Homeಮುಖಪುಟದೆಹಲಿ ಗಡಿ ಬಿಟ್ಟು ತೆರಳಲು ಮನಸ್ಸಾಗುತ್ತಿಲ್ಲ: ರೈತರ ಭಾವನಾತ್ಮಕ ಮಾತುಗಳು

ದೆಹಲಿ ಗಡಿ ಬಿಟ್ಟು ತೆರಳಲು ಮನಸ್ಸಾಗುತ್ತಿಲ್ಲ: ರೈತರ ಭಾವನಾತ್ಮಕ ಮಾತುಗಳು

- Advertisement -
- Advertisement -

ರೈತ ಹೋರಾಟಕ್ಕೆ ಜಯವಾಗಲಿ, ರೈತರ ಐಕ್ಯತೆ ಚಿರಾಯುವಾಗಲಿ ಎಂದು ಮೊಳಗುತ್ತಿರುವ ಘೋಷಣೆಗಳು, ಸಿಹಿ ಹಂಚಿ ಸಂಭ್ರಮಿಸುತ್ತಿರುವ ರೈತರು, ಒಬ್ಬರನ್ನೊಬ್ಬರ ಆಲಂಗಿಸುತ್ತಾ ಅಭಿನಂದಿಸುತ್ತಿರುವ ಚಿತ್ರಗಳು….. ಇದು ದೆಹಲಿ ಗಡಿಗಳಲ್ಲಿ ಇತ್ತೀಚೆಗೆ ಕಾಣಬರುತ್ತಿರುವ ದೃಶ್ಯಗಳು

ಕಳೆದ ಒಂದು ವರ್ಷದಿಂದ ದೆಹಲಿ ಗಡಿಗಳಲ್ಲಿ ನಡೆಯುತ್ತಿದ್ದ ರೈತ ಹೋರಾಟಕ್ಕೆ ಗುರುವಾರ ತೆರೆ ಬಿದ್ದಿದೆ. ಜನರು ತಮ್ಮ ಹಳ್ಳಿಗಳತ್ತಾ ಸಾಗಲು, ಟೆಂಟ್‌ಗಳನ್ನು ಬಿಚ್ಚುತ್ತಿದ್ದಾರೆ. ಸದಾ ಜನರಿಂದ ಗಿಜುಗುಡುತ್ತಿದ್ದ ರಸ್ತೆಗಳು ಬರಿದಾಗುತ್ತಿವೆ, ಹಳ್ಳಿಗಳಾಗಿ ಬದಲಾಗಿದ್ದ ದೆಹಲಿ ಗಡಿಗಳು, ಪುನಃ ವಾಹನ ಸಂಚಾರಕ್ಕೆ ಮುಕ್ತವಾಗಿವೆ.

ಎಂಎಸ್‌ಪಿ ಸೇರಿದಂತೆ ರೈತರ ಬೇಡಿಕೆಗಳನ್ನು ಈಡೇರಿಸುವುದಾಗಿ ಕೇಂದ್ರ ಸರ್ಕಾರ ಲಿಖಿತ ಭರವಸೆ ನೀಡಿದ್ದು, ಸಂಯುಕ್ತ ಕಿಸಾನ್‌ ಮೋರ್ಚಾದ ರೈತ ನಾಯಕರು  ಪ್ರಸ್ತುತ ರೈತ ಹೋರಾಟವನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿದ್ದಾರೆ. ಕೇಂದ್ರ ಸರ್ಕಾರ ರೈತರ ಎಲ್ಲಾ ಹಕ್ಕೊತ್ತಾಯಗಳನ್ನು ಒಪ್ಪಿಕೊಂಡ ನಂತರ ಪ್ರತಿಭಟನಾಕಾರರು ಟ್ಯ್ರಾಕ್ಟರ್‌ಗಳ ಮೇಲೆ ಹತ್ತಿ ನೃತ್ಯ ಮಾಡುವುದರೊಂದಿಗೆ ಸಂಭ್ರಮ ಆಚರಿಸುತ್ತಿದ್ದಾರೆ. 

ದೆಹಲಿ ಗಡಿಗಳಲ್ಲಿ ಹೋರಾಟ ಆರಂಭದಿಂದಲೂ ಭಾಗವಹಿಸಿರುವ ಪಂಜಾಬ್‌ನ ರೋಪರ್‌ ಚಾರಿಯನ್‌ ಗ್ರಾಮದ ರವೀಂದರ್‌ ಸಿಂಗ್, ‘ಇದು ರೈತರ ಪರಿಶ್ರಮಕ್ಕೆ ಸಂದ ಗೆಲುವು. ನಮ್ಮ ಚಳವಳಿ  ಮುಗಿದಿಲ್ಲ. ಹೋರಾಟ ಮುಂದುವರಿಯಲಿದೆ. ನನಗೆ ಹಿಂತಿರುಗಬೇಕು ಎನಿಸುತ್ತಿಲ್ಲ. ನನಗೆ ಇಲ್ಲಿ ಅತೀವ ಪ್ರೀತಿ ಸಿಕ್ಕಿದೆ’ ಎನ್ನುತ ರೈತ ಹೋರಾಟವನ್ನು ಸ್ಮರಿಸಿಕೊಂಡಿದ್ದಾರೆ.

2020ರ ನವೆಂಬರ್ 26ರಂದು ದೆಹಲಿ ಚಲೋದಲ್ಲಿ ನಾನು ಭಾಗವಹಿಸಿದ್ದೆ ಎನ್ನುವ ಅವರು, ‘ನಾವು ಪಂಜಾಬ್ನಿಂದ ಬರುವಾಗ ಲಾಠಿಚಾರ್ಜ್ನಲ್ಲಿ ನಾನು ಗಾಯಗೊಂಡಿದ್ದೆ. ನಾವು ನಮ್ಮ ಟ್ರಾಲಿಗಳಲ್ಲಿ ಹಲವಾರು ಬ್ಯಾರಿಕೇಡ್ಗಳನ್ನು ದಾಟುವಲ್ಲಿ ಯಶಸ್ವಿಯಾಗಿದ್ದೇವೆ, ಆದರೆ ಪೊಲೀಸರು ನಮ್ಮನ್ನು ಬುರಾರಿ ಮೈದಾನಕ್ಕೆ ಪ್ರವೇಶಿಸುವಂತೆ ಒತ್ತಾಯಿಸಿದರು. ಅದರ ನಂತರ ಬುರಾರಿಯಲ್ಲಿ ಎರಡು ತಿಂಗಳು ಮುತ್ತಿಗೆ ನಡೆಯಿತು. ಪೊಲೀಸರು ನನ್ನ ಟ್ರ್ಯಾಕ್ಟರ್ ವಶಪಡಿಸಿಕೊಂಡಿದ್ದರು’ಎಂದರು.

ಗುರುವಾರ ಬೆಳಿಗ್ಗೆ ತನ್ನ ತಾತ್ಕಾಲಿಕ ಟೆಂಟ್‌ನಿಂದ ಟಾರ್ಪಾಲಿನ್ ಮತ್ತು ಥರ್ಮಾಕೋಲ್ ಶೀಟ್‌ಗಳನ್ನು  ಕಿತ್ತುಹಾಕಿದ ಜಲಂಧರ್‌ನ ಶಾದಿಪುರದ 25 ವರ್ಷದ ದಿಲ್ಬರ್ ಸಿಂಗ್, ‘ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ದಿನವೇ ವಿಜಯವನ್ನು ಸಾಧಿಸಲಾಯಿತು. ಸರ್ಕಾರವು ರೈತರ ಉಳಿದ ಹಕ್ಕೊತ್ತಾಯಗಳನ್ನು ಔಪಚಾರಿಕವಾಗಿ ಸ್ವೀಕರಿಸಬೇಕು ಎಂದು ನಾವು ಕಾಯುತ್ತಿದ್ದೆವು. ಅಲ್ಲಿಂದೀಚೆಗೆ ಸಂಭ್ರಮದ ವಾತಾವರಣವಿದೆ’ ಎಂದರು.

ಕಿಸಾನ್ ಯೂನಿಯನ್‌ನ ಸದಸ್ಯರು ಮತ್ತು ಫೆಬ್ರವರಿಯಿಂದ ಸಿಂಘುವಿನಲ್ಲಿ ಸ್ಥಾಪಿಸಲಾದ ಸಮುದಾಯ ಅಡುಗೆಮನೆಯಲ್ಲಿ ಸ್ವಯಂಸೇವಕರಾಗಿರುವ ಪಟಿಯಾಲಾದ ಖಾಂಗ್ ಗ್ರಾಮದ 70 ವರ್ಷದ ಜಸ್ವೀರ್‌ ಕೌರ್‌ ಕೀರ್ತಿ ಕಳೆದ ಒಂದು ವರ್ಷದಿಂದ ಸಿಂಘು ಗಡಿಯಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ನಿನ್ನೆ ಒಕ್ಕೂಟದ ಸದಸ್ಯರೊಬ್ಬರು ಆಂದೋಲನವನ್ನು ಅಮಾನತುಗೊಳಿಸುವ ಸಂಯುಕ್ತ ಕಿಸಾನ್‌ ಮೋರ್ಚಾದನ ನಿರ್ಧಾರವನ್ನು ತಿಳಿಸಿದಾಗ ಅವರು ‘ಲಂಗರ್ ಸೇವೆ’ ಮಾಡುತ್ತಿದ್ದರು.

ರೈತ ಹೋರಾಟದ ಬಗ್ಗೆ ಮಾತನಾಡಿದ ಅವರು, ‘ನನಗೆ ಹಿಂತಿರುಗಬೇಕು ಎನಿಸುತ್ತಿಲ್ಲ. ಕಳೆದ ವರ್ಷ ನಮ್ಮ ಗ್ರಾಮದ ಜನರೊಂದಿಗೆ ಇಲ್ಲಿಗೆ ಬಂದಿದ್ದೆ. ಆಂದೋಲನ ಇಷ್ಟು ದಿನ ಇರುತ್ತದೆ ಎಂದು ನಾನು ಊಹಿಸಿರಲಿಲ್ಲ. ಆರಂಭದಲ್ಲಿ, ವಿಪರೀತ ಹವಾಮಾನ ವೈಪರಿತ್ಯದಿಂದಾಗಿ ರಸ್ತೆಗಳಲ್ಲಿ ಕುಳಿತುಕೊಳ್ಳಲು, ಆರಾಮದಾಯಕ ಜೀವನದಿಂದ ಈ ಪರಿಸ್ಥಿತಿಗೆ ಹೊಂದಿಕೊಳ್ಳುವುದು ತುಂಬಾ ಕಷ್ಟಕರವಾಗಿತ್ತು. ಜನವರಿ 26 ರ ಘಟನೆಯ ಸಂದರ್ಭದಲ್ಲಿ ಅರೆಸೇನಾ ಪಡೆಗಳನ್ನು ನಿಯೋಜಿಸಬಹುದೆಂಬ ಭಯವಿತ್ತು. ಅದರೆ ಅದು ಈಗ ಮಾಯವಾಗಿದೆ. ರೈತ ಹೋರಾಟದ ಗೆಲುವಿಗಾಗಿ ಬಹಳಷ್ಟು ರೈತರು ಪ್ರಾಣತೆತ್ತಿದ್ದಾರೆ’ ಎಂದು ಹೇಳಿದರು.

‘ನಾವು ನಮ್ಮ ಕರ್ತವ್ಯವನ್ನು ಮಾಡಿದ್ದೇವೆ. ನಮ್ಮ ಭೂಮಿ ಮತ್ತು ಹಕ್ಕುಗಳ ಹೋರಾಟ ಈ ಎಲ್ಲಾ ಕಷ್ಟಗಳಿಗಿಂತ ದೊಡ್ಡದಾಗಿದೆ. ನಾನು ಇನ್ನೂ ನನ್ನ ಸಾಮಾನುಗಳನ್ನು ಪ್ಯಾಕ್ ಮಾಡಿಲ್ಲ. ನಾವು ಶನಿವಾರದಂದು ಲಂಗರ್ನಲ್ಲಿ ಕೊನೆಯ ಬಾರಿಗೆ ಎಲ್ಲರಿಗೂ ಸೇವೆ ಸಲ್ಲಿಸಿದ ನಂತರ ಹೊರಡುತ್ತೇವೆ’ ಎಂದು ಕೌರ್ ಹೇಳಿದರು.

ನವೆಂಬರ್‌ 19ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ್ದರು. ಇತ್ತೀಚೆಗಷ್ಟೆ ಸಂಸತ್ತಿನಲ್ಲಿಯೂ ಕೃಷಿ ಕಾನೂನುಗಳ ರದ್ದತಿ ಮಸೂದೆಗೆ ಅಂಗೀಕಾರ ದೊರೆತಿತ್ತು. ಇದರ ನಂತರವೂ ಪ್ರತಿಭಟನೆ ಮುಂದುವರೆಸಿದ್ದ ರೈತರು ಕನಿಷ್ಠ ಬೆಂಬಲ ಬೆಲೆ ಕಾನೂನುಬದ್ಧ ಗೊಳಿಸಬೇಕು, ರೈತರ ಮೇಲಿನ ಪ್ರಕರಣಗಳನ್ನು ಹಿಂಪಡೆಯಬೇಕು ಎಂಬುದನ್ನು ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸುವವರೆಗೂ ಪ್ರತಿಭಟನೆ ಮುಂದುವರೆಸುವುದಾಗಿ ತಿಳಿಸಿದ್ದರು. ಗುರುವಾರ ಕೇಂದ್ರ ಸರ್ಕಾರವು ರೈತರ ಇತರ ಬೇಡಿಕೆಗಳನ್ನು ಈಡೇರಿಸುವುದಾಗಿ ಲಿಖಿತ ಭರವಸೆ ನೀಡಿದ್ದು, ಸಂಯುಕ್ತ ಕಿಸಾನ್ ಮೋರ್ಚಾವು ರೈತ ಹೋರಾಟವನ್ನು ಹಿಂಪಡೆಯುವುದಾಗಿ ನಿನ್ನೆ ನಿರ್ಧರಿಸಿದೆ.


ಇದನ್ನೂ ಓದಿ: ಹರಿಯಾಣದ ಹಳ್ಳಿಗಳಿಗೆ ತೆರಳಿ ಧನ್ಯವಾದ ತಿಳಿಸುತ್ತಿರುವ ಪಂಜಾಬ್ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...