Homeಕರ್ನಾಟಕಪಠ್ಯ ಪರಿಶೀಲಿಸಿದ ಸಮಿತಿಯ ಸದಸ್ಯರ್‍ಯಾರೂ ಪ್ರತಿಕ್ರಿಯೆಗೆ ಸಿದ್ಧರಿಲ್ಲ!

ಪಠ್ಯ ಪರಿಶೀಲಿಸಿದ ಸಮಿತಿಯ ಸದಸ್ಯರ್‍ಯಾರೂ ಪ್ರತಿಕ್ರಿಯೆಗೆ ಸಿದ್ಧರಿಲ್ಲ!

ಪರಿಷ್ಕರಣೆಯಲ್ಲಿ ಆಗಿರುವ ಎಲ್ಲ ತಪ್ಪುಗಳನ್ನು ನಾವು ಸರಿ ಮಾಡುತ್ತೇವೆ: ಬಿ.ಸಿ.ನಾಗೇಶ್‌

- Advertisement -
- Advertisement -

ಒಂದರಿಂದ ಹತ್ತನೇ ತರಗತಿವರೆಗಿನ ಪಠ್ಯಪುಸ್ತಕಗಳ ಪರಿಶೀಲನೆ ಮಾಡಿರುವ ಸಮಿತಿಯ ಅಧ್ಯಕ್ಷರಾದ ರೋಹಿತ್‌ ಚಕ್ರತೀರ್ಥ ಒಬ್ಬರೇ ಇಲ್ಲಿಯವರೆಗೆ ಪ್ರತಿಕ್ರಿಯೆ ನೀಡುತ್ತಾ ಬಂದಿದ್ದು, ಸಮಿತಿಯ ಸದಸ್ಯರ್‍ಯಾರೂ ವಿವಾದದ ಕುರಿತು ಮಾತನಾಡಲು ಸಿದ್ಧರಿಲ್ಲ. ಈಗ ಎದ್ದಿರುವ ಪ್ರಶ್ನೆಗಳಿಗೆ ಉತ್ತರಿಸಲು ಸದಸ್ಯರೆಲ್ಲರೂ ಹಿಂದೇಟು ಹಾಕುತ್ತಿದ್ದಾರೆ.

ಪಠ್ಯಪುಸ್ತಕಗಳ ಪರಿಶೀಲನಾ ಸಮಿತಿಯಲ್ಲಿ ರೋಹಿತ್‌ ಚಕ್ರತೀರ್ಥ ಸೇರಿದಂತೆ ಏಳು ಜನರು ಸದಸ್ಯರಿದ್ದರು. ಕುವೆಂಪು ವಿಶ್ವವಿದ್ಯಾನಿಲಯದ ಇತಿಹಾಸ ವಿಭಾಗದ ಮುಖ್ಯಸ್ಥರಾಗಿದ್ದ ಡಾ.ರಾಜರಾಮ್‌ ಹೆಗ್ಗಡೆ, ಬೆಂಗಳೂರಿನ ವಿವಿಎಸ್ ಪ್ರೌಢಶಾಲೆ ನಿವೃತ್ತ ಮುಖ್ಯೋಪಾಧ್ಯಾಯರಾದ ಸತ್ಯಪ್ರಕಾಶ್‌, ಹಗರಿಬೊಮ್ಮನಹಳ್ಳಿ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ಪ್ರಾಂಶುಪಾಲ ರಂಗನಾಥ, ಚಾಮರಾಜನಗರದ ಬಿಳಿಗಿರಿರಂಗನ ಬೆಟ್ಟ ವಿವೇಕಾನಂದ ಗಿರಿಜನ ಪ್ರೌಢಶಾಲೆಯ ಬಿ.ಜಿ.ವಾಸುಕಿ, ಕೊಡಿಯಾಲ್‌ ಬೈಲ್‌ನ ಡಾ.ಅನಂತಕೃಷಣ ಭಟ್‌, ಮಿಥಿಕ್ ಸೊಸೈಟಿಯ ಸಂಶೋಧಕ ವಿಠಲ್ ಪೋತೇದಾರ್‌ ಸಮಿತಿಯಲ್ಲಿ ಸದಸ್ಯರಾಗಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಠ್ಯಪುಸ್ತಕಗಳನ್ನು ಉಳಿಸಿಕೊಂಡು ಸಮಿತಿಯನ್ನು ಸರ್ಕಾರ ವಿಸರ್ಜನೆ ಮಾಡಿದೆ. ಆದರೆ ಸಮಿತಿ ಮಾಡಿರುವ ಎಡವಟ್ಟುಗಳು ಚರ್ಚೆಯಾಗುತ್ತಲೇ ಇವೆ. ಸರ್ಕಾರ ಪರಿಷ್ಕೃತ ಪಠ್ಯಪುಸ್ತಕ ತಪ್ಪುಗಳನ್ನು ತಿದ್ದುವುದಾಗಿ ಹೇಳುತ್ತಲೇ ಬಂದಿದೆ. ಮಕ್ಕಳ ಶಿಕ್ಷಣ ಡೋಲಾಯಮಾನವಾಗಿದ್ದು, ಇದಕ್ಕೆ ಕಾರಣವಾಗಿರುವ ಸಮಿತಿಯ ಸದಸ್ಯರು ಮೌನಕ್ಕೆ ಸಂದಿದ್ದಾರೆ. ಇತ್ತ ಶಿಕ್ಷಣ ಸಚಿವರ ಆಗಿರುವ ತಪ್ಪುಗಳನ್ನು ತಿದ್ದು ಮಾತನಾಡುತ್ತಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌, “ಭಾರೀ ತಪ್ಪುಗಳೇನೂ ಆಗಿಲ್ಲ. ಕೆಲವೇ ಕೆಲವು ಆಗಿವೆ. ಆಗಿರುವುದನ್ನು ಸರಿ ಮಾಡುತ್ತೇವೆ. ಈ ಹಿಂದಿನ ಸಮಿತಿಯ ಕಾಲದಲ್ಲಿ ಆಗಿರುವ ತಪ್ಪನ್ನು ನಮ್ಮ ಮೇಲೆ ಹಾಕುತ್ತಿದ್ದಾರೆ. ಬಸವಣ್ಣನವರ ಪಾಠದಲ್ಲಿ ಕಾಂಗ್ರೆಸ್‌ ಕಾಲದಲ್ಲೇ ತಪ್ಪಾಗಿತ್ತು. ಈಗ ಒಂದಿಷ್ಟು ವೈಭವೀಕರಣ ಮಾಡುತ್ತಿದ್ದಾರೆ. ನಮ್ಮ ಪರಿಷ್ಕರಣೆಯಲ್ಲಿ ಆಗಿರುವ ತಪ್ಪುಗಳನ್ನು ನಾವು ಸರಿ ಮಾಡುತ್ತೇವೆ. ಸಂವಿಧಾನ ಶಿಲ್ಪಿ ಎಂಬುದನ್ನು ಪಠ್ಯದಲ್ಲಿ ಬಿಡಲಾಗಿದೆ. ಅದನ್ನೂ ಸೇರಿಸಿ ಪಾಠ ಮಾಡಿಸುತ್ತೇವೆ” ಎಂದರು.

ಸಚಿವರ ಪ್ರತಿಕ್ರಿಯೆ ಬಳಿಕ ಸಮಿತಿಯ ಎಲ್ಲ ಸದಸ್ಯರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿತು. ಯಾರೊಬ್ಬರೂ ಈಗ ಆಗಿರುವ ತಪ್ಪುಗಳ ಕುರಿತು ಪ್ರತಿಕ್ರಿಯೆ ನೀಡಲು ಮುಂದೆ ಬಂದಿಲ್ಲ.

ಡಾ.ರಾಜಾರಾಮ್‌ ಹೆಗ್ಗಡೆ ಅವರನ್ನು  ಅವರನ್ನು ಸಂಪರ್ಕಿಸಿದಾಗ, “ಇರಲಿ ಬಿಡಿ, I don’t want to talk anything about that” ಎಂದರು.  “ತಪ್ಪುಗಳನ್ನು ಸರ್ಕಾರ ತಿದ್ದುವುದಾಗಿ ಹೇಳಿದೆ. ಅದಕ್ಕೂ ಮೇಲೆ ಯಾವುದೇ ವಿಚಾರಕ್ಕೆ ನಾನು ಪ್ರವೇಶ ಮಾಡುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿರಿ: ಬ್ರಾಹ್ಮಣರ ಪಠ್ಯಗಳನ್ನು ಕನ್ನಡ ಮಕ್ಕಳು ಏಕೆ ಓದಬೇಕು?

ಸತ್ಯಪ್ರಕಾಶ್‌ ಅವರು ಮಾತನಾಡಿ, “ನಾನು ಹೊರಗಡೆ ಇದ್ದೇನೆ. ನಿಮ್ಮ ಧ್ವನಿ ಕೇಳಿಸುತ್ತಿಲ್ಲ. ಆಮೇಲೆ ಪ್ರತಿಕ್ರಿಯೆ ನೀಡುತ್ತೇನೆ” ಎಂದರು.

ವಿಠ್ಠಲ್‌‌ ಪೋತೇದಾರ್‌ ಮಾತನಾಡಿ, “ಸದಸ್ಯರ್‍ಯಾರೂ ಮಾತನಾಡಬೇಡಿ ಎಂದು ಅಧ್ಯಕ್ಷರು ಸೂಚಿಸಿದ್ದಾರೆ. ಅದಕ್ಕೆ ನಾವು ಮಾತನಾಡುತ್ತಿಲ್ಲ. ನಾವು ಮಾಡೋದು ಮಾಡಿದ್ದೇವೆ. ಅದನ್ನು ಜಾರಿ ಮಾಡುವುದು ಅಥವಾ ರದ್ದು ಮಾಡುವುದು ಸರ್ಕಾರಕ್ಕೆ ಬಿಟ್ಟಿದ್ದು. ಇದರ ಬಗ್ಗೆ ಪ್ರತಿಕ್ರಿಯೆ ನೀಡಲು ಆಸಕ್ತಿ ಇಲ್ಲ” ಎಂದು ತಿಳಿಸಿದರು.

ಅನಂತಕೃಷಣ ಭಟ್ ಮಾತನಾಡಿ, “ನಾವು ಏನೂ ಹೇಳಲು ಬರುವುದಿಲ್ಲ. ಸಮಿತಿ ವಿಸರ್ಜನೆಯಾಗಿದೆ” ಎಂದು ಹೇಳಿದರು. ಬಿ.ಜಿ.ವಾಸುಕಿ, ಡಾ.ರಂಗನಾಥ್‌ ಅವರನ್ನು ಸಂಪರ್ಕಿಸಲು ಸಾಕಷ್ಟು ಸಲ ಪ್ರಯತ್ನಿಸಿದೆವು. ಅವರು ಕರೆಯನ್ನೇ ಸ್ವೀಕರಿಸಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...