Homeಮುಖಪುಟದೆಹಲಿ ಗಡಿ ಬಿಟ್ಟು ತೆರಳಲು ಮನಸ್ಸಾಗುತ್ತಿಲ್ಲ: ರೈತರ ಭಾವನಾತ್ಮಕ ಮಾತುಗಳು

ದೆಹಲಿ ಗಡಿ ಬಿಟ್ಟು ತೆರಳಲು ಮನಸ್ಸಾಗುತ್ತಿಲ್ಲ: ರೈತರ ಭಾವನಾತ್ಮಕ ಮಾತುಗಳು

- Advertisement -
- Advertisement -

ರೈತ ಹೋರಾಟಕ್ಕೆ ಜಯವಾಗಲಿ, ರೈತರ ಐಕ್ಯತೆ ಚಿರಾಯುವಾಗಲಿ ಎಂದು ಮೊಳಗುತ್ತಿರುವ ಘೋಷಣೆಗಳು, ಸಿಹಿ ಹಂಚಿ ಸಂಭ್ರಮಿಸುತ್ತಿರುವ ರೈತರು, ಒಬ್ಬರನ್ನೊಬ್ಬರ ಆಲಂಗಿಸುತ್ತಾ ಅಭಿನಂದಿಸುತ್ತಿರುವ ಚಿತ್ರಗಳು….. ಇದು ದೆಹಲಿ ಗಡಿಗಳಲ್ಲಿ ಇತ್ತೀಚೆಗೆ ಕಾಣಬರುತ್ತಿರುವ ದೃಶ್ಯಗಳು

ಕಳೆದ ಒಂದು ವರ್ಷದಿಂದ ದೆಹಲಿ ಗಡಿಗಳಲ್ಲಿ ನಡೆಯುತ್ತಿದ್ದ ರೈತ ಹೋರಾಟಕ್ಕೆ ಗುರುವಾರ ತೆರೆ ಬಿದ್ದಿದೆ. ಜನರು ತಮ್ಮ ಹಳ್ಳಿಗಳತ್ತಾ ಸಾಗಲು, ಟೆಂಟ್‌ಗಳನ್ನು ಬಿಚ್ಚುತ್ತಿದ್ದಾರೆ. ಸದಾ ಜನರಿಂದ ಗಿಜುಗುಡುತ್ತಿದ್ದ ರಸ್ತೆಗಳು ಬರಿದಾಗುತ್ತಿವೆ, ಹಳ್ಳಿಗಳಾಗಿ ಬದಲಾಗಿದ್ದ ದೆಹಲಿ ಗಡಿಗಳು, ಪುನಃ ವಾಹನ ಸಂಚಾರಕ್ಕೆ ಮುಕ್ತವಾಗಿವೆ.

ಎಂಎಸ್‌ಪಿ ಸೇರಿದಂತೆ ರೈತರ ಬೇಡಿಕೆಗಳನ್ನು ಈಡೇರಿಸುವುದಾಗಿ ಕೇಂದ್ರ ಸರ್ಕಾರ ಲಿಖಿತ ಭರವಸೆ ನೀಡಿದ್ದು, ಸಂಯುಕ್ತ ಕಿಸಾನ್‌ ಮೋರ್ಚಾದ ರೈತ ನಾಯಕರು  ಪ್ರಸ್ತುತ ರೈತ ಹೋರಾಟವನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿದ್ದಾರೆ. ಕೇಂದ್ರ ಸರ್ಕಾರ ರೈತರ ಎಲ್ಲಾ ಹಕ್ಕೊತ್ತಾಯಗಳನ್ನು ಒಪ್ಪಿಕೊಂಡ ನಂತರ ಪ್ರತಿಭಟನಾಕಾರರು ಟ್ಯ್ರಾಕ್ಟರ್‌ಗಳ ಮೇಲೆ ಹತ್ತಿ ನೃತ್ಯ ಮಾಡುವುದರೊಂದಿಗೆ ಸಂಭ್ರಮ ಆಚರಿಸುತ್ತಿದ್ದಾರೆ. 

ದೆಹಲಿ ಗಡಿಗಳಲ್ಲಿ ಹೋರಾಟ ಆರಂಭದಿಂದಲೂ ಭಾಗವಹಿಸಿರುವ ಪಂಜಾಬ್‌ನ ರೋಪರ್‌ ಚಾರಿಯನ್‌ ಗ್ರಾಮದ ರವೀಂದರ್‌ ಸಿಂಗ್, ‘ಇದು ರೈತರ ಪರಿಶ್ರಮಕ್ಕೆ ಸಂದ ಗೆಲುವು. ನಮ್ಮ ಚಳವಳಿ  ಮುಗಿದಿಲ್ಲ. ಹೋರಾಟ ಮುಂದುವರಿಯಲಿದೆ. ನನಗೆ ಹಿಂತಿರುಗಬೇಕು ಎನಿಸುತ್ತಿಲ್ಲ. ನನಗೆ ಇಲ್ಲಿ ಅತೀವ ಪ್ರೀತಿ ಸಿಕ್ಕಿದೆ’ ಎನ್ನುತ ರೈತ ಹೋರಾಟವನ್ನು ಸ್ಮರಿಸಿಕೊಂಡಿದ್ದಾರೆ.

2020ರ ನವೆಂಬರ್ 26ರಂದು ದೆಹಲಿ ಚಲೋದಲ್ಲಿ ನಾನು ಭಾಗವಹಿಸಿದ್ದೆ ಎನ್ನುವ ಅವರು, ‘ನಾವು ಪಂಜಾಬ್ನಿಂದ ಬರುವಾಗ ಲಾಠಿಚಾರ್ಜ್ನಲ್ಲಿ ನಾನು ಗಾಯಗೊಂಡಿದ್ದೆ. ನಾವು ನಮ್ಮ ಟ್ರಾಲಿಗಳಲ್ಲಿ ಹಲವಾರು ಬ್ಯಾರಿಕೇಡ್ಗಳನ್ನು ದಾಟುವಲ್ಲಿ ಯಶಸ್ವಿಯಾಗಿದ್ದೇವೆ, ಆದರೆ ಪೊಲೀಸರು ನಮ್ಮನ್ನು ಬುರಾರಿ ಮೈದಾನಕ್ಕೆ ಪ್ರವೇಶಿಸುವಂತೆ ಒತ್ತಾಯಿಸಿದರು. ಅದರ ನಂತರ ಬುರಾರಿಯಲ್ಲಿ ಎರಡು ತಿಂಗಳು ಮುತ್ತಿಗೆ ನಡೆಯಿತು. ಪೊಲೀಸರು ನನ್ನ ಟ್ರ್ಯಾಕ್ಟರ್ ವಶಪಡಿಸಿಕೊಂಡಿದ್ದರು’ಎಂದರು.

ಗುರುವಾರ ಬೆಳಿಗ್ಗೆ ತನ್ನ ತಾತ್ಕಾಲಿಕ ಟೆಂಟ್‌ನಿಂದ ಟಾರ್ಪಾಲಿನ್ ಮತ್ತು ಥರ್ಮಾಕೋಲ್ ಶೀಟ್‌ಗಳನ್ನು  ಕಿತ್ತುಹಾಕಿದ ಜಲಂಧರ್‌ನ ಶಾದಿಪುರದ 25 ವರ್ಷದ ದಿಲ್ಬರ್ ಸಿಂಗ್, ‘ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ದಿನವೇ ವಿಜಯವನ್ನು ಸಾಧಿಸಲಾಯಿತು. ಸರ್ಕಾರವು ರೈತರ ಉಳಿದ ಹಕ್ಕೊತ್ತಾಯಗಳನ್ನು ಔಪಚಾರಿಕವಾಗಿ ಸ್ವೀಕರಿಸಬೇಕು ಎಂದು ನಾವು ಕಾಯುತ್ತಿದ್ದೆವು. ಅಲ್ಲಿಂದೀಚೆಗೆ ಸಂಭ್ರಮದ ವಾತಾವರಣವಿದೆ’ ಎಂದರು.

ಕಿಸಾನ್ ಯೂನಿಯನ್‌ನ ಸದಸ್ಯರು ಮತ್ತು ಫೆಬ್ರವರಿಯಿಂದ ಸಿಂಘುವಿನಲ್ಲಿ ಸ್ಥಾಪಿಸಲಾದ ಸಮುದಾಯ ಅಡುಗೆಮನೆಯಲ್ಲಿ ಸ್ವಯಂಸೇವಕರಾಗಿರುವ ಪಟಿಯಾಲಾದ ಖಾಂಗ್ ಗ್ರಾಮದ 70 ವರ್ಷದ ಜಸ್ವೀರ್‌ ಕೌರ್‌ ಕೀರ್ತಿ ಕಳೆದ ಒಂದು ವರ್ಷದಿಂದ ಸಿಂಘು ಗಡಿಯಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ನಿನ್ನೆ ಒಕ್ಕೂಟದ ಸದಸ್ಯರೊಬ್ಬರು ಆಂದೋಲನವನ್ನು ಅಮಾನತುಗೊಳಿಸುವ ಸಂಯುಕ್ತ ಕಿಸಾನ್‌ ಮೋರ್ಚಾದನ ನಿರ್ಧಾರವನ್ನು ತಿಳಿಸಿದಾಗ ಅವರು ‘ಲಂಗರ್ ಸೇವೆ’ ಮಾಡುತ್ತಿದ್ದರು.

ರೈತ ಹೋರಾಟದ ಬಗ್ಗೆ ಮಾತನಾಡಿದ ಅವರು, ‘ನನಗೆ ಹಿಂತಿರುಗಬೇಕು ಎನಿಸುತ್ತಿಲ್ಲ. ಕಳೆದ ವರ್ಷ ನಮ್ಮ ಗ್ರಾಮದ ಜನರೊಂದಿಗೆ ಇಲ್ಲಿಗೆ ಬಂದಿದ್ದೆ. ಆಂದೋಲನ ಇಷ್ಟು ದಿನ ಇರುತ್ತದೆ ಎಂದು ನಾನು ಊಹಿಸಿರಲಿಲ್ಲ. ಆರಂಭದಲ್ಲಿ, ವಿಪರೀತ ಹವಾಮಾನ ವೈಪರಿತ್ಯದಿಂದಾಗಿ ರಸ್ತೆಗಳಲ್ಲಿ ಕುಳಿತುಕೊಳ್ಳಲು, ಆರಾಮದಾಯಕ ಜೀವನದಿಂದ ಈ ಪರಿಸ್ಥಿತಿಗೆ ಹೊಂದಿಕೊಳ್ಳುವುದು ತುಂಬಾ ಕಷ್ಟಕರವಾಗಿತ್ತು. ಜನವರಿ 26 ರ ಘಟನೆಯ ಸಂದರ್ಭದಲ್ಲಿ ಅರೆಸೇನಾ ಪಡೆಗಳನ್ನು ನಿಯೋಜಿಸಬಹುದೆಂಬ ಭಯವಿತ್ತು. ಅದರೆ ಅದು ಈಗ ಮಾಯವಾಗಿದೆ. ರೈತ ಹೋರಾಟದ ಗೆಲುವಿಗಾಗಿ ಬಹಳಷ್ಟು ರೈತರು ಪ್ರಾಣತೆತ್ತಿದ್ದಾರೆ’ ಎಂದು ಹೇಳಿದರು.

‘ನಾವು ನಮ್ಮ ಕರ್ತವ್ಯವನ್ನು ಮಾಡಿದ್ದೇವೆ. ನಮ್ಮ ಭೂಮಿ ಮತ್ತು ಹಕ್ಕುಗಳ ಹೋರಾಟ ಈ ಎಲ್ಲಾ ಕಷ್ಟಗಳಿಗಿಂತ ದೊಡ್ಡದಾಗಿದೆ. ನಾನು ಇನ್ನೂ ನನ್ನ ಸಾಮಾನುಗಳನ್ನು ಪ್ಯಾಕ್ ಮಾಡಿಲ್ಲ. ನಾವು ಶನಿವಾರದಂದು ಲಂಗರ್ನಲ್ಲಿ ಕೊನೆಯ ಬಾರಿಗೆ ಎಲ್ಲರಿಗೂ ಸೇವೆ ಸಲ್ಲಿಸಿದ ನಂತರ ಹೊರಡುತ್ತೇವೆ’ ಎಂದು ಕೌರ್ ಹೇಳಿದರು.

ನವೆಂಬರ್‌ 19ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ್ದರು. ಇತ್ತೀಚೆಗಷ್ಟೆ ಸಂಸತ್ತಿನಲ್ಲಿಯೂ ಕೃಷಿ ಕಾನೂನುಗಳ ರದ್ದತಿ ಮಸೂದೆಗೆ ಅಂಗೀಕಾರ ದೊರೆತಿತ್ತು. ಇದರ ನಂತರವೂ ಪ್ರತಿಭಟನೆ ಮುಂದುವರೆಸಿದ್ದ ರೈತರು ಕನಿಷ್ಠ ಬೆಂಬಲ ಬೆಲೆ ಕಾನೂನುಬದ್ಧ ಗೊಳಿಸಬೇಕು, ರೈತರ ಮೇಲಿನ ಪ್ರಕರಣಗಳನ್ನು ಹಿಂಪಡೆಯಬೇಕು ಎಂಬುದನ್ನು ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸುವವರೆಗೂ ಪ್ರತಿಭಟನೆ ಮುಂದುವರೆಸುವುದಾಗಿ ತಿಳಿಸಿದ್ದರು. ಗುರುವಾರ ಕೇಂದ್ರ ಸರ್ಕಾರವು ರೈತರ ಇತರ ಬೇಡಿಕೆಗಳನ್ನು ಈಡೇರಿಸುವುದಾಗಿ ಲಿಖಿತ ಭರವಸೆ ನೀಡಿದ್ದು, ಸಂಯುಕ್ತ ಕಿಸಾನ್ ಮೋರ್ಚಾವು ರೈತ ಹೋರಾಟವನ್ನು ಹಿಂಪಡೆಯುವುದಾಗಿ ನಿನ್ನೆ ನಿರ್ಧರಿಸಿದೆ.


ಇದನ್ನೂ ಓದಿ: ಹರಿಯಾಣದ ಹಳ್ಳಿಗಳಿಗೆ ತೆರಳಿ ಧನ್ಯವಾದ ತಿಳಿಸುತ್ತಿರುವ ಪಂಜಾಬ್ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...