Homeಕರ್ನಾಟಕಕಾಲೇಜು ಆರಂಭವಾಗಿ 2 ತಿಂಗಳಾದರೂ ಹಾಸ್ಟೆಲ್‌ನಲ್ಲಿ ಊಟವಿಲ್ಲ: ಮಹಾರಾಣಿ ವಿದ್ಯಾರ್ಥಿನಿಯರ ಪ್ರತಿಭಟನೆ

ಕಾಲೇಜು ಆರಂಭವಾಗಿ 2 ತಿಂಗಳಾದರೂ ಹಾಸ್ಟೆಲ್‌ನಲ್ಲಿ ಊಟವಿಲ್ಲ: ಮಹಾರಾಣಿ ವಿದ್ಯಾರ್ಥಿನಿಯರ ಪ್ರತಿಭಟನೆ

- Advertisement -
- Advertisement -

ಮೈಸೂರಿನ ಮಹಾರಾಣಿ ವಿದ್ಯಾರ್ಥಿನಿಲಯದಲ್ಲಿ ಎರಡು ತಿಂಗಳಿಂದ ಊಟ ನೀಡುತ್ತಿಲ್ಲ, ಕುಡಿಯುವ ನೀರಿನ ವ್ಯವಸ್ಥೆಯನ್ನೂ ಮಾಡಿಲ್ಲ. ಕಾಲೇಜು ಆರಂಭವಾಗಿ ಎರಡು ತಿಂಗಳಾದರೂ ಊಟದ ವ್ಯವಸ್ಥೆಯಾಗಿಲ್ಲ ಎಂದು ಆರೋಪಿಸಿ ಮಹಾರಾಣಿ ವಿಜ್ಞಾನ ಕಾಲೇಜು ಹಾಸ್ಟೆಲ್ ವಿದ್ಯಾರ್ಥಿನಿಯರು ಮಂಗಳವಾರ ಪ್ರತಿಭಟನೆ ನಡೆಸಿದರು.

ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಸೇರಿದ ನೂರಾರು ವಿದ್ಯಾರ್ಥಿನಿಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅ.18ರಿಂದ ಕಾಲೇಜು ಪುನಾರಾರಂಭಗೊಂಡಿದೆ. ಹೀಗಿದ್ದರೂ, ವಿದ್ಯಾರ್ಥಿನಿಲಯದಲ್ಲಿ ಊಟದ ವ್ಯವಸ್ಥೆಯನ್ನು ಇನ್ನೂ ಮಾಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಎರಡು ತಿಂಗಳಿಂದ ಹೋಟೆಲ್‌ನಲ್ಲಿ ಊಟ ಮಾಡುತ್ತಿದೇವೆ. ಹೋಟೆಲ್ ಊಟದಿಂದ ಬಹುತೇಕ ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಏರುಪೇರಾಗಿ, ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಇದರಿಂದ ವಿದ್ಯಾಭ್ಯಾಸಕ್ಕೂ ತೊಂದರೆಯಾಗಿದೆ. ಎಲ್ಲ ವಿದ್ಯಾರ್ಥಿನಿಯರು ದಿನದ ಮೂರು ಹೊತ್ತು ಹೋಟೆಲ್‌ನಲ್ಲಿಯೇ ತಿನ್ನುವಷ್ಟು ಸ್ಥಿತಿವಂತರಲ್ಲ ಎಂದು ತಿಳಿಸಿದರು.

ಎಷ್ಟೋ ವಿದ್ಯಾರ್ಥಿನಿಯರು ಒಂದೆರಡು ದಿನ ಉಪವಾಸ ಮಾಡಿದ್ದಾರೆ. ಮನೆಯಿಂದ ಬರುವ ವಿದ್ಯಾರ್ಥಿನಿಯರು ಊಟ ತಂದು ಕೊಟ್ಟಿದ್ದಾರೆ. ಒಟ್ಟಾರೆ ಎರಡು ತಿಂಗಳಿಂದ ವಿದ್ಯಾರ್ಥಿನಿಯರ ಪಾಡು ಹೇಳತೀರದಾಗಿದೆ ಎಂದು ಪ್ರತಿಭಟನಾನಿತರ ವಿದ್ಯಾರ್ಥಿನಿಯರು ಅಳಲು ತೋಡಿಕೊಂಡರು. ಅದಷ್ಟು ಬೇಗ ಊಟದ ವ್ಯವಸ್ಥೆ ಆರಂಭಿಸಬೇಕು ಎಂದು ಒತ್ತಾಯಿಸಿದರು.

ವಿದ್ಯಾರ್ಥಿನಿಲಯದಲ್ಲಿ ಕುಡಿಯುವ ನೀರಿನ ವ್ಯವಸ್ಥೆಯಿಲ್ಲದ ಪರದಾಡಬೇಕಿದೆ. ಹಣ ಕೊಟ್ಟು ಪ್ರತಿನಿತ್ಯ ಹೊರಗಿನಿಂದ ನೀರು ತರಬೇಕಾದ ದುಸ್ಥಿತಿ ನಮ್ಮದು. ಶೀಘ್ರವೇ ಕುಡಿಯವ ನೀರಿನ ವ್ಯವಸ್ಥೆ ಮಾಡಬೇಕಿದೆ. ವಾರ್ಡನ್‌ ಹಾಗೂ ಕಾಲೇಜು ಪ್ರಾಂಶುಪಾಲರಿಗೆ ದೂರು ನೀಡಿದ್ದೇವೆ. ಪ್ರಾಂಶುಪಾಲರು ವಿದ್ಯಾರ್ಥಿನಿಯರ ಪರವಾಗಿ ಅವರ ಕೈಯಲ್ಲಿ ಆದ ಪ್ರಯತ್ನ ಮಾಡುತ್ತಿದ್ದಾರೆ. ಆದರೂ ಈ ಸಮಸ್ಯೆ ಬಗೆಹರಿಯುವ ಲಕ್ಷಣ ಕಾಣುತ್ತಿಲ್ಲ . ಹಾಗಾಗೀ ವಸತಿ ನಿಲಯದ ಎಲ್ಲಾ ವಿದ್ಯಾರ್ಥಿನಿಯರು ಇಲ್ಲಿ ಸೇರಿದ್ದೇವೆ ಎಂದು ತಿಳಿಸಿದರು.

15 ದಿನಗಳ ತಾತ್ಕಾಲಿಕ ಊಟದ ವ್ಯವಸ್ಥೆ: ಶಾಸಕ

ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ವಿದ್ಯಾರ್ಥಿನಿಯರ ಸಮಸ್ಯೆ ಆಲಿಸಿದರು. ಈ ವೇಳೆ ಮಾತನಾಡಿದ ಅವರು, “ಊಟದ ವ್ಯವಸ್ಥೆ ಆರಂಭಿಸಲು ಉಂಟಾಗಿರುವ ಸಮಸ್ಯೆ ಬಗೆಹರಿಸಲು ಕ್ರಮ ವಹಿಸಲಾಗುವುದು. ಈ ಕುರಿತು ಶಿಕ್ಷಣ ಇಲಾಖೆ ಆಯುಕ್ತ ಮಾತನಾಡದ್ದೇನೆ. ಇನ್ನೂ 15 ದಿನ ಕಾಲ ವಿದ್ಯಾರ್ಥಿನಿಯರಿಗೆ ತಾತ್ಕಾಲಿಕ ಊಟ ವ್ಯವಸ್ಥೆ ಮಾಡಲಾಗುವುದು” ಎಂದು ಭರವಸೆ ನೀಡಿದರು.

ಮಹಾರಾಣಿ ಕಾಲೇಜಿನಲ್ಲೇ ಓದಬೇಕೆಂಬ ಹಠ ಏಕೆ?

ಸರಕಾರ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಪದವಿ ಕಾಲೇಜು ಆರಂಭಿಸಿದೆ. ವಿದ್ಯಾರ್ಥಿನಿಯರು ತಮಗೆ ಹತ್ತಿರ ಆಗುವ ಕಾಲೇಜುಗಳಲ್ಲಿಯೇ ಸೇರಿಕೊಳ್ಳಬೇಕು. ಮಹಾರಾಣಿ ಕಾಲೇಜಿನಲ್ಲಿಯೇ ಓದಬೇಕೆಂಬುದು ಸರಿಯಾದ ವರ್ತನೆಯಲ್ಲ ಎಂದು ಶಾಸಕ ಎಲ್.ನಾಗೇಂದ್ರ ತಿಳಿಸಿದರು.

ಎನ್‌ಇಪಿ ಪಠ್ಯಕ್ರಮ ಬದಲು ಫಜೀತಿ

ಕಾಲೇಜು ಆರಂಭವಾಗಿ ಎರಡು ತಿಂಗಳಾದರೂ ಊಟದ ವ್ಯವಸ್ಥೆ ಮಾಡಿಲ್ಲ ಎಂಬುದು ಮಹಾರಾಣಿ ಕಾಲೇಜಿನ ಸಮಸ್ಯೆಯಾದರೆ, ತರಗತಿಗಳು ಆರಂಭವಾಗಿ ಒಂದು ತಿಂಗಳಾದ ಬಳಿಕ ಪಠ್ಯಕ್ರಮ ಬದಲಿಸಿ ಮತ್ತೊಂದು ಯಡವಟ್ಟು ಮಾಡಲು ಮೈಸೂರು ವಿವಿ ಹೊರಟಿದೆ. ಈ ದಿಢೀರ್‌ ಬದಲಾವಣೆಯನ್ನು ಖಂಡಿಸಿ ಇತ್ತೀಚೆಗೆ ಮೈಸೂರು ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು.

ಎನ್‌ಇಪಿ ಜಾರಿಯಲ್ಲಿ ಮುಂಚೂಣಿಯಲ್ಲಿರುವ ಮೈಸೂರು ವಿವಿಯು ಹಲವು ಎಡವಟ್ಟುಗಳನ್ನು ಮಾಡುತ್ತಲೇ ಇದೆ. ಬಹುಶಿಸ್ತೀಯ ಪಠ್ಯಕ್ರಮದ ಹೆಸರಲ್ಲಿ ವಿದ್ಯಾರ್ಥಿಗಳ ಆಯ್ಕೆಗೆ ವಿರುದ್ಧವಾಗಿ ಪಠ್ಯವನ್ನು ಹೇರಲು ಹೊರಟು ವಿವಿ ಈಗ ಸುದ್ದಿಯಲ್ಲಿದೆ. ಈ ಎಲ್ಲ ಬೆಳವಣಿಗೆಗಳನ್ನು ನೋಡುತ್ತಿದ್ದರೆ ಮೈಸೂರು ವಿವಿಯು ವಿದ್ಯಾರ್ಥಿಗಳ ಇಷ್ಟ-ಕಷ್ಟಗಳನ್ನು ಆಲಿಸುತ್ತಿಲ್ಲ ಅನಿಸುತ್ತದೆ ಎಂಬುದು ಪ್ರಜ್ಞಾವಂತರ ಅಭಿಪ್ರಾಯ.


ಇದನ್ನೂ ಓದಿರಿ: ದಿಢೀರ್‌ ಪಠ್ಯ ಬದಲಾವಣೆ ಸುತ್ತೋಲೆ: ಎನ್‌ಇಪಿಯಿಂದ ವಿದ್ಯಾರ್ಥಿಗಳು ಹೈರಾಣು


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ: ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಡಿ.ಕೆ.ಶಿವಕುಮಾರ್

ರಾಜ್ಯದ ಜಲಾಶಯಗಳಲ್ಲಿ ನೀರಿನ ಲಭ್ಯತೆ ಕಡಿಮೆಯಿರುವಾಗ ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡಬೇಕಾದ ಹೊಣೆಗಾರಿಕೆ ಇದೆ. ಕಾವೇರಿ ವಿಚಾರದಲ್ಲಿ ನಮ್ಮ ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಎಂದು...

‘ಅಸ್ತಿತ್ವದ ಸಮಸ್ಯೆಯಲ್ಲ, ಹೊಣೆಗಾರಿಕೆಯೇ ಮುಖ್ಯ’: ಆರ್‌ಎಸ್‌ಎಸ್ ನೋಂದಣಿ ಕುರಿತು ಬಿ.ಎಲ್. ಸಂತೋಷ್ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಹಾಗೂ ಅದರ ಕಾನೂನಾತ್ಮಕ ಅಸ್ತಿತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಹಾಗೂ ಕರ್ನಾಟಕದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್...

ನಾನು ‘ದಿಮಾಗಿ ನಕ್ಸಲ್’ ಆಗಿದ್ದರೆ ಅದಕ್ಕೆ ಹೆಮ್ಮೆ ಇದೆ: ಮೋದಿ-ರಿಜಿಜು ವಿರುದ್ಧ ಚಿದಂಬರಂ ತಿರುಗೇಟು

ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಳಸಿದ್ದ ‘ದಿಮಾಗಿ ನಕ್ಸಲರು’ (ವೈಚಾರಿಕ ನಕ್ಸಲರು) ಎಂಬ ಪದ ಬಳಕೆ ದೇಶದ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಪ್ರಧಾನಿಯವರ ಈ...

CAA ವಿರೋಧಿ ಪ್ರತಿಭಟನೆಗೆ ಕಾರಣವಾಗಿದ್ದ ಪ್ರಶ್ನೆಗಳು ಮತ್ತೆ ಜನಗಣತಿಯಲ್ಲಿ-ವರದಿ

ಶೀಘ್ರದಲ್ಲೇ ಪ್ರಾರಂಭವಾಗಲಿರುವ ಜನಗಣತಿಯ ಜನಸಂಖ್ಯಾ ಎಣಿಕೆ ಹಂತವು, 2011ರ ಜನಗಣತಿಗೆ ಹೋಲಿಸಿದರೆ 14 ಹೊಸ ಅಥವಾ ಮಾರ್ಪಡಿಸಿದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಈ ಪೈಕಿ ಹಲವು ಪ್ರಶ್ನೆಗಳು 2020ರಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ರಾಷ್ಟ್ರೀಯ ಜನಸಂಖ್ಯಾ ನೋಂದಣಿ...

ಹಿಂಗೋಲಿ ಶಾಲೆಯಲ್ಲಿ ಪ್ರಾಂಶುಪಾಲರ ಮದ್ಯಪಾನ, ಶಿಕ್ಷಕರ ಅಭಾವ: ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ಅಭಿಜೀತ್ ದೀಪ್ಕೆ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಲಿಂಬಾಲಾ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಶೈಕ್ಷಣಿಕ ವಾತಾವರಣ ಸಂಪೂರ್ಣವಾಗಿ ಕುಸಿದಿದ್ದು, ಶಾಲಾ ಪ್ರಾಂಶುಪಾಲರ ಹೊಣೆಗೇಡಿತನ ಮತ್ತು ಆಡಳಿತ ಮಂಡಳಿಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರ ಆಕ್ರೋಶ ಮುಗಿಲುಮುಟ್ಟಿದೆ. ಶಾಲೆಯ ಪ್ರಾಂಶುಪಾಲರು...

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ? CAG ವರದಿ

ದೇಶಾದ್ಯಂತ ನೆರೆ, ಬರ, ಭೂಕುಸಿತದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ ಭಾರಿ ಪ್ರಮಾಣದ ಕಡಿತವಾಗುತ್ತಿರುವುದು ಈಗ ನಿರೂಪಿತವಾಗಿದೆ. ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ...

EFLU ವಿದ್ಯಾರ್ಥಿ ಸಂಘದ ಮುಖಂಡರು, NSUI ಸದಸ್ಯರ ಮೇಲೆ ರಾಡ್ ಮತ್ತು ಬಿಯರ್ ಬಾಟಲಿಗಳಿಂದ ಹಲ್ಲೆ; ABVP ಸದಸ್ಯರ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್‌ನ ಪ್ರತಿಷ್ಠಿತ ಇಂಗ್ಲಿಷ್ ಮತ್ತು ವಿದೇಶಿ ಭಾಷಾ ವಿಶ್ವವಿದ್ಯಾಲಯ (ಇಎಫ್‌ಎಲ್‌ಯು - EFLU) ಕ್ಯಾಂಪಸ್‌ನಲ್ಲಿ ಭೀಕರ ಹಿಂಸಾಚಾರ ಸಂಭವಿಸಿದ್ದು, ವಿದ್ಯಾರ್ಥಿ ಸಂಘದ ಮುಖಂಡರು ಹಾಗೂ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NSUI) ಸದಸ್ಯರ ಮೇಲೆ...

NALSAR ವಿವಾದ : ಕಾನೂನು ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಿದ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ

ನಲ್ಸಾರ್ (NALSAR) ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ಹೊರಡಿಸಿದ್ದ ನಿರ್ದೇಶನಗಳ ಕುರಿತು ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ, ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಥ) ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಕ್ಷಮೆಯಾಚಿಸಿದ್ದಾರೆ. ಹೈದರಾಬಾದ್‌ನ ನಲ್ಸಾರ್...

ವಿಮಲ್ ‘ಏಲೈಚಿ’ ಜಾಹೀರಾತು ವಿವಾದ: ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ಗೆ ಮಹಾರಾಷ್ಟ್ರ ಎಫ್‌ಡಿಎ ಶೋಕಾಸ್ ನೋಟಿಸ್

ಬಾಲಿವುಡ್‌ನ ಖ್ಯಾತ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರುಗಳು ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. 'ವಿಮಲ್ ಏಲೈಚಿ' ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ...

ಹನೂರು ಶೂಟೌಟ್ ಪ್ರಕರಣ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲು

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶಾಗ್ಯ ಗ್ರಾಮ ಪಂಚಾಯತ್ ವಾಪ್ತಿಯ ಅರಣ್ಯ ಪ್ರದೇಶದಲ್ಲಿ ಮೂವರು ಗುಂಡೇಟಿಗೆ ಬಲಿಯಾದ ಪ್ರಕರಣ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಎಫ್​​​​ಐಆರ್ ದಾಖಲಾಗಿದೆ. ಅರಣ್ಯ ಸಿಬ್ಬಂದಿಯ ಗುಂಡೇಟಿಗೆ ಹನೂರು...