Homeಕರ್ನಾಟಕಪಠ್ಯ ಪರಿಶೀಲಿಸಿದ ಸಮಿತಿಯ ಸದಸ್ಯರ್‍ಯಾರೂ ಪ್ರತಿಕ್ರಿಯೆಗೆ ಸಿದ್ಧರಿಲ್ಲ!

ಪಠ್ಯ ಪರಿಶೀಲಿಸಿದ ಸಮಿತಿಯ ಸದಸ್ಯರ್‍ಯಾರೂ ಪ್ರತಿಕ್ರಿಯೆಗೆ ಸಿದ್ಧರಿಲ್ಲ!

ಪರಿಷ್ಕರಣೆಯಲ್ಲಿ ಆಗಿರುವ ಎಲ್ಲ ತಪ್ಪುಗಳನ್ನು ನಾವು ಸರಿ ಮಾಡುತ್ತೇವೆ: ಬಿ.ಸಿ.ನಾಗೇಶ್‌

- Advertisement -
- Advertisement -

ಒಂದರಿಂದ ಹತ್ತನೇ ತರಗತಿವರೆಗಿನ ಪಠ್ಯಪುಸ್ತಕಗಳ ಪರಿಶೀಲನೆ ಮಾಡಿರುವ ಸಮಿತಿಯ ಅಧ್ಯಕ್ಷರಾದ ರೋಹಿತ್‌ ಚಕ್ರತೀರ್ಥ ಒಬ್ಬರೇ ಇಲ್ಲಿಯವರೆಗೆ ಪ್ರತಿಕ್ರಿಯೆ ನೀಡುತ್ತಾ ಬಂದಿದ್ದು, ಸಮಿತಿಯ ಸದಸ್ಯರ್‍ಯಾರೂ ವಿವಾದದ ಕುರಿತು ಮಾತನಾಡಲು ಸಿದ್ಧರಿಲ್ಲ. ಈಗ ಎದ್ದಿರುವ ಪ್ರಶ್ನೆಗಳಿಗೆ ಉತ್ತರಿಸಲು ಸದಸ್ಯರೆಲ್ಲರೂ ಹಿಂದೇಟು ಹಾಕುತ್ತಿದ್ದಾರೆ.

ಪಠ್ಯಪುಸ್ತಕಗಳ ಪರಿಶೀಲನಾ ಸಮಿತಿಯಲ್ಲಿ ರೋಹಿತ್‌ ಚಕ್ರತೀರ್ಥ ಸೇರಿದಂತೆ ಏಳು ಜನರು ಸದಸ್ಯರಿದ್ದರು. ಕುವೆಂಪು ವಿಶ್ವವಿದ್ಯಾನಿಲಯದ ಇತಿಹಾಸ ವಿಭಾಗದ ಮುಖ್ಯಸ್ಥರಾಗಿದ್ದ ಡಾ.ರಾಜರಾಮ್‌ ಹೆಗ್ಗಡೆ, ಬೆಂಗಳೂರಿನ ವಿವಿಎಸ್ ಪ್ರೌಢಶಾಲೆ ನಿವೃತ್ತ ಮುಖ್ಯೋಪಾಧ್ಯಾಯರಾದ ಸತ್ಯಪ್ರಕಾಶ್‌, ಹಗರಿಬೊಮ್ಮನಹಳ್ಳಿ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ಪ್ರಾಂಶುಪಾಲ ರಂಗನಾಥ, ಚಾಮರಾಜನಗರದ ಬಿಳಿಗಿರಿರಂಗನ ಬೆಟ್ಟ ವಿವೇಕಾನಂದ ಗಿರಿಜನ ಪ್ರೌಢಶಾಲೆಯ ಬಿ.ಜಿ.ವಾಸುಕಿ, ಕೊಡಿಯಾಲ್‌ ಬೈಲ್‌ನ ಡಾ.ಅನಂತಕೃಷಣ ಭಟ್‌, ಮಿಥಿಕ್ ಸೊಸೈಟಿಯ ಸಂಶೋಧಕ ವಿಠಲ್ ಪೋತೇದಾರ್‌ ಸಮಿತಿಯಲ್ಲಿ ಸದಸ್ಯರಾಗಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಠ್ಯಪುಸ್ತಕಗಳನ್ನು ಉಳಿಸಿಕೊಂಡು ಸಮಿತಿಯನ್ನು ಸರ್ಕಾರ ವಿಸರ್ಜನೆ ಮಾಡಿದೆ. ಆದರೆ ಸಮಿತಿ ಮಾಡಿರುವ ಎಡವಟ್ಟುಗಳು ಚರ್ಚೆಯಾಗುತ್ತಲೇ ಇವೆ. ಸರ್ಕಾರ ಪರಿಷ್ಕೃತ ಪಠ್ಯಪುಸ್ತಕ ತಪ್ಪುಗಳನ್ನು ತಿದ್ದುವುದಾಗಿ ಹೇಳುತ್ತಲೇ ಬಂದಿದೆ. ಮಕ್ಕಳ ಶಿಕ್ಷಣ ಡೋಲಾಯಮಾನವಾಗಿದ್ದು, ಇದಕ್ಕೆ ಕಾರಣವಾಗಿರುವ ಸಮಿತಿಯ ಸದಸ್ಯರು ಮೌನಕ್ಕೆ ಸಂದಿದ್ದಾರೆ. ಇತ್ತ ಶಿಕ್ಷಣ ಸಚಿವರ ಆಗಿರುವ ತಪ್ಪುಗಳನ್ನು ತಿದ್ದು ಮಾತನಾಡುತ್ತಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌, “ಭಾರೀ ತಪ್ಪುಗಳೇನೂ ಆಗಿಲ್ಲ. ಕೆಲವೇ ಕೆಲವು ಆಗಿವೆ. ಆಗಿರುವುದನ್ನು ಸರಿ ಮಾಡುತ್ತೇವೆ. ಈ ಹಿಂದಿನ ಸಮಿತಿಯ ಕಾಲದಲ್ಲಿ ಆಗಿರುವ ತಪ್ಪನ್ನು ನಮ್ಮ ಮೇಲೆ ಹಾಕುತ್ತಿದ್ದಾರೆ. ಬಸವಣ್ಣನವರ ಪಾಠದಲ್ಲಿ ಕಾಂಗ್ರೆಸ್‌ ಕಾಲದಲ್ಲೇ ತಪ್ಪಾಗಿತ್ತು. ಈಗ ಒಂದಿಷ್ಟು ವೈಭವೀಕರಣ ಮಾಡುತ್ತಿದ್ದಾರೆ. ನಮ್ಮ ಪರಿಷ್ಕರಣೆಯಲ್ಲಿ ಆಗಿರುವ ತಪ್ಪುಗಳನ್ನು ನಾವು ಸರಿ ಮಾಡುತ್ತೇವೆ. ಸಂವಿಧಾನ ಶಿಲ್ಪಿ ಎಂಬುದನ್ನು ಪಠ್ಯದಲ್ಲಿ ಬಿಡಲಾಗಿದೆ. ಅದನ್ನೂ ಸೇರಿಸಿ ಪಾಠ ಮಾಡಿಸುತ್ತೇವೆ” ಎಂದರು.

ಸಚಿವರ ಪ್ರತಿಕ್ರಿಯೆ ಬಳಿಕ ಸಮಿತಿಯ ಎಲ್ಲ ಸದಸ್ಯರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿತು. ಯಾರೊಬ್ಬರೂ ಈಗ ಆಗಿರುವ ತಪ್ಪುಗಳ ಕುರಿತು ಪ್ರತಿಕ್ರಿಯೆ ನೀಡಲು ಮುಂದೆ ಬಂದಿಲ್ಲ.

ಡಾ.ರಾಜಾರಾಮ್‌ ಹೆಗ್ಗಡೆ ಅವರನ್ನು  ಅವರನ್ನು ಸಂಪರ್ಕಿಸಿದಾಗ, “ಇರಲಿ ಬಿಡಿ, I don’t want to talk anything about that” ಎಂದರು.  “ತಪ್ಪುಗಳನ್ನು ಸರ್ಕಾರ ತಿದ್ದುವುದಾಗಿ ಹೇಳಿದೆ. ಅದಕ್ಕೂ ಮೇಲೆ ಯಾವುದೇ ವಿಚಾರಕ್ಕೆ ನಾನು ಪ್ರವೇಶ ಮಾಡುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿರಿ: ಬ್ರಾಹ್ಮಣರ ಪಠ್ಯಗಳನ್ನು ಕನ್ನಡ ಮಕ್ಕಳು ಏಕೆ ಓದಬೇಕು?

ಸತ್ಯಪ್ರಕಾಶ್‌ ಅವರು ಮಾತನಾಡಿ, “ನಾನು ಹೊರಗಡೆ ಇದ್ದೇನೆ. ನಿಮ್ಮ ಧ್ವನಿ ಕೇಳಿಸುತ್ತಿಲ್ಲ. ಆಮೇಲೆ ಪ್ರತಿಕ್ರಿಯೆ ನೀಡುತ್ತೇನೆ” ಎಂದರು.

ವಿಠ್ಠಲ್‌‌ ಪೋತೇದಾರ್‌ ಮಾತನಾಡಿ, “ಸದಸ್ಯರ್‍ಯಾರೂ ಮಾತನಾಡಬೇಡಿ ಎಂದು ಅಧ್ಯಕ್ಷರು ಸೂಚಿಸಿದ್ದಾರೆ. ಅದಕ್ಕೆ ನಾವು ಮಾತನಾಡುತ್ತಿಲ್ಲ. ನಾವು ಮಾಡೋದು ಮಾಡಿದ್ದೇವೆ. ಅದನ್ನು ಜಾರಿ ಮಾಡುವುದು ಅಥವಾ ರದ್ದು ಮಾಡುವುದು ಸರ್ಕಾರಕ್ಕೆ ಬಿಟ್ಟಿದ್ದು. ಇದರ ಬಗ್ಗೆ ಪ್ರತಿಕ್ರಿಯೆ ನೀಡಲು ಆಸಕ್ತಿ ಇಲ್ಲ” ಎಂದು ತಿಳಿಸಿದರು.

ಅನಂತಕೃಷಣ ಭಟ್ ಮಾತನಾಡಿ, “ನಾವು ಏನೂ ಹೇಳಲು ಬರುವುದಿಲ್ಲ. ಸಮಿತಿ ವಿಸರ್ಜನೆಯಾಗಿದೆ” ಎಂದು ಹೇಳಿದರು. ಬಿ.ಜಿ.ವಾಸುಕಿ, ಡಾ.ರಂಗನಾಥ್‌ ಅವರನ್ನು ಸಂಪರ್ಕಿಸಲು ಸಾಕಷ್ಟು ಸಲ ಪ್ರಯತ್ನಿಸಿದೆವು. ಅವರು ಕರೆಯನ್ನೇ ಸ್ವೀಕರಿಸಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....