Homeಮುಖಪುಟಪ್ರಧಾನಿಯ 'ಮನ್ ಕಿ ಬಾತ್‌'ನಲ್ಲಿ ಮಣಿಪುರ ಹಿಂಸಾಚಾರದ ಮಾತೇ ಇರಲಿಲ್ಲ: ಕಾಂಗ್ರೆಸ್ ಖಂಡನೆ

ಪ್ರಧಾನಿಯ ‘ಮನ್ ಕಿ ಬಾತ್‌’ನಲ್ಲಿ ಮಣಿಪುರ ಹಿಂಸಾಚಾರದ ಮಾತೇ ಇರಲಿಲ್ಲ: ಕಾಂಗ್ರೆಸ್ ಖಂಡನೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕಿ ಬಾತ್’ ರೇಡಿಯೋ ಭಾಷಣದ ಕಾರ್ಯಕ್ರಮದಲ್ಲಿ ಮಣಿಪುರದ ಹಿಂಸಾಚಾರ ಕುರಿತು ಮಾತನಾಡದಿರುವುದನ್ನು ಕಾಂಗ್ರೆಸ್ ಪಕ್ಷವು ತೀವ್ರವಾಗಿ ಖಂಡಿಸಿದೆ.

ಮಣಿಪುರದಲ್ಲಿ ಕಳೆದೊಂದು ತಿಂಗಳಿನಿಂದ ನಡೆಯುತ್ತಿರುವ ಮೈತಿ ಮತ್ತು ಕುಕಿ ಸಮುದಾಯದ ಜನರ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ ಇಲ್ಲಿಯವರೆಗೆ 115 ಜನರು ಪ್ರಾಣ ಕಳೆದುಕೊಂಡಿದ್ದು, 60 ಸಾವಿರ ಮಂದಿ ನೆಲೆ ಕಳೆದುಕೊಂಡಿದ್ದಾರೆ. ಸಚಿವರ ಮನೆಗಳನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದಾರೆ. ಶಾಂತಿ ಪುನರ್ ಸ್ಥಾಪನೆಗೆ ಭಾರತೀಯ ಸೇನೆ ಸೇರಿದಂತೆ 40 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಮೊಕ್ಕಾಂ ಹೂಡಿದ್ದು, ಸಂಘರ್ಷ ನಿಯಂತ್ರಣಕ್ಕೆ ಹರಸಾಹಸಪಡುತ್ತಿದ್ದಾರೆ. ಪ್ರತಿನಿತ್ಯ ಒಂದಿಲ್ಲೊಂದು ಹಿಂಸಾಚಾರದ ಘಟನೆಗಳು ನಡೆಯುತ್ತಲೇ ಇವೆ.

ಪ್ರಧಾನಿ ಮೋದಿ ಅವರು ತಮ್ಮ ‘ಮನ್ ಕಿ ಬಾತ್’ ರೇಡಿಯೋ ಭಾಷಣದ ವೇಳೆ ಮಣಿಪುರ ಹಿಂಸಾಚಾರದ ಬಗ್ಗೆ ಮಾತನಾಡಲಿಲ್ಲ. ಹಾಗಾಗಿ ಅವರ ಭಾಷಣ ಮುಕ್ತಾಯಗೊಂಡ ಕೂಡಲೇ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯೊಂದನ್ನು ನೀಡಿ, ”ಪ್ರಧಾನಿಯ ರೇಡಿಯೋ ಭಾಷಣವು ‘ಮಣಿಪುರಿ ಕಿ ಬಾತ್’ ಅನ್ನು ಕೂಡಾ ಒಳಗೊಳ್ಳಬೇಕಿತ್ತು ಎಂದು ಹೇಳಿದ್ದಾರೆ. ”ಮಣಿಪುರದ ಪರಿಸ್ಥಿತಿ ಅತ್ಯಂತ ಘೋರವಾಗಿದೆ ಹಾಗೂ ಅತ್ಯಂತ ಕಳವಳಕಾರಿಯಾಗಿದೆ. ಆದರೆ ಆ ಬಗ್ಗೆ ನೀವು ಒಂದೇ ಒಂದು ಮಾತನ್ನೂ ಆಡಿಲ್ಲ. ಒಂದೇ ಒಂದು ಸಭೆಯನ್ನೂ ನಡೆಸಿಲ್ಲ” ಎಂದು ಹರಿಹಾಯ್ದರು.

ಇದನ್ನೂ ಓದಿ: ಮಣಿಪುರ ಹಿಂಸಾಚಾರ: ಅಪ್ರಚೋದಿತ ಗುಂಡಿನ ದಾಳಿ; ಯೋಧನಿಗೆ ಗಾಯ

”ಇನ್ನೂ ಕೂಡಾ ಮಣಿಪುರದ ಸರ್ವ ಪಕ್ಷ ನಿಯೋಗವನ್ನು ಭೇಟಿಯಾಗಿಲ್ಲ. ನಿಮ್ಮ ಸರಕಾರವು ಮಣಿಪುರವನ್ನು ಭಾರತದ ಭಾಗವೆಂದು ಪರಿಗಣಿಸಿಲ್ಲವೆಂಬಂತೆ ಕಾಣುತ್ತದೆ. ಇದು ಒಪ್ಪತಕ್ಕದ್ದಲ್ಲ. ಮಣಿಪುರ ಹೊತ್ತಿ ಉರಿಯುತ್ತಿರುವಾಗ ನಿಮ್ಮ ಸರಕಾರವು ಗಾಢನಿದ್ದೆಯಲ್ಲಿದೆ” ಎಂದು ಖರ್ಗೆ ಟೀಕಿಸಿದ್ದಾರೆ.

ರಾಜಧರ್ಮವನ್ನು ಪಾಲಿಸುವಂತೆ ಪ್ರಧಾನಿಯನ್ನು ಕೇಳಿಕೊಂಡಿರುವ ಖರ್ಗೆ, ಶಾಂತಿಯನ್ನು ಕದಡುವವರ ವಿರುದ್ಧ ದೃಢವಾಗಿ ಕಾರ್ಯಾಚರಿಸುವಂತೆ ಸೂಚಿಸಿದ್ದಾರೆ. ಪೌರ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಶಾಂತಿಯನ್ನು ಮರುಸ್ಥಾಪಿಸಬೇಕು ಹಾಗೂ ಸರ್ವಪಕ್ಷ ನಿಯೋಗವು ರಾಜ್ಯವನ್ನು ಸಂದರ್ಶಿಸಲು ಅನುಮತಿ ನೀಡುವಂತೆ ಅವರು ಆಗ್ರಹಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮೂಲಕ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ”ಮತ್ತೊಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಮಣಿಪುರದ ಬಗ್ಗೆ ಮೌನ ವಹಿಸಿದ್ದಾರೆ. ವಿಪತ್ತು ನಿರ್ವಹಣೆಯಲ್ಲಿ ಭಾರತದ ಶ್ರೇಷ್ಠ ಸಾಮರ್ಥ್ಯಗಳಿಗಾಗಿ  ತಮ್ಮ ಬೆನ್ನನ್ನು ತಾವೇ ತಟ್ಟಿಕೊಂಡ ಪ್ರಧಾನಿ, ಮಣಿಪುರ ಎದುರಿಸುತ್ತಿರುವ ಸಂಪೂರ್ಣ ಮಾನವ ನಿರ್ಮಿತ ಮಾನವೀಯ ದುರಂತದ ಬಗ್ಗೆ ಏನು? ಎಂದು ಪ್ರಶ್ನಿಸಿದ್ದಾರೆ.

”ಇನ್ನೂ ಶಾಂತಿ ಕಾಪಾಡುವಂತೆ ಪ್ರಧಾನಿ ಮನವಿ ಮಾಡಿಲ್ಲ. ಲೆಕ್ಕಪರಿಶೋಧನೆ ಮಾಡಲಾಗದ ಪಿಎಂ-ಕೇರ್ಸ್ ಫಂಡ್ ಇದೆ ಆದರೆ ಪ್ರಧಾನಿ ಮಣಿಪುರದ ಬಗ್ಗೆ ಕಾಳಜಿ ವಹಿಸುತ್ತಾರೆಯೇ? ಎಂಬುದು ನಿಜವಾದ ಪ್ರಶ್ನೆ” ಎಂದಿದ್ದಾರೆ.

ಪೂರ್ವ ಇಂಫಾಲ್ ಜಿಲ್ಲೆಯಲ್ಲಿ ಜನರ ಗುಂಪೊಂದು ರೇಡಿಯೋ ಸೆಟ್‌ಗಳನ್ನು ಮುರಿದುಹಾಕುವ ಮೂಲಕ ಪ್ರತಿಭಟನೆ ನಡೆಸುತ್ತಿರುವ ದೃಶ್ಯದ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮಣಿಪುರ ಹಿಂಸಾಚಾರದ ಬಗ್ಗೆ ಪ್ರಧಾನಿ ಯಾಕೆ ಮನ್ ಕಿ ಬಾತ್‌ನಲ್ಲಿ ಮಾತನಾಡದಿರುವುದನ್ನು ವಿರೋಧಿಸಿ, ಈ ಪ್ರತಿಭಟನೆ ನಡೆದಿದೆ ಎನ್ನಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...