Homeಮುಖಪುಟಪ್ರಧಾನಿಯ 'ಮನ್ ಕಿ ಬಾತ್‌'ನಲ್ಲಿ ಮಣಿಪುರ ಹಿಂಸಾಚಾರದ ಮಾತೇ ಇರಲಿಲ್ಲ: ಕಾಂಗ್ರೆಸ್ ಖಂಡನೆ

ಪ್ರಧಾನಿಯ ‘ಮನ್ ಕಿ ಬಾತ್‌’ನಲ್ಲಿ ಮಣಿಪುರ ಹಿಂಸಾಚಾರದ ಮಾತೇ ಇರಲಿಲ್ಲ: ಕಾಂಗ್ರೆಸ್ ಖಂಡನೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕಿ ಬಾತ್’ ರೇಡಿಯೋ ಭಾಷಣದ ಕಾರ್ಯಕ್ರಮದಲ್ಲಿ ಮಣಿಪುರದ ಹಿಂಸಾಚಾರ ಕುರಿತು ಮಾತನಾಡದಿರುವುದನ್ನು ಕಾಂಗ್ರೆಸ್ ಪಕ್ಷವು ತೀವ್ರವಾಗಿ ಖಂಡಿಸಿದೆ.

ಮಣಿಪುರದಲ್ಲಿ ಕಳೆದೊಂದು ತಿಂಗಳಿನಿಂದ ನಡೆಯುತ್ತಿರುವ ಮೈತಿ ಮತ್ತು ಕುಕಿ ಸಮುದಾಯದ ಜನರ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ ಇಲ್ಲಿಯವರೆಗೆ 115 ಜನರು ಪ್ರಾಣ ಕಳೆದುಕೊಂಡಿದ್ದು, 60 ಸಾವಿರ ಮಂದಿ ನೆಲೆ ಕಳೆದುಕೊಂಡಿದ್ದಾರೆ. ಸಚಿವರ ಮನೆಗಳನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದಾರೆ. ಶಾಂತಿ ಪುನರ್ ಸ್ಥಾಪನೆಗೆ ಭಾರತೀಯ ಸೇನೆ ಸೇರಿದಂತೆ 40 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಮೊಕ್ಕಾಂ ಹೂಡಿದ್ದು, ಸಂಘರ್ಷ ನಿಯಂತ್ರಣಕ್ಕೆ ಹರಸಾಹಸಪಡುತ್ತಿದ್ದಾರೆ. ಪ್ರತಿನಿತ್ಯ ಒಂದಿಲ್ಲೊಂದು ಹಿಂಸಾಚಾರದ ಘಟನೆಗಳು ನಡೆಯುತ್ತಲೇ ಇವೆ.

ಪ್ರಧಾನಿ ಮೋದಿ ಅವರು ತಮ್ಮ ‘ಮನ್ ಕಿ ಬಾತ್’ ರೇಡಿಯೋ ಭಾಷಣದ ವೇಳೆ ಮಣಿಪುರ ಹಿಂಸಾಚಾರದ ಬಗ್ಗೆ ಮಾತನಾಡಲಿಲ್ಲ. ಹಾಗಾಗಿ ಅವರ ಭಾಷಣ ಮುಕ್ತಾಯಗೊಂಡ ಕೂಡಲೇ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯೊಂದನ್ನು ನೀಡಿ, ”ಪ್ರಧಾನಿಯ ರೇಡಿಯೋ ಭಾಷಣವು ‘ಮಣಿಪುರಿ ಕಿ ಬಾತ್’ ಅನ್ನು ಕೂಡಾ ಒಳಗೊಳ್ಳಬೇಕಿತ್ತು ಎಂದು ಹೇಳಿದ್ದಾರೆ. ”ಮಣಿಪುರದ ಪರಿಸ್ಥಿತಿ ಅತ್ಯಂತ ಘೋರವಾಗಿದೆ ಹಾಗೂ ಅತ್ಯಂತ ಕಳವಳಕಾರಿಯಾಗಿದೆ. ಆದರೆ ಆ ಬಗ್ಗೆ ನೀವು ಒಂದೇ ಒಂದು ಮಾತನ್ನೂ ಆಡಿಲ್ಲ. ಒಂದೇ ಒಂದು ಸಭೆಯನ್ನೂ ನಡೆಸಿಲ್ಲ” ಎಂದು ಹರಿಹಾಯ್ದರು.

ಇದನ್ನೂ ಓದಿ: ಮಣಿಪುರ ಹಿಂಸಾಚಾರ: ಅಪ್ರಚೋದಿತ ಗುಂಡಿನ ದಾಳಿ; ಯೋಧನಿಗೆ ಗಾಯ

”ಇನ್ನೂ ಕೂಡಾ ಮಣಿಪುರದ ಸರ್ವ ಪಕ್ಷ ನಿಯೋಗವನ್ನು ಭೇಟಿಯಾಗಿಲ್ಲ. ನಿಮ್ಮ ಸರಕಾರವು ಮಣಿಪುರವನ್ನು ಭಾರತದ ಭಾಗವೆಂದು ಪರಿಗಣಿಸಿಲ್ಲವೆಂಬಂತೆ ಕಾಣುತ್ತದೆ. ಇದು ಒಪ್ಪತಕ್ಕದ್ದಲ್ಲ. ಮಣಿಪುರ ಹೊತ್ತಿ ಉರಿಯುತ್ತಿರುವಾಗ ನಿಮ್ಮ ಸರಕಾರವು ಗಾಢನಿದ್ದೆಯಲ್ಲಿದೆ” ಎಂದು ಖರ್ಗೆ ಟೀಕಿಸಿದ್ದಾರೆ.

ರಾಜಧರ್ಮವನ್ನು ಪಾಲಿಸುವಂತೆ ಪ್ರಧಾನಿಯನ್ನು ಕೇಳಿಕೊಂಡಿರುವ ಖರ್ಗೆ, ಶಾಂತಿಯನ್ನು ಕದಡುವವರ ವಿರುದ್ಧ ದೃಢವಾಗಿ ಕಾರ್ಯಾಚರಿಸುವಂತೆ ಸೂಚಿಸಿದ್ದಾರೆ. ಪೌರ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಶಾಂತಿಯನ್ನು ಮರುಸ್ಥಾಪಿಸಬೇಕು ಹಾಗೂ ಸರ್ವಪಕ್ಷ ನಿಯೋಗವು ರಾಜ್ಯವನ್ನು ಸಂದರ್ಶಿಸಲು ಅನುಮತಿ ನೀಡುವಂತೆ ಅವರು ಆಗ್ರಹಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮೂಲಕ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ”ಮತ್ತೊಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಮಣಿಪುರದ ಬಗ್ಗೆ ಮೌನ ವಹಿಸಿದ್ದಾರೆ. ವಿಪತ್ತು ನಿರ್ವಹಣೆಯಲ್ಲಿ ಭಾರತದ ಶ್ರೇಷ್ಠ ಸಾಮರ್ಥ್ಯಗಳಿಗಾಗಿ  ತಮ್ಮ ಬೆನ್ನನ್ನು ತಾವೇ ತಟ್ಟಿಕೊಂಡ ಪ್ರಧಾನಿ, ಮಣಿಪುರ ಎದುರಿಸುತ್ತಿರುವ ಸಂಪೂರ್ಣ ಮಾನವ ನಿರ್ಮಿತ ಮಾನವೀಯ ದುರಂತದ ಬಗ್ಗೆ ಏನು? ಎಂದು ಪ್ರಶ್ನಿಸಿದ್ದಾರೆ.

”ಇನ್ನೂ ಶಾಂತಿ ಕಾಪಾಡುವಂತೆ ಪ್ರಧಾನಿ ಮನವಿ ಮಾಡಿಲ್ಲ. ಲೆಕ್ಕಪರಿಶೋಧನೆ ಮಾಡಲಾಗದ ಪಿಎಂ-ಕೇರ್ಸ್ ಫಂಡ್ ಇದೆ ಆದರೆ ಪ್ರಧಾನಿ ಮಣಿಪುರದ ಬಗ್ಗೆ ಕಾಳಜಿ ವಹಿಸುತ್ತಾರೆಯೇ? ಎಂಬುದು ನಿಜವಾದ ಪ್ರಶ್ನೆ” ಎಂದಿದ್ದಾರೆ.

ಪೂರ್ವ ಇಂಫಾಲ್ ಜಿಲ್ಲೆಯಲ್ಲಿ ಜನರ ಗುಂಪೊಂದು ರೇಡಿಯೋ ಸೆಟ್‌ಗಳನ್ನು ಮುರಿದುಹಾಕುವ ಮೂಲಕ ಪ್ರತಿಭಟನೆ ನಡೆಸುತ್ತಿರುವ ದೃಶ್ಯದ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮಣಿಪುರ ಹಿಂಸಾಚಾರದ ಬಗ್ಗೆ ಪ್ರಧಾನಿ ಯಾಕೆ ಮನ್ ಕಿ ಬಾತ್‌ನಲ್ಲಿ ಮಾತನಾಡದಿರುವುದನ್ನು ವಿರೋಧಿಸಿ, ಈ ಪ್ರತಿಭಟನೆ ನಡೆದಿದೆ ಎನ್ನಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...