Homeಕರ್ನಾಟಕಅಕ್ಷಯಪಾತ್ರ (ಇಸ್ಕಾನ್‌)ಗೆ ಹೊರಗುತ್ತಿಗೆಗೆ ವಿರೋಧ: ಶಾಲೆಗಳಲ್ಲಿಯೇ ಬಿಸಿಯೂಟ ತಯಾರಿಸಲು ಆಗ್ರಹ

ಅಕ್ಷಯಪಾತ್ರ (ಇಸ್ಕಾನ್‌)ಗೆ ಹೊರಗುತ್ತಿಗೆಗೆ ವಿರೋಧ: ಶಾಲೆಗಳಲ್ಲಿಯೇ ಬಿಸಿಯೂಟ ತಯಾರಿಸಲು ಆಗ್ರಹ

ಅಕ್ಷಯ ಪಾತ್ರ ಫೌಂಡೇಶನ್ ಒಂದೇ ಬೆಂಗಳೂರಿನ 1,212 ಶಾಲೆಗಳಲ್ಲಿನ 1.83 ಲಕ್ಷ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟವನ್ನು ಒದಗಿಸುತ್ತಿದೆ

- Advertisement -
- Advertisement -

ಅಪೌಷ್ಟಿಕತೆಯ ಕಾರಣಕ್ಕಾಗಿ ಕರ್ನಾಟಕದಲ್ಲಿ ಶಾಲಾ ಮಕ್ಕಳಿಗೆ ನೀಡುತ್ತಿರುವ ಮಧ್ಯಾಹ್ನದ ಬಿಸಿಯೂಟವನ್ನು  ಅಕ್ಷಯಪಾತ್ರ (ಇಸ್ಕಾನ್‌) ಸೇರಿದಂತೆ ಯಾವುದೇ ಕೇಂದ್ರೀಕೃತ ಅಡಿಗೆಮನೆಗಳಿಗೆ ಗುತ್ತಿಗೆ ನೀಡಬಾರದು. ಬಲಿಗೆ ಆಯಾ ಶಾಲೆಗಳಲ್ಲಿಯೇ ಬಿಸಿಯೂಟ ತಯಾರಿಸಿ ವಿತರಿಸಬೇಕೆಂದು ’ಆಹಾರ ನಮ್ಮ ಹಕ್ಕು – ಕರ್ನಾಟಕ’ ವೇದಿಕೆಯು ಆಗ್ರಹಿಸಿದೆ.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಡಾ. ಆರ್. ಮೋಹನ್ ರಾಯ್ ಮತ್ತು ದಾ. ಸಿಲ್ವಿಯಾ ಕರ್ಪಗಂ, ಕರ್ನಾಟಕದಲ್ಲಿ ಗಂಭೀರ ಕಳವಳಕ್ಕೆ ಕಾರಣವಾಗುವಷ್ಟು ಅಪೌಷ್ಠಿಕತೆ ಇದೆ. 3-4 ವರ್ಷ ವಯಸ್ಸಿನ ಮಕ್ಕಳಲ್ಲಿ ಶೇ 21.5% ಮಕ್ಕಳ ಬೆಳವಣಿಗೆ ಕುಂಠಿತವಾಗಿವೆ. 10-19 ವರ್ಷ ವಯಸ್ಸಿನ ಮಕ್ಕಳಲ್ಲಿ ಶೇ 26.5% ಮಕ್ಕಳು ತೆಳ್ಳಗೆ/ಕೃಶವಾಗಿದ್ದಾರೆ. ಶೇ 9% ಹದಿಹರೆಯದ ಹುಡುಗರು ಮತ್ತು ಶೇ 26% ಹದಿಹರೆಯದ ಹುಡುಗಿಯರು ರಕ್ತಹೀನತೆಯಿಂದ ಬಳಲುತ್ತಿದ್ದಾರೆ ಎಂದು ಆತಂಕ ವ್ಯಕ್ತಿಪಡಿಸಿದ್ದರೆ.

ಕರ್ನಾಟಕದ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಕಲಿಯುತ್ತಿರುವ 94% ಕ್ಕೂ ಹೆಚ್ಚು ಮಕ್ಕಳು
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದವರಾಗಿದ್ದರೆ. ಈ ಮಕ್ಕಳಿಗೆ ಅಪೌಷ್ಠಿಕತೆ ಬರಬಾರದೆಂದೇ ಆರಂಭಿಸಿದ ಮಧ್ಯಾಹ್ನದ ಬಿಸಿಯೂಟ ಯೋಜನೆ (ಅಕ್ಷರದಾಸೋಹ) ತನ್ನ ನಿಗಧಿತ ಗುರಿ ಸಾಧಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ನಗರ ಪ್ರದೇಶಗಳಲ್ಲಿ ಶಾಲೆಗಳಲ್ಲಿ ಅಡುಗೆ ತಯಾರಿಸಿದೆ, ಅಕ್ಷಯಪಾತ್ರ (ಇಸ್ಕಾನ್‌) ಸೇರಿದಂತೆ ಹಲವು ಎನ್‌ಜಿಓಗಳು ನಡೆಸುವ ಕೇಂದ್ರೀಕೃತ ಅಡಿಗೆಮನೆಗಳಿಗೆ ಗುತ್ತಿಗೆ ನೀಡುತ್ತಿರುವುದೇ ಕಾರಣವಾಗಿದೆ ಎಂದು ವೇದಿಕೆ ಆರೋಪಿಸಿದೆ.

ಸಂಸತ್ತು ಅಂಗೀಕರಿಸಿದ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013 (ಎನ್‌ಎಫ್‌ಎಸ್‌ಎ) ಅಡಿಯಲ್ಲಿ, ಸರ್ಕಾರಿ ಶಾಲೆಗಳಲ್ಲಿ ತಾಜಾ ಬೇಯಿಸಿದ ಪೌಷ್ಟಿಕ ಊಟವನ್ನು ಪ್ರತಿ ಮಗುವಿನ ಹಕ್ಕು ಎಂದು ಕರೆಯಲಾಗಿದೆ. ಕಾಯಿದೆಯ ಸೆಕ್ಷನ್ 5 (2) ರ ಪ್ರಕಾರ ಈ ಊಟವನ್ನು ಶಾಲಾ ಆಧಾರಿತ ಅಡುಗೆ ಮನೆಗಳಲ್ಲಿ ಬೇಯಿಸಬೇಕು.

ಸಾಕಷ್ಟು ಸ್ಥಳಾವಕಾಶವಿಲ್ಲದ ನಗರ ಪ್ರದೇಶಗಳಲ್ಲಿನ ಶಾಲೆಗಳಿಗೆ ಮಾತ್ರ ಇದರಿಂದ ವಿನಾಯಿತಿ ನೀಡಲಾಗಿದೆ. ಅಂತಹ ಶಾಲೆಗಳಲ್ಲಿ ಎನ್‌ಜಿಒಗಳು ನಡೆಸುವ ಕೇಂದ್ರೀಕೃತ ಅಡಿಗೆಮನೆಗಳಿಂದ ಆಹಾರವನ್ನು ಪೂರೈಸಬಹುದು. ಆದರೆ ಇದನ್ನೆ ನೆಪಮಾಡಿಕೊಂಡು ಬೆಂಗಳೂರು ಜಿಲ್ಲೆಯಲ್ಲಿ 95% ಶಾಲೆಗಳಲ್ಲಿ ಸ್ಥಳಾವಕಾಶ ಇದ್ದರೂ ಸಹ ಅಡುಗೆ ಮಾಡದೇ ಎನ್‌ಜಿಒಗಳಿಗೆ ಗುತ್ತಿಗೆ ನೀಡಲಾಗಿದೆ. ಇತ್ತೀಚೆಗೆ ಗ್ರಾಮೀಣ ಪ್ರದೇಶದ ಶಾಲೆಗಳಿಗೆ ಊಟ ಸರಬರಾಜನ್ನು ಸಹ ಗುತ್ತಿಗೆ ನೀಡಲು ಸರ್ಕಾರ ನಿರ್ಧರಿಸಿದೆ. ಅನೇಕಲ್‌ನಲ್ಲಿರುವ 50 ಶಾಲೆಗಳನ್ನು ಕೇವಲ ಅಕ್ಷಯ ಪಾತ್ರ ಎನ್‌ಜಿಓಗೆ ಹಸ್ತಾಂತರಿಸುವ ಪ್ರಸ್ತಾಪವಿದೆ. ಇದು ಎನ್‌ಎಫ್‌ಎಸ್‌ಎ ನಿಯಮಗಳಿಗೆ ವಿರುದ್ಧವಾಗಿದೆ ಎಂದು ವೇದಿಕೆಯ ದಾ. ಸಿಲ್ವಿಯಾ ಕರ್ಪಗಂ ಆರೋಪಿಸಿದ್ದಾರೆ.

ಈ ನೀತಿಯಿಂದಾಗಿ ಮಕ್ಕಳಿಗೆ ಪೌಷ್ಠಕಾಂಶದ, ರುಚಿಯಾದ ಮತ್ತು ಬಿಸಿಯಾದ ಊಟ ದೊರೆಯುತ್ತಿಲ್ಲ. ಊಟ ಸರಬರಾಜು ಮಾಡುವ ಎನ್‌ಜಿಓಗಳು ತಮ್ಮ ಟ್ರಿಪ್‌ಗಳನ್ನು ಕಡಿಮೆ ಮಾಡುವುದಕ್ಕಾಗಿ ಕೆಲವು ಶಾಲೆಗಳಿಗೆ ಊಟದ ಸಮಯಕ್ಕಿಂತ ಮುಂಚೇಯೇ ಅಥವಾ ಊಟದ ಸಮಯದ ನಂತರ ಸರಬರಾಜು ಮಾಡಲಾಗುತ್ತಿದೆ. ಕೆಲವು ಶಾಲೆಗಳಿಗೆ ಬಿಸಿಯೂಟ ಮತ್ತು ಹಾಲು ಎರಡನ್ನು ಒಂದೇ ಸಮಯಕ್ಕೆ ನೀಡಲಾಗುತ್ತಿದೆ. ಆದ್ದರಿಂದ ಅದೇ ಶಾಲೆಯಲ್ಲಿ ಅಡುಗೆ ಮಾಡಿದಾಗ ಮಕ್ಕಳು ಹೆಚ್ಚು ಊಟ ಮಾಡುತ್ತಿದ್ದು ಹೊರಗಡೆಯಿಂದ ಸರಬರಾಜು ಆದಾಗ ಮಕ್ಕಳು ಹೊಟ್ಟೆ ತುಂಬಾ ಊಟ ಮಾಡುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಅಲ್ಲದೇ ಇಸ್ಕಾನ್‌ ಊಟದಲ್ಲಿ ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಬಳಸುತ್ತಿಲ್ಲ. ಮೈಸೂರಿನ ಸಿ.ಎಫ್.ಟಿ.ಆರ್.ಐ ನಡೆಸಿದ ಅಧ್ಯಯನವು ಆಹಾರದಲ್ಲಿ ಈರುಳ್ಳಿ ಮತ್ತು ಬೆಳ್ಳುಳ್ಳಿಯ ಬಳಕೆಯು ರುಚಿಯನ್ನು ಹೆಚ್ಚಿಸುವುದರ ಜೊತೆಗೆ ಕಬ್ಬಿಣ ಮತ್ತು ಸತುವು (ಜಿಂಕ್) ಹೀರಿಕೊಳ್ಳುವಿಕೆಯನ್ನು ಹೆಚ್ಚಿಸುತ್ತದೆ ಎಂದು ವರದಿ ನೀಡಿದೆ. ಆದರೆ ಕೇವಲ ಧಾರ್ಮಿಕ ಕಾರಣಕ್ಕಾಗಿ ಈರುಳ್ಳಿ ಬೆಳ್ಳುಳ್ಳಿ ಬಳಸಿದಿರುವುದು ಕರ್ನಾಟಕ ಸರ್ಕಾರದೊಡನೆ ಅವರು ಮಾಡಿಕೊಂಡಿರವು ಒಪ್ಪಂದದ ಸ್ಪಷ್ಟ ಉಲ್ಲಂಘನೆಯಾಗಿದೆ.

ಅಲ್ಲದೇ ಇದೇ ಸಂಸ್ಥೆಯು ಸರ್ಕಾರದಿಂದ ಇದಕ್ಕಾಗಿ ಹಣ ಪಡೆಯುವುದರ ಜೊತೆಗೆ ದೇಶ ವಿದೇಶಗಳಿಂದಳು ದೇಣಿಗೆ ಪಡೆಯುತ್ತಿದೆ. ಸರ್ಕಾರವೇ ಹಣ ನೀಡುವುದರಿಂದ ಮಕ್ಕಳಿಗೆ ಬಿಸಿಯೂಟದ ನೆಪದಲ್ಲಿ ದೇಣಿಗೆ ಪಡೆಯುವುದು ಸಹ ಕಾನೂನಿನ ಉಲ್ಲಂಘಟನೆ ಎಂದು ಡಾ. ಆರ್. ಮೋಹನ್ ರಾಯ್ ದೂರಿದ್ದಾರೆ.

ಇದನ್ನು ವಿರೋಧಿಸಿ ಹಲವು ಹಕ್ಕೊತ್ತಾಯಗಳ ಈಡೇರಿಕೆಗೆ ಆಹಾರ ನಮ್ಮ ಹಕ್ಕು – ಕರ್ನಾಟಕ’ ವೇದಿಕೆಯು ಸರ್ಕಾರವನ್ನು ಒತ್ತಾಯಿಸಿದೆ.

  1. ಸಾಧ್ಯವಾದಷ್ಟು ಶಾಲೆಗಳಲ್ಲಿಯೇ ಶುಚಿ ಮತ್ತು ರುಚಿಯಾದ ಗುಣಮಟ್ಟದ ಆಹಾರ ಮಕ್ಕಳಿಗೆ ತಯಾರಿಸಿ ಸಿಗಬೇಕು. ಹೊಸದಾಗಿ ಕೇಂದ್ರೀಕೃತ ಅಡುಗೆಮನೆಗಳಿಗೆ ಗುತ್ತಿಗೆ ನೀಡಬಾರದು.

2. ಮಕ್ಕಳಿಗೆ ಹಾಲು, ಹಣ್ಣು ಮತ್ತು ತರಕಾರಿಗಳ ಜೊತೆಗೆ ಮೊಟ್ಟೆಗಳನ್ನು ಒದಗಿಸಲು ರಾಜ್ಯ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ಮೊಟ್ಟೆ ತಿನ್ನದ ಮಕ್ಕಳಿಗೆ ಹಣ್ಣು ನೀಡಬಹುದು.

3.  ಹಾಸ್ಟೆಲ್‌ಗಳಲ್ಲಿ ನಿರ್ಧರಿಸುವಂತೆ ಪ್ರತಿ ಮಗುವಿಗೆ ದಿನಕ್ಕೆ 20ರೂ ಅನುದಾನ ನೀಡಿ ಆ ಮೂಲಕ ಗುಣಮಟ್ಟದ ಆಹಾರ ಒದಗಿಸಬೇಕು. ಅಡುಗೆ ಮಾಡುವವರಿಗೆ ಮತ್ತು ಸಹಾಯಕರಿಗೆ ಕನಿಷ್ಠ ವೇತನ ಮಾನದಂಡಗಳು ಪ್ರಕಾರ ಸಂಭಾವನೆ ನೀಡಬೇಕು.

ಈ ಕುರಿತು ಆನೇಕಲ್‌ನ ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಆರ್‌ ರಾಮಮೂರ್ತಿ ಪ್ರತಿಕ್ರಿಯಿಸಿದ್ದು, ನಮ್ಮಲ್ಲಿ ಅಡುಗೆ ಮಾಡುವವರಿಗೆ ಸರ್ಕಾರ ಕಳೆದ ಆರು ತಿಂಗಳಿಂದ ಸಂಬಳ ನೀಡಿಲ್ಲ. ಹಾಗಾಗಿ ಅವರು ಕೆಲಸಕ್ಕೆ ಬರುವುದು ಕಷ್ಟ. ಆದ್ದರಿಂದ ನಮ್ಮ ಶಾಲೆಗಳಿಗೆ ಇಸ್ಕಾನ್‌ನಿಂದ ಊಟ ಸರಬರಾಜು ಮಾಡಬೇಕೆಂದು ಪ್ರಸ್ತಾಪವಿಟ್ಟಿದ್ದೇವೆ ಎಂದು ಹೇಳಿರುವುದಾಗಿ ಡೆಕ್ಕನ್‌ ಹೆರಾಲ್ಡ್‌ ವರದಿ ಮಾಡಿದೆ. ಅಂದರೆ ಸರ್ಕಾರದ ತಪ್ಪಿಗೆ ಶಾಲಾ ಮಕ್ಕಳು ಶಿಕ್ಷೆ ಅನುಭವಸಬೇಕಾಗಿದೆ.

ರಾಜ್ಯದ 5,507 ಸರ್ಕಾರಿ ಶಾಲೆಗಳ 8.73 ಲಕ್ಷ ವಿದ್ಯಾರ್ಥಿಗಳಿಗೆ ಒಟ್ಟು 68 ಎನ್‌ಜಿಒಗಳು ಮಧ್ಯಾಹ್ನದ ಊಟವನ್ನು ನೀಡುತ್ತಿವೆ. ಇದರಲ್ಲಿ ಅಕ್ಷಯ ಪಾತ್ರ ಫೌಂಡೇಶನ್ ಒಂದೇ ಬೆಂಗಳೂರಿನ 1,212 ಶಾಲೆಗಳಲ್ಲಿನ 1.83 ಲಕ್ಷ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟವನ್ನು ಒದಗಿಸುತ್ತಿದೆ.

ಹೆಚ್ಚುವರಿ ಶಾಲೆಗಳನ್ನು ಎನ್‌ಜಿಒಗಳಿಗೆ ಹಸ್ತಾಂತರಿಸುವ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ, ಮತ್ತು ಈ ವರ್ಷದ ಅಂತ್ಯದ ವೇಳೆಗೆ ಬಾಕಿ ಇರುವ ಸಂಬಳವನ್ನು ನೀಡಲಾಗುವುದು ಎಂದು ಶಿಕ್ಷಣ ಇಲಾಖೆಯ ಬಿಸಿಯೂಟ ಯೋಜನೆಯ ಉಸ್ತುವಾರಿ ಜಂಟಿ ನಿರ್ದೇಶಕ ಮಂಜುನಾಥ್ ಎಸ್‌ಸಿ ತಿಳಿಸಿದ್ದಾರೆ.

ಈ ಕುರಿತು ಅಕ್ಷಯಪ್ರಾತ್ರದಿಂದ ಪ್ರತಿಕ್ರಿಯೆ ಪಡೆಯಲು ಯತ್ನಿಸಿದಾಗ ’ಈ ಬಗ್ಗೆ ಪ್ರತಿಕ್ರಿಯಿಸಲು ನಮಗೆ ಹೆಚ್ಚಿನ ಸಮಯ ಬೇಕು’ ಎಂಬ ಪ್ರತಿ ಉತ್ತರ ಬಂದಿದೆ ಎಂದು ಡೆಕ್ಕನ್‌ ಹೆರಾಲ್ಡ್‌ ವರದಿಯಲ್ಲಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...