Homeಮುಖಪುಟದೆಹಲಿ ಗಡಿ ಬಿಟ್ಟು ತೆರಳಲು ಮನಸ್ಸಾಗುತ್ತಿಲ್ಲ: ರೈತರ ಭಾವನಾತ್ಮಕ ಮಾತುಗಳು

ದೆಹಲಿ ಗಡಿ ಬಿಟ್ಟು ತೆರಳಲು ಮನಸ್ಸಾಗುತ್ತಿಲ್ಲ: ರೈತರ ಭಾವನಾತ್ಮಕ ಮಾತುಗಳು

- Advertisement -
- Advertisement -

ರೈತ ಹೋರಾಟಕ್ಕೆ ಜಯವಾಗಲಿ, ರೈತರ ಐಕ್ಯತೆ ಚಿರಾಯುವಾಗಲಿ ಎಂದು ಮೊಳಗುತ್ತಿರುವ ಘೋಷಣೆಗಳು, ಸಿಹಿ ಹಂಚಿ ಸಂಭ್ರಮಿಸುತ್ತಿರುವ ರೈತರು, ಒಬ್ಬರನ್ನೊಬ್ಬರ ಆಲಂಗಿಸುತ್ತಾ ಅಭಿನಂದಿಸುತ್ತಿರುವ ಚಿತ್ರಗಳು….. ಇದು ದೆಹಲಿ ಗಡಿಗಳಲ್ಲಿ ಇತ್ತೀಚೆಗೆ ಕಾಣಬರುತ್ತಿರುವ ದೃಶ್ಯಗಳು

ಕಳೆದ ಒಂದು ವರ್ಷದಿಂದ ದೆಹಲಿ ಗಡಿಗಳಲ್ಲಿ ನಡೆಯುತ್ತಿದ್ದ ರೈತ ಹೋರಾಟಕ್ಕೆ ಗುರುವಾರ ತೆರೆ ಬಿದ್ದಿದೆ. ಜನರು ತಮ್ಮ ಹಳ್ಳಿಗಳತ್ತಾ ಸಾಗಲು, ಟೆಂಟ್‌ಗಳನ್ನು ಬಿಚ್ಚುತ್ತಿದ್ದಾರೆ. ಸದಾ ಜನರಿಂದ ಗಿಜುಗುಡುತ್ತಿದ್ದ ರಸ್ತೆಗಳು ಬರಿದಾಗುತ್ತಿವೆ, ಹಳ್ಳಿಗಳಾಗಿ ಬದಲಾಗಿದ್ದ ದೆಹಲಿ ಗಡಿಗಳು, ಪುನಃ ವಾಹನ ಸಂಚಾರಕ್ಕೆ ಮುಕ್ತವಾಗಿವೆ.

ಎಂಎಸ್‌ಪಿ ಸೇರಿದಂತೆ ರೈತರ ಬೇಡಿಕೆಗಳನ್ನು ಈಡೇರಿಸುವುದಾಗಿ ಕೇಂದ್ರ ಸರ್ಕಾರ ಲಿಖಿತ ಭರವಸೆ ನೀಡಿದ್ದು, ಸಂಯುಕ್ತ ಕಿಸಾನ್‌ ಮೋರ್ಚಾದ ರೈತ ನಾಯಕರು  ಪ್ರಸ್ತುತ ರೈತ ಹೋರಾಟವನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿದ್ದಾರೆ. ಕೇಂದ್ರ ಸರ್ಕಾರ ರೈತರ ಎಲ್ಲಾ ಹಕ್ಕೊತ್ತಾಯಗಳನ್ನು ಒಪ್ಪಿಕೊಂಡ ನಂತರ ಪ್ರತಿಭಟನಾಕಾರರು ಟ್ಯ್ರಾಕ್ಟರ್‌ಗಳ ಮೇಲೆ ಹತ್ತಿ ನೃತ್ಯ ಮಾಡುವುದರೊಂದಿಗೆ ಸಂಭ್ರಮ ಆಚರಿಸುತ್ತಿದ್ದಾರೆ. 

ದೆಹಲಿ ಗಡಿಗಳಲ್ಲಿ ಹೋರಾಟ ಆರಂಭದಿಂದಲೂ ಭಾಗವಹಿಸಿರುವ ಪಂಜಾಬ್‌ನ ರೋಪರ್‌ ಚಾರಿಯನ್‌ ಗ್ರಾಮದ ರವೀಂದರ್‌ ಸಿಂಗ್, ‘ಇದು ರೈತರ ಪರಿಶ್ರಮಕ್ಕೆ ಸಂದ ಗೆಲುವು. ನಮ್ಮ ಚಳವಳಿ  ಮುಗಿದಿಲ್ಲ. ಹೋರಾಟ ಮುಂದುವರಿಯಲಿದೆ. ನನಗೆ ಹಿಂತಿರುಗಬೇಕು ಎನಿಸುತ್ತಿಲ್ಲ. ನನಗೆ ಇಲ್ಲಿ ಅತೀವ ಪ್ರೀತಿ ಸಿಕ್ಕಿದೆ’ ಎನ್ನುತ ರೈತ ಹೋರಾಟವನ್ನು ಸ್ಮರಿಸಿಕೊಂಡಿದ್ದಾರೆ.

2020ರ ನವೆಂಬರ್ 26ರಂದು ದೆಹಲಿ ಚಲೋದಲ್ಲಿ ನಾನು ಭಾಗವಹಿಸಿದ್ದೆ ಎನ್ನುವ ಅವರು, ‘ನಾವು ಪಂಜಾಬ್ನಿಂದ ಬರುವಾಗ ಲಾಠಿಚಾರ್ಜ್ನಲ್ಲಿ ನಾನು ಗಾಯಗೊಂಡಿದ್ದೆ. ನಾವು ನಮ್ಮ ಟ್ರಾಲಿಗಳಲ್ಲಿ ಹಲವಾರು ಬ್ಯಾರಿಕೇಡ್ಗಳನ್ನು ದಾಟುವಲ್ಲಿ ಯಶಸ್ವಿಯಾಗಿದ್ದೇವೆ, ಆದರೆ ಪೊಲೀಸರು ನಮ್ಮನ್ನು ಬುರಾರಿ ಮೈದಾನಕ್ಕೆ ಪ್ರವೇಶಿಸುವಂತೆ ಒತ್ತಾಯಿಸಿದರು. ಅದರ ನಂತರ ಬುರಾರಿಯಲ್ಲಿ ಎರಡು ತಿಂಗಳು ಮುತ್ತಿಗೆ ನಡೆಯಿತು. ಪೊಲೀಸರು ನನ್ನ ಟ್ರ್ಯಾಕ್ಟರ್ ವಶಪಡಿಸಿಕೊಂಡಿದ್ದರು’ಎಂದರು.

ಗುರುವಾರ ಬೆಳಿಗ್ಗೆ ತನ್ನ ತಾತ್ಕಾಲಿಕ ಟೆಂಟ್‌ನಿಂದ ಟಾರ್ಪಾಲಿನ್ ಮತ್ತು ಥರ್ಮಾಕೋಲ್ ಶೀಟ್‌ಗಳನ್ನು  ಕಿತ್ತುಹಾಕಿದ ಜಲಂಧರ್‌ನ ಶಾದಿಪುರದ 25 ವರ್ಷದ ದಿಲ್ಬರ್ ಸಿಂಗ್, ‘ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ದಿನವೇ ವಿಜಯವನ್ನು ಸಾಧಿಸಲಾಯಿತು. ಸರ್ಕಾರವು ರೈತರ ಉಳಿದ ಹಕ್ಕೊತ್ತಾಯಗಳನ್ನು ಔಪಚಾರಿಕವಾಗಿ ಸ್ವೀಕರಿಸಬೇಕು ಎಂದು ನಾವು ಕಾಯುತ್ತಿದ್ದೆವು. ಅಲ್ಲಿಂದೀಚೆಗೆ ಸಂಭ್ರಮದ ವಾತಾವರಣವಿದೆ’ ಎಂದರು.

ಕಿಸಾನ್ ಯೂನಿಯನ್‌ನ ಸದಸ್ಯರು ಮತ್ತು ಫೆಬ್ರವರಿಯಿಂದ ಸಿಂಘುವಿನಲ್ಲಿ ಸ್ಥಾಪಿಸಲಾದ ಸಮುದಾಯ ಅಡುಗೆಮನೆಯಲ್ಲಿ ಸ್ವಯಂಸೇವಕರಾಗಿರುವ ಪಟಿಯಾಲಾದ ಖಾಂಗ್ ಗ್ರಾಮದ 70 ವರ್ಷದ ಜಸ್ವೀರ್‌ ಕೌರ್‌ ಕೀರ್ತಿ ಕಳೆದ ಒಂದು ವರ್ಷದಿಂದ ಸಿಂಘು ಗಡಿಯಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ನಿನ್ನೆ ಒಕ್ಕೂಟದ ಸದಸ್ಯರೊಬ್ಬರು ಆಂದೋಲನವನ್ನು ಅಮಾನತುಗೊಳಿಸುವ ಸಂಯುಕ್ತ ಕಿಸಾನ್‌ ಮೋರ್ಚಾದನ ನಿರ್ಧಾರವನ್ನು ತಿಳಿಸಿದಾಗ ಅವರು ‘ಲಂಗರ್ ಸೇವೆ’ ಮಾಡುತ್ತಿದ್ದರು.

ರೈತ ಹೋರಾಟದ ಬಗ್ಗೆ ಮಾತನಾಡಿದ ಅವರು, ‘ನನಗೆ ಹಿಂತಿರುಗಬೇಕು ಎನಿಸುತ್ತಿಲ್ಲ. ಕಳೆದ ವರ್ಷ ನಮ್ಮ ಗ್ರಾಮದ ಜನರೊಂದಿಗೆ ಇಲ್ಲಿಗೆ ಬಂದಿದ್ದೆ. ಆಂದೋಲನ ಇಷ್ಟು ದಿನ ಇರುತ್ತದೆ ಎಂದು ನಾನು ಊಹಿಸಿರಲಿಲ್ಲ. ಆರಂಭದಲ್ಲಿ, ವಿಪರೀತ ಹವಾಮಾನ ವೈಪರಿತ್ಯದಿಂದಾಗಿ ರಸ್ತೆಗಳಲ್ಲಿ ಕುಳಿತುಕೊಳ್ಳಲು, ಆರಾಮದಾಯಕ ಜೀವನದಿಂದ ಈ ಪರಿಸ್ಥಿತಿಗೆ ಹೊಂದಿಕೊಳ್ಳುವುದು ತುಂಬಾ ಕಷ್ಟಕರವಾಗಿತ್ತು. ಜನವರಿ 26 ರ ಘಟನೆಯ ಸಂದರ್ಭದಲ್ಲಿ ಅರೆಸೇನಾ ಪಡೆಗಳನ್ನು ನಿಯೋಜಿಸಬಹುದೆಂಬ ಭಯವಿತ್ತು. ಅದರೆ ಅದು ಈಗ ಮಾಯವಾಗಿದೆ. ರೈತ ಹೋರಾಟದ ಗೆಲುವಿಗಾಗಿ ಬಹಳಷ್ಟು ರೈತರು ಪ್ರಾಣತೆತ್ತಿದ್ದಾರೆ’ ಎಂದು ಹೇಳಿದರು.

‘ನಾವು ನಮ್ಮ ಕರ್ತವ್ಯವನ್ನು ಮಾಡಿದ್ದೇವೆ. ನಮ್ಮ ಭೂಮಿ ಮತ್ತು ಹಕ್ಕುಗಳ ಹೋರಾಟ ಈ ಎಲ್ಲಾ ಕಷ್ಟಗಳಿಗಿಂತ ದೊಡ್ಡದಾಗಿದೆ. ನಾನು ಇನ್ನೂ ನನ್ನ ಸಾಮಾನುಗಳನ್ನು ಪ್ಯಾಕ್ ಮಾಡಿಲ್ಲ. ನಾವು ಶನಿವಾರದಂದು ಲಂಗರ್ನಲ್ಲಿ ಕೊನೆಯ ಬಾರಿಗೆ ಎಲ್ಲರಿಗೂ ಸೇವೆ ಸಲ್ಲಿಸಿದ ನಂತರ ಹೊರಡುತ್ತೇವೆ’ ಎಂದು ಕೌರ್ ಹೇಳಿದರು.

ನವೆಂಬರ್‌ 19ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ್ದರು. ಇತ್ತೀಚೆಗಷ್ಟೆ ಸಂಸತ್ತಿನಲ್ಲಿಯೂ ಕೃಷಿ ಕಾನೂನುಗಳ ರದ್ದತಿ ಮಸೂದೆಗೆ ಅಂಗೀಕಾರ ದೊರೆತಿತ್ತು. ಇದರ ನಂತರವೂ ಪ್ರತಿಭಟನೆ ಮುಂದುವರೆಸಿದ್ದ ರೈತರು ಕನಿಷ್ಠ ಬೆಂಬಲ ಬೆಲೆ ಕಾನೂನುಬದ್ಧ ಗೊಳಿಸಬೇಕು, ರೈತರ ಮೇಲಿನ ಪ್ರಕರಣಗಳನ್ನು ಹಿಂಪಡೆಯಬೇಕು ಎಂಬುದನ್ನು ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸುವವರೆಗೂ ಪ್ರತಿಭಟನೆ ಮುಂದುವರೆಸುವುದಾಗಿ ತಿಳಿಸಿದ್ದರು. ಗುರುವಾರ ಕೇಂದ್ರ ಸರ್ಕಾರವು ರೈತರ ಇತರ ಬೇಡಿಕೆಗಳನ್ನು ಈಡೇರಿಸುವುದಾಗಿ ಲಿಖಿತ ಭರವಸೆ ನೀಡಿದ್ದು, ಸಂಯುಕ್ತ ಕಿಸಾನ್ ಮೋರ್ಚಾವು ರೈತ ಹೋರಾಟವನ್ನು ಹಿಂಪಡೆಯುವುದಾಗಿ ನಿನ್ನೆ ನಿರ್ಧರಿಸಿದೆ.


ಇದನ್ನೂ ಓದಿ: ಹರಿಯಾಣದ ಹಳ್ಳಿಗಳಿಗೆ ತೆರಳಿ ಧನ್ಯವಾದ ತಿಳಿಸುತ್ತಿರುವ ಪಂಜಾಬ್ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...