Homeಕರ್ನಾಟಕರಾಜ್ಯದ ಬೇಡಿಕೆಗಳಿಗೆ ಪ್ರಧಾನಿಗಳು ಸ್ಪಂದಿಸಿದ್ದಾರೆ: ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟನೆ

ರಾಜ್ಯದ ಬೇಡಿಕೆಗಳಿಗೆ ಪ್ರಧಾನಿಗಳು ಸ್ಪಂದಿಸಿದ್ದಾರೆ: ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟನೆ

- Advertisement -
- Advertisement -

ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಬೇಡಿಕೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳಿಗೆ ಸತ್ಯಕ್ಕೆ ದೂರವಾಗಿವೆ ಎಂದಿರುವ ಅವರು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

“ಹೊಸವರ್ಷದ ಪ್ರಾರಂಭದಲ್ಲಿಯೇ ರಾಜ್ಯದ ಪ್ರಸಿದ್ದ ಕ್ಷೇತ್ರ ತುಮಕೂರಿನ ಸಿದ್ದಗಂಗಾ ಮಠಕ್ಕೆ ಆಗಮಿಸಿದ್ದ ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಘನ ಉಪಸ್ಥಿತಿಯಲ್ಲಿ ನಡೆದ ರೈತ ಸಮಾವೇಶ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ನಮ್ಮ ಅಹವಾಲನ್ನು ದೇಶದ ಪ್ರಧಾನಮಂತ್ರಿಗಳಲ್ಲಿ ಪ್ರಾಮಾಣಿಕವಾಗಿ ಸಲ್ಲಿಸಿದ್ದೇನೆ. ಇದು ನಮ್ಮ ಪ್ರಜಾಪ್ರಭುತ್ವದಲ್ಲಿ ಸಹಜವಾಗಿ ನಡೆಯುವಂತಹ ವಿದ್ಯಮಾನವಾಗಿದೆ. ಆದರೆ ಕೆಲವು ಮಾಧ್ಯಮಗಳಲ್ಲಿ ವಿಷಯವನ್ನು ತಿರುಚಿ ಸನ್ಮಾನ್ಯ ಪ್ರಧಾನಮಂತ್ರಿಗಳು ನಮ್ಮ ಬೇಡಿಕೆಗೆ ಮೌನ ವಹಿಸಿದ್ದರು, ಅವರು ಮುನಿಸಿಕೊಂಡಿದ್ದಾರೆ, ಅವರಿಗೆ ಅಸಮಾಧಾನವಾಗಿದೆ ಎಂದು ವಾಸ್ತವ ಸಂಗತಿಗಳನ್ನು ತಿಳಿಯುವ ಗೋಜಿಗೂ ಹೋಗದೆ, ತಮ್ಮ ಕಪೋಲಕಲ್ಪಿತ ವ್ಯಾಖ್ಯಾನಗಳನ್ನು ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಇಂತಹ ಸುದ್ದಿಗಳು ಸತ್ಯಕ್ಕೆ ದೂರವಾದವುಗಳು ಎನ್ನುವುದನ್ನು ನಾನು ಅತ್ಯಂತ ಸ್ಪಷ್ಟವಾಗಿ ಹೇಳುತ್ತಿದ್ದೇನೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಧಾನಮಂತ್ರಿಗಳು ನಮ್ಮ ರಾಜ್ಯದ ಬೇಡಿಕೆಗಳನ್ನು ಸ್ವೀಕರಿಸಿದ್ದಾರೆ. ನಮ್ಮ ರೈತರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ನಿಗದಿ ಮಾಡಬೇಕು, ರಾಜ್ಯದ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡಬೇಕು, ಪ್ರವಾಹ ಪರಿಹಾರ ಕಾರ್ಯಗಳಿಗಾಗಿ ಹೆಚ್ಚಿನ ನೆರವು – ಇವೆಲ್ಲವುಗಳಿಗೆ 50 ಸಾವಿರ ಕೋಟಿ ವಿಶೇಷ ಅನುದಾನ ನೀಡಬೇಕು ಎಂದು ಮಾನ್ಯ ಪ್ರಧಾನಮಂತ್ರಿಗಳಲ್ಲಿ ನಮ್ಮ ಮನವಿಯನ್ನು ರೈತ ಸಮಾವೇಶದ ವೇದಿಕೆಯಿಂದ ಮತ್ತೊಮ್ಮೆ ಅರಿಕೆ ಮಾಡಿಕೊಳ್ಳುವುದು ಸಮಂಜಸ ಎನ್ನುವ ಕಾರಣಕ್ಕೆ ಅಲ್ಲಿ ಅದನ್ನು ಉಲ್ಲೇಖಿಸಿದ್ದೇನೆ ಎಂದಿದ್ದಾರೆ.

ಪ್ರಧಾನಮಂತ್ರಿಗಳ ದಕ್ಷ, ಪಾರದರ್ಶಕ, ಪ್ರಾಮಾಣಿಕ ಆಡಳಿತ ವೈಖರಿ ಇಡೀ ಜಗತ್ತಿಗೆ ಗೊತ್ತಿದೆ. ಇಡೀ ದೇಶಕ್ಕೆ ತಿಳಿದಿರುವಂತೆ, ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಸರ್ಕಾರ ರೈತರಿಗೆ ಅಭೂತಪೂರ್ವ ನೆರವು ನೀಡಿದೆ, ಪರಿಣಾಮಕಾರಿ ಯೋಜನೆಗಳನ್ನು ಜಾರಿಗೊಳಿಸಿ, ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಅತ್ಯಂತ ಪರಿಣಾಮಕಾರಿ ಹೆಜ್ಜೆಗಳನ್ನು ಇಡುತ್ತಿದೆ. ನಮ್ಮ ರಾಜ್ಯದ ಕೃಷಿಕರ, ನೀರಾವರಿ ಯೋಜನೆಗಳ ವಾಸ್ತವತೆಗಳೂ ಪ್ರಧಾನಿಗಳಿಗೆ ತಿಳಿದಿದೆ. ಅವರು ನಮ್ಮ ಅತ್ಯುನ್ನತ ನಾಯಕರು. ಕರ್ನಾಟಕಕ್ಕೆ ಅತಿ ಹೆಚ್ಚಿನ ನೆರವು, ಅನುದಾನ ನೀಡಿರುವುದು ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ ಎನ್ನುವುದೂ ಕೂಡ ಎಲ್ಲರಿಗೂ ತಿಳಿದಿದೆ ಎಂದಿದ್ದಾರೆ.

ನಮ್ಮ ಎಲ್ಲ ಮನವಿಗೆ ಸನ್ಮಾನ್ಯ ಪ್ರಧಾನಮಂತ್ರಿಗಳು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ. ಈ ಬಗ್ಗೆ ದೆಹಲಿಯಲ್ಲಿ ವಿಸ್ತೃತವಾಗಿ ಚರ್ಚೆ ನಡೆಸಲು ಮತ್ತು ಇಲಾಖಾವಾರು ಕೇಂದ್ರ ಸಚಿವರುಗಳಿಗೆ ಪ್ರಸ್ತಾವನೆ ಸಲ್ಲಿಸಲು ಮಾನ್ಯ ಪ್ರಧಾನಮಂತ್ರಿಗಳು ಸೂಚಿಸಿದ್ದಾರೆ. ಸನ್ಮಾನ್ಯ ಪ್ರಧಾನಮಂತ್ರಿಗಳು ಈ ವಿಷಯದ ಬಗ್ಗೆ ಖುದ್ದಾಗಿ ನನ್ನೊಂದಿಗೆ ಮಾತನಾಡಿದ್ದಾರೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ವಾಸ್ತವ ಸಂಗತಿಗಳನ್ನು ಮರೆಮಾಚಿ, ಜನರಿಗೆ ತಪ್ಪು ಸಂದೇಶ ನೀಡುವ ಕೆಲವು ಮಾಧ್ಯಮಗಳ ಧೋರಣೆ ಸರಿಯಲ್ಲ ಎನ್ನುವುದನ್ನು ಮತ್ತೊಮ್ಮೆ ಇಲ್ಲಿ ಸ್ಪಷ್ಟಪಡಿಸಲು ಬಯಸುತ್ತೇನೆ. ರಾಜ್ಯದ ಹಿತದೃಷ್ಟಿಯಿಂದ ನಮ್ಮ ಪ್ರಯತ್ನಗಳನ್ನು ಬೆಂಬಲಿಸಿ ಮತ್ತು ವಿಷಯಗಳಿಗೆ ತಪ್ಪು ವಾಖ್ಯಾನ ಮಾಡದಿರಿ ಎಂದು ಎಲ್ಲ ವಿದ್ಯುನ್ಮಾನ ಮತ್ತು ಸುದ್ದಿ ಮಾಧ್ಯಮಗಳಲ್ಲಿ ನಾನು ಕೋರಿಕೊಳ್ಳುತ್ತಿದ್ದೇನೆ” ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...