Homeಮುಖಪುಟಊಟ, ನಿದ್ರೆ ಇಲ್ಲ, ದೇಶಕ್ಕೆ ಮರಳುವ ಭರವಸೆಯೂ ಇಲ್ಲ: ಕಂಗಾಲಾದ ಭಾರತೀಯರು

ಊಟ, ನಿದ್ರೆ ಇಲ್ಲ, ದೇಶಕ್ಕೆ ಮರಳುವ ಭರವಸೆಯೂ ಇಲ್ಲ: ಕಂಗಾಲಾದ ಭಾರತೀಯರು

‘ಅಮೆರಿಕ, ಇಂಗ್ಲೆಂಡ್ ಸೇರಿದಂತೆ ವಿವಿಧ ರಾಷ್ಟ್ರಗಳು ತಮ್ಮ ದೇಶದ ಪ್ರಜೆಗಳನ್ನು ಉಕ್ರೇನ್‌ನಿಂದ ವಾಪಸ್ ಕರೆಸಿಕೊಳ್ಳುವಾಗ ಹೊತ್ತಿನಲ್ಲಿ ಭಾರತದ ಪ್ರಧಾನಿ ಮತ್ತು ಸಚಿವರು ಚುನಾವಣೆಯಲ್ಲಿ ಬ್ಯುಸಿಯಾಗಿದ್ದರು’ ಎಂಬ ಆರೋಪಗಳು ಬಂದಿವೆ.

- Advertisement -
- Advertisement -

ಉಕ್ರೇನ್ ಮೇಲೆ ರಷ್ಯಾ ಯುದ್ದ ಘೋಷಿಸಿ ಐದು ದಿನಗಳು ಕಳೆದಿವೆ. ರಷ್ಯಾ ಸೇನೆ ಉಕ್ರೇನ್‌ನ ವಿವಿಧ ಭಾಗಗಳ ಮೇಲೆ ದಾಳಿ ನಡೆಸುತ್ತಿದೆ. ಇದುವರೆಗೂ ನೂರಾರು ಜನರು ಸಾವನ್ನಪ್ಪಿದ್ದಾರೆ. ಪರಿಸ್ಥಿತಿ ಗಂಭೀರವಾಗಿದೆ.

ರಷ್ಯಾ ಮತ್ತು ಉಕ್ರೇನ್ ನಡುವಿನ ಬಿಕ್ಕಟ್ಟು ಉದ್ವಿಘ್ನಗೊಳ್ಳುತ್ತಿರುವುದನ್ನು ಗಮನಿಸಿದ ವಿವಿಧ ದೇಶಗಳು ತಮ್ಮ ಜನರನ್ನು ದೇಶಕ್ಕೆ ವಾಪಸ್ ಕರೆಸಿಕೊಂಡಿದ್ದವು. ಆದರೆ ಐದು ರಾಜ್ಯಗಳ ಚುನಾವಣಾ ಕಣದಲ್ಲಿದ್ದ ಭಾರತವು ಉಕ್ರೇನ್‌ನಿಂದ ಜನರನ್ನು ತುರ್ತಾಗಿ ಕಳೆಸಿಕೊಳ್ಳುವ ಕೆಲಸಕ್ಕೆ ಮುಂದಾಗಲಿಲ್ಲ. ಹೀಗಾಗಿ, ಭಾರತದ ವಿದ್ಯಾರ್ಥಿಗಳು ಸೇರಿದಂತೆ ಹಲವಾರು ಪ್ರಜೆಗಳು ಉಕ್ರೇನ್‌ನಲ್ಲಿ ಸಿಲುಕಿಕೊಂಡು ಭಾರತಕ್ಕೆ ಮರಳಿ ಬರುವ ಭರವಸೆಯನ್ನೇ ಕಳೆದುಕೊಂಡಿದ್ದಾರೆ.

ರಷ್ಯಾದಿಂದ ದಾಳಿಗೀಡಾಗಿರುವ ಉಕ್ರೇನ್‌ನ ಪ್ರಮುಖ ಭಾಗವಾದ ಖಾರ್ಕಿವ್‌ನಲ್ಲಿ ಸುಮಾರು 18 ಭಾರತೀಯ ವಿದ್ಯಾರ್ಥಿಗಳು ಸಿಲುಕಿದ್ದಾರೆ. ಅವರೆಲ್ಲರೂ, ಖಾರ್ಕಿವ್‌ನ ಕರಾಜಿನ್ ನ್ಯಾಷನಲ್ ಯೂನಿವರ್ಸಿಟಿಯಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದಾರೆ. ಅವರೆಲ್ಲರೂ ಉಕ್ರೇನ್‌ನಲ್ಲಿ ಯುದ್ಧ ಪ್ರಾರಂಭವಾದಾಗಿನಿಂದ ನಾಲ್ಕು ರಾತ್ರಿಗಳಿಂದ ಮೆಟ್ರೋ ನಿಲ್ದಾಣದಲ್ಲಿದ್ದಾರೆ.

“ಉಭಯ ರಾಷ್ಟ್ರಗಳ ನಡುವೆ ಘರ್ಷಣೆ ಆರಂಭವಾದಾಗ ನಾವು ಮೆಟ್ರೋ ನಿಲ್ದಾಣಕ್ಕೆ ಬಂದೆವು. ನಾವು ತಂದಿದ್ದ ತಿನಿಸುಗಳೆಲ್ಲ ಖಾಲಿಯಾಗಿವೆ. ಆದರೆ ಈಗ ನಮಗೆ ಆಹಾರವಿಲ್ಲ. ನಾನು ಭಾನುವಾರ ಬೆಳಿಗ್ಗೆ ಸ್ವಲ್ಪ ಬ್ರೆಡ್ ತಿಂದೆ. ಅದು ಮುಗಿದ ನಂತರ, ನಮಗೆ ಆಹಾರ ದೊರೆತಿಲ್ಲ. ನಾಲ್ಕು ದಿನಗಳಿಂದ ಸರಿಯಾದ ನಿದ್ರೆಯೂ ಇಲ್ಲ” ಎಂದು ಕೇರಳ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಎಲಿಜಬೆತ್ ದೇವಾಸಿಯಾ ಹೇಳಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಪ್ಯಾಲೆಸ್ತೀನ್‌‌ನ ದಿಟ್ಟ ಬಾಲಕಿಯನ್ನು ಉಕ್ರೇನ್‌‌‌ನವರು ಎಂದು ವರದಿ ಮಾಡಿದ ಪಬ್ಲಿಕ್ ಟಿವಿ ಮತ್ತು ಸುವರ್ಣ ಟಿವಿ!

ಸುಮಾರು 500 ಮಂದಿ ಆಶ್ರಯ ಪಡೆದಿರುವ ಮೆಟ್ರೊ ನಿಲ್ದಾಣಕ್ಕೆ ಭಾನುವಾರದಿಂದ ನೀರು ಪೂರೈಕೆ ಆರಂಭಿಸಲಾಗಿದೆ. ಸುತ್ತಲಿನ ಜನರು ಸ್ವಲ್ಪ ಆಹಾರದ ವ್ಯವಸ್ಥೆ ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಇಲ್ಲಿ ನಡೆಯುತ್ತಿರುವ ಘರ್ಷಣೆಯಿಂದ ಅದೂ ಸಾಧ್ಯವಾಗದೇ ಇರಬಹುದು ಎಂದು ಎಲಿಜಬೆತ್ ತಿಳಿಸಿದ್ದಾರೆ.

ಭಾರತೀಯ ರಾಯಭಾರ ಕಚೇರಿಯು ರೈಲುಗಳ ಮೂಲಕ ದೇಶದ ಪಶ್ಚಿಮ ಭಾಗದಲ್ಲಿರುವ ನಗರಗಳಿಗೆ ಸ್ಥಳಾಂತರಗೊಳ್ಳಲು ನಮಗೆ ಹೇಳುತ್ತಿದೆ. ಆದರೆ, ಇಲ್ಲಿ ನಡೆಯುತ್ತಿರುವ ಭಾರೀ ಶೆಲ್‌ಗಳ ದಾಳಿಯಿಂದಾಗಿ ನಮಗೂ, ನಮ್ಮ ಸ್ನೇಹಿತರಿಗೆ ಮೆಟ್ರೋ ನಿಲ್ದಾಣದಿಂದ ಹೊರಬರಲು ಸಾಧ್ಯವಾಗುತ್ತಿಲ್ಲ ಎಂದು ಎಲಿಜಬೆತ್ ತಿಳಿಸಿದ್ದಾರೆ.

ಖಾರ್ಕಿವ್ ನ್ಯಾಷನಲ್ ಮೆಡಿಕಲ್ ಯೂನಿವರ್ಸಿಟಿಯಲ್ಲಿ ವಿದ್ಯಾಭ್ಯಾಸ ಪಡೆಯುತ್ತಿರುವ ಹರಿಯಾಣದ ಮೂಲದ ವೈದ್ಯಕೀಯ ವಿದ್ಯಾರ್ಥಿ ಅನುರಾಗ್ ಪೂನಿಯಾ ಅವರು ಭಾರತಕ್ಕೆ ವಿಮಾನ ಹತ್ತಲು ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದರು. ಆ ವೇಳೆ, ಉಕ್ರೇನ್ ವಿಮಾನ ನಿಲ್ದಾಣಗಳನ್ನು ಮುಚ್ಚಿದ್ದರಿಂದಾಗಿ ಅವರು ರಾಜಧಾನಿ ಕೈವ್‌ನಲ್ಲಿ ಸಿಕ್ಕಿಕೊಂಡಿದ್ದಾರೆ. ಆಗಿನಿಂದಲೂ ಭಾರತೀಯ ರಾಯಭಾರಿ ಕಚೇರಿಯಿಂದ ಕೇವಲ 20 ಮೀಟರ್ ದೂರದಲ್ಲಿರುವ ಶಾಲೆಯಲ್ಲಿ ಉಳಿದಿದ್ದಾರೆ. ಆದರೂ, ಭಾರತೀಯ ರಾಯಭಾರ ಕಚೇರಿಯು ಅನುರಾಗ್ ಅವರಿಗೆ ಅಥವಾ ಶಾಲೆಯಲ್ಲಿ ವಾಸಿಸುತ್ತಿರುವ ಉಳಿದ 450 ಜನರಿಗೆ ಸಹಾಯ ಮಾಡಲು ಸಾಧ್ಯವಾಗಿಲ್ಲ ಎಂದು ಅನುರಾಗ್ ವಿವರಿಸಿದ್ದಾರೆ.

ರೈಲುಗಳು ಮಾತ್ರ ಸಾರ್ವಜನಿಕ ಸಾರಿಗೆಯಾಗಿ ಕಾರ್ಯನಿರ್ವಹಿಸುತ್ತಿವೆ. ಉಕ್ರೇನ್ ವಿವಿಧ ಭಾಗದ ಜನರನ್ನು ಪಶ್ಚಿಮ ಗಡಿ ಪಟ್ಟಣಗಳಾದ ಇವಾನೊ ಮತ್ತು ಚೆರ್ನಿವಿಟ್ಸಿಗೆ ರೈಲುಗಳ ಮೂಲಕ ಸ್ಥಳಾಂತರಿಸಲಾಗುತ್ತಿದೆ. ಅದಕ್ಕಾಗಿ, ವಿದ್ಯಾರ್ಥಿಗಳಿಗೆ ಆಸನಗಳನ್ನು ಕಾಯ್ದಿರಿಸಗುತ್ತಿದೆ ಎಂದು ತಿಳಿದಾಗ ಸಂತೋಷವಾಯಿತು. ನಮ್ಮೊಂದಿಗಿದ್ದ “250ಕ್ಕೂ ಹೆಚ್ಚು ಜನರು ರೈಲು ನಿಲ್ದಾಣವನ್ನು ತಲುಪಿದರು. ಆದರೆ ಅಲ್ಲಿ ರಾಯಭಾರಿ ಅಧಿಕಾರಿಗಳು ಇರಲಿಲ್ಲ. ಸ್ಥಳೀಯರು ಬಂದೂಕುಗಳನ್ನು ಹಿಡಿದುಕೊಂಡು ನಮ್ಮನ್ನು ರೈಲು ಹತ್ತಲು ಬಿಡಲಿಲ್ಲ” ಎಂದು ಅನುರಾಗ್ ವಿವರಿಸಿದ್ದಾರೆ.

ರೈಲು ನಿಲ್ದಾಣದಿಂದ ನಾವು ಮತ್ತೆ ಶಾಲೆಗೆ ಮರಳಿದಾಗ ಕೇವಲ 180 ಜನರು ಉಳಿದಿದ್ದರು. ಇತರರು ಎಲ್ಲಿಗೆ ಹೋದರು ಎಂಬುದು ನಮಗೆ ತಿಳಿದಿಲ್ಲ. ನಾವು ಅವರನ್ನು ಸಂಪರ್ಕಿಸಲು ಸಾಧ್ಯವಿಲ್ಲ ಎಂದು ಅನುರಾಗ್ ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಲಂಗರ್‌‌ನ ಈ ಚಿತ್ರ ಯುದ್ದ ಪೀಡಿತ ಉಕ್ರೇನ್‌ ದೇಶದ್ದಲ್ಲ

“ಇಲ್ಲಿ ಯಾವುದೇ ಕಾನೂನು ಇಲ್ಲ ಮತ್ತು ಸರ್ಕಾರವು ಸ್ಥಳೀಯರನ್ನು ಶಸ್ತ್ರಸಜ್ಜಿತಗೊಳಿಸಿದೆ. ಬಂದೂಕು ಹಿಡಿದ ನಾಲ್ಕು ಜನರು ಬಾಗಿಲು ಮುರಿದು ನಮ್ಮ ಹಾಸ್ಟೆಲ್‌ನ ನೆಲಮಾಳಿಗೆಯಲ್ಲಿರುವ ಜಿಮ್‌ಗೆ ನುಗ್ಗಿದರು. ನಮ್ಮಲ್ಲಿ ತುಂಬಾ ಜನ ಇದ್ದುದನ್ನು ನೋಡಿ ಹೊರಟುಹೋದರು. ಈಗ, ನಾವು ಪೀಠೋಪಕರಣಗಳು ಮತ್ತು ಮರದ ಕೊಂಬೆಗಳಿಂದ ದ್ವಾರವನ್ನು ಭದ್ರಪಡಿಸಿದ್ದೇವೆ. ಮೂರು ದಿನಗಳಿಂದ ನಿದ್ದೆ ಮಾಡಿಲ್ಲ. ಭಾರತಕ್ಕೆ ಮರಳುತ್ತೇವೆ ಎಂಬ ಭರವಸೆಯೂ ನಮಗೆ ಇಲ್ಲ” ಎಂದು ಕೀವ್‌ನ ವೈದ್ಯಕೀಯ ಕಾಲೇಜಿನ ಹಾಸ್ಟಲ್‌ನಲ್ಲಿರುವ ಉತ್ತರ ಪ್ರದೇಶ ಮೂಲದ ವಿದ್ಯಾರ್ಥಿ ಅಧಿವೇಶ್ ಧಾಮಾ ಹೇಳಿದ್ದಾರೆ.

ಚುನಾವಣೆಯಲ್ಲಿ ಮುಳುಗಿದ್ದ ಕೇಂದ್ರ ಸರ್ಕಾರ: ಸರೋವರ್‌‌

“ಕಳೆದ ಒಂದು ತಿಂಗಳಿನಿಂದ ಉಕ್ರೇನ್ ಮತ್ತು ರಷ್ಯಾ ನಡುವಿನ ಸಂಘರ್ಷವು ಚರ್ಚೆಯಲ್ಲಿತ್ತು. ಯುದ್ದ ಆರಂಭವಾಗುವ ಅತಂಕವೂ ವ್ಯಕ್ತವಾಗುತ್ತಿತ್ತು. ಹೀಗಾಗಿ, ಅಮೆರಿಕ, ಇಂಗ್ಲೆಂಡ್ ಸೇರಿದಂತೆ ವಿವಿಧ ರಾಷ್ಟ್ರಗಳು ತಮ್ಮ ದೇಶದ ಪ್ರಜೆಗಳನ್ನು ಉಕ್ರೇನ್‌ನಿಂದ ವಾಪಸ್ ಕರೆಸಿಕೊಂಡಿವೆ. ಆದರೆ, ಭಾರತದಲ್ಲಿ ಪ್ರಧಾನಿ ಮೋದಿ ಸೇರಿದಂತೆ ಕೇಂದ್ರ ಸಚಿವರು ಐದು ರಾಜ್ಯಗಳ ಚುನಾವಣೆಯ ಪ್ರಚಾರದಲ್ಲಿ ಮುಳುಗಿದ್ದರು. ಅವರು ಉಕ್ರೇನ್ ಬಿಕ್ಕಟ್ಟಿನ ಬಗ್ಗೆಯಾಗಲೀ, ಅಲ್ಲಿರುವ ಭಾರತೀಯ ಪರಿಸ್ಥಿತಿ- ರಕ್ಷಣೆ ಬಗೆಗಾಗಲೀ ಯೋಚಿಸಲಿಲ್ಲ. ಹೀಗಾಗಿ, ಭಾರತೀಯರು ಉಕ್ರೇನ್‌ನಲ್ಲಿ ಬದುಕಿಗಾಗಿ ಹೋರಾಡುವ ಸ್ಥಿತಿಯಲ್ಲಿದ್ದಾರೆ” ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂಚಾಲಕ ಸರೋವರ್ ಬೆಂಕಿಕೆರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಭಾರತದಲ್ಲಿ ಶಿಕ್ಷಣವು ದುಬಾರಿಯಾಗಿದೆ ಮತ್ತು ಮಾರಾಟಕ್ಕಿದೆ. ಉಳ್ಳವರು ಮಾತ್ರ ದೇಶದಲ್ಲಿ ಉತ್ತಮ ಶಿಕ್ಷಣವನ್ನು ಪಡೆಯುತ್ತಿದ್ದು, ಇಲ್ಲದವರು ಶಿಕ್ಷಣದಿಂದ ವಂಚಿತರಾಗುತ್ತಾರೆ ಅಥವಾ ತಿಳಿವಳಿಕೆ ಇರುವವರು ಕಡಿಮೆ ಖರ್ಚಿನಲ್ಲಿ ಶಿಕ್ಷಣ ಸಿಗುವ ಉಕ್ರೇನ್‌ನಂತಹ ದೇಶಗಳಿಗೆ ವಲಸೆ ಹೋಗುತ್ತಾರೆ. ಹೀಗಾಗಿ ಭಾರತದ ಹೆಚ್ಚಿನ ವೈದ್ಯಕೀಯ ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ನೆಲೆಸಿದ್ದಾರೆ. ಭಾರತದಲ್ಲಿ ಸರ್ಕಾರ ಉನ್ನತ ಮತ್ತು ವೃತ್ತಿಪರ ಶಿಕ್ಷಣವು ಕೈಗೆಟುಕುವ ವೆಚ್ಚದಲ್ಲಿ ಸಿಗುವಂತಾಗಬೇಕು. ಇಲ್ಲಿನ ಯುವಜನರಿಗೆ ಇಲ್ಲೇ ಉತ್ತಮ ಶಿಕ್ಷಣ ಮತ್ತು ಉದ್ಯೋಗ ದೊರೆಯುವಂತೆ ಯೋಜನೆಗಳನ್ನು ರೂಪಿಸಬೇಕು” ಎಂದು ಸರೋವರ್ ಒತ್ತಾಯಿಸಿದ್ದಾರೆ.


ಇದನ್ನೂ ಓದಿರಿ: ವೈದ್ಯಕೀಯ ‘ಭಾರ‘ತ: ಉಕ್ರೇನ್‌ನಲ್ಲಿ ಸಿಲುಕಿದ ಇಂಡಿಯಾ ವಿದ್ಯಾರ್ಥಿಗಳ ನೋವಿನ ಮೂಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ರಷ್ಯಾದ ದಾಳಿ ಭೀತಿ ಇರುವುದರಿಂದ ಉಕ್ರೇನಿನಿಂದ ಭಾರತೀಯರು ತಾತ್ಕಾಲಿಕವಾಗಿ ತೊರೆಯಬೇಕೆಂದು ಭಾರತೀಯ ರಾಯಭಾರಿ ಕಛೇರಿ ಫೆಬ್ರವರಿ 14,2022ರಂದು ಸೂಚನೆ ಹೊರಡಿಸಿದೆ. ಯುದ್ಧವೆಂದ ಮೇಲೆ ಅಲ್ಲಿನ ಉನ್ನತ ರಾಜಕಾರಣಿಗಳೇ ಪ್ರಾಣಾಪಾಯದಿಂದಿರುವಾಗ,ಸೂಚನೆ ನಿರ್ಲಕ್ಷಿಸಿ ಈಗ ನಮ್ಮ ಉನ್ನತ ರಾಜಕಾರಣಿಗಳನ್ನು ಪ್ರಾಣಾಪಾಯಕ್ಕೊಡ್ಡುತ್ತಿದ್ದಾರೆ.ಹೊರದೇಶ, ಯುದ್ಧಗಳನ್ನು ನಿರ್ಲಕ್ಷಿಸಿ ನಷ್ಟವಾದರೆ ನಿರ್ಲಕ್ಷಿಸಿದವರೇ ಹೊಣೆಗಾರರು.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...