Homeಮುಖಪುಟಲೋಕಸಭೆ ಚುನಾವಣೆ: 'ಮೋದಿ ಅಲೆ ಇಲ್ಲ, ಭ್ರಮೆಯಲ್ಲಿರಬೇಡಿ' ಎಂದ ಬಿಜೆಪಿ ಅಭ್ಯರ್ಥಿ

ಲೋಕಸಭೆ ಚುನಾವಣೆ: ‘ಮೋದಿ ಅಲೆ ಇಲ್ಲ, ಭ್ರಮೆಯಲ್ಲಿರಬೇಡಿ’ ಎಂದ ಬಿಜೆಪಿ ಅಭ್ಯರ್ಥಿ

- Advertisement -
- Advertisement -

ಲೋಕಸಭೆ ಚುನಾವಣೆ ವೇಳೆ ಯಾವುದೇ ಮೋದಿ ಅಲೆ ಇಲ್ಲ ಎಂದು ಪ್ರತಿಪಕ್ಷಗಳ ನಾಯಕರು ಹಲವು ಬಾರಿ ಹೇಳಿದ್ದರು, ಇದೀಗ ಅಮರಾವತಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನವನೀತ್ ರಾಣಾ ಅವರು ದೇಶದಲ್ಲಿ ‘ಮೋದಿ ಅಲೆ ಇಲ್ಲ, ಮೋದಿ ಅಲೆ ಇದೆ ಎಂಬ ಭ್ರಮೆಯಲ್ಲಿರಬೇಡಿ ಎಂದು ಬಿಜೆಪಿ ಕಾರ್ಯಕರ್ತರಿಗೆ ಹೇಳಿರುವ ವಿಡಿಯೋ ವೈರಲ್‌ ಆಗಿದೆ.

ಬಿಜೆಪಿ ಅಭ್ಯರ್ಥಿ ನವನೀತ್ ರಾಣಾ ತಮ್ಮ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವಾಗ ಈಗ ಮೋದಿ ಅಲೆ ಇಲ್ಲ ಎಂದು ಹೇಳಿಕೆ ನೀಡಿದ್ದಾರೆ. ಸಭೆಗೆ ಮಾಧ್ಯಮದವರಿಗೆ ಅವಕಾಶ ನೀಡಿರಲಿಲ್ಲ. ಆದರೆ ಆಕೆ ಹೇಳಿಕೆ ನೀಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.

ನಾವು ಈ ಚುನಾವಣೆಯನ್ನು ಗ್ರಾಮ ಪಂಚಾಯಿತಿ ಚುನಾವಣೆಯಂತೆ ಎದುರಿಸಬೇಕಾಗುತ್ತದೆ. ಮಧ್ಯಾಹ್ನದ ವೇಳೆಗೆ ಎಲ್ಲ ಮತದಾರರನ್ನು ಬೂತ್‌ಗೆ ಕರೆತಂದು ಮತ ಹಾಕುವಂತೆ ಹೇಳಬೇಕು. ಮೋದಿ ಅಲೆ ಇದೆ ಎಂಬ ಭ್ರಮೆಯಲ್ಲಿ ಉಳಿಯಬೇಡಿ. ಕಳೆದ ಚುನಾವಣೆಯಲ್ಲಿ, ಮೋದಿ ಅಲೆಯ ನಡುವೆಯೂ, ನಾನು ಸ್ವತಂತ್ರ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದೇನೆ ಎಂದು ನವನೀತ್ ರಾಣಾ ಅವರು ಹೇಳಿದ್ದಾರೆ.

ನವನೀತ್ ರಾಣಾ 2019ರಲ್ಲಿ ಎನ್‌ಸಿಪಿ ಬೆಂಬಲಿತ ಸ್ವತಂತ್ರ ಅಭ್ಯರ್ಥಿಯಾಗಿ ಅಮರಾವತಿಯಿಂದ ಕಣಕ್ಕಿಳಿದು ಗೆಲುವನ್ನು ಸಾಧಿಸಿದ್ದರು. ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

ನವನೀತ್ ರಾಣಾ ಅವರ ಹೇಳಿಕೆ ವೈರಲ್‌ ಆಗುತ್ತಿದ್ದಂತೆ ಪ್ರತಿಪಕ್ಷಗಳಾದ ಎನ್‌ಸಿಪಿ (ಶರದ್ ಪವಾರ್ ಬಣ) ಮತ್ತು ಶಿವಸೇನೆ (ಉದ್ಧವ್‌ ಬಣ) ತಕ್ಷಣವೇ ಪ್ರತಿಕ್ರಿಯಿಸಿದ್ದು, ನವನೀತ್ ರಾಣಾ ಸತ್ಯವನ್ನು ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಆಕೆಯ ಹೇಳಿಕೆಗೆ ಪ್ರತಿಕ್ರಿಯಿಸಿದ ಎನ್‌ಸಿಪಿ ಮುಖ್ಯ ವಕ್ತಾರ ಮಹೇಶ್ ತಾಪಸೆ, ರಾಣಾ ಹೇಳಿದ್ದೆಲ್ಲವೂ ಸತ್ಯ, ಮೋದಿ ಅಲೆ ಇಲ್ಲ ಎಂದು ಬಿಜೆಪಿಗೆ ತಿಳಿದಿದೆ. ಪಕ್ಷವು ಒಬ್ಬರ ನಂತರ ಒಬ್ಬರಂತೆ ವಿರೋಧ ಪಕ್ಷದ ನಾಯಕರನ್ನು ಸೆಳೆಯುವಾಗ ಇದು ಬಹಿರಂಗವಾಗಿದೆ. ಭ್ರಷ್ಟಾಚಾರದ ಆರೋಪ ಹೊತ್ತಿರುವ ನಾಯಕರನ್ನೂ ಅದು ಆಮದು ಮಾಡಿಕೊಂಡಿದೆ. ಬಿಜೆಪಿಯಲ್ಲಿ ಭಯದ ವಾತಾವರಣವಿದ್ದು, ಅವರು ಗ್ರಾಮ ಪಂಚಾಯಿತಿ ಚುನಾವಣೆಯಂತೆ ಚುನಾವಣೆ ಎದುರಿಸಲು ತಮ್ಮ ಕಾರ್ಯಕರ್ತರಲ್ಲಿ ಕೇಳಿಕೊಳ್ಳುತ್ತಿದ್ದಾರೆ ಎಂದು  ಹೇಳಿದ್ದಾರೆ.

ಶಿವಸೇನೆ (ಯುಬಿಟಿ) ವಕ್ತಾರ ಸಂಜಯ್ ರಾವುತ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಮೋದಿ ಅಲೆಯನ್ನು ಮರೆತುಬಿಡಿ, ನರೇಂದ್ರ ಮೋದಿ ಅವರು ತಮ್ಮ ಕ್ಷೇತ್ರದಲ್ಲಿ ಗೆಲ್ಲಲು ಸಾಧ್ಯವಾಗುತ್ತದೆಯೇ ಎಂಬುವುದು ದೊಡ್ಡ ಪ್ರಶ್ನೆಯಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಐರ್ಲೆಂಡ್‌ನಲ್ಲಿರುವ ಭಾರತೀಯ ರಾಯಭಾರಿಯಿಂದ ವಿಪಕ್ಷಗಳ ಟೀಕೆ: ರಾಜತಾಂತ್ರಿಕ ಅಧಿಕಾರಿಯ ನಿಲುವಿಗೆ ವ್ಯಾಪಕ ವಿರೋಧ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...