Homeಮುಖಪುಟಊಟ, ನಿದ್ರೆ ಇಲ್ಲ, ದೇಶಕ್ಕೆ ಮರಳುವ ಭರವಸೆಯೂ ಇಲ್ಲ: ಕಂಗಾಲಾದ ಭಾರತೀಯರು

ಊಟ, ನಿದ್ರೆ ಇಲ್ಲ, ದೇಶಕ್ಕೆ ಮರಳುವ ಭರವಸೆಯೂ ಇಲ್ಲ: ಕಂಗಾಲಾದ ಭಾರತೀಯರು

‘ಅಮೆರಿಕ, ಇಂಗ್ಲೆಂಡ್ ಸೇರಿದಂತೆ ವಿವಿಧ ರಾಷ್ಟ್ರಗಳು ತಮ್ಮ ದೇಶದ ಪ್ರಜೆಗಳನ್ನು ಉಕ್ರೇನ್‌ನಿಂದ ವಾಪಸ್ ಕರೆಸಿಕೊಳ್ಳುವಾಗ ಹೊತ್ತಿನಲ್ಲಿ ಭಾರತದ ಪ್ರಧಾನಿ ಮತ್ತು ಸಚಿವರು ಚುನಾವಣೆಯಲ್ಲಿ ಬ್ಯುಸಿಯಾಗಿದ್ದರು’ ಎಂಬ ಆರೋಪಗಳು ಬಂದಿವೆ.

- Advertisement -
- Advertisement -

ಉಕ್ರೇನ್ ಮೇಲೆ ರಷ್ಯಾ ಯುದ್ದ ಘೋಷಿಸಿ ಐದು ದಿನಗಳು ಕಳೆದಿವೆ. ರಷ್ಯಾ ಸೇನೆ ಉಕ್ರೇನ್‌ನ ವಿವಿಧ ಭಾಗಗಳ ಮೇಲೆ ದಾಳಿ ನಡೆಸುತ್ತಿದೆ. ಇದುವರೆಗೂ ನೂರಾರು ಜನರು ಸಾವನ್ನಪ್ಪಿದ್ದಾರೆ. ಪರಿಸ್ಥಿತಿ ಗಂಭೀರವಾಗಿದೆ.

ರಷ್ಯಾ ಮತ್ತು ಉಕ್ರೇನ್ ನಡುವಿನ ಬಿಕ್ಕಟ್ಟು ಉದ್ವಿಘ್ನಗೊಳ್ಳುತ್ತಿರುವುದನ್ನು ಗಮನಿಸಿದ ವಿವಿಧ ದೇಶಗಳು ತಮ್ಮ ಜನರನ್ನು ದೇಶಕ್ಕೆ ವಾಪಸ್ ಕರೆಸಿಕೊಂಡಿದ್ದವು. ಆದರೆ ಐದು ರಾಜ್ಯಗಳ ಚುನಾವಣಾ ಕಣದಲ್ಲಿದ್ದ ಭಾರತವು ಉಕ್ರೇನ್‌ನಿಂದ ಜನರನ್ನು ತುರ್ತಾಗಿ ಕಳೆಸಿಕೊಳ್ಳುವ ಕೆಲಸಕ್ಕೆ ಮುಂದಾಗಲಿಲ್ಲ. ಹೀಗಾಗಿ, ಭಾರತದ ವಿದ್ಯಾರ್ಥಿಗಳು ಸೇರಿದಂತೆ ಹಲವಾರು ಪ್ರಜೆಗಳು ಉಕ್ರೇನ್‌ನಲ್ಲಿ ಸಿಲುಕಿಕೊಂಡು ಭಾರತಕ್ಕೆ ಮರಳಿ ಬರುವ ಭರವಸೆಯನ್ನೇ ಕಳೆದುಕೊಂಡಿದ್ದಾರೆ.

ರಷ್ಯಾದಿಂದ ದಾಳಿಗೀಡಾಗಿರುವ ಉಕ್ರೇನ್‌ನ ಪ್ರಮುಖ ಭಾಗವಾದ ಖಾರ್ಕಿವ್‌ನಲ್ಲಿ ಸುಮಾರು 18 ಭಾರತೀಯ ವಿದ್ಯಾರ್ಥಿಗಳು ಸಿಲುಕಿದ್ದಾರೆ. ಅವರೆಲ್ಲರೂ, ಖಾರ್ಕಿವ್‌ನ ಕರಾಜಿನ್ ನ್ಯಾಷನಲ್ ಯೂನಿವರ್ಸಿಟಿಯಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದಾರೆ. ಅವರೆಲ್ಲರೂ ಉಕ್ರೇನ್‌ನಲ್ಲಿ ಯುದ್ಧ ಪ್ರಾರಂಭವಾದಾಗಿನಿಂದ ನಾಲ್ಕು ರಾತ್ರಿಗಳಿಂದ ಮೆಟ್ರೋ ನಿಲ್ದಾಣದಲ್ಲಿದ್ದಾರೆ.

“ಉಭಯ ರಾಷ್ಟ್ರಗಳ ನಡುವೆ ಘರ್ಷಣೆ ಆರಂಭವಾದಾಗ ನಾವು ಮೆಟ್ರೋ ನಿಲ್ದಾಣಕ್ಕೆ ಬಂದೆವು. ನಾವು ತಂದಿದ್ದ ತಿನಿಸುಗಳೆಲ್ಲ ಖಾಲಿಯಾಗಿವೆ. ಆದರೆ ಈಗ ನಮಗೆ ಆಹಾರವಿಲ್ಲ. ನಾನು ಭಾನುವಾರ ಬೆಳಿಗ್ಗೆ ಸ್ವಲ್ಪ ಬ್ರೆಡ್ ತಿಂದೆ. ಅದು ಮುಗಿದ ನಂತರ, ನಮಗೆ ಆಹಾರ ದೊರೆತಿಲ್ಲ. ನಾಲ್ಕು ದಿನಗಳಿಂದ ಸರಿಯಾದ ನಿದ್ರೆಯೂ ಇಲ್ಲ” ಎಂದು ಕೇರಳ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಎಲಿಜಬೆತ್ ದೇವಾಸಿಯಾ ಹೇಳಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಪ್ಯಾಲೆಸ್ತೀನ್‌‌ನ ದಿಟ್ಟ ಬಾಲಕಿಯನ್ನು ಉಕ್ರೇನ್‌‌‌ನವರು ಎಂದು ವರದಿ ಮಾಡಿದ ಪಬ್ಲಿಕ್ ಟಿವಿ ಮತ್ತು ಸುವರ್ಣ ಟಿವಿ!

ಸುಮಾರು 500 ಮಂದಿ ಆಶ್ರಯ ಪಡೆದಿರುವ ಮೆಟ್ರೊ ನಿಲ್ದಾಣಕ್ಕೆ ಭಾನುವಾರದಿಂದ ನೀರು ಪೂರೈಕೆ ಆರಂಭಿಸಲಾಗಿದೆ. ಸುತ್ತಲಿನ ಜನರು ಸ್ವಲ್ಪ ಆಹಾರದ ವ್ಯವಸ್ಥೆ ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಇಲ್ಲಿ ನಡೆಯುತ್ತಿರುವ ಘರ್ಷಣೆಯಿಂದ ಅದೂ ಸಾಧ್ಯವಾಗದೇ ಇರಬಹುದು ಎಂದು ಎಲಿಜಬೆತ್ ತಿಳಿಸಿದ್ದಾರೆ.

ಭಾರತೀಯ ರಾಯಭಾರ ಕಚೇರಿಯು ರೈಲುಗಳ ಮೂಲಕ ದೇಶದ ಪಶ್ಚಿಮ ಭಾಗದಲ್ಲಿರುವ ನಗರಗಳಿಗೆ ಸ್ಥಳಾಂತರಗೊಳ್ಳಲು ನಮಗೆ ಹೇಳುತ್ತಿದೆ. ಆದರೆ, ಇಲ್ಲಿ ನಡೆಯುತ್ತಿರುವ ಭಾರೀ ಶೆಲ್‌ಗಳ ದಾಳಿಯಿಂದಾಗಿ ನಮಗೂ, ನಮ್ಮ ಸ್ನೇಹಿತರಿಗೆ ಮೆಟ್ರೋ ನಿಲ್ದಾಣದಿಂದ ಹೊರಬರಲು ಸಾಧ್ಯವಾಗುತ್ತಿಲ್ಲ ಎಂದು ಎಲಿಜಬೆತ್ ತಿಳಿಸಿದ್ದಾರೆ.

ಖಾರ್ಕಿವ್ ನ್ಯಾಷನಲ್ ಮೆಡಿಕಲ್ ಯೂನಿವರ್ಸಿಟಿಯಲ್ಲಿ ವಿದ್ಯಾಭ್ಯಾಸ ಪಡೆಯುತ್ತಿರುವ ಹರಿಯಾಣದ ಮೂಲದ ವೈದ್ಯಕೀಯ ವಿದ್ಯಾರ್ಥಿ ಅನುರಾಗ್ ಪೂನಿಯಾ ಅವರು ಭಾರತಕ್ಕೆ ವಿಮಾನ ಹತ್ತಲು ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದರು. ಆ ವೇಳೆ, ಉಕ್ರೇನ್ ವಿಮಾನ ನಿಲ್ದಾಣಗಳನ್ನು ಮುಚ್ಚಿದ್ದರಿಂದಾಗಿ ಅವರು ರಾಜಧಾನಿ ಕೈವ್‌ನಲ್ಲಿ ಸಿಕ್ಕಿಕೊಂಡಿದ್ದಾರೆ. ಆಗಿನಿಂದಲೂ ಭಾರತೀಯ ರಾಯಭಾರಿ ಕಚೇರಿಯಿಂದ ಕೇವಲ 20 ಮೀಟರ್ ದೂರದಲ್ಲಿರುವ ಶಾಲೆಯಲ್ಲಿ ಉಳಿದಿದ್ದಾರೆ. ಆದರೂ, ಭಾರತೀಯ ರಾಯಭಾರ ಕಚೇರಿಯು ಅನುರಾಗ್ ಅವರಿಗೆ ಅಥವಾ ಶಾಲೆಯಲ್ಲಿ ವಾಸಿಸುತ್ತಿರುವ ಉಳಿದ 450 ಜನರಿಗೆ ಸಹಾಯ ಮಾಡಲು ಸಾಧ್ಯವಾಗಿಲ್ಲ ಎಂದು ಅನುರಾಗ್ ವಿವರಿಸಿದ್ದಾರೆ.

ರೈಲುಗಳು ಮಾತ್ರ ಸಾರ್ವಜನಿಕ ಸಾರಿಗೆಯಾಗಿ ಕಾರ್ಯನಿರ್ವಹಿಸುತ್ತಿವೆ. ಉಕ್ರೇನ್ ವಿವಿಧ ಭಾಗದ ಜನರನ್ನು ಪಶ್ಚಿಮ ಗಡಿ ಪಟ್ಟಣಗಳಾದ ಇವಾನೊ ಮತ್ತು ಚೆರ್ನಿವಿಟ್ಸಿಗೆ ರೈಲುಗಳ ಮೂಲಕ ಸ್ಥಳಾಂತರಿಸಲಾಗುತ್ತಿದೆ. ಅದಕ್ಕಾಗಿ, ವಿದ್ಯಾರ್ಥಿಗಳಿಗೆ ಆಸನಗಳನ್ನು ಕಾಯ್ದಿರಿಸಗುತ್ತಿದೆ ಎಂದು ತಿಳಿದಾಗ ಸಂತೋಷವಾಯಿತು. ನಮ್ಮೊಂದಿಗಿದ್ದ “250ಕ್ಕೂ ಹೆಚ್ಚು ಜನರು ರೈಲು ನಿಲ್ದಾಣವನ್ನು ತಲುಪಿದರು. ಆದರೆ ಅಲ್ಲಿ ರಾಯಭಾರಿ ಅಧಿಕಾರಿಗಳು ಇರಲಿಲ್ಲ. ಸ್ಥಳೀಯರು ಬಂದೂಕುಗಳನ್ನು ಹಿಡಿದುಕೊಂಡು ನಮ್ಮನ್ನು ರೈಲು ಹತ್ತಲು ಬಿಡಲಿಲ್ಲ” ಎಂದು ಅನುರಾಗ್ ವಿವರಿಸಿದ್ದಾರೆ.

ರೈಲು ನಿಲ್ದಾಣದಿಂದ ನಾವು ಮತ್ತೆ ಶಾಲೆಗೆ ಮರಳಿದಾಗ ಕೇವಲ 180 ಜನರು ಉಳಿದಿದ್ದರು. ಇತರರು ಎಲ್ಲಿಗೆ ಹೋದರು ಎಂಬುದು ನಮಗೆ ತಿಳಿದಿಲ್ಲ. ನಾವು ಅವರನ್ನು ಸಂಪರ್ಕಿಸಲು ಸಾಧ್ಯವಿಲ್ಲ ಎಂದು ಅನುರಾಗ್ ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಲಂಗರ್‌‌ನ ಈ ಚಿತ್ರ ಯುದ್ದ ಪೀಡಿತ ಉಕ್ರೇನ್‌ ದೇಶದ್ದಲ್ಲ

“ಇಲ್ಲಿ ಯಾವುದೇ ಕಾನೂನು ಇಲ್ಲ ಮತ್ತು ಸರ್ಕಾರವು ಸ್ಥಳೀಯರನ್ನು ಶಸ್ತ್ರಸಜ್ಜಿತಗೊಳಿಸಿದೆ. ಬಂದೂಕು ಹಿಡಿದ ನಾಲ್ಕು ಜನರು ಬಾಗಿಲು ಮುರಿದು ನಮ್ಮ ಹಾಸ್ಟೆಲ್‌ನ ನೆಲಮಾಳಿಗೆಯಲ್ಲಿರುವ ಜಿಮ್‌ಗೆ ನುಗ್ಗಿದರು. ನಮ್ಮಲ್ಲಿ ತುಂಬಾ ಜನ ಇದ್ದುದನ್ನು ನೋಡಿ ಹೊರಟುಹೋದರು. ಈಗ, ನಾವು ಪೀಠೋಪಕರಣಗಳು ಮತ್ತು ಮರದ ಕೊಂಬೆಗಳಿಂದ ದ್ವಾರವನ್ನು ಭದ್ರಪಡಿಸಿದ್ದೇವೆ. ಮೂರು ದಿನಗಳಿಂದ ನಿದ್ದೆ ಮಾಡಿಲ್ಲ. ಭಾರತಕ್ಕೆ ಮರಳುತ್ತೇವೆ ಎಂಬ ಭರವಸೆಯೂ ನಮಗೆ ಇಲ್ಲ” ಎಂದು ಕೀವ್‌ನ ವೈದ್ಯಕೀಯ ಕಾಲೇಜಿನ ಹಾಸ್ಟಲ್‌ನಲ್ಲಿರುವ ಉತ್ತರ ಪ್ರದೇಶ ಮೂಲದ ವಿದ್ಯಾರ್ಥಿ ಅಧಿವೇಶ್ ಧಾಮಾ ಹೇಳಿದ್ದಾರೆ.

ಚುನಾವಣೆಯಲ್ಲಿ ಮುಳುಗಿದ್ದ ಕೇಂದ್ರ ಸರ್ಕಾರ: ಸರೋವರ್‌‌

“ಕಳೆದ ಒಂದು ತಿಂಗಳಿನಿಂದ ಉಕ್ರೇನ್ ಮತ್ತು ರಷ್ಯಾ ನಡುವಿನ ಸಂಘರ್ಷವು ಚರ್ಚೆಯಲ್ಲಿತ್ತು. ಯುದ್ದ ಆರಂಭವಾಗುವ ಅತಂಕವೂ ವ್ಯಕ್ತವಾಗುತ್ತಿತ್ತು. ಹೀಗಾಗಿ, ಅಮೆರಿಕ, ಇಂಗ್ಲೆಂಡ್ ಸೇರಿದಂತೆ ವಿವಿಧ ರಾಷ್ಟ್ರಗಳು ತಮ್ಮ ದೇಶದ ಪ್ರಜೆಗಳನ್ನು ಉಕ್ರೇನ್‌ನಿಂದ ವಾಪಸ್ ಕರೆಸಿಕೊಂಡಿವೆ. ಆದರೆ, ಭಾರತದಲ್ಲಿ ಪ್ರಧಾನಿ ಮೋದಿ ಸೇರಿದಂತೆ ಕೇಂದ್ರ ಸಚಿವರು ಐದು ರಾಜ್ಯಗಳ ಚುನಾವಣೆಯ ಪ್ರಚಾರದಲ್ಲಿ ಮುಳುಗಿದ್ದರು. ಅವರು ಉಕ್ರೇನ್ ಬಿಕ್ಕಟ್ಟಿನ ಬಗ್ಗೆಯಾಗಲೀ, ಅಲ್ಲಿರುವ ಭಾರತೀಯ ಪರಿಸ್ಥಿತಿ- ರಕ್ಷಣೆ ಬಗೆಗಾಗಲೀ ಯೋಚಿಸಲಿಲ್ಲ. ಹೀಗಾಗಿ, ಭಾರತೀಯರು ಉಕ್ರೇನ್‌ನಲ್ಲಿ ಬದುಕಿಗಾಗಿ ಹೋರಾಡುವ ಸ್ಥಿತಿಯಲ್ಲಿದ್ದಾರೆ” ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂಚಾಲಕ ಸರೋವರ್ ಬೆಂಕಿಕೆರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಭಾರತದಲ್ಲಿ ಶಿಕ್ಷಣವು ದುಬಾರಿಯಾಗಿದೆ ಮತ್ತು ಮಾರಾಟಕ್ಕಿದೆ. ಉಳ್ಳವರು ಮಾತ್ರ ದೇಶದಲ್ಲಿ ಉತ್ತಮ ಶಿಕ್ಷಣವನ್ನು ಪಡೆಯುತ್ತಿದ್ದು, ಇಲ್ಲದವರು ಶಿಕ್ಷಣದಿಂದ ವಂಚಿತರಾಗುತ್ತಾರೆ ಅಥವಾ ತಿಳಿವಳಿಕೆ ಇರುವವರು ಕಡಿಮೆ ಖರ್ಚಿನಲ್ಲಿ ಶಿಕ್ಷಣ ಸಿಗುವ ಉಕ್ರೇನ್‌ನಂತಹ ದೇಶಗಳಿಗೆ ವಲಸೆ ಹೋಗುತ್ತಾರೆ. ಹೀಗಾಗಿ ಭಾರತದ ಹೆಚ್ಚಿನ ವೈದ್ಯಕೀಯ ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ನೆಲೆಸಿದ್ದಾರೆ. ಭಾರತದಲ್ಲಿ ಸರ್ಕಾರ ಉನ್ನತ ಮತ್ತು ವೃತ್ತಿಪರ ಶಿಕ್ಷಣವು ಕೈಗೆಟುಕುವ ವೆಚ್ಚದಲ್ಲಿ ಸಿಗುವಂತಾಗಬೇಕು. ಇಲ್ಲಿನ ಯುವಜನರಿಗೆ ಇಲ್ಲೇ ಉತ್ತಮ ಶಿಕ್ಷಣ ಮತ್ತು ಉದ್ಯೋಗ ದೊರೆಯುವಂತೆ ಯೋಜನೆಗಳನ್ನು ರೂಪಿಸಬೇಕು” ಎಂದು ಸರೋವರ್ ಒತ್ತಾಯಿಸಿದ್ದಾರೆ.


ಇದನ್ನೂ ಓದಿರಿ: ವೈದ್ಯಕೀಯ ‘ಭಾರ‘ತ: ಉಕ್ರೇನ್‌ನಲ್ಲಿ ಸಿಲುಕಿದ ಇಂಡಿಯಾ ವಿದ್ಯಾರ್ಥಿಗಳ ನೋವಿನ ಮೂಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ರಷ್ಯಾದ ದಾಳಿ ಭೀತಿ ಇರುವುದರಿಂದ ಉಕ್ರೇನಿನಿಂದ ಭಾರತೀಯರು ತಾತ್ಕಾಲಿಕವಾಗಿ ತೊರೆಯಬೇಕೆಂದು ಭಾರತೀಯ ರಾಯಭಾರಿ ಕಛೇರಿ ಫೆಬ್ರವರಿ 14,2022ರಂದು ಸೂಚನೆ ಹೊರಡಿಸಿದೆ. ಯುದ್ಧವೆಂದ ಮೇಲೆ ಅಲ್ಲಿನ ಉನ್ನತ ರಾಜಕಾರಣಿಗಳೇ ಪ್ರಾಣಾಪಾಯದಿಂದಿರುವಾಗ,ಸೂಚನೆ ನಿರ್ಲಕ್ಷಿಸಿ ಈಗ ನಮ್ಮ ಉನ್ನತ ರಾಜಕಾರಣಿಗಳನ್ನು ಪ್ರಾಣಾಪಾಯಕ್ಕೊಡ್ಡುತ್ತಿದ್ದಾರೆ.ಹೊರದೇಶ, ಯುದ್ಧಗಳನ್ನು ನಿರ್ಲಕ್ಷಿಸಿ ನಷ್ಟವಾದರೆ ನಿರ್ಲಕ್ಷಿಸಿದವರೇ ಹೊಣೆಗಾರರು.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...