Homeಕರ್ನಾಟಕಪಠ್ಯ ಪರಿಶೀಲಿಸಿದ ಸಮಿತಿಯ ಸದಸ್ಯರ್‍ಯಾರೂ ಪ್ರತಿಕ್ರಿಯೆಗೆ ಸಿದ್ಧರಿಲ್ಲ!

ಪಠ್ಯ ಪರಿಶೀಲಿಸಿದ ಸಮಿತಿಯ ಸದಸ್ಯರ್‍ಯಾರೂ ಪ್ರತಿಕ್ರಿಯೆಗೆ ಸಿದ್ಧರಿಲ್ಲ!

ಪರಿಷ್ಕರಣೆಯಲ್ಲಿ ಆಗಿರುವ ಎಲ್ಲ ತಪ್ಪುಗಳನ್ನು ನಾವು ಸರಿ ಮಾಡುತ್ತೇವೆ: ಬಿ.ಸಿ.ನಾಗೇಶ್‌

- Advertisement -
- Advertisement -

ಒಂದರಿಂದ ಹತ್ತನೇ ತರಗತಿವರೆಗಿನ ಪಠ್ಯಪುಸ್ತಕಗಳ ಪರಿಶೀಲನೆ ಮಾಡಿರುವ ಸಮಿತಿಯ ಅಧ್ಯಕ್ಷರಾದ ರೋಹಿತ್‌ ಚಕ್ರತೀರ್ಥ ಒಬ್ಬರೇ ಇಲ್ಲಿಯವರೆಗೆ ಪ್ರತಿಕ್ರಿಯೆ ನೀಡುತ್ತಾ ಬಂದಿದ್ದು, ಸಮಿತಿಯ ಸದಸ್ಯರ್‍ಯಾರೂ ವಿವಾದದ ಕುರಿತು ಮಾತನಾಡಲು ಸಿದ್ಧರಿಲ್ಲ. ಈಗ ಎದ್ದಿರುವ ಪ್ರಶ್ನೆಗಳಿಗೆ ಉತ್ತರಿಸಲು ಸದಸ್ಯರೆಲ್ಲರೂ ಹಿಂದೇಟು ಹಾಕುತ್ತಿದ್ದಾರೆ.

ಪಠ್ಯಪುಸ್ತಕಗಳ ಪರಿಶೀಲನಾ ಸಮಿತಿಯಲ್ಲಿ ರೋಹಿತ್‌ ಚಕ್ರತೀರ್ಥ ಸೇರಿದಂತೆ ಏಳು ಜನರು ಸದಸ್ಯರಿದ್ದರು. ಕುವೆಂಪು ವಿಶ್ವವಿದ್ಯಾನಿಲಯದ ಇತಿಹಾಸ ವಿಭಾಗದ ಮುಖ್ಯಸ್ಥರಾಗಿದ್ದ ಡಾ.ರಾಜರಾಮ್‌ ಹೆಗ್ಗಡೆ, ಬೆಂಗಳೂರಿನ ವಿವಿಎಸ್ ಪ್ರೌಢಶಾಲೆ ನಿವೃತ್ತ ಮುಖ್ಯೋಪಾಧ್ಯಾಯರಾದ ಸತ್ಯಪ್ರಕಾಶ್‌, ಹಗರಿಬೊಮ್ಮನಹಳ್ಳಿ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ಪ್ರಾಂಶುಪಾಲ ರಂಗನಾಥ, ಚಾಮರಾಜನಗರದ ಬಿಳಿಗಿರಿರಂಗನ ಬೆಟ್ಟ ವಿವೇಕಾನಂದ ಗಿರಿಜನ ಪ್ರೌಢಶಾಲೆಯ ಬಿ.ಜಿ.ವಾಸುಕಿ, ಕೊಡಿಯಾಲ್‌ ಬೈಲ್‌ನ ಡಾ.ಅನಂತಕೃಷಣ ಭಟ್‌, ಮಿಥಿಕ್ ಸೊಸೈಟಿಯ ಸಂಶೋಧಕ ವಿಠಲ್ ಪೋತೇದಾರ್‌ ಸಮಿತಿಯಲ್ಲಿ ಸದಸ್ಯರಾಗಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಠ್ಯಪುಸ್ತಕಗಳನ್ನು ಉಳಿಸಿಕೊಂಡು ಸಮಿತಿಯನ್ನು ಸರ್ಕಾರ ವಿಸರ್ಜನೆ ಮಾಡಿದೆ. ಆದರೆ ಸಮಿತಿ ಮಾಡಿರುವ ಎಡವಟ್ಟುಗಳು ಚರ್ಚೆಯಾಗುತ್ತಲೇ ಇವೆ. ಸರ್ಕಾರ ಪರಿಷ್ಕೃತ ಪಠ್ಯಪುಸ್ತಕ ತಪ್ಪುಗಳನ್ನು ತಿದ್ದುವುದಾಗಿ ಹೇಳುತ್ತಲೇ ಬಂದಿದೆ. ಮಕ್ಕಳ ಶಿಕ್ಷಣ ಡೋಲಾಯಮಾನವಾಗಿದ್ದು, ಇದಕ್ಕೆ ಕಾರಣವಾಗಿರುವ ಸಮಿತಿಯ ಸದಸ್ಯರು ಮೌನಕ್ಕೆ ಸಂದಿದ್ದಾರೆ. ಇತ್ತ ಶಿಕ್ಷಣ ಸಚಿವರ ಆಗಿರುವ ತಪ್ಪುಗಳನ್ನು ತಿದ್ದು ಮಾತನಾಡುತ್ತಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌, “ಭಾರೀ ತಪ್ಪುಗಳೇನೂ ಆಗಿಲ್ಲ. ಕೆಲವೇ ಕೆಲವು ಆಗಿವೆ. ಆಗಿರುವುದನ್ನು ಸರಿ ಮಾಡುತ್ತೇವೆ. ಈ ಹಿಂದಿನ ಸಮಿತಿಯ ಕಾಲದಲ್ಲಿ ಆಗಿರುವ ತಪ್ಪನ್ನು ನಮ್ಮ ಮೇಲೆ ಹಾಕುತ್ತಿದ್ದಾರೆ. ಬಸವಣ್ಣನವರ ಪಾಠದಲ್ಲಿ ಕಾಂಗ್ರೆಸ್‌ ಕಾಲದಲ್ಲೇ ತಪ್ಪಾಗಿತ್ತು. ಈಗ ಒಂದಿಷ್ಟು ವೈಭವೀಕರಣ ಮಾಡುತ್ತಿದ್ದಾರೆ. ನಮ್ಮ ಪರಿಷ್ಕರಣೆಯಲ್ಲಿ ಆಗಿರುವ ತಪ್ಪುಗಳನ್ನು ನಾವು ಸರಿ ಮಾಡುತ್ತೇವೆ. ಸಂವಿಧಾನ ಶಿಲ್ಪಿ ಎಂಬುದನ್ನು ಪಠ್ಯದಲ್ಲಿ ಬಿಡಲಾಗಿದೆ. ಅದನ್ನೂ ಸೇರಿಸಿ ಪಾಠ ಮಾಡಿಸುತ್ತೇವೆ” ಎಂದರು.

ಸಚಿವರ ಪ್ರತಿಕ್ರಿಯೆ ಬಳಿಕ ಸಮಿತಿಯ ಎಲ್ಲ ಸದಸ್ಯರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿತು. ಯಾರೊಬ್ಬರೂ ಈಗ ಆಗಿರುವ ತಪ್ಪುಗಳ ಕುರಿತು ಪ್ರತಿಕ್ರಿಯೆ ನೀಡಲು ಮುಂದೆ ಬಂದಿಲ್ಲ.

ಡಾ.ರಾಜಾರಾಮ್‌ ಹೆಗ್ಗಡೆ ಅವರನ್ನು  ಅವರನ್ನು ಸಂಪರ್ಕಿಸಿದಾಗ, “ಇರಲಿ ಬಿಡಿ, I don’t want to talk anything about that” ಎಂದರು.  “ತಪ್ಪುಗಳನ್ನು ಸರ್ಕಾರ ತಿದ್ದುವುದಾಗಿ ಹೇಳಿದೆ. ಅದಕ್ಕೂ ಮೇಲೆ ಯಾವುದೇ ವಿಚಾರಕ್ಕೆ ನಾನು ಪ್ರವೇಶ ಮಾಡುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿರಿ: ಬ್ರಾಹ್ಮಣರ ಪಠ್ಯಗಳನ್ನು ಕನ್ನಡ ಮಕ್ಕಳು ಏಕೆ ಓದಬೇಕು?

ಸತ್ಯಪ್ರಕಾಶ್‌ ಅವರು ಮಾತನಾಡಿ, “ನಾನು ಹೊರಗಡೆ ಇದ್ದೇನೆ. ನಿಮ್ಮ ಧ್ವನಿ ಕೇಳಿಸುತ್ತಿಲ್ಲ. ಆಮೇಲೆ ಪ್ರತಿಕ್ರಿಯೆ ನೀಡುತ್ತೇನೆ” ಎಂದರು.

ವಿಠ್ಠಲ್‌‌ ಪೋತೇದಾರ್‌ ಮಾತನಾಡಿ, “ಸದಸ್ಯರ್‍ಯಾರೂ ಮಾತನಾಡಬೇಡಿ ಎಂದು ಅಧ್ಯಕ್ಷರು ಸೂಚಿಸಿದ್ದಾರೆ. ಅದಕ್ಕೆ ನಾವು ಮಾತನಾಡುತ್ತಿಲ್ಲ. ನಾವು ಮಾಡೋದು ಮಾಡಿದ್ದೇವೆ. ಅದನ್ನು ಜಾರಿ ಮಾಡುವುದು ಅಥವಾ ರದ್ದು ಮಾಡುವುದು ಸರ್ಕಾರಕ್ಕೆ ಬಿಟ್ಟಿದ್ದು. ಇದರ ಬಗ್ಗೆ ಪ್ರತಿಕ್ರಿಯೆ ನೀಡಲು ಆಸಕ್ತಿ ಇಲ್ಲ” ಎಂದು ತಿಳಿಸಿದರು.

ಅನಂತಕೃಷಣ ಭಟ್ ಮಾತನಾಡಿ, “ನಾವು ಏನೂ ಹೇಳಲು ಬರುವುದಿಲ್ಲ. ಸಮಿತಿ ವಿಸರ್ಜನೆಯಾಗಿದೆ” ಎಂದು ಹೇಳಿದರು. ಬಿ.ಜಿ.ವಾಸುಕಿ, ಡಾ.ರಂಗನಾಥ್‌ ಅವರನ್ನು ಸಂಪರ್ಕಿಸಲು ಸಾಕಷ್ಟು ಸಲ ಪ್ರಯತ್ನಿಸಿದೆವು. ಅವರು ಕರೆಯನ್ನೇ ಸ್ವೀಕರಿಸಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...