Homeಮುಖಪುಟಇಬ್ಬರು ವಯಸ್ಕರು ಸ್ವಇಚ್ಛೆಯಿಂದ ಒಟ್ಟಿಗಿದ್ದರೆ ನೈತಿಕ ಪೊಲೀಸ್‌ಗಿರಿ ಸಲ್ಲದು: ಮಧ್ಯಪ್ರದೇಶ ಹೈಕೋರ್ಟ್

ಇಬ್ಬರು ವಯಸ್ಕರು ಸ್ವಇಚ್ಛೆಯಿಂದ ಒಟ್ಟಿಗಿದ್ದರೆ ನೈತಿಕ ಪೊಲೀಸ್‌ಗಿರಿ ಸಲ್ಲದು: ಮಧ್ಯಪ್ರದೇಶ ಹೈಕೋರ್ಟ್

- Advertisement -
- Advertisement -

ವಯಸ್ಕ ಅಂತರ್‌ಧರ್ಮೀಯ ಜೋಡಿ ವಿವಾಹದ ಮೂಲಕ ಅಥವಾ ಲಿವ್-ಇನ್ ಸಂಬಂಧದಲ್ಲಿ ಒಟ್ಟಿಗೆ ಇರುವ ಹಕ್ಕನ್ನು ಮಧ್ಯಪ್ರದೇಶ ಹೈಕೋರ್ಟ್‌ನ ಜಬಲ್‌ಪುರ ಪೀಠವು ಎತ್ತಿಹಿಡಿದಿದೆ. ಇಬ್ಬರು ವ್ಯಕ್ತಿಗಳು ಇಚ್ಛೆಯಿಂದ ಜೊತೆಗಿದ್ದರೆ ಈ ವಿಚಾರದಲ್ಲಿ ಯಾವುದೇ ನೈತಿಕ ಪೊಲೀಸ್‌ಗಿರಿಯನ್ನು ಅನುಮತಿಸಲಾಗುವುದಿಲ್ಲ ಎಂದು ಹೈಕೋರ್ಟ್‌ ಹೇಳಿದೆ.

ಜಬಲ್‌ಪುರದ ಗೋರಖ್‌ಪುರದ ನಿವಾಸಿ 27 ವರ್ಷದ ಗುಲ್ಜಾರ್ ಖಾನ್ ಸಲ್ಲಿಸಿರುವ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ನ್ಯಾಯಾಲಯವು ವಿಚಾರಣೆ ನಡೆಸುತ್ತಿದೆ. ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ನಂದಿತಾ ದುಬೆ ಈ ಅಭೀಪ್ರಾಯ ವ್ಯಕ್ತಪಡಿಸಿದ್ದಾರೆ.

ಜಬಲ್ಪುರ್ ನಿವಾಸಿ ಗುಲ್ಜಾರ್ ಖಾನ್ ಅವರು ಮಹಾರಾಷ್ಟ್ರದಲ್ಲಿ 19 ವರ್ಷದ ಆರತಿ ಸಾಹು ಎಂಬುವವರನ್ನು ಡಿಸೆಂಬರ್ 28 ರಂದು ಬಾಂದ್ರಾ ನ್ಯಾಯಾಲಯದಲ್ಲಿ ವಿವಾಹವಾಗಿದ್ದರು. ಬಳಿಕ ಆಕೆಯು ಇಸ್ಲಾಂಗೆ ಮತಾಂತರಗೊಂಡಿದ್ದಾರೆ. ಈಗ ಆರತಿ ಸಾಹು ಅವರನ್ನು ಆಕೆಯ ಪೋಷಕರು ಬಲವಂತವಾಗಿ ವಾರಣಾಸಿಗೆ ಕರೆದೊಯ್ದು ಅಕ್ರಮ ಬಂಧನದಲ್ಲಿಟ್ಟಿದ್ದಾರೆ ಎಂದು ಗುಲ್ಜಾರ್ ಖಾನ್ ತನ್ನ ಅರ್ಜಿಯಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ: ಬಿಜೆಪಿ ನಾಯಕಿಯ ಗೋಶಾಲೆಯಲ್ಲಿ 100ಕ್ಕೂ ಹೆಚ್ಚು ಹಸುಗಳ ಸಾವು, ಸ್ಥಳೀಯರ ಆಕ್ರೋಶ

ಜನವರಿ 28 ರಂದು ನಡೆದ ವಿಚಾರಣೆ ವೇಳೆ ಅಡ್ವೊಕೇಟ್ ಜನರಲ್ ಕಚೇರಿಯಿಂದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಆರತಿ ಸಾಹು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಯುವತಿಯು ತಾನು ಅರ್ಜಿದಾರನನ್ನು ಮದುವೆಯಾಗಿದ್ದು, ಆತನೊಂದಿಗೆ ಇರಲು ಬಯಸುತ್ತೇನೆ . ನಾನು ಇಷ್ಟಪಟ್ಟು ಮತಾಂತರವಾಗಿದ್ದೇನೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ ಎಂದು ನ್ಯಾಯಾಲಯ ತಿಳಿಸಿದೆ.

ಮಧ್ಯಪ್ರದೇಶ ಧಾರ್ಮಿಕ ಸ್ವಾತಂತ್ರ್ಯ ಕಾಯಿದೆ, 2021 ರ ನಿಬಂಧನೆಗಳ ದೃಷ್ಟಿಯಿಂದ ರಾಜ್ಯವು ಆಕ್ಷೇಪಣೆಯನ್ನು ಎತ್ತಿತ್ತು. ಧಾರ್ಮಿಕ ಸ್ವಾತಂತ್ರ್ಯ ಕಾಯಿದೆಯ ಸೆಕ್ಷನ್ 3 ರನ್ನು ಈ ವಿವಾಹ ಉಲ್ಲಂಘಿಸಿದೆ. ಹೀಗಾಗಿ ಈ ವಿವಾಹವನ್ನು ಅನೂರ್ಜಿತವೆಂದು ಪರಿಗಣಿಸಬೇಕು ಎಂದು ಸರ್ಕಾರಿ ವಕೀಲರು ವಾದಿಸಿದ್ದರು.

ಆದರೆ, ಈ ಪ್ರಕರಣದಲ್ಲಿ ಯಾವುದೇ ವ್ಯಕ್ತಿಯು ಮದುವೆಯ ಉದ್ದೇಶಕ್ಕಾಗಿ ಮತಾಂತರಗೊಂಡಿಲ್ಲ ಎಂದಿರುವ ನ್ಯಾಯಾಲಯ, ’ವಿವಾಹದ ಮೂಲಕ ಅಥವಾ ಲಿವ್-ಇನ್ ಸಂಬಂಧದಲ್ಲಿ ಇಬ್ಬರು ವ್ಯಕ್ತಿಗಳು ಸ್ವಇಚ್ಛೆಯಿಂದ ಒಟ್ಟಿಗೆ ಇರಲು ಸಿದ್ಧರಿದ್ದರೆ, ಯಾವುದೇ ನೈತಿಕ ಪೊಲೀಸ್‌ಗಿರಿಯನ್ನು ಅನುಮತಿಸಲಾಗುವುದಿಲ್ಲ ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ.

“ಈ ದೇಶದ ಪ್ರತಿಯೊಬ್ಬ ಪ್ರಜೆಗೂ ತನ್ನ ಜೀವನವನ್ನು ಅವರ ಸ್ವಂತ ಇಚ್ಛೆಯಂತೆ ಬದುಕಲು ಸಂವಿಧಾನವು ಹಕ್ಕನ್ನು ನೀಡಿದೆ” ಎಂದು ಹೈಕೋರ್ಟ್ ತಿಳಿಸಿದೆ.

ಯುವತಿಯನ್ನು ಆಕೆಯ ಪತಿಗೆ ಹಸ್ತಾಂತರಿಸುವಂತೆ ಮತ್ತು ಇಬ್ಬರೂ ಸುರಕ್ಷಿತವಾಗಿ ತಮ್ಮ ಮನೆಗೆ ತಲುಪುವಂತೆ ನೋಡಿಕೊಳ್ಳುವಂತೆ ರಾಜ್ಯ ಮತ್ತು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಜೊತೆಗೆ ಭವಿಷ್ಯದಲ್ಲಿ ಇಬ್ಬರಿಗೂ ಯುವತಿಯ ಪೋಷಕರಿಂದ ಬೆದರಿಕೆ ಬರದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.


ಇದನ್ನೂ ಓದಿ: ‘ಖಾಸಗೀಕರಣ’: ಒಕ್ಕೂಟ ಸರ್ಕಾರದ ವಿರುದ್ಧ ದೇಶದಾದ್ಯಂತ ಪ್ರತಿಭಟನೆ ನಡೆಸಲಿರುವ ವಿದ್ಯುತ್ ವಲಯದ ನೌಕರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...