Homeಮುಖಪುಟದೆಹಲಿ ಗಡಿ ಬಿಟ್ಟು ತೆರಳಲು ಮನಸ್ಸಾಗುತ್ತಿಲ್ಲ: ರೈತರ ಭಾವನಾತ್ಮಕ ಮಾತುಗಳು

ದೆಹಲಿ ಗಡಿ ಬಿಟ್ಟು ತೆರಳಲು ಮನಸ್ಸಾಗುತ್ತಿಲ್ಲ: ರೈತರ ಭಾವನಾತ್ಮಕ ಮಾತುಗಳು

- Advertisement -
- Advertisement -

ರೈತ ಹೋರಾಟಕ್ಕೆ ಜಯವಾಗಲಿ, ರೈತರ ಐಕ್ಯತೆ ಚಿರಾಯುವಾಗಲಿ ಎಂದು ಮೊಳಗುತ್ತಿರುವ ಘೋಷಣೆಗಳು, ಸಿಹಿ ಹಂಚಿ ಸಂಭ್ರಮಿಸುತ್ತಿರುವ ರೈತರು, ಒಬ್ಬರನ್ನೊಬ್ಬರ ಆಲಂಗಿಸುತ್ತಾ ಅಭಿನಂದಿಸುತ್ತಿರುವ ಚಿತ್ರಗಳು….. ಇದು ದೆಹಲಿ ಗಡಿಗಳಲ್ಲಿ ಇತ್ತೀಚೆಗೆ ಕಾಣಬರುತ್ತಿರುವ ದೃಶ್ಯಗಳು

ಕಳೆದ ಒಂದು ವರ್ಷದಿಂದ ದೆಹಲಿ ಗಡಿಗಳಲ್ಲಿ ನಡೆಯುತ್ತಿದ್ದ ರೈತ ಹೋರಾಟಕ್ಕೆ ಗುರುವಾರ ತೆರೆ ಬಿದ್ದಿದೆ. ಜನರು ತಮ್ಮ ಹಳ್ಳಿಗಳತ್ತಾ ಸಾಗಲು, ಟೆಂಟ್‌ಗಳನ್ನು ಬಿಚ್ಚುತ್ತಿದ್ದಾರೆ. ಸದಾ ಜನರಿಂದ ಗಿಜುಗುಡುತ್ತಿದ್ದ ರಸ್ತೆಗಳು ಬರಿದಾಗುತ್ತಿವೆ, ಹಳ್ಳಿಗಳಾಗಿ ಬದಲಾಗಿದ್ದ ದೆಹಲಿ ಗಡಿಗಳು, ಪುನಃ ವಾಹನ ಸಂಚಾರಕ್ಕೆ ಮುಕ್ತವಾಗಿವೆ.

ಎಂಎಸ್‌ಪಿ ಸೇರಿದಂತೆ ರೈತರ ಬೇಡಿಕೆಗಳನ್ನು ಈಡೇರಿಸುವುದಾಗಿ ಕೇಂದ್ರ ಸರ್ಕಾರ ಲಿಖಿತ ಭರವಸೆ ನೀಡಿದ್ದು, ಸಂಯುಕ್ತ ಕಿಸಾನ್‌ ಮೋರ್ಚಾದ ರೈತ ನಾಯಕರು  ಪ್ರಸ್ತುತ ರೈತ ಹೋರಾಟವನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿದ್ದಾರೆ. ಕೇಂದ್ರ ಸರ್ಕಾರ ರೈತರ ಎಲ್ಲಾ ಹಕ್ಕೊತ್ತಾಯಗಳನ್ನು ಒಪ್ಪಿಕೊಂಡ ನಂತರ ಪ್ರತಿಭಟನಾಕಾರರು ಟ್ಯ್ರಾಕ್ಟರ್‌ಗಳ ಮೇಲೆ ಹತ್ತಿ ನೃತ್ಯ ಮಾಡುವುದರೊಂದಿಗೆ ಸಂಭ್ರಮ ಆಚರಿಸುತ್ತಿದ್ದಾರೆ. 

ದೆಹಲಿ ಗಡಿಗಳಲ್ಲಿ ಹೋರಾಟ ಆರಂಭದಿಂದಲೂ ಭಾಗವಹಿಸಿರುವ ಪಂಜಾಬ್‌ನ ರೋಪರ್‌ ಚಾರಿಯನ್‌ ಗ್ರಾಮದ ರವೀಂದರ್‌ ಸಿಂಗ್, ‘ಇದು ರೈತರ ಪರಿಶ್ರಮಕ್ಕೆ ಸಂದ ಗೆಲುವು. ನಮ್ಮ ಚಳವಳಿ  ಮುಗಿದಿಲ್ಲ. ಹೋರಾಟ ಮುಂದುವರಿಯಲಿದೆ. ನನಗೆ ಹಿಂತಿರುಗಬೇಕು ಎನಿಸುತ್ತಿಲ್ಲ. ನನಗೆ ಇಲ್ಲಿ ಅತೀವ ಪ್ರೀತಿ ಸಿಕ್ಕಿದೆ’ ಎನ್ನುತ ರೈತ ಹೋರಾಟವನ್ನು ಸ್ಮರಿಸಿಕೊಂಡಿದ್ದಾರೆ.

2020ರ ನವೆಂಬರ್ 26ರಂದು ದೆಹಲಿ ಚಲೋದಲ್ಲಿ ನಾನು ಭಾಗವಹಿಸಿದ್ದೆ ಎನ್ನುವ ಅವರು, ‘ನಾವು ಪಂಜಾಬ್ನಿಂದ ಬರುವಾಗ ಲಾಠಿಚಾರ್ಜ್ನಲ್ಲಿ ನಾನು ಗಾಯಗೊಂಡಿದ್ದೆ. ನಾವು ನಮ್ಮ ಟ್ರಾಲಿಗಳಲ್ಲಿ ಹಲವಾರು ಬ್ಯಾರಿಕೇಡ್ಗಳನ್ನು ದಾಟುವಲ್ಲಿ ಯಶಸ್ವಿಯಾಗಿದ್ದೇವೆ, ಆದರೆ ಪೊಲೀಸರು ನಮ್ಮನ್ನು ಬುರಾರಿ ಮೈದಾನಕ್ಕೆ ಪ್ರವೇಶಿಸುವಂತೆ ಒತ್ತಾಯಿಸಿದರು. ಅದರ ನಂತರ ಬುರಾರಿಯಲ್ಲಿ ಎರಡು ತಿಂಗಳು ಮುತ್ತಿಗೆ ನಡೆಯಿತು. ಪೊಲೀಸರು ನನ್ನ ಟ್ರ್ಯಾಕ್ಟರ್ ವಶಪಡಿಸಿಕೊಂಡಿದ್ದರು’ಎಂದರು.

ಗುರುವಾರ ಬೆಳಿಗ್ಗೆ ತನ್ನ ತಾತ್ಕಾಲಿಕ ಟೆಂಟ್‌ನಿಂದ ಟಾರ್ಪಾಲಿನ್ ಮತ್ತು ಥರ್ಮಾಕೋಲ್ ಶೀಟ್‌ಗಳನ್ನು  ಕಿತ್ತುಹಾಕಿದ ಜಲಂಧರ್‌ನ ಶಾದಿಪುರದ 25 ವರ್ಷದ ದಿಲ್ಬರ್ ಸಿಂಗ್, ‘ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ದಿನವೇ ವಿಜಯವನ್ನು ಸಾಧಿಸಲಾಯಿತು. ಸರ್ಕಾರವು ರೈತರ ಉಳಿದ ಹಕ್ಕೊತ್ತಾಯಗಳನ್ನು ಔಪಚಾರಿಕವಾಗಿ ಸ್ವೀಕರಿಸಬೇಕು ಎಂದು ನಾವು ಕಾಯುತ್ತಿದ್ದೆವು. ಅಲ್ಲಿಂದೀಚೆಗೆ ಸಂಭ್ರಮದ ವಾತಾವರಣವಿದೆ’ ಎಂದರು.

ಕಿಸಾನ್ ಯೂನಿಯನ್‌ನ ಸದಸ್ಯರು ಮತ್ತು ಫೆಬ್ರವರಿಯಿಂದ ಸಿಂಘುವಿನಲ್ಲಿ ಸ್ಥಾಪಿಸಲಾದ ಸಮುದಾಯ ಅಡುಗೆಮನೆಯಲ್ಲಿ ಸ್ವಯಂಸೇವಕರಾಗಿರುವ ಪಟಿಯಾಲಾದ ಖಾಂಗ್ ಗ್ರಾಮದ 70 ವರ್ಷದ ಜಸ್ವೀರ್‌ ಕೌರ್‌ ಕೀರ್ತಿ ಕಳೆದ ಒಂದು ವರ್ಷದಿಂದ ಸಿಂಘು ಗಡಿಯಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ನಿನ್ನೆ ಒಕ್ಕೂಟದ ಸದಸ್ಯರೊಬ್ಬರು ಆಂದೋಲನವನ್ನು ಅಮಾನತುಗೊಳಿಸುವ ಸಂಯುಕ್ತ ಕಿಸಾನ್‌ ಮೋರ್ಚಾದನ ನಿರ್ಧಾರವನ್ನು ತಿಳಿಸಿದಾಗ ಅವರು ‘ಲಂಗರ್ ಸೇವೆ’ ಮಾಡುತ್ತಿದ್ದರು.

ರೈತ ಹೋರಾಟದ ಬಗ್ಗೆ ಮಾತನಾಡಿದ ಅವರು, ‘ನನಗೆ ಹಿಂತಿರುಗಬೇಕು ಎನಿಸುತ್ತಿಲ್ಲ. ಕಳೆದ ವರ್ಷ ನಮ್ಮ ಗ್ರಾಮದ ಜನರೊಂದಿಗೆ ಇಲ್ಲಿಗೆ ಬಂದಿದ್ದೆ. ಆಂದೋಲನ ಇಷ್ಟು ದಿನ ಇರುತ್ತದೆ ಎಂದು ನಾನು ಊಹಿಸಿರಲಿಲ್ಲ. ಆರಂಭದಲ್ಲಿ, ವಿಪರೀತ ಹವಾಮಾನ ವೈಪರಿತ್ಯದಿಂದಾಗಿ ರಸ್ತೆಗಳಲ್ಲಿ ಕುಳಿತುಕೊಳ್ಳಲು, ಆರಾಮದಾಯಕ ಜೀವನದಿಂದ ಈ ಪರಿಸ್ಥಿತಿಗೆ ಹೊಂದಿಕೊಳ್ಳುವುದು ತುಂಬಾ ಕಷ್ಟಕರವಾಗಿತ್ತು. ಜನವರಿ 26 ರ ಘಟನೆಯ ಸಂದರ್ಭದಲ್ಲಿ ಅರೆಸೇನಾ ಪಡೆಗಳನ್ನು ನಿಯೋಜಿಸಬಹುದೆಂಬ ಭಯವಿತ್ತು. ಅದರೆ ಅದು ಈಗ ಮಾಯವಾಗಿದೆ. ರೈತ ಹೋರಾಟದ ಗೆಲುವಿಗಾಗಿ ಬಹಳಷ್ಟು ರೈತರು ಪ್ರಾಣತೆತ್ತಿದ್ದಾರೆ’ ಎಂದು ಹೇಳಿದರು.

‘ನಾವು ನಮ್ಮ ಕರ್ತವ್ಯವನ್ನು ಮಾಡಿದ್ದೇವೆ. ನಮ್ಮ ಭೂಮಿ ಮತ್ತು ಹಕ್ಕುಗಳ ಹೋರಾಟ ಈ ಎಲ್ಲಾ ಕಷ್ಟಗಳಿಗಿಂತ ದೊಡ್ಡದಾಗಿದೆ. ನಾನು ಇನ್ನೂ ನನ್ನ ಸಾಮಾನುಗಳನ್ನು ಪ್ಯಾಕ್ ಮಾಡಿಲ್ಲ. ನಾವು ಶನಿವಾರದಂದು ಲಂಗರ್ನಲ್ಲಿ ಕೊನೆಯ ಬಾರಿಗೆ ಎಲ್ಲರಿಗೂ ಸೇವೆ ಸಲ್ಲಿಸಿದ ನಂತರ ಹೊರಡುತ್ತೇವೆ’ ಎಂದು ಕೌರ್ ಹೇಳಿದರು.

ನವೆಂಬರ್‌ 19ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ್ದರು. ಇತ್ತೀಚೆಗಷ್ಟೆ ಸಂಸತ್ತಿನಲ್ಲಿಯೂ ಕೃಷಿ ಕಾನೂನುಗಳ ರದ್ದತಿ ಮಸೂದೆಗೆ ಅಂಗೀಕಾರ ದೊರೆತಿತ್ತು. ಇದರ ನಂತರವೂ ಪ್ರತಿಭಟನೆ ಮುಂದುವರೆಸಿದ್ದ ರೈತರು ಕನಿಷ್ಠ ಬೆಂಬಲ ಬೆಲೆ ಕಾನೂನುಬದ್ಧ ಗೊಳಿಸಬೇಕು, ರೈತರ ಮೇಲಿನ ಪ್ರಕರಣಗಳನ್ನು ಹಿಂಪಡೆಯಬೇಕು ಎಂಬುದನ್ನು ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸುವವರೆಗೂ ಪ್ರತಿಭಟನೆ ಮುಂದುವರೆಸುವುದಾಗಿ ತಿಳಿಸಿದ್ದರು. ಗುರುವಾರ ಕೇಂದ್ರ ಸರ್ಕಾರವು ರೈತರ ಇತರ ಬೇಡಿಕೆಗಳನ್ನು ಈಡೇರಿಸುವುದಾಗಿ ಲಿಖಿತ ಭರವಸೆ ನೀಡಿದ್ದು, ಸಂಯುಕ್ತ ಕಿಸಾನ್ ಮೋರ್ಚಾವು ರೈತ ಹೋರಾಟವನ್ನು ಹಿಂಪಡೆಯುವುದಾಗಿ ನಿನ್ನೆ ನಿರ್ಧರಿಸಿದೆ.


ಇದನ್ನೂ ಓದಿ: ಹರಿಯಾಣದ ಹಳ್ಳಿಗಳಿಗೆ ತೆರಳಿ ಧನ್ಯವಾದ ತಿಳಿಸುತ್ತಿರುವ ಪಂಜಾಬ್ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...