Homeಮುಖಪುಟದೆಹಲಿ ಗಡಿ ಬಿಟ್ಟು ತೆರಳಲು ಮನಸ್ಸಾಗುತ್ತಿಲ್ಲ: ರೈತರ ಭಾವನಾತ್ಮಕ ಮಾತುಗಳು

ದೆಹಲಿ ಗಡಿ ಬಿಟ್ಟು ತೆರಳಲು ಮನಸ್ಸಾಗುತ್ತಿಲ್ಲ: ರೈತರ ಭಾವನಾತ್ಮಕ ಮಾತುಗಳು

- Advertisement -
- Advertisement -

ರೈತ ಹೋರಾಟಕ್ಕೆ ಜಯವಾಗಲಿ, ರೈತರ ಐಕ್ಯತೆ ಚಿರಾಯುವಾಗಲಿ ಎಂದು ಮೊಳಗುತ್ತಿರುವ ಘೋಷಣೆಗಳು, ಸಿಹಿ ಹಂಚಿ ಸಂಭ್ರಮಿಸುತ್ತಿರುವ ರೈತರು, ಒಬ್ಬರನ್ನೊಬ್ಬರ ಆಲಂಗಿಸುತ್ತಾ ಅಭಿನಂದಿಸುತ್ತಿರುವ ಚಿತ್ರಗಳು….. ಇದು ದೆಹಲಿ ಗಡಿಗಳಲ್ಲಿ ಇತ್ತೀಚೆಗೆ ಕಾಣಬರುತ್ತಿರುವ ದೃಶ್ಯಗಳು

ಕಳೆದ ಒಂದು ವರ್ಷದಿಂದ ದೆಹಲಿ ಗಡಿಗಳಲ್ಲಿ ನಡೆಯುತ್ತಿದ್ದ ರೈತ ಹೋರಾಟಕ್ಕೆ ಗುರುವಾರ ತೆರೆ ಬಿದ್ದಿದೆ. ಜನರು ತಮ್ಮ ಹಳ್ಳಿಗಳತ್ತಾ ಸಾಗಲು, ಟೆಂಟ್‌ಗಳನ್ನು ಬಿಚ್ಚುತ್ತಿದ್ದಾರೆ. ಸದಾ ಜನರಿಂದ ಗಿಜುಗುಡುತ್ತಿದ್ದ ರಸ್ತೆಗಳು ಬರಿದಾಗುತ್ತಿವೆ, ಹಳ್ಳಿಗಳಾಗಿ ಬದಲಾಗಿದ್ದ ದೆಹಲಿ ಗಡಿಗಳು, ಪುನಃ ವಾಹನ ಸಂಚಾರಕ್ಕೆ ಮುಕ್ತವಾಗಿವೆ.

ಎಂಎಸ್‌ಪಿ ಸೇರಿದಂತೆ ರೈತರ ಬೇಡಿಕೆಗಳನ್ನು ಈಡೇರಿಸುವುದಾಗಿ ಕೇಂದ್ರ ಸರ್ಕಾರ ಲಿಖಿತ ಭರವಸೆ ನೀಡಿದ್ದು, ಸಂಯುಕ್ತ ಕಿಸಾನ್‌ ಮೋರ್ಚಾದ ರೈತ ನಾಯಕರು  ಪ್ರಸ್ತುತ ರೈತ ಹೋರಾಟವನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿದ್ದಾರೆ. ಕೇಂದ್ರ ಸರ್ಕಾರ ರೈತರ ಎಲ್ಲಾ ಹಕ್ಕೊತ್ತಾಯಗಳನ್ನು ಒಪ್ಪಿಕೊಂಡ ನಂತರ ಪ್ರತಿಭಟನಾಕಾರರು ಟ್ಯ್ರಾಕ್ಟರ್‌ಗಳ ಮೇಲೆ ಹತ್ತಿ ನೃತ್ಯ ಮಾಡುವುದರೊಂದಿಗೆ ಸಂಭ್ರಮ ಆಚರಿಸುತ್ತಿದ್ದಾರೆ. 

ದೆಹಲಿ ಗಡಿಗಳಲ್ಲಿ ಹೋರಾಟ ಆರಂಭದಿಂದಲೂ ಭಾಗವಹಿಸಿರುವ ಪಂಜಾಬ್‌ನ ರೋಪರ್‌ ಚಾರಿಯನ್‌ ಗ್ರಾಮದ ರವೀಂದರ್‌ ಸಿಂಗ್, ‘ಇದು ರೈತರ ಪರಿಶ್ರಮಕ್ಕೆ ಸಂದ ಗೆಲುವು. ನಮ್ಮ ಚಳವಳಿ  ಮುಗಿದಿಲ್ಲ. ಹೋರಾಟ ಮುಂದುವರಿಯಲಿದೆ. ನನಗೆ ಹಿಂತಿರುಗಬೇಕು ಎನಿಸುತ್ತಿಲ್ಲ. ನನಗೆ ಇಲ್ಲಿ ಅತೀವ ಪ್ರೀತಿ ಸಿಕ್ಕಿದೆ’ ಎನ್ನುತ ರೈತ ಹೋರಾಟವನ್ನು ಸ್ಮರಿಸಿಕೊಂಡಿದ್ದಾರೆ.

2020ರ ನವೆಂಬರ್ 26ರಂದು ದೆಹಲಿ ಚಲೋದಲ್ಲಿ ನಾನು ಭಾಗವಹಿಸಿದ್ದೆ ಎನ್ನುವ ಅವರು, ‘ನಾವು ಪಂಜಾಬ್ನಿಂದ ಬರುವಾಗ ಲಾಠಿಚಾರ್ಜ್ನಲ್ಲಿ ನಾನು ಗಾಯಗೊಂಡಿದ್ದೆ. ನಾವು ನಮ್ಮ ಟ್ರಾಲಿಗಳಲ್ಲಿ ಹಲವಾರು ಬ್ಯಾರಿಕೇಡ್ಗಳನ್ನು ದಾಟುವಲ್ಲಿ ಯಶಸ್ವಿಯಾಗಿದ್ದೇವೆ, ಆದರೆ ಪೊಲೀಸರು ನಮ್ಮನ್ನು ಬುರಾರಿ ಮೈದಾನಕ್ಕೆ ಪ್ರವೇಶಿಸುವಂತೆ ಒತ್ತಾಯಿಸಿದರು. ಅದರ ನಂತರ ಬುರಾರಿಯಲ್ಲಿ ಎರಡು ತಿಂಗಳು ಮುತ್ತಿಗೆ ನಡೆಯಿತು. ಪೊಲೀಸರು ನನ್ನ ಟ್ರ್ಯಾಕ್ಟರ್ ವಶಪಡಿಸಿಕೊಂಡಿದ್ದರು’ಎಂದರು.

ಗುರುವಾರ ಬೆಳಿಗ್ಗೆ ತನ್ನ ತಾತ್ಕಾಲಿಕ ಟೆಂಟ್‌ನಿಂದ ಟಾರ್ಪಾಲಿನ್ ಮತ್ತು ಥರ್ಮಾಕೋಲ್ ಶೀಟ್‌ಗಳನ್ನು  ಕಿತ್ತುಹಾಕಿದ ಜಲಂಧರ್‌ನ ಶಾದಿಪುರದ 25 ವರ್ಷದ ದಿಲ್ಬರ್ ಸಿಂಗ್, ‘ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ದಿನವೇ ವಿಜಯವನ್ನು ಸಾಧಿಸಲಾಯಿತು. ಸರ್ಕಾರವು ರೈತರ ಉಳಿದ ಹಕ್ಕೊತ್ತಾಯಗಳನ್ನು ಔಪಚಾರಿಕವಾಗಿ ಸ್ವೀಕರಿಸಬೇಕು ಎಂದು ನಾವು ಕಾಯುತ್ತಿದ್ದೆವು. ಅಲ್ಲಿಂದೀಚೆಗೆ ಸಂಭ್ರಮದ ವಾತಾವರಣವಿದೆ’ ಎಂದರು.

ಕಿಸಾನ್ ಯೂನಿಯನ್‌ನ ಸದಸ್ಯರು ಮತ್ತು ಫೆಬ್ರವರಿಯಿಂದ ಸಿಂಘುವಿನಲ್ಲಿ ಸ್ಥಾಪಿಸಲಾದ ಸಮುದಾಯ ಅಡುಗೆಮನೆಯಲ್ಲಿ ಸ್ವಯಂಸೇವಕರಾಗಿರುವ ಪಟಿಯಾಲಾದ ಖಾಂಗ್ ಗ್ರಾಮದ 70 ವರ್ಷದ ಜಸ್ವೀರ್‌ ಕೌರ್‌ ಕೀರ್ತಿ ಕಳೆದ ಒಂದು ವರ್ಷದಿಂದ ಸಿಂಘು ಗಡಿಯಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ನಿನ್ನೆ ಒಕ್ಕೂಟದ ಸದಸ್ಯರೊಬ್ಬರು ಆಂದೋಲನವನ್ನು ಅಮಾನತುಗೊಳಿಸುವ ಸಂಯುಕ್ತ ಕಿಸಾನ್‌ ಮೋರ್ಚಾದನ ನಿರ್ಧಾರವನ್ನು ತಿಳಿಸಿದಾಗ ಅವರು ‘ಲಂಗರ್ ಸೇವೆ’ ಮಾಡುತ್ತಿದ್ದರು.

ರೈತ ಹೋರಾಟದ ಬಗ್ಗೆ ಮಾತನಾಡಿದ ಅವರು, ‘ನನಗೆ ಹಿಂತಿರುಗಬೇಕು ಎನಿಸುತ್ತಿಲ್ಲ. ಕಳೆದ ವರ್ಷ ನಮ್ಮ ಗ್ರಾಮದ ಜನರೊಂದಿಗೆ ಇಲ್ಲಿಗೆ ಬಂದಿದ್ದೆ. ಆಂದೋಲನ ಇಷ್ಟು ದಿನ ಇರುತ್ತದೆ ಎಂದು ನಾನು ಊಹಿಸಿರಲಿಲ್ಲ. ಆರಂಭದಲ್ಲಿ, ವಿಪರೀತ ಹವಾಮಾನ ವೈಪರಿತ್ಯದಿಂದಾಗಿ ರಸ್ತೆಗಳಲ್ಲಿ ಕುಳಿತುಕೊಳ್ಳಲು, ಆರಾಮದಾಯಕ ಜೀವನದಿಂದ ಈ ಪರಿಸ್ಥಿತಿಗೆ ಹೊಂದಿಕೊಳ್ಳುವುದು ತುಂಬಾ ಕಷ್ಟಕರವಾಗಿತ್ತು. ಜನವರಿ 26 ರ ಘಟನೆಯ ಸಂದರ್ಭದಲ್ಲಿ ಅರೆಸೇನಾ ಪಡೆಗಳನ್ನು ನಿಯೋಜಿಸಬಹುದೆಂಬ ಭಯವಿತ್ತು. ಅದರೆ ಅದು ಈಗ ಮಾಯವಾಗಿದೆ. ರೈತ ಹೋರಾಟದ ಗೆಲುವಿಗಾಗಿ ಬಹಳಷ್ಟು ರೈತರು ಪ್ರಾಣತೆತ್ತಿದ್ದಾರೆ’ ಎಂದು ಹೇಳಿದರು.

‘ನಾವು ನಮ್ಮ ಕರ್ತವ್ಯವನ್ನು ಮಾಡಿದ್ದೇವೆ. ನಮ್ಮ ಭೂಮಿ ಮತ್ತು ಹಕ್ಕುಗಳ ಹೋರಾಟ ಈ ಎಲ್ಲಾ ಕಷ್ಟಗಳಿಗಿಂತ ದೊಡ್ಡದಾಗಿದೆ. ನಾನು ಇನ್ನೂ ನನ್ನ ಸಾಮಾನುಗಳನ್ನು ಪ್ಯಾಕ್ ಮಾಡಿಲ್ಲ. ನಾವು ಶನಿವಾರದಂದು ಲಂಗರ್ನಲ್ಲಿ ಕೊನೆಯ ಬಾರಿಗೆ ಎಲ್ಲರಿಗೂ ಸೇವೆ ಸಲ್ಲಿಸಿದ ನಂತರ ಹೊರಡುತ್ತೇವೆ’ ಎಂದು ಕೌರ್ ಹೇಳಿದರು.

ನವೆಂಬರ್‌ 19ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ್ದರು. ಇತ್ತೀಚೆಗಷ್ಟೆ ಸಂಸತ್ತಿನಲ್ಲಿಯೂ ಕೃಷಿ ಕಾನೂನುಗಳ ರದ್ದತಿ ಮಸೂದೆಗೆ ಅಂಗೀಕಾರ ದೊರೆತಿತ್ತು. ಇದರ ನಂತರವೂ ಪ್ರತಿಭಟನೆ ಮುಂದುವರೆಸಿದ್ದ ರೈತರು ಕನಿಷ್ಠ ಬೆಂಬಲ ಬೆಲೆ ಕಾನೂನುಬದ್ಧ ಗೊಳಿಸಬೇಕು, ರೈತರ ಮೇಲಿನ ಪ್ರಕರಣಗಳನ್ನು ಹಿಂಪಡೆಯಬೇಕು ಎಂಬುದನ್ನು ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸುವವರೆಗೂ ಪ್ರತಿಭಟನೆ ಮುಂದುವರೆಸುವುದಾಗಿ ತಿಳಿಸಿದ್ದರು. ಗುರುವಾರ ಕೇಂದ್ರ ಸರ್ಕಾರವು ರೈತರ ಇತರ ಬೇಡಿಕೆಗಳನ್ನು ಈಡೇರಿಸುವುದಾಗಿ ಲಿಖಿತ ಭರವಸೆ ನೀಡಿದ್ದು, ಸಂಯುಕ್ತ ಕಿಸಾನ್ ಮೋರ್ಚಾವು ರೈತ ಹೋರಾಟವನ್ನು ಹಿಂಪಡೆಯುವುದಾಗಿ ನಿನ್ನೆ ನಿರ್ಧರಿಸಿದೆ.


ಇದನ್ನೂ ಓದಿ: ಹರಿಯಾಣದ ಹಳ್ಳಿಗಳಿಗೆ ತೆರಳಿ ಧನ್ಯವಾದ ತಿಳಿಸುತ್ತಿರುವ ಪಂಜಾಬ್ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...