Homeಕರ್ನಾಟಕಕಾಲೇಜು ಆರಂಭವಾಗಿ 2 ತಿಂಗಳಾದರೂ ಹಾಸ್ಟೆಲ್‌ನಲ್ಲಿ ಊಟವಿಲ್ಲ: ಮಹಾರಾಣಿ ವಿದ್ಯಾರ್ಥಿನಿಯರ ಪ್ರತಿಭಟನೆ

ಕಾಲೇಜು ಆರಂಭವಾಗಿ 2 ತಿಂಗಳಾದರೂ ಹಾಸ್ಟೆಲ್‌ನಲ್ಲಿ ಊಟವಿಲ್ಲ: ಮಹಾರಾಣಿ ವಿದ್ಯಾರ್ಥಿನಿಯರ ಪ್ರತಿಭಟನೆ

- Advertisement -
- Advertisement -

ಮೈಸೂರಿನ ಮಹಾರಾಣಿ ವಿದ್ಯಾರ್ಥಿನಿಲಯದಲ್ಲಿ ಎರಡು ತಿಂಗಳಿಂದ ಊಟ ನೀಡುತ್ತಿಲ್ಲ, ಕುಡಿಯುವ ನೀರಿನ ವ್ಯವಸ್ಥೆಯನ್ನೂ ಮಾಡಿಲ್ಲ. ಕಾಲೇಜು ಆರಂಭವಾಗಿ ಎರಡು ತಿಂಗಳಾದರೂ ಊಟದ ವ್ಯವಸ್ಥೆಯಾಗಿಲ್ಲ ಎಂದು ಆರೋಪಿಸಿ ಮಹಾರಾಣಿ ವಿಜ್ಞಾನ ಕಾಲೇಜು ಹಾಸ್ಟೆಲ್ ವಿದ್ಯಾರ್ಥಿನಿಯರು ಮಂಗಳವಾರ ಪ್ರತಿಭಟನೆ ನಡೆಸಿದರು.

ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಸೇರಿದ ನೂರಾರು ವಿದ್ಯಾರ್ಥಿನಿಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅ.18ರಿಂದ ಕಾಲೇಜು ಪುನಾರಾರಂಭಗೊಂಡಿದೆ. ಹೀಗಿದ್ದರೂ, ವಿದ್ಯಾರ್ಥಿನಿಲಯದಲ್ಲಿ ಊಟದ ವ್ಯವಸ್ಥೆಯನ್ನು ಇನ್ನೂ ಮಾಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಎರಡು ತಿಂಗಳಿಂದ ಹೋಟೆಲ್‌ನಲ್ಲಿ ಊಟ ಮಾಡುತ್ತಿದೇವೆ. ಹೋಟೆಲ್ ಊಟದಿಂದ ಬಹುತೇಕ ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಏರುಪೇರಾಗಿ, ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಇದರಿಂದ ವಿದ್ಯಾಭ್ಯಾಸಕ್ಕೂ ತೊಂದರೆಯಾಗಿದೆ. ಎಲ್ಲ ವಿದ್ಯಾರ್ಥಿನಿಯರು ದಿನದ ಮೂರು ಹೊತ್ತು ಹೋಟೆಲ್‌ನಲ್ಲಿಯೇ ತಿನ್ನುವಷ್ಟು ಸ್ಥಿತಿವಂತರಲ್ಲ ಎಂದು ತಿಳಿಸಿದರು.

ಎಷ್ಟೋ ವಿದ್ಯಾರ್ಥಿನಿಯರು ಒಂದೆರಡು ದಿನ ಉಪವಾಸ ಮಾಡಿದ್ದಾರೆ. ಮನೆಯಿಂದ ಬರುವ ವಿದ್ಯಾರ್ಥಿನಿಯರು ಊಟ ತಂದು ಕೊಟ್ಟಿದ್ದಾರೆ. ಒಟ್ಟಾರೆ ಎರಡು ತಿಂಗಳಿಂದ ವಿದ್ಯಾರ್ಥಿನಿಯರ ಪಾಡು ಹೇಳತೀರದಾಗಿದೆ ಎಂದು ಪ್ರತಿಭಟನಾನಿತರ ವಿದ್ಯಾರ್ಥಿನಿಯರು ಅಳಲು ತೋಡಿಕೊಂಡರು. ಅದಷ್ಟು ಬೇಗ ಊಟದ ವ್ಯವಸ್ಥೆ ಆರಂಭಿಸಬೇಕು ಎಂದು ಒತ್ತಾಯಿಸಿದರು.

ವಿದ್ಯಾರ್ಥಿನಿಲಯದಲ್ಲಿ ಕುಡಿಯುವ ನೀರಿನ ವ್ಯವಸ್ಥೆಯಿಲ್ಲದ ಪರದಾಡಬೇಕಿದೆ. ಹಣ ಕೊಟ್ಟು ಪ್ರತಿನಿತ್ಯ ಹೊರಗಿನಿಂದ ನೀರು ತರಬೇಕಾದ ದುಸ್ಥಿತಿ ನಮ್ಮದು. ಶೀಘ್ರವೇ ಕುಡಿಯವ ನೀರಿನ ವ್ಯವಸ್ಥೆ ಮಾಡಬೇಕಿದೆ. ವಾರ್ಡನ್‌ ಹಾಗೂ ಕಾಲೇಜು ಪ್ರಾಂಶುಪಾಲರಿಗೆ ದೂರು ನೀಡಿದ್ದೇವೆ. ಪ್ರಾಂಶುಪಾಲರು ವಿದ್ಯಾರ್ಥಿನಿಯರ ಪರವಾಗಿ ಅವರ ಕೈಯಲ್ಲಿ ಆದ ಪ್ರಯತ್ನ ಮಾಡುತ್ತಿದ್ದಾರೆ. ಆದರೂ ಈ ಸಮಸ್ಯೆ ಬಗೆಹರಿಯುವ ಲಕ್ಷಣ ಕಾಣುತ್ತಿಲ್ಲ . ಹಾಗಾಗೀ ವಸತಿ ನಿಲಯದ ಎಲ್ಲಾ ವಿದ್ಯಾರ್ಥಿನಿಯರು ಇಲ್ಲಿ ಸೇರಿದ್ದೇವೆ ಎಂದು ತಿಳಿಸಿದರು.

15 ದಿನಗಳ ತಾತ್ಕಾಲಿಕ ಊಟದ ವ್ಯವಸ್ಥೆ: ಶಾಸಕ

ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ವಿದ್ಯಾರ್ಥಿನಿಯರ ಸಮಸ್ಯೆ ಆಲಿಸಿದರು. ಈ ವೇಳೆ ಮಾತನಾಡಿದ ಅವರು, “ಊಟದ ವ್ಯವಸ್ಥೆ ಆರಂಭಿಸಲು ಉಂಟಾಗಿರುವ ಸಮಸ್ಯೆ ಬಗೆಹರಿಸಲು ಕ್ರಮ ವಹಿಸಲಾಗುವುದು. ಈ ಕುರಿತು ಶಿಕ್ಷಣ ಇಲಾಖೆ ಆಯುಕ್ತ ಮಾತನಾಡದ್ದೇನೆ. ಇನ್ನೂ 15 ದಿನ ಕಾಲ ವಿದ್ಯಾರ್ಥಿನಿಯರಿಗೆ ತಾತ್ಕಾಲಿಕ ಊಟ ವ್ಯವಸ್ಥೆ ಮಾಡಲಾಗುವುದು” ಎಂದು ಭರವಸೆ ನೀಡಿದರು.

ಮಹಾರಾಣಿ ಕಾಲೇಜಿನಲ್ಲೇ ಓದಬೇಕೆಂಬ ಹಠ ಏಕೆ?

ಸರಕಾರ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಪದವಿ ಕಾಲೇಜು ಆರಂಭಿಸಿದೆ. ವಿದ್ಯಾರ್ಥಿನಿಯರು ತಮಗೆ ಹತ್ತಿರ ಆಗುವ ಕಾಲೇಜುಗಳಲ್ಲಿಯೇ ಸೇರಿಕೊಳ್ಳಬೇಕು. ಮಹಾರಾಣಿ ಕಾಲೇಜಿನಲ್ಲಿಯೇ ಓದಬೇಕೆಂಬುದು ಸರಿಯಾದ ವರ್ತನೆಯಲ್ಲ ಎಂದು ಶಾಸಕ ಎಲ್.ನಾಗೇಂದ್ರ ತಿಳಿಸಿದರು.

ಎನ್‌ಇಪಿ ಪಠ್ಯಕ್ರಮ ಬದಲು ಫಜೀತಿ

ಕಾಲೇಜು ಆರಂಭವಾಗಿ ಎರಡು ತಿಂಗಳಾದರೂ ಊಟದ ವ್ಯವಸ್ಥೆ ಮಾಡಿಲ್ಲ ಎಂಬುದು ಮಹಾರಾಣಿ ಕಾಲೇಜಿನ ಸಮಸ್ಯೆಯಾದರೆ, ತರಗತಿಗಳು ಆರಂಭವಾಗಿ ಒಂದು ತಿಂಗಳಾದ ಬಳಿಕ ಪಠ್ಯಕ್ರಮ ಬದಲಿಸಿ ಮತ್ತೊಂದು ಯಡವಟ್ಟು ಮಾಡಲು ಮೈಸೂರು ವಿವಿ ಹೊರಟಿದೆ. ಈ ದಿಢೀರ್‌ ಬದಲಾವಣೆಯನ್ನು ಖಂಡಿಸಿ ಇತ್ತೀಚೆಗೆ ಮೈಸೂರು ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು.

ಎನ್‌ಇಪಿ ಜಾರಿಯಲ್ಲಿ ಮುಂಚೂಣಿಯಲ್ಲಿರುವ ಮೈಸೂರು ವಿವಿಯು ಹಲವು ಎಡವಟ್ಟುಗಳನ್ನು ಮಾಡುತ್ತಲೇ ಇದೆ. ಬಹುಶಿಸ್ತೀಯ ಪಠ್ಯಕ್ರಮದ ಹೆಸರಲ್ಲಿ ವಿದ್ಯಾರ್ಥಿಗಳ ಆಯ್ಕೆಗೆ ವಿರುದ್ಧವಾಗಿ ಪಠ್ಯವನ್ನು ಹೇರಲು ಹೊರಟು ವಿವಿ ಈಗ ಸುದ್ದಿಯಲ್ಲಿದೆ. ಈ ಎಲ್ಲ ಬೆಳವಣಿಗೆಗಳನ್ನು ನೋಡುತ್ತಿದ್ದರೆ ಮೈಸೂರು ವಿವಿಯು ವಿದ್ಯಾರ್ಥಿಗಳ ಇಷ್ಟ-ಕಷ್ಟಗಳನ್ನು ಆಲಿಸುತ್ತಿಲ್ಲ ಅನಿಸುತ್ತದೆ ಎಂಬುದು ಪ್ರಜ್ಞಾವಂತರ ಅಭಿಪ್ರಾಯ.


ಇದನ್ನೂ ಓದಿರಿ: ದಿಢೀರ್‌ ಪಠ್ಯ ಬದಲಾವಣೆ ಸುತ್ತೋಲೆ: ಎನ್‌ಇಪಿಯಿಂದ ವಿದ್ಯಾರ್ಥಿಗಳು ಹೈರಾಣು


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...