನಲ್ಲೇ ಓದಬೇಕೆಂಬ ಹಠ ಏಕೆ?

ಸರಕಾರ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಪದವಿ ಕಾಲೇಜು ಆರಂಭಿಸಿದೆ. ವಿದ್ಯಾರ್ಥಿನಿಯರು ತಮಗೆ ಹತ್ತಿರ ಆಗುವ ಕಾಲೇಜುಗಳಲ್ಲಿಯೇ ಸೇರಿಕೊಳ್ಳಬೇಕು. ಮಹಾರಾಣಿ ಕಾಲೇಜಿನಲ್ಲಿಯೇ ಓದಬೇಕೆಂಬುದು ಸರಿಯಾದ ವರ್ತನೆಯಲ್ಲ ಎಂದು ಶಾಸಕ ಎಲ್.ನಾಗೇಂದ್ರ ತಿಳಿಸಿದರು.

ಎನ್‌ಇಪಿ ಪಠ್ಯಕ್ರಮ ಬದಲು ಫಜೀತಿ

ಕಾಲೇಜು ಆರಂಭವಾಗಿ ಎರಡು ತಿಂಗಳಾದರೂ ಊಟದ ವ್ಯವಸ್ಥೆ ಮಾಡಿಲ್ಲ ಎಂಬುದು ಮಹಾರಾಣಿ ಕಾಲೇಜಿನ ಸಮಸ್ಯೆಯಾದರೆ, ತರಗತಿಗಳು ಆರಂಭವಾಗಿ ಒಂದು ತಿಂಗಳಾದ ಬಳಿಕ ಪಠ್ಯಕ್ರಮ ಬದಲಿಸಿ ಮತ್ತೊಂದು ಯಡವಟ್ಟು ಮಾಡಲು ಮೈಸೂರು ವಿವಿ ಹೊರಟಿದೆ. ಈ ದಿಢೀರ್‌ ಬದಲಾವಣೆಯನ್ನು ಖಂಡಿಸಿ ಇತ್ತೀಚೆಗೆ ಮೈಸೂರು ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು.

ಎನ್‌ಇಪಿ ಜಾರಿಯಲ್ಲಿ ಮುಂಚೂಣಿಯಲ್ಲಿರುವ ಮೈಸೂರು ವಿವಿಯು ಹಲವು ಎಡವಟ್ಟುಗಳನ್ನು ಮಾಡುತ್ತಲೇ ಇದೆ. ಬಹುಶಿಸ್ತೀಯ ಪಠ್ಯಕ್ರಮದ ಹೆಸರಲ್ಲಿ ವಿದ್ಯಾರ್ಥಿಗಳ ಆಯ್ಕೆಗೆ ವಿರುದ್ಧವಾಗಿ ಪಠ್ಯವನ್ನು ಹೇರಲು ಹೊರಟು ವಿವಿ ಈಗ ಸುದ್ದಿಯಲ್ಲಿದೆ. ಈ ಎಲ್ಲ ಬೆಳವಣಿಗೆಗಳನ್ನು ನೋಡುತ್ತಿದ್ದರೆ ಮೈಸೂರು ವಿವಿಯು ವಿದ್ಯಾರ್ಥಿಗಳ ಇಷ್ಟ-ಕಷ್ಟಗಳನ್ನು ಆಲಿಸುತ್ತಿಲ್ಲ ಅನಿಸುತ್ತದೆ ಎಂಬುದು ಪ್ರಜ್ಞಾವಂತರ ಅಭಿಪ್ರಾಯ.


ಇದನ್ನೂ ಓದಿರಿ: ದಿಢೀರ್‌ ಪಠ್ಯ ಬದಲಾವಣೆ ಸುತ್ತೋಲೆ: ಎನ್‌ಇಪಿಯಿಂದ ವಿದ್ಯಾರ್ಥಿಗಳು ಹೈರಾಣು


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...