Homeಮುಖಪುಟದೆಹಲಿ ಗಡಿ ಬಿಟ್ಟು ತೆರಳಲು ಮನಸ್ಸಾಗುತ್ತಿಲ್ಲ: ರೈತರ ಭಾವನಾತ್ಮಕ ಮಾತುಗಳು

ದೆಹಲಿ ಗಡಿ ಬಿಟ್ಟು ತೆರಳಲು ಮನಸ್ಸಾಗುತ್ತಿಲ್ಲ: ರೈತರ ಭಾವನಾತ್ಮಕ ಮಾತುಗಳು

- Advertisement -
- Advertisement -

ರೈತ ಹೋರಾಟಕ್ಕೆ ಜಯವಾಗಲಿ, ರೈತರ ಐಕ್ಯತೆ ಚಿರಾಯುವಾಗಲಿ ಎಂದು ಮೊಳಗುತ್ತಿರುವ ಘೋಷಣೆಗಳು, ಸಿಹಿ ಹಂಚಿ ಸಂಭ್ರಮಿಸುತ್ತಿರುವ ರೈತರು, ಒಬ್ಬರನ್ನೊಬ್ಬರ ಆಲಂಗಿಸುತ್ತಾ ಅಭಿನಂದಿಸುತ್ತಿರುವ ಚಿತ್ರಗಳು….. ಇದು ದೆಹಲಿ ಗಡಿಗಳಲ್ಲಿ ಇತ್ತೀಚೆಗೆ ಕಾಣಬರುತ್ತಿರುವ ದೃಶ್ಯಗಳು

ಕಳೆದ ಒಂದು ವರ್ಷದಿಂದ ದೆಹಲಿ ಗಡಿಗಳಲ್ಲಿ ನಡೆಯುತ್ತಿದ್ದ ರೈತ ಹೋರಾಟಕ್ಕೆ ಗುರುವಾರ ತೆರೆ ಬಿದ್ದಿದೆ. ಜನರು ತಮ್ಮ ಹಳ್ಳಿಗಳತ್ತಾ ಸಾಗಲು, ಟೆಂಟ್‌ಗಳನ್ನು ಬಿಚ್ಚುತ್ತಿದ್ದಾರೆ. ಸದಾ ಜನರಿಂದ ಗಿಜುಗುಡುತ್ತಿದ್ದ ರಸ್ತೆಗಳು ಬರಿದಾಗುತ್ತಿವೆ, ಹಳ್ಳಿಗಳಾಗಿ ಬದಲಾಗಿದ್ದ ದೆಹಲಿ ಗಡಿಗಳು, ಪುನಃ ವಾಹನ ಸಂಚಾರಕ್ಕೆ ಮುಕ್ತವಾಗಿವೆ.

ಎಂಎಸ್‌ಪಿ ಸೇರಿದಂತೆ ರೈತರ ಬೇಡಿಕೆಗಳನ್ನು ಈಡೇರಿಸುವುದಾಗಿ ಕೇಂದ್ರ ಸರ್ಕಾರ ಲಿಖಿತ ಭರವಸೆ ನೀಡಿದ್ದು, ಸಂಯುಕ್ತ ಕಿಸಾನ್‌ ಮೋರ್ಚಾದ ರೈತ ನಾಯಕರು  ಪ್ರಸ್ತುತ ರೈತ ಹೋರಾಟವನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿದ್ದಾರೆ. ಕೇಂದ್ರ ಸರ್ಕಾರ ರೈತರ ಎಲ್ಲಾ ಹಕ್ಕೊತ್ತಾಯಗಳನ್ನು ಒಪ್ಪಿಕೊಂಡ ನಂತರ ಪ್ರತಿಭಟನಾಕಾರರು ಟ್ಯ್ರಾಕ್ಟರ್‌ಗಳ ಮೇಲೆ ಹತ್ತಿ ನೃತ್ಯ ಮಾಡುವುದರೊಂದಿಗೆ ಸಂಭ್ರಮ ಆಚರಿಸುತ್ತಿದ್ದಾರೆ. 

ದೆಹಲಿ ಗಡಿಗಳಲ್ಲಿ ಹೋರಾಟ ಆರಂಭದಿಂದಲೂ ಭಾಗವಹಿಸಿರುವ ಪಂಜಾಬ್‌ನ ರೋಪರ್‌ ಚಾರಿಯನ್‌ ಗ್ರಾಮದ ರವೀಂದರ್‌ ಸಿಂಗ್, ‘ಇದು ರೈತರ ಪರಿಶ್ರಮಕ್ಕೆ ಸಂದ ಗೆಲುವು. ನಮ್ಮ ಚಳವಳಿ  ಮುಗಿದಿಲ್ಲ. ಹೋರಾಟ ಮುಂದುವರಿಯಲಿದೆ. ನನಗೆ ಹಿಂತಿರುಗಬೇಕು ಎನಿಸುತ್ತಿಲ್ಲ. ನನಗೆ ಇಲ್ಲಿ ಅತೀವ ಪ್ರೀತಿ ಸಿಕ್ಕಿದೆ’ ಎನ್ನುತ ರೈತ ಹೋರಾಟವನ್ನು ಸ್ಮರಿಸಿಕೊಂಡಿದ್ದಾರೆ.

2020ರ ನವೆಂಬರ್ 26ರಂದು ದೆಹಲಿ ಚಲೋದಲ್ಲಿ ನಾನು ಭಾಗವಹಿಸಿದ್ದೆ ಎನ್ನುವ ಅವರು, ‘ನಾವು ಪಂಜಾಬ್ನಿಂದ ಬರುವಾಗ ಲಾಠಿಚಾರ್ಜ್ನಲ್ಲಿ ನಾನು ಗಾಯಗೊಂಡಿದ್ದೆ. ನಾವು ನಮ್ಮ ಟ್ರಾಲಿಗಳಲ್ಲಿ ಹಲವಾರು ಬ್ಯಾರಿಕೇಡ್ಗಳನ್ನು ದಾಟುವಲ್ಲಿ ಯಶಸ್ವಿಯಾಗಿದ್ದೇವೆ, ಆದರೆ ಪೊಲೀಸರು ನಮ್ಮನ್ನು ಬುರಾರಿ ಮೈದಾನಕ್ಕೆ ಪ್ರವೇಶಿಸುವಂತೆ ಒತ್ತಾಯಿಸಿದರು. ಅದರ ನಂತರ ಬುರಾರಿಯಲ್ಲಿ ಎರಡು ತಿಂಗಳು ಮುತ್ತಿಗೆ ನಡೆಯಿತು. ಪೊಲೀಸರು ನನ್ನ ಟ್ರ್ಯಾಕ್ಟರ್ ವಶಪಡಿಸಿಕೊಂಡಿದ್ದರು’ಎಂದರು.

ಗುರುವಾರ ಬೆಳಿಗ್ಗೆ ತನ್ನ ತಾತ್ಕಾಲಿಕ ಟೆಂಟ್‌ನಿಂದ ಟಾರ್ಪಾಲಿನ್ ಮತ್ತು ಥರ್ಮಾಕೋಲ್ ಶೀಟ್‌ಗಳನ್ನು  ಕಿತ್ತುಹಾಕಿದ ಜಲಂಧರ್‌ನ ಶಾದಿಪುರದ 25 ವರ್ಷದ ದಿಲ್ಬರ್ ಸಿಂಗ್, ‘ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ದಿನವೇ ವಿಜಯವನ್ನು ಸಾಧಿಸಲಾಯಿತು. ಸರ್ಕಾರವು ರೈತರ ಉಳಿದ ಹಕ್ಕೊತ್ತಾಯಗಳನ್ನು ಔಪಚಾರಿಕವಾಗಿ ಸ್ವೀಕರಿಸಬೇಕು ಎಂದು ನಾವು ಕಾಯುತ್ತಿದ್ದೆವು. ಅಲ್ಲಿಂದೀಚೆಗೆ ಸಂಭ್ರಮದ ವಾತಾವರಣವಿದೆ’ ಎಂದರು.

ಕಿಸಾನ್ ಯೂನಿಯನ್‌ನ ಸದಸ್ಯರು ಮತ್ತು ಫೆಬ್ರವರಿಯಿಂದ ಸಿಂಘುವಿನಲ್ಲಿ ಸ್ಥಾಪಿಸಲಾದ ಸಮುದಾಯ ಅಡುಗೆಮನೆಯಲ್ಲಿ ಸ್ವಯಂಸೇವಕರಾಗಿರುವ ಪಟಿಯಾಲಾದ ಖಾಂಗ್ ಗ್ರಾಮದ 70 ವರ್ಷದ ಜಸ್ವೀರ್‌ ಕೌರ್‌ ಕೀರ್ತಿ ಕಳೆದ ಒಂದು ವರ್ಷದಿಂದ ಸಿಂಘು ಗಡಿಯಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ನಿನ್ನೆ ಒಕ್ಕೂಟದ ಸದಸ್ಯರೊಬ್ಬರು ಆಂದೋಲನವನ್ನು ಅಮಾನತುಗೊಳಿಸುವ ಸಂಯುಕ್ತ ಕಿಸಾನ್‌ ಮೋರ್ಚಾದನ ನಿರ್ಧಾರವನ್ನು ತಿಳಿಸಿದಾಗ ಅವರು ‘ಲಂಗರ್ ಸೇವೆ’ ಮಾಡುತ್ತಿದ್ದರು.

ರೈತ ಹೋರಾಟದ ಬಗ್ಗೆ ಮಾತನಾಡಿದ ಅವರು, ‘ನನಗೆ ಹಿಂತಿರುಗಬೇಕು ಎನಿಸುತ್ತಿಲ್ಲ. ಕಳೆದ ವರ್ಷ ನಮ್ಮ ಗ್ರಾಮದ ಜನರೊಂದಿಗೆ ಇಲ್ಲಿಗೆ ಬಂದಿದ್ದೆ. ಆಂದೋಲನ ಇಷ್ಟು ದಿನ ಇರುತ್ತದೆ ಎಂದು ನಾನು ಊಹಿಸಿರಲಿಲ್ಲ. ಆರಂಭದಲ್ಲಿ, ವಿಪರೀತ ಹವಾಮಾನ ವೈಪರಿತ್ಯದಿಂದಾಗಿ ರಸ್ತೆಗಳಲ್ಲಿ ಕುಳಿತುಕೊಳ್ಳಲು, ಆರಾಮದಾಯಕ ಜೀವನದಿಂದ ಈ ಪರಿಸ್ಥಿತಿಗೆ ಹೊಂದಿಕೊಳ್ಳುವುದು ತುಂಬಾ ಕಷ್ಟಕರವಾಗಿತ್ತು. ಜನವರಿ 26 ರ ಘಟನೆಯ ಸಂದರ್ಭದಲ್ಲಿ ಅರೆಸೇನಾ ಪಡೆಗಳನ್ನು ನಿಯೋಜಿಸಬಹುದೆಂಬ ಭಯವಿತ್ತು. ಅದರೆ ಅದು ಈಗ ಮಾಯವಾಗಿದೆ. ರೈತ ಹೋರಾಟದ ಗೆಲುವಿಗಾಗಿ ಬಹಳಷ್ಟು ರೈತರು ಪ್ರಾಣತೆತ್ತಿದ್ದಾರೆ’ ಎಂದು ಹೇಳಿದರು.

‘ನಾವು ನಮ್ಮ ಕರ್ತವ್ಯವನ್ನು ಮಾಡಿದ್ದೇವೆ. ನಮ್ಮ ಭೂಮಿ ಮತ್ತು ಹಕ್ಕುಗಳ ಹೋರಾಟ ಈ ಎಲ್ಲಾ ಕಷ್ಟಗಳಿಗಿಂತ ದೊಡ್ಡದಾಗಿದೆ. ನಾನು ಇನ್ನೂ ನನ್ನ ಸಾಮಾನುಗಳನ್ನು ಪ್ಯಾಕ್ ಮಾಡಿಲ್ಲ. ನಾವು ಶನಿವಾರದಂದು ಲಂಗರ್ನಲ್ಲಿ ಕೊನೆಯ ಬಾರಿಗೆ ಎಲ್ಲರಿಗೂ ಸೇವೆ ಸಲ್ಲಿಸಿದ ನಂತರ ಹೊರಡುತ್ತೇವೆ’ ಎಂದು ಕೌರ್ ಹೇಳಿದರು.

ನವೆಂಬರ್‌ 19ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ್ದರು. ಇತ್ತೀಚೆಗಷ್ಟೆ ಸಂಸತ್ತಿನಲ್ಲಿಯೂ ಕೃಷಿ ಕಾನೂನುಗಳ ರದ್ದತಿ ಮಸೂದೆಗೆ ಅಂಗೀಕಾರ ದೊರೆತಿತ್ತು. ಇದರ ನಂತರವೂ ಪ್ರತಿಭಟನೆ ಮುಂದುವರೆಸಿದ್ದ ರೈತರು ಕನಿಷ್ಠ ಬೆಂಬಲ ಬೆಲೆ ಕಾನೂನುಬದ್ಧ ಗೊಳಿಸಬೇಕು, ರೈತರ ಮೇಲಿನ ಪ್ರಕರಣಗಳನ್ನು ಹಿಂಪಡೆಯಬೇಕು ಎಂಬುದನ್ನು ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸುವವರೆಗೂ ಪ್ರತಿಭಟನೆ ಮುಂದುವರೆಸುವುದಾಗಿ ತಿಳಿಸಿದ್ದರು. ಗುರುವಾರ ಕೇಂದ್ರ ಸರ್ಕಾರವು ರೈತರ ಇತರ ಬೇಡಿಕೆಗಳನ್ನು ಈಡೇರಿಸುವುದಾಗಿ ಲಿಖಿತ ಭರವಸೆ ನೀಡಿದ್ದು, ಸಂಯುಕ್ತ ಕಿಸಾನ್ ಮೋರ್ಚಾವು ರೈತ ಹೋರಾಟವನ್ನು ಹಿಂಪಡೆಯುವುದಾಗಿ ನಿನ್ನೆ ನಿರ್ಧರಿಸಿದೆ.


ಇದನ್ನೂ ಓದಿ: ಹರಿಯಾಣದ ಹಳ್ಳಿಗಳಿಗೆ ತೆರಳಿ ಧನ್ಯವಾದ ತಿಳಿಸುತ್ತಿರುವ ಪಂಜಾಬ್ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...