Homeಮುಖಪುಟಊಟ, ನಿದ್ರೆ ಇಲ್ಲ, ದೇಶಕ್ಕೆ ಮರಳುವ ಭರವಸೆಯೂ ಇಲ್ಲ: ಕಂಗಾಲಾದ ಭಾರತೀಯರು

ಊಟ, ನಿದ್ರೆ ಇಲ್ಲ, ದೇಶಕ್ಕೆ ಮರಳುವ ಭರವಸೆಯೂ ಇಲ್ಲ: ಕಂಗಾಲಾದ ಭಾರತೀಯರು

‘ಅಮೆರಿಕ, ಇಂಗ್ಲೆಂಡ್ ಸೇರಿದಂತೆ ವಿವಿಧ ರಾಷ್ಟ್ರಗಳು ತಮ್ಮ ದೇಶದ ಪ್ರಜೆಗಳನ್ನು ಉಕ್ರೇನ್‌ನಿಂದ ವಾಪಸ್ ಕರೆಸಿಕೊಳ್ಳುವಾಗ ಹೊತ್ತಿನಲ್ಲಿ ಭಾರತದ ಪ್ರಧಾನಿ ಮತ್ತು ಸಚಿವರು ಚುನಾವಣೆಯಲ್ಲಿ ಬ್ಯುಸಿಯಾಗಿದ್ದರು’ ಎಂಬ ಆರೋಪಗಳು ಬಂದಿವೆ.

- Advertisement -
- Advertisement -

ಉಕ್ರೇನ್ ಮೇಲೆ ರಷ್ಯಾ ಯುದ್ದ ಘೋಷಿಸಿ ಐದು ದಿನಗಳು ಕಳೆದಿವೆ. ರಷ್ಯಾ ಸೇನೆ ಉಕ್ರೇನ್‌ನ ವಿವಿಧ ಭಾಗಗಳ ಮೇಲೆ ದಾಳಿ ನಡೆಸುತ್ತಿದೆ. ಇದುವರೆಗೂ ನೂರಾರು ಜನರು ಸಾವನ್ನಪ್ಪಿದ್ದಾರೆ. ಪರಿಸ್ಥಿತಿ ಗಂಭೀರವಾಗಿದೆ.

ರಷ್ಯಾ ಮತ್ತು ಉಕ್ರೇನ್ ನಡುವಿನ ಬಿಕ್ಕಟ್ಟು ಉದ್ವಿಘ್ನಗೊಳ್ಳುತ್ತಿರುವುದನ್ನು ಗಮನಿಸಿದ ವಿವಿಧ ದೇಶಗಳು ತಮ್ಮ ಜನರನ್ನು ದೇಶಕ್ಕೆ ವಾಪಸ್ ಕರೆಸಿಕೊಂಡಿದ್ದವು. ಆದರೆ ಐದು ರಾಜ್ಯಗಳ ಚುನಾವಣಾ ಕಣದಲ್ಲಿದ್ದ ಭಾರತವು ಉಕ್ರೇನ್‌ನಿಂದ ಜನರನ್ನು ತುರ್ತಾಗಿ ಕಳೆಸಿಕೊಳ್ಳುವ ಕೆಲಸಕ್ಕೆ ಮುಂದಾಗಲಿಲ್ಲ. ಹೀಗಾಗಿ, ಭಾರತದ ವಿದ್ಯಾರ್ಥಿಗಳು ಸೇರಿದಂತೆ ಹಲವಾರು ಪ್ರಜೆಗಳು ಉಕ್ರೇನ್‌ನಲ್ಲಿ ಸಿಲುಕಿಕೊಂಡು ಭಾರತಕ್ಕೆ ಮರಳಿ ಬರುವ ಭರವಸೆಯನ್ನೇ ಕಳೆದುಕೊಂಡಿದ್ದಾರೆ.

ರಷ್ಯಾದಿಂದ ದಾಳಿಗೀಡಾಗಿರುವ ಉಕ್ರೇನ್‌ನ ಪ್ರಮುಖ ಭಾಗವಾದ ಖಾರ್ಕಿವ್‌ನಲ್ಲಿ ಸುಮಾರು 18 ಭಾರತೀಯ ವಿದ್ಯಾರ್ಥಿಗಳು ಸಿಲುಕಿದ್ದಾರೆ. ಅವರೆಲ್ಲರೂ, ಖಾರ್ಕಿವ್‌ನ ಕರಾಜಿನ್ ನ್ಯಾಷನಲ್ ಯೂನಿವರ್ಸಿಟಿಯಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದಾರೆ. ಅವರೆಲ್ಲರೂ ಉಕ್ರೇನ್‌ನಲ್ಲಿ ಯುದ್ಧ ಪ್ರಾರಂಭವಾದಾಗಿನಿಂದ ನಾಲ್ಕು ರಾತ್ರಿಗಳಿಂದ ಮೆಟ್ರೋ ನಿಲ್ದಾಣದಲ್ಲಿದ್ದಾರೆ.

“ಉಭಯ ರಾಷ್ಟ್ರಗಳ ನಡುವೆ ಘರ್ಷಣೆ ಆರಂಭವಾದಾಗ ನಾವು ಮೆಟ್ರೋ ನಿಲ್ದಾಣಕ್ಕೆ ಬಂದೆವು. ನಾವು ತಂದಿದ್ದ ತಿನಿಸುಗಳೆಲ್ಲ ಖಾಲಿಯಾಗಿವೆ. ಆದರೆ ಈಗ ನಮಗೆ ಆಹಾರವಿಲ್ಲ. ನಾನು ಭಾನುವಾರ ಬೆಳಿಗ್ಗೆ ಸ್ವಲ್ಪ ಬ್ರೆಡ್ ತಿಂದೆ. ಅದು ಮುಗಿದ ನಂತರ, ನಮಗೆ ಆಹಾರ ದೊರೆತಿಲ್ಲ. ನಾಲ್ಕು ದಿನಗಳಿಂದ ಸರಿಯಾದ ನಿದ್ರೆಯೂ ಇಲ್ಲ” ಎಂದು ಕೇರಳ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಎಲಿಜಬೆತ್ ದೇವಾಸಿಯಾ ಹೇಳಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಪ್ಯಾಲೆಸ್ತೀನ್‌‌ನ ದಿಟ್ಟ ಬಾಲಕಿಯನ್ನು ಉಕ್ರೇನ್‌‌‌ನವರು ಎಂದು ವರದಿ ಮಾಡಿದ ಪಬ್ಲಿಕ್ ಟಿವಿ ಮತ್ತು ಸುವರ್ಣ ಟಿವಿ!

ಸುಮಾರು 500 ಮಂದಿ ಆಶ್ರಯ ಪಡೆದಿರುವ ಮೆಟ್ರೊ ನಿಲ್ದಾಣಕ್ಕೆ ಭಾನುವಾರದಿಂದ ನೀರು ಪೂರೈಕೆ ಆರಂಭಿಸಲಾಗಿದೆ. ಸುತ್ತಲಿನ ಜನರು ಸ್ವಲ್ಪ ಆಹಾರದ ವ್ಯವಸ್ಥೆ ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಇಲ್ಲಿ ನಡೆಯುತ್ತಿರುವ ಘರ್ಷಣೆಯಿಂದ ಅದೂ ಸಾಧ್ಯವಾಗದೇ ಇರಬಹುದು ಎಂದು ಎಲಿಜಬೆತ್ ತಿಳಿಸಿದ್ದಾರೆ.

ಭಾರತೀಯ ರಾಯಭಾರ ಕಚೇರಿಯು ರೈಲುಗಳ ಮೂಲಕ ದೇಶದ ಪಶ್ಚಿಮ ಭಾಗದಲ್ಲಿರುವ ನಗರಗಳಿಗೆ ಸ್ಥಳಾಂತರಗೊಳ್ಳಲು ನಮಗೆ ಹೇಳುತ್ತಿದೆ. ಆದರೆ, ಇಲ್ಲಿ ನಡೆಯುತ್ತಿರುವ ಭಾರೀ ಶೆಲ್‌ಗಳ ದಾಳಿಯಿಂದಾಗಿ ನಮಗೂ, ನಮ್ಮ ಸ್ನೇಹಿತರಿಗೆ ಮೆಟ್ರೋ ನಿಲ್ದಾಣದಿಂದ ಹೊರಬರಲು ಸಾಧ್ಯವಾಗುತ್ತಿಲ್ಲ ಎಂದು ಎಲಿಜಬೆತ್ ತಿಳಿಸಿದ್ದಾರೆ.

ಖಾರ್ಕಿವ್ ನ್ಯಾಷನಲ್ ಮೆಡಿಕಲ್ ಯೂನಿವರ್ಸಿಟಿಯಲ್ಲಿ ವಿದ್ಯಾಭ್ಯಾಸ ಪಡೆಯುತ್ತಿರುವ ಹರಿಯಾಣದ ಮೂಲದ ವೈದ್ಯಕೀಯ ವಿದ್ಯಾರ್ಥಿ ಅನುರಾಗ್ ಪೂನಿಯಾ ಅವರು ಭಾರತಕ್ಕೆ ವಿಮಾನ ಹತ್ತಲು ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದರು. ಆ ವೇಳೆ, ಉಕ್ರೇನ್ ವಿಮಾನ ನಿಲ್ದಾಣಗಳನ್ನು ಮುಚ್ಚಿದ್ದರಿಂದಾಗಿ ಅವರು ರಾಜಧಾನಿ ಕೈವ್‌ನಲ್ಲಿ ಸಿಕ್ಕಿಕೊಂಡಿದ್ದಾರೆ. ಆಗಿನಿಂದಲೂ ಭಾರತೀಯ ರಾಯಭಾರಿ ಕಚೇರಿಯಿಂದ ಕೇವಲ 20 ಮೀಟರ್ ದೂರದಲ್ಲಿರುವ ಶಾಲೆಯಲ್ಲಿ ಉಳಿದಿದ್ದಾರೆ. ಆದರೂ, ಭಾರತೀಯ ರಾಯಭಾರ ಕಚೇರಿಯು ಅನುರಾಗ್ ಅವರಿಗೆ ಅಥವಾ ಶಾಲೆಯಲ್ಲಿ ವಾಸಿಸುತ್ತಿರುವ ಉಳಿದ 450 ಜನರಿಗೆ ಸಹಾಯ ಮಾಡಲು ಸಾಧ್ಯವಾಗಿಲ್ಲ ಎಂದು ಅನುರಾಗ್ ವಿವರಿಸಿದ್ದಾರೆ.

ರೈಲುಗಳು ಮಾತ್ರ ಸಾರ್ವಜನಿಕ ಸಾರಿಗೆಯಾಗಿ ಕಾರ್ಯನಿರ್ವಹಿಸುತ್ತಿವೆ. ಉಕ್ರೇನ್ ವಿವಿಧ ಭಾಗದ ಜನರನ್ನು ಪಶ್ಚಿಮ ಗಡಿ ಪಟ್ಟಣಗಳಾದ ಇವಾನೊ ಮತ್ತು ಚೆರ್ನಿವಿಟ್ಸಿಗೆ ರೈಲುಗಳ ಮೂಲಕ ಸ್ಥಳಾಂತರಿಸಲಾಗುತ್ತಿದೆ. ಅದಕ್ಕಾಗಿ, ವಿದ್ಯಾರ್ಥಿಗಳಿಗೆ ಆಸನಗಳನ್ನು ಕಾಯ್ದಿರಿಸಗುತ್ತಿದೆ ಎಂದು ತಿಳಿದಾಗ ಸಂತೋಷವಾಯಿತು. ನಮ್ಮೊಂದಿಗಿದ್ದ “250ಕ್ಕೂ ಹೆಚ್ಚು ಜನರು ರೈಲು ನಿಲ್ದಾಣವನ್ನು ತಲುಪಿದರು. ಆದರೆ ಅಲ್ಲಿ ರಾಯಭಾರಿ ಅಧಿಕಾರಿಗಳು ಇರಲಿಲ್ಲ. ಸ್ಥಳೀಯರು ಬಂದೂಕುಗಳನ್ನು ಹಿಡಿದುಕೊಂಡು ನಮ್ಮನ್ನು ರೈಲು ಹತ್ತಲು ಬಿಡಲಿಲ್ಲ” ಎಂದು ಅನುರಾಗ್ ವಿವರಿಸಿದ್ದಾರೆ.

ರೈಲು ನಿಲ್ದಾಣದಿಂದ ನಾವು ಮತ್ತೆ ಶಾಲೆಗೆ ಮರಳಿದಾಗ ಕೇವಲ 180 ಜನರು ಉಳಿದಿದ್ದರು. ಇತರರು ಎಲ್ಲಿಗೆ ಹೋದರು ಎಂಬುದು ನಮಗೆ ತಿಳಿದಿಲ್ಲ. ನಾವು ಅವರನ್ನು ಸಂಪರ್ಕಿಸಲು ಸಾಧ್ಯವಿಲ್ಲ ಎಂದು ಅನುರಾಗ್ ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಲಂಗರ್‌‌ನ ಈ ಚಿತ್ರ ಯುದ್ದ ಪೀಡಿತ ಉಕ್ರೇನ್‌ ದೇಶದ್ದಲ್ಲ

“ಇಲ್ಲಿ ಯಾವುದೇ ಕಾನೂನು ಇಲ್ಲ ಮತ್ತು ಸರ್ಕಾರವು ಸ್ಥಳೀಯರನ್ನು ಶಸ್ತ್ರಸಜ್ಜಿತಗೊಳಿಸಿದೆ. ಬಂದೂಕು ಹಿಡಿದ ನಾಲ್ಕು ಜನರು ಬಾಗಿಲು ಮುರಿದು ನಮ್ಮ ಹಾಸ್ಟೆಲ್‌ನ ನೆಲಮಾಳಿಗೆಯಲ್ಲಿರುವ ಜಿಮ್‌ಗೆ ನುಗ್ಗಿದರು. ನಮ್ಮಲ್ಲಿ ತುಂಬಾ ಜನ ಇದ್ದುದನ್ನು ನೋಡಿ ಹೊರಟುಹೋದರು. ಈಗ, ನಾವು ಪೀಠೋಪಕರಣಗಳು ಮತ್ತು ಮರದ ಕೊಂಬೆಗಳಿಂದ ದ್ವಾರವನ್ನು ಭದ್ರಪಡಿಸಿದ್ದೇವೆ. ಮೂರು ದಿನಗಳಿಂದ ನಿದ್ದೆ ಮಾಡಿಲ್ಲ. ಭಾರತಕ್ಕೆ ಮರಳುತ್ತೇವೆ ಎಂಬ ಭರವಸೆಯೂ ನಮಗೆ ಇಲ್ಲ” ಎಂದು ಕೀವ್‌ನ ವೈದ್ಯಕೀಯ ಕಾಲೇಜಿನ ಹಾಸ್ಟಲ್‌ನಲ್ಲಿರುವ ಉತ್ತರ ಪ್ರದೇಶ ಮೂಲದ ವಿದ್ಯಾರ್ಥಿ ಅಧಿವೇಶ್ ಧಾಮಾ ಹೇಳಿದ್ದಾರೆ.

ಚುನಾವಣೆಯಲ್ಲಿ ಮುಳುಗಿದ್ದ ಕೇಂದ್ರ ಸರ್ಕಾರ: ಸರೋವರ್‌‌

“ಕಳೆದ ಒಂದು ತಿಂಗಳಿನಿಂದ ಉಕ್ರೇನ್ ಮತ್ತು ರಷ್ಯಾ ನಡುವಿನ ಸಂಘರ್ಷವು ಚರ್ಚೆಯಲ್ಲಿತ್ತು. ಯುದ್ದ ಆರಂಭವಾಗುವ ಅತಂಕವೂ ವ್ಯಕ್ತವಾಗುತ್ತಿತ್ತು. ಹೀಗಾಗಿ, ಅಮೆರಿಕ, ಇಂಗ್ಲೆಂಡ್ ಸೇರಿದಂತೆ ವಿವಿಧ ರಾಷ್ಟ್ರಗಳು ತಮ್ಮ ದೇಶದ ಪ್ರಜೆಗಳನ್ನು ಉಕ್ರೇನ್‌ನಿಂದ ವಾಪಸ್ ಕರೆಸಿಕೊಂಡಿವೆ. ಆದರೆ, ಭಾರತದಲ್ಲಿ ಪ್ರಧಾನಿ ಮೋದಿ ಸೇರಿದಂತೆ ಕೇಂದ್ರ ಸಚಿವರು ಐದು ರಾಜ್ಯಗಳ ಚುನಾವಣೆಯ ಪ್ರಚಾರದಲ್ಲಿ ಮುಳುಗಿದ್ದರು. ಅವರು ಉಕ್ರೇನ್ ಬಿಕ್ಕಟ್ಟಿನ ಬಗ್ಗೆಯಾಗಲೀ, ಅಲ್ಲಿರುವ ಭಾರತೀಯ ಪರಿಸ್ಥಿತಿ- ರಕ್ಷಣೆ ಬಗೆಗಾಗಲೀ ಯೋಚಿಸಲಿಲ್ಲ. ಹೀಗಾಗಿ, ಭಾರತೀಯರು ಉಕ್ರೇನ್‌ನಲ್ಲಿ ಬದುಕಿಗಾಗಿ ಹೋರಾಡುವ ಸ್ಥಿತಿಯಲ್ಲಿದ್ದಾರೆ” ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂಚಾಲಕ ಸರೋವರ್ ಬೆಂಕಿಕೆರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಭಾರತದಲ್ಲಿ ಶಿಕ್ಷಣವು ದುಬಾರಿಯಾಗಿದೆ ಮತ್ತು ಮಾರಾಟಕ್ಕಿದೆ. ಉಳ್ಳವರು ಮಾತ್ರ ದೇಶದಲ್ಲಿ ಉತ್ತಮ ಶಿಕ್ಷಣವನ್ನು ಪಡೆಯುತ್ತಿದ್ದು, ಇಲ್ಲದವರು ಶಿಕ್ಷಣದಿಂದ ವಂಚಿತರಾಗುತ್ತಾರೆ ಅಥವಾ ತಿಳಿವಳಿಕೆ ಇರುವವರು ಕಡಿಮೆ ಖರ್ಚಿನಲ್ಲಿ ಶಿಕ್ಷಣ ಸಿಗುವ ಉಕ್ರೇನ್‌ನಂತಹ ದೇಶಗಳಿಗೆ ವಲಸೆ ಹೋಗುತ್ತಾರೆ. ಹೀಗಾಗಿ ಭಾರತದ ಹೆಚ್ಚಿನ ವೈದ್ಯಕೀಯ ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ನೆಲೆಸಿದ್ದಾರೆ. ಭಾರತದಲ್ಲಿ ಸರ್ಕಾರ ಉನ್ನತ ಮತ್ತು ವೃತ್ತಿಪರ ಶಿಕ್ಷಣವು ಕೈಗೆಟುಕುವ ವೆಚ್ಚದಲ್ಲಿ ಸಿಗುವಂತಾಗಬೇಕು. ಇಲ್ಲಿನ ಯುವಜನರಿಗೆ ಇಲ್ಲೇ ಉತ್ತಮ ಶಿಕ್ಷಣ ಮತ್ತು ಉದ್ಯೋಗ ದೊರೆಯುವಂತೆ ಯೋಜನೆಗಳನ್ನು ರೂಪಿಸಬೇಕು” ಎಂದು ಸರೋವರ್ ಒತ್ತಾಯಿಸಿದ್ದಾರೆ.


ಇದನ್ನೂ ಓದಿರಿ: ವೈದ್ಯಕೀಯ ‘ಭಾರ‘ತ: ಉಕ್ರೇನ್‌ನಲ್ಲಿ ಸಿಲುಕಿದ ಇಂಡಿಯಾ ವಿದ್ಯಾರ್ಥಿಗಳ ನೋವಿನ ಮೂಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ರಷ್ಯಾದ ದಾಳಿ ಭೀತಿ ಇರುವುದರಿಂದ ಉಕ್ರೇನಿನಿಂದ ಭಾರತೀಯರು ತಾತ್ಕಾಲಿಕವಾಗಿ ತೊರೆಯಬೇಕೆಂದು ಭಾರತೀಯ ರಾಯಭಾರಿ ಕಛೇರಿ ಫೆಬ್ರವರಿ 14,2022ರಂದು ಸೂಚನೆ ಹೊರಡಿಸಿದೆ. ಯುದ್ಧವೆಂದ ಮೇಲೆ ಅಲ್ಲಿನ ಉನ್ನತ ರಾಜಕಾರಣಿಗಳೇ ಪ್ರಾಣಾಪಾಯದಿಂದಿರುವಾಗ,ಸೂಚನೆ ನಿರ್ಲಕ್ಷಿಸಿ ಈಗ ನಮ್ಮ ಉನ್ನತ ರಾಜಕಾರಣಿಗಳನ್ನು ಪ್ರಾಣಾಪಾಯಕ್ಕೊಡ್ಡುತ್ತಿದ್ದಾರೆ.ಹೊರದೇಶ, ಯುದ್ಧಗಳನ್ನು ನಿರ್ಲಕ್ಷಿಸಿ ನಷ್ಟವಾದರೆ ನಿರ್ಲಕ್ಷಿಸಿದವರೇ ಹೊಣೆಗಾರರು.

LEAVE A REPLY

Please enter your comment!
Please enter your name here

- Advertisment -

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...