Homeಕರ್ನಾಟಕಪಠ್ಯ ಪರಿಶೀಲಿಸಿದ ಸಮಿತಿಯ ಸದಸ್ಯರ್‍ಯಾರೂ ಪ್ರತಿಕ್ರಿಯೆಗೆ ಸಿದ್ಧರಿಲ್ಲ!

ಪಠ್ಯ ಪರಿಶೀಲಿಸಿದ ಸಮಿತಿಯ ಸದಸ್ಯರ್‍ಯಾರೂ ಪ್ರತಿಕ್ರಿಯೆಗೆ ಸಿದ್ಧರಿಲ್ಲ!

ಪರಿಷ್ಕರಣೆಯಲ್ಲಿ ಆಗಿರುವ ಎಲ್ಲ ತಪ್ಪುಗಳನ್ನು ನಾವು ಸರಿ ಮಾಡುತ್ತೇವೆ: ಬಿ.ಸಿ.ನಾಗೇಶ್‌

- Advertisement -
- Advertisement -

ಒಂದರಿಂದ ಹತ್ತನೇ ತರಗತಿವರೆಗಿನ ಪಠ್ಯಪುಸ್ತಕಗಳ ಪರಿಶೀಲನೆ ಮಾಡಿರುವ ಸಮಿತಿಯ ಅಧ್ಯಕ್ಷರಾದ ರೋಹಿತ್‌ ಚಕ್ರತೀರ್ಥ ಒಬ್ಬರೇ ಇಲ್ಲಿಯವರೆಗೆ ಪ್ರತಿಕ್ರಿಯೆ ನೀಡುತ್ತಾ ಬಂದಿದ್ದು, ಸಮಿತಿಯ ಸದಸ್ಯರ್‍ಯಾರೂ ವಿವಾದದ ಕುರಿತು ಮಾತನಾಡಲು ಸಿದ್ಧರಿಲ್ಲ. ಈಗ ಎದ್ದಿರುವ ಪ್ರಶ್ನೆಗಳಿಗೆ ಉತ್ತರಿಸಲು ಸದಸ್ಯರೆಲ್ಲರೂ ಹಿಂದೇಟು ಹಾಕುತ್ತಿದ್ದಾರೆ.

ಪಠ್ಯಪುಸ್ತಕಗಳ ಪರಿಶೀಲನಾ ಸಮಿತಿಯಲ್ಲಿ ರೋಹಿತ್‌ ಚಕ್ರತೀರ್ಥ ಸೇರಿದಂತೆ ಏಳು ಜನರು ಸದಸ್ಯರಿದ್ದರು. ಕುವೆಂಪು ವಿಶ್ವವಿದ್ಯಾನಿಲಯದ ಇತಿಹಾಸ ವಿಭಾಗದ ಮುಖ್ಯಸ್ಥರಾಗಿದ್ದ ಡಾ.ರಾಜರಾಮ್‌ ಹೆಗ್ಗಡೆ, ಬೆಂಗಳೂರಿನ ವಿವಿಎಸ್ ಪ್ರೌಢಶಾಲೆ ನಿವೃತ್ತ ಮುಖ್ಯೋಪಾಧ್ಯಾಯರಾದ ಸತ್ಯಪ್ರಕಾಶ್‌, ಹಗರಿಬೊಮ್ಮನಹಳ್ಳಿ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ಪ್ರಾಂಶುಪಾಲ ರಂಗನಾಥ, ಚಾಮರಾಜನಗರದ ಬಿಳಿಗಿರಿರಂಗನ ಬೆಟ್ಟ ವಿವೇಕಾನಂದ ಗಿರಿಜನ ಪ್ರೌಢಶಾಲೆಯ ಬಿ.ಜಿ.ವಾಸುಕಿ, ಕೊಡಿಯಾಲ್‌ ಬೈಲ್‌ನ ಡಾ.ಅನಂತಕೃಷಣ ಭಟ್‌, ಮಿಥಿಕ್ ಸೊಸೈಟಿಯ ಸಂಶೋಧಕ ವಿಠಲ್ ಪೋತೇದಾರ್‌ ಸಮಿತಿಯಲ್ಲಿ ಸದಸ್ಯರಾಗಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಠ್ಯಪುಸ್ತಕಗಳನ್ನು ಉಳಿಸಿಕೊಂಡು ಸಮಿತಿಯನ್ನು ಸರ್ಕಾರ ವಿಸರ್ಜನೆ ಮಾಡಿದೆ. ಆದರೆ ಸಮಿತಿ ಮಾಡಿರುವ ಎಡವಟ್ಟುಗಳು ಚರ್ಚೆಯಾಗುತ್ತಲೇ ಇವೆ. ಸರ್ಕಾರ ಪರಿಷ್ಕೃತ ಪಠ್ಯಪುಸ್ತಕ ತಪ್ಪುಗಳನ್ನು ತಿದ್ದುವುದಾಗಿ ಹೇಳುತ್ತಲೇ ಬಂದಿದೆ. ಮಕ್ಕಳ ಶಿಕ್ಷಣ ಡೋಲಾಯಮಾನವಾಗಿದ್ದು, ಇದಕ್ಕೆ ಕಾರಣವಾಗಿರುವ ಸಮಿತಿಯ ಸದಸ್ಯರು ಮೌನಕ್ಕೆ ಸಂದಿದ್ದಾರೆ. ಇತ್ತ ಶಿಕ್ಷಣ ಸಚಿವರ ಆಗಿರುವ ತಪ್ಪುಗಳನ್ನು ತಿದ್ದು ಮಾತನಾಡುತ್ತಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌, “ಭಾರೀ ತಪ್ಪುಗಳೇನೂ ಆಗಿಲ್ಲ. ಕೆಲವೇ ಕೆಲವು ಆಗಿವೆ. ಆಗಿರುವುದನ್ನು ಸರಿ ಮಾಡುತ್ತೇವೆ. ಈ ಹಿಂದಿನ ಸಮಿತಿಯ ಕಾಲದಲ್ಲಿ ಆಗಿರುವ ತಪ್ಪನ್ನು ನಮ್ಮ ಮೇಲೆ ಹಾಕುತ್ತಿದ್ದಾರೆ. ಬಸವಣ್ಣನವರ ಪಾಠದಲ್ಲಿ ಕಾಂಗ್ರೆಸ್‌ ಕಾಲದಲ್ಲೇ ತಪ್ಪಾಗಿತ್ತು. ಈಗ ಒಂದಿಷ್ಟು ವೈಭವೀಕರಣ ಮಾಡುತ್ತಿದ್ದಾರೆ. ನಮ್ಮ ಪರಿಷ್ಕರಣೆಯಲ್ಲಿ ಆಗಿರುವ ತಪ್ಪುಗಳನ್ನು ನಾವು ಸರಿ ಮಾಡುತ್ತೇವೆ. ಸಂವಿಧಾನ ಶಿಲ್ಪಿ ಎಂಬುದನ್ನು ಪಠ್ಯದಲ್ಲಿ ಬಿಡಲಾಗಿದೆ. ಅದನ್ನೂ ಸೇರಿಸಿ ಪಾಠ ಮಾಡಿಸುತ್ತೇವೆ” ಎಂದರು.

ಸಚಿವರ ಪ್ರತಿಕ್ರಿಯೆ ಬಳಿಕ ಸಮಿತಿಯ ಎಲ್ಲ ಸದಸ್ಯರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿತು. ಯಾರೊಬ್ಬರೂ ಈಗ ಆಗಿರುವ ತಪ್ಪುಗಳ ಕುರಿತು ಪ್ರತಿಕ್ರಿಯೆ ನೀಡಲು ಮುಂದೆ ಬಂದಿಲ್ಲ.

ಡಾ.ರಾಜಾರಾಮ್‌ ಹೆಗ್ಗಡೆ ಅವರನ್ನು  ಅವರನ್ನು ಸಂಪರ್ಕಿಸಿದಾಗ, “ಇರಲಿ ಬಿಡಿ, I don’t want to talk anything about that” ಎಂದರು.  “ತಪ್ಪುಗಳನ್ನು ಸರ್ಕಾರ ತಿದ್ದುವುದಾಗಿ ಹೇಳಿದೆ. ಅದಕ್ಕೂ ಮೇಲೆ ಯಾವುದೇ ವಿಚಾರಕ್ಕೆ ನಾನು ಪ್ರವೇಶ ಮಾಡುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿರಿ: ಬ್ರಾಹ್ಮಣರ ಪಠ್ಯಗಳನ್ನು ಕನ್ನಡ ಮಕ್ಕಳು ಏಕೆ ಓದಬೇಕು?

ಸತ್ಯಪ್ರಕಾಶ್‌ ಅವರು ಮಾತನಾಡಿ, “ನಾನು ಹೊರಗಡೆ ಇದ್ದೇನೆ. ನಿಮ್ಮ ಧ್ವನಿ ಕೇಳಿಸುತ್ತಿಲ್ಲ. ಆಮೇಲೆ ಪ್ರತಿಕ್ರಿಯೆ ನೀಡುತ್ತೇನೆ” ಎಂದರು.

ವಿಠ್ಠಲ್‌‌ ಪೋತೇದಾರ್‌ ಮಾತನಾಡಿ, “ಸದಸ್ಯರ್‍ಯಾರೂ ಮಾತನಾಡಬೇಡಿ ಎಂದು ಅಧ್ಯಕ್ಷರು ಸೂಚಿಸಿದ್ದಾರೆ. ಅದಕ್ಕೆ ನಾವು ಮಾತನಾಡುತ್ತಿಲ್ಲ. ನಾವು ಮಾಡೋದು ಮಾಡಿದ್ದೇವೆ. ಅದನ್ನು ಜಾರಿ ಮಾಡುವುದು ಅಥವಾ ರದ್ದು ಮಾಡುವುದು ಸರ್ಕಾರಕ್ಕೆ ಬಿಟ್ಟಿದ್ದು. ಇದರ ಬಗ್ಗೆ ಪ್ರತಿಕ್ರಿಯೆ ನೀಡಲು ಆಸಕ್ತಿ ಇಲ್ಲ” ಎಂದು ತಿಳಿಸಿದರು.

ಅನಂತಕೃಷಣ ಭಟ್ ಮಾತನಾಡಿ, “ನಾವು ಏನೂ ಹೇಳಲು ಬರುವುದಿಲ್ಲ. ಸಮಿತಿ ವಿಸರ್ಜನೆಯಾಗಿದೆ” ಎಂದು ಹೇಳಿದರು. ಬಿ.ಜಿ.ವಾಸುಕಿ, ಡಾ.ರಂಗನಾಥ್‌ ಅವರನ್ನು ಸಂಪರ್ಕಿಸಲು ಸಾಕಷ್ಟು ಸಲ ಪ್ರಯತ್ನಿಸಿದೆವು. ಅವರು ಕರೆಯನ್ನೇ ಸ್ವೀಕರಿಸಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...