Homeಕರ್ನಾಟಕಅಕ್ಷಯಪಾತ್ರ (ಇಸ್ಕಾನ್‌)ಗೆ ಹೊರಗುತ್ತಿಗೆಗೆ ವಿರೋಧ: ಶಾಲೆಗಳಲ್ಲಿಯೇ ಬಿಸಿಯೂಟ ತಯಾರಿಸಲು ಆಗ್ರಹ

ಅಕ್ಷಯಪಾತ್ರ (ಇಸ್ಕಾನ್‌)ಗೆ ಹೊರಗುತ್ತಿಗೆಗೆ ವಿರೋಧ: ಶಾಲೆಗಳಲ್ಲಿಯೇ ಬಿಸಿಯೂಟ ತಯಾರಿಸಲು ಆಗ್ರಹ

ಅಕ್ಷಯ ಪಾತ್ರ ಫೌಂಡೇಶನ್ ಒಂದೇ ಬೆಂಗಳೂರಿನ 1,212 ಶಾಲೆಗಳಲ್ಲಿನ 1.83 ಲಕ್ಷ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟವನ್ನು ಒದಗಿಸುತ್ತಿದೆ

- Advertisement -
- Advertisement -

ಅಪೌಷ್ಟಿಕತೆಯ ಕಾರಣಕ್ಕಾಗಿ ಕರ್ನಾಟಕದಲ್ಲಿ ಶಾಲಾ ಮಕ್ಕಳಿಗೆ ನೀಡುತ್ತಿರುವ ಮಧ್ಯಾಹ್ನದ ಬಿಸಿಯೂಟವನ್ನು  ಅಕ್ಷಯಪಾತ್ರ (ಇಸ್ಕಾನ್‌) ಸೇರಿದಂತೆ ಯಾವುದೇ ಕೇಂದ್ರೀಕೃತ ಅಡಿಗೆಮನೆಗಳಿಗೆ ಗುತ್ತಿಗೆ ನೀಡಬಾರದು. ಬಲಿಗೆ ಆಯಾ ಶಾಲೆಗಳಲ್ಲಿಯೇ ಬಿಸಿಯೂಟ ತಯಾರಿಸಿ ವಿತರಿಸಬೇಕೆಂದು ’ಆಹಾರ ನಮ್ಮ ಹಕ್ಕು – ಕರ್ನಾಟಕ’ ವೇದಿಕೆಯು ಆಗ್ರಹಿಸಿದೆ.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಡಾ. ಆರ್. ಮೋಹನ್ ರಾಯ್ ಮತ್ತು ದಾ. ಸಿಲ್ವಿಯಾ ಕರ್ಪಗಂ, ಕರ್ನಾಟಕದಲ್ಲಿ ಗಂಭೀರ ಕಳವಳಕ್ಕೆ ಕಾರಣವಾಗುವಷ್ಟು ಅಪೌಷ್ಠಿಕತೆ ಇದೆ. 3-4 ವರ್ಷ ವಯಸ್ಸಿನ ಮಕ್ಕಳಲ್ಲಿ ಶೇ 21.5% ಮಕ್ಕಳ ಬೆಳವಣಿಗೆ ಕುಂಠಿತವಾಗಿವೆ. 10-19 ವರ್ಷ ವಯಸ್ಸಿನ ಮಕ್ಕಳಲ್ಲಿ ಶೇ 26.5% ಮಕ್ಕಳು ತೆಳ್ಳಗೆ/ಕೃಶವಾಗಿದ್ದಾರೆ. ಶೇ 9% ಹದಿಹರೆಯದ ಹುಡುಗರು ಮತ್ತು ಶೇ 26% ಹದಿಹರೆಯದ ಹುಡುಗಿಯರು ರಕ್ತಹೀನತೆಯಿಂದ ಬಳಲುತ್ತಿದ್ದಾರೆ ಎಂದು ಆತಂಕ ವ್ಯಕ್ತಿಪಡಿಸಿದ್ದರೆ.

ಕರ್ನಾಟಕದ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಕಲಿಯುತ್ತಿರುವ 94% ಕ್ಕೂ ಹೆಚ್ಚು ಮಕ್ಕಳು
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದವರಾಗಿದ್ದರೆ. ಈ ಮಕ್ಕಳಿಗೆ ಅಪೌಷ್ಠಿಕತೆ ಬರಬಾರದೆಂದೇ ಆರಂಭಿಸಿದ ಮಧ್ಯಾಹ್ನದ ಬಿಸಿಯೂಟ ಯೋಜನೆ (ಅಕ್ಷರದಾಸೋಹ) ತನ್ನ ನಿಗಧಿತ ಗುರಿ ಸಾಧಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ನಗರ ಪ್ರದೇಶಗಳಲ್ಲಿ ಶಾಲೆಗಳಲ್ಲಿ ಅಡುಗೆ ತಯಾರಿಸಿದೆ, ಅಕ್ಷಯಪಾತ್ರ (ಇಸ್ಕಾನ್‌) ಸೇರಿದಂತೆ ಹಲವು ಎನ್‌ಜಿಓಗಳು ನಡೆಸುವ ಕೇಂದ್ರೀಕೃತ ಅಡಿಗೆಮನೆಗಳಿಗೆ ಗುತ್ತಿಗೆ ನೀಡುತ್ತಿರುವುದೇ ಕಾರಣವಾಗಿದೆ ಎಂದು ವೇದಿಕೆ ಆರೋಪಿಸಿದೆ.

ಸಂಸತ್ತು ಅಂಗೀಕರಿಸಿದ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013 (ಎನ್‌ಎಫ್‌ಎಸ್‌ಎ) ಅಡಿಯಲ್ಲಿ, ಸರ್ಕಾರಿ ಶಾಲೆಗಳಲ್ಲಿ ತಾಜಾ ಬೇಯಿಸಿದ ಪೌಷ್ಟಿಕ ಊಟವನ್ನು ಪ್ರತಿ ಮಗುವಿನ ಹಕ್ಕು ಎಂದು ಕರೆಯಲಾಗಿದೆ. ಕಾಯಿದೆಯ ಸೆಕ್ಷನ್ 5 (2) ರ ಪ್ರಕಾರ ಈ ಊಟವನ್ನು ಶಾಲಾ ಆಧಾರಿತ ಅಡುಗೆ ಮನೆಗಳಲ್ಲಿ ಬೇಯಿಸಬೇಕು.

ಸಾಕಷ್ಟು ಸ್ಥಳಾವಕಾಶವಿಲ್ಲದ ನಗರ ಪ್ರದೇಶಗಳಲ್ಲಿನ ಶಾಲೆಗಳಿಗೆ ಮಾತ್ರ ಇದರಿಂದ ವಿನಾಯಿತಿ ನೀಡಲಾಗಿದೆ. ಅಂತಹ ಶಾಲೆಗಳಲ್ಲಿ ಎನ್‌ಜಿಒಗಳು ನಡೆಸುವ ಕೇಂದ್ರೀಕೃತ ಅಡಿಗೆಮನೆಗಳಿಂದ ಆಹಾರವನ್ನು ಪೂರೈಸಬಹುದು. ಆದರೆ ಇದನ್ನೆ ನೆಪಮಾಡಿಕೊಂಡು ಬೆಂಗಳೂರು ಜಿಲ್ಲೆಯಲ್ಲಿ 95% ಶಾಲೆಗಳಲ್ಲಿ ಸ್ಥಳಾವಕಾಶ ಇದ್ದರೂ ಸಹ ಅಡುಗೆ ಮಾಡದೇ ಎನ್‌ಜಿಒಗಳಿಗೆ ಗುತ್ತಿಗೆ ನೀಡಲಾಗಿದೆ. ಇತ್ತೀಚೆಗೆ ಗ್ರಾಮೀಣ ಪ್ರದೇಶದ ಶಾಲೆಗಳಿಗೆ ಊಟ ಸರಬರಾಜನ್ನು ಸಹ ಗುತ್ತಿಗೆ ನೀಡಲು ಸರ್ಕಾರ ನಿರ್ಧರಿಸಿದೆ. ಅನೇಕಲ್‌ನಲ್ಲಿರುವ 50 ಶಾಲೆಗಳನ್ನು ಕೇವಲ ಅಕ್ಷಯ ಪಾತ್ರ ಎನ್‌ಜಿಓಗೆ ಹಸ್ತಾಂತರಿಸುವ ಪ್ರಸ್ತಾಪವಿದೆ. ಇದು ಎನ್‌ಎಫ್‌ಎಸ್‌ಎ ನಿಯಮಗಳಿಗೆ ವಿರುದ್ಧವಾಗಿದೆ ಎಂದು ವೇದಿಕೆಯ ದಾ. ಸಿಲ್ವಿಯಾ ಕರ್ಪಗಂ ಆರೋಪಿಸಿದ್ದಾರೆ.

ಈ ನೀತಿಯಿಂದಾಗಿ ಮಕ್ಕಳಿಗೆ ಪೌಷ್ಠಕಾಂಶದ, ರುಚಿಯಾದ ಮತ್ತು ಬಿಸಿಯಾದ ಊಟ ದೊರೆಯುತ್ತಿಲ್ಲ. ಊಟ ಸರಬರಾಜು ಮಾಡುವ ಎನ್‌ಜಿಓಗಳು ತಮ್ಮ ಟ್ರಿಪ್‌ಗಳನ್ನು ಕಡಿಮೆ ಮಾಡುವುದಕ್ಕಾಗಿ ಕೆಲವು ಶಾಲೆಗಳಿಗೆ ಊಟದ ಸಮಯಕ್ಕಿಂತ ಮುಂಚೇಯೇ ಅಥವಾ ಊಟದ ಸಮಯದ ನಂತರ ಸರಬರಾಜು ಮಾಡಲಾಗುತ್ತಿದೆ. ಕೆಲವು ಶಾಲೆಗಳಿಗೆ ಬಿಸಿಯೂಟ ಮತ್ತು ಹಾಲು ಎರಡನ್ನು ಒಂದೇ ಸಮಯಕ್ಕೆ ನೀಡಲಾಗುತ್ತಿದೆ. ಆದ್ದರಿಂದ ಅದೇ ಶಾಲೆಯಲ್ಲಿ ಅಡುಗೆ ಮಾಡಿದಾಗ ಮಕ್ಕಳು ಹೆಚ್ಚು ಊಟ ಮಾಡುತ್ತಿದ್ದು ಹೊರಗಡೆಯಿಂದ ಸರಬರಾಜು ಆದಾಗ ಮಕ್ಕಳು ಹೊಟ್ಟೆ ತುಂಬಾ ಊಟ ಮಾಡುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಅಲ್ಲದೇ ಇಸ್ಕಾನ್‌ ಊಟದಲ್ಲಿ ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಬಳಸುತ್ತಿಲ್ಲ. ಮೈಸೂರಿನ ಸಿ.ಎಫ್.ಟಿ.ಆರ್.ಐ ನಡೆಸಿದ ಅಧ್ಯಯನವು ಆಹಾರದಲ್ಲಿ ಈರುಳ್ಳಿ ಮತ್ತು ಬೆಳ್ಳುಳ್ಳಿಯ ಬಳಕೆಯು ರುಚಿಯನ್ನು ಹೆಚ್ಚಿಸುವುದರ ಜೊತೆಗೆ ಕಬ್ಬಿಣ ಮತ್ತು ಸತುವು (ಜಿಂಕ್) ಹೀರಿಕೊಳ್ಳುವಿಕೆಯನ್ನು ಹೆಚ್ಚಿಸುತ್ತದೆ ಎಂದು ವರದಿ ನೀಡಿದೆ. ಆದರೆ ಕೇವಲ ಧಾರ್ಮಿಕ ಕಾರಣಕ್ಕಾಗಿ ಈರುಳ್ಳಿ ಬೆಳ್ಳುಳ್ಳಿ ಬಳಸಿದಿರುವುದು ಕರ್ನಾಟಕ ಸರ್ಕಾರದೊಡನೆ ಅವರು ಮಾಡಿಕೊಂಡಿರವು ಒಪ್ಪಂದದ ಸ್ಪಷ್ಟ ಉಲ್ಲಂಘನೆಯಾಗಿದೆ.

ಅಲ್ಲದೇ ಇದೇ ಸಂಸ್ಥೆಯು ಸರ್ಕಾರದಿಂದ ಇದಕ್ಕಾಗಿ ಹಣ ಪಡೆಯುವುದರ ಜೊತೆಗೆ ದೇಶ ವಿದೇಶಗಳಿಂದಳು ದೇಣಿಗೆ ಪಡೆಯುತ್ತಿದೆ. ಸರ್ಕಾರವೇ ಹಣ ನೀಡುವುದರಿಂದ ಮಕ್ಕಳಿಗೆ ಬಿಸಿಯೂಟದ ನೆಪದಲ್ಲಿ ದೇಣಿಗೆ ಪಡೆಯುವುದು ಸಹ ಕಾನೂನಿನ ಉಲ್ಲಂಘಟನೆ ಎಂದು ಡಾ. ಆರ್. ಮೋಹನ್ ರಾಯ್ ದೂರಿದ್ದಾರೆ.

ಇದನ್ನು ವಿರೋಧಿಸಿ ಹಲವು ಹಕ್ಕೊತ್ತಾಯಗಳ ಈಡೇರಿಕೆಗೆ ಆಹಾರ ನಮ್ಮ ಹಕ್ಕು – ಕರ್ನಾಟಕ’ ವೇದಿಕೆಯು ಸರ್ಕಾರವನ್ನು ಒತ್ತಾಯಿಸಿದೆ.

  1. ಸಾಧ್ಯವಾದಷ್ಟು ಶಾಲೆಗಳಲ್ಲಿಯೇ ಶುಚಿ ಮತ್ತು ರುಚಿಯಾದ ಗುಣಮಟ್ಟದ ಆಹಾರ ಮಕ್ಕಳಿಗೆ ತಯಾರಿಸಿ ಸಿಗಬೇಕು. ಹೊಸದಾಗಿ ಕೇಂದ್ರೀಕೃತ ಅಡುಗೆಮನೆಗಳಿಗೆ ಗುತ್ತಿಗೆ ನೀಡಬಾರದು.

2. ಮಕ್ಕಳಿಗೆ ಹಾಲು, ಹಣ್ಣು ಮತ್ತು ತರಕಾರಿಗಳ ಜೊತೆಗೆ ಮೊಟ್ಟೆಗಳನ್ನು ಒದಗಿಸಲು ರಾಜ್ಯ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ಮೊಟ್ಟೆ ತಿನ್ನದ ಮಕ್ಕಳಿಗೆ ಹಣ್ಣು ನೀಡಬಹುದು.

3.  ಹಾಸ್ಟೆಲ್‌ಗಳಲ್ಲಿ ನಿರ್ಧರಿಸುವಂತೆ ಪ್ರತಿ ಮಗುವಿಗೆ ದಿನಕ್ಕೆ 20ರೂ ಅನುದಾನ ನೀಡಿ ಆ ಮೂಲಕ ಗುಣಮಟ್ಟದ ಆಹಾರ ಒದಗಿಸಬೇಕು. ಅಡುಗೆ ಮಾಡುವವರಿಗೆ ಮತ್ತು ಸಹಾಯಕರಿಗೆ ಕನಿಷ್ಠ ವೇತನ ಮಾನದಂಡಗಳು ಪ್ರಕಾರ ಸಂಭಾವನೆ ನೀಡಬೇಕು.

ಈ ಕುರಿತು ಆನೇಕಲ್‌ನ ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಆರ್‌ ರಾಮಮೂರ್ತಿ ಪ್ರತಿಕ್ರಿಯಿಸಿದ್ದು, ನಮ್ಮಲ್ಲಿ ಅಡುಗೆ ಮಾಡುವವರಿಗೆ ಸರ್ಕಾರ ಕಳೆದ ಆರು ತಿಂಗಳಿಂದ ಸಂಬಳ ನೀಡಿಲ್ಲ. ಹಾಗಾಗಿ ಅವರು ಕೆಲಸಕ್ಕೆ ಬರುವುದು ಕಷ್ಟ. ಆದ್ದರಿಂದ ನಮ್ಮ ಶಾಲೆಗಳಿಗೆ ಇಸ್ಕಾನ್‌ನಿಂದ ಊಟ ಸರಬರಾಜು ಮಾಡಬೇಕೆಂದು ಪ್ರಸ್ತಾಪವಿಟ್ಟಿದ್ದೇವೆ ಎಂದು ಹೇಳಿರುವುದಾಗಿ ಡೆಕ್ಕನ್‌ ಹೆರಾಲ್ಡ್‌ ವರದಿ ಮಾಡಿದೆ. ಅಂದರೆ ಸರ್ಕಾರದ ತಪ್ಪಿಗೆ ಶಾಲಾ ಮಕ್ಕಳು ಶಿಕ್ಷೆ ಅನುಭವಸಬೇಕಾಗಿದೆ.

ರಾಜ್ಯದ 5,507 ಸರ್ಕಾರಿ ಶಾಲೆಗಳ 8.73 ಲಕ್ಷ ವಿದ್ಯಾರ್ಥಿಗಳಿಗೆ ಒಟ್ಟು 68 ಎನ್‌ಜಿಒಗಳು ಮಧ್ಯಾಹ್ನದ ಊಟವನ್ನು ನೀಡುತ್ತಿವೆ. ಇದರಲ್ಲಿ ಅಕ್ಷಯ ಪಾತ್ರ ಫೌಂಡೇಶನ್ ಒಂದೇ ಬೆಂಗಳೂರಿನ 1,212 ಶಾಲೆಗಳಲ್ಲಿನ 1.83 ಲಕ್ಷ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟವನ್ನು ಒದಗಿಸುತ್ತಿದೆ.

ಹೆಚ್ಚುವರಿ ಶಾಲೆಗಳನ್ನು ಎನ್‌ಜಿಒಗಳಿಗೆ ಹಸ್ತಾಂತರಿಸುವ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ, ಮತ್ತು ಈ ವರ್ಷದ ಅಂತ್ಯದ ವೇಳೆಗೆ ಬಾಕಿ ಇರುವ ಸಂಬಳವನ್ನು ನೀಡಲಾಗುವುದು ಎಂದು ಶಿಕ್ಷಣ ಇಲಾಖೆಯ ಬಿಸಿಯೂಟ ಯೋಜನೆಯ ಉಸ್ತುವಾರಿ ಜಂಟಿ ನಿರ್ದೇಶಕ ಮಂಜುನಾಥ್ ಎಸ್‌ಸಿ ತಿಳಿಸಿದ್ದಾರೆ.

ಈ ಕುರಿತು ಅಕ್ಷಯಪ್ರಾತ್ರದಿಂದ ಪ್ರತಿಕ್ರಿಯೆ ಪಡೆಯಲು ಯತ್ನಿಸಿದಾಗ ’ಈ ಬಗ್ಗೆ ಪ್ರತಿಕ್ರಿಯಿಸಲು ನಮಗೆ ಹೆಚ್ಚಿನ ಸಮಯ ಬೇಕು’ ಎಂಬ ಪ್ರತಿ ಉತ್ತರ ಬಂದಿದೆ ಎಂದು ಡೆಕ್ಕನ್‌ ಹೆರಾಲ್ಡ್‌ ವರದಿಯಲ್ಲಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...