Homeಕರ್ನಾಟಕಅಕ್ಷಯಪಾತ್ರ (ಇಸ್ಕಾನ್‌)ಗೆ ಹೊರಗುತ್ತಿಗೆಗೆ ವಿರೋಧ: ಶಾಲೆಗಳಲ್ಲಿಯೇ ಬಿಸಿಯೂಟ ತಯಾರಿಸಲು ಆಗ್ರಹ

ಅಕ್ಷಯಪಾತ್ರ (ಇಸ್ಕಾನ್‌)ಗೆ ಹೊರಗುತ್ತಿಗೆಗೆ ವಿರೋಧ: ಶಾಲೆಗಳಲ್ಲಿಯೇ ಬಿಸಿಯೂಟ ತಯಾರಿಸಲು ಆಗ್ರಹ

ಅಕ್ಷಯ ಪಾತ್ರ ಫೌಂಡೇಶನ್ ಒಂದೇ ಬೆಂಗಳೂರಿನ 1,212 ಶಾಲೆಗಳಲ್ಲಿನ 1.83 ಲಕ್ಷ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟವನ್ನು ಒದಗಿಸುತ್ತಿದೆ

- Advertisement -
- Advertisement -

ಅಪೌಷ್ಟಿಕತೆಯ ಕಾರಣಕ್ಕಾಗಿ ಕರ್ನಾಟಕದಲ್ಲಿ ಶಾಲಾ ಮಕ್ಕಳಿಗೆ ನೀಡುತ್ತಿರುವ ಮಧ್ಯಾಹ್ನದ ಬಿಸಿಯೂಟವನ್ನು  ಅಕ್ಷಯಪಾತ್ರ (ಇಸ್ಕಾನ್‌) ಸೇರಿದಂತೆ ಯಾವುದೇ ಕೇಂದ್ರೀಕೃತ ಅಡಿಗೆಮನೆಗಳಿಗೆ ಗುತ್ತಿಗೆ ನೀಡಬಾರದು. ಬಲಿಗೆ ಆಯಾ ಶಾಲೆಗಳಲ್ಲಿಯೇ ಬಿಸಿಯೂಟ ತಯಾರಿಸಿ ವಿತರಿಸಬೇಕೆಂದು ’ಆಹಾರ ನಮ್ಮ ಹಕ್ಕು – ಕರ್ನಾಟಕ’ ವೇದಿಕೆಯು ಆಗ್ರಹಿಸಿದೆ.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಡಾ. ಆರ್. ಮೋಹನ್ ರಾಯ್ ಮತ್ತು ದಾ. ಸಿಲ್ವಿಯಾ ಕರ್ಪಗಂ, ಕರ್ನಾಟಕದಲ್ಲಿ ಗಂಭೀರ ಕಳವಳಕ್ಕೆ ಕಾರಣವಾಗುವಷ್ಟು ಅಪೌಷ್ಠಿಕತೆ ಇದೆ. 3-4 ವರ್ಷ ವಯಸ್ಸಿನ ಮಕ್ಕಳಲ್ಲಿ ಶೇ 21.5% ಮಕ್ಕಳ ಬೆಳವಣಿಗೆ ಕುಂಠಿತವಾಗಿವೆ. 10-19 ವರ್ಷ ವಯಸ್ಸಿನ ಮಕ್ಕಳಲ್ಲಿ ಶೇ 26.5% ಮಕ್ಕಳು ತೆಳ್ಳಗೆ/ಕೃಶವಾಗಿದ್ದಾರೆ. ಶೇ 9% ಹದಿಹರೆಯದ ಹುಡುಗರು ಮತ್ತು ಶೇ 26% ಹದಿಹರೆಯದ ಹುಡುಗಿಯರು ರಕ್ತಹೀನತೆಯಿಂದ ಬಳಲುತ್ತಿದ್ದಾರೆ ಎಂದು ಆತಂಕ ವ್ಯಕ್ತಿಪಡಿಸಿದ್ದರೆ.

ಕರ್ನಾಟಕದ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಕಲಿಯುತ್ತಿರುವ 94% ಕ್ಕೂ ಹೆಚ್ಚು ಮಕ್ಕಳು
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದವರಾಗಿದ್ದರೆ. ಈ ಮಕ್ಕಳಿಗೆ ಅಪೌಷ್ಠಿಕತೆ ಬರಬಾರದೆಂದೇ ಆರಂಭಿಸಿದ ಮಧ್ಯಾಹ್ನದ ಬಿಸಿಯೂಟ ಯೋಜನೆ (ಅಕ್ಷರದಾಸೋಹ) ತನ್ನ ನಿಗಧಿತ ಗುರಿ ಸಾಧಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ನಗರ ಪ್ರದೇಶಗಳಲ್ಲಿ ಶಾಲೆಗಳಲ್ಲಿ ಅಡುಗೆ ತಯಾರಿಸಿದೆ, ಅಕ್ಷಯಪಾತ್ರ (ಇಸ್ಕಾನ್‌) ಸೇರಿದಂತೆ ಹಲವು ಎನ್‌ಜಿಓಗಳು ನಡೆಸುವ ಕೇಂದ್ರೀಕೃತ ಅಡಿಗೆಮನೆಗಳಿಗೆ ಗುತ್ತಿಗೆ ನೀಡುತ್ತಿರುವುದೇ ಕಾರಣವಾಗಿದೆ ಎಂದು ವೇದಿಕೆ ಆರೋಪಿಸಿದೆ.

ಸಂಸತ್ತು ಅಂಗೀಕರಿಸಿದ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013 (ಎನ್‌ಎಫ್‌ಎಸ್‌ಎ) ಅಡಿಯಲ್ಲಿ, ಸರ್ಕಾರಿ ಶಾಲೆಗಳಲ್ಲಿ ತಾಜಾ ಬೇಯಿಸಿದ ಪೌಷ್ಟಿಕ ಊಟವನ್ನು ಪ್ರತಿ ಮಗುವಿನ ಹಕ್ಕು ಎಂದು ಕರೆಯಲಾಗಿದೆ. ಕಾಯಿದೆಯ ಸೆಕ್ಷನ್ 5 (2) ರ ಪ್ರಕಾರ ಈ ಊಟವನ್ನು ಶಾಲಾ ಆಧಾರಿತ ಅಡುಗೆ ಮನೆಗಳಲ್ಲಿ ಬೇಯಿಸಬೇಕು.

ಸಾಕಷ್ಟು ಸ್ಥಳಾವಕಾಶವಿಲ್ಲದ ನಗರ ಪ್ರದೇಶಗಳಲ್ಲಿನ ಶಾಲೆಗಳಿಗೆ ಮಾತ್ರ ಇದರಿಂದ ವಿನಾಯಿತಿ ನೀಡಲಾಗಿದೆ. ಅಂತಹ ಶಾಲೆಗಳಲ್ಲಿ ಎನ್‌ಜಿಒಗಳು ನಡೆಸುವ ಕೇಂದ್ರೀಕೃತ ಅಡಿಗೆಮನೆಗಳಿಂದ ಆಹಾರವನ್ನು ಪೂರೈಸಬಹುದು. ಆದರೆ ಇದನ್ನೆ ನೆಪಮಾಡಿಕೊಂಡು ಬೆಂಗಳೂರು ಜಿಲ್ಲೆಯಲ್ಲಿ 95% ಶಾಲೆಗಳಲ್ಲಿ ಸ್ಥಳಾವಕಾಶ ಇದ್ದರೂ ಸಹ ಅಡುಗೆ ಮಾಡದೇ ಎನ್‌ಜಿಒಗಳಿಗೆ ಗುತ್ತಿಗೆ ನೀಡಲಾಗಿದೆ. ಇತ್ತೀಚೆಗೆ ಗ್ರಾಮೀಣ ಪ್ರದೇಶದ ಶಾಲೆಗಳಿಗೆ ಊಟ ಸರಬರಾಜನ್ನು ಸಹ ಗುತ್ತಿಗೆ ನೀಡಲು ಸರ್ಕಾರ ನಿರ್ಧರಿಸಿದೆ. ಅನೇಕಲ್‌ನಲ್ಲಿರುವ 50 ಶಾಲೆಗಳನ್ನು ಕೇವಲ ಅಕ್ಷಯ ಪಾತ್ರ ಎನ್‌ಜಿಓಗೆ ಹಸ್ತಾಂತರಿಸುವ ಪ್ರಸ್ತಾಪವಿದೆ. ಇದು ಎನ್‌ಎಫ್‌ಎಸ್‌ಎ ನಿಯಮಗಳಿಗೆ ವಿರುದ್ಧವಾಗಿದೆ ಎಂದು ವೇದಿಕೆಯ ದಾ. ಸಿಲ್ವಿಯಾ ಕರ್ಪಗಂ ಆರೋಪಿಸಿದ್ದಾರೆ.

ಈ ನೀತಿಯಿಂದಾಗಿ ಮಕ್ಕಳಿಗೆ ಪೌಷ್ಠಕಾಂಶದ, ರುಚಿಯಾದ ಮತ್ತು ಬಿಸಿಯಾದ ಊಟ ದೊರೆಯುತ್ತಿಲ್ಲ. ಊಟ ಸರಬರಾಜು ಮಾಡುವ ಎನ್‌ಜಿಓಗಳು ತಮ್ಮ ಟ್ರಿಪ್‌ಗಳನ್ನು ಕಡಿಮೆ ಮಾಡುವುದಕ್ಕಾಗಿ ಕೆಲವು ಶಾಲೆಗಳಿಗೆ ಊಟದ ಸಮಯಕ್ಕಿಂತ ಮುಂಚೇಯೇ ಅಥವಾ ಊಟದ ಸಮಯದ ನಂತರ ಸರಬರಾಜು ಮಾಡಲಾಗುತ್ತಿದೆ. ಕೆಲವು ಶಾಲೆಗಳಿಗೆ ಬಿಸಿಯೂಟ ಮತ್ತು ಹಾಲು ಎರಡನ್ನು ಒಂದೇ ಸಮಯಕ್ಕೆ ನೀಡಲಾಗುತ್ತಿದೆ. ಆದ್ದರಿಂದ ಅದೇ ಶಾಲೆಯಲ್ಲಿ ಅಡುಗೆ ಮಾಡಿದಾಗ ಮಕ್ಕಳು ಹೆಚ್ಚು ಊಟ ಮಾಡುತ್ತಿದ್ದು ಹೊರಗಡೆಯಿಂದ ಸರಬರಾಜು ಆದಾಗ ಮಕ್ಕಳು ಹೊಟ್ಟೆ ತುಂಬಾ ಊಟ ಮಾಡುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಅಲ್ಲದೇ ಇಸ್ಕಾನ್‌ ಊಟದಲ್ಲಿ ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಬಳಸುತ್ತಿಲ್ಲ. ಮೈಸೂರಿನ ಸಿ.ಎಫ್.ಟಿ.ಆರ್.ಐ ನಡೆಸಿದ ಅಧ್ಯಯನವು ಆಹಾರದಲ್ಲಿ ಈರುಳ್ಳಿ ಮತ್ತು ಬೆಳ್ಳುಳ್ಳಿಯ ಬಳಕೆಯು ರುಚಿಯನ್ನು ಹೆಚ್ಚಿಸುವುದರ ಜೊತೆಗೆ ಕಬ್ಬಿಣ ಮತ್ತು ಸತುವು (ಜಿಂಕ್) ಹೀರಿಕೊಳ್ಳುವಿಕೆಯನ್ನು ಹೆಚ್ಚಿಸುತ್ತದೆ ಎಂದು ವರದಿ ನೀಡಿದೆ. ಆದರೆ ಕೇವಲ ಧಾರ್ಮಿಕ ಕಾರಣಕ್ಕಾಗಿ ಈರುಳ್ಳಿ ಬೆಳ್ಳುಳ್ಳಿ ಬಳಸಿದಿರುವುದು ಕರ್ನಾಟಕ ಸರ್ಕಾರದೊಡನೆ ಅವರು ಮಾಡಿಕೊಂಡಿರವು ಒಪ್ಪಂದದ ಸ್ಪಷ್ಟ ಉಲ್ಲಂಘನೆಯಾಗಿದೆ.

ಅಲ್ಲದೇ ಇದೇ ಸಂಸ್ಥೆಯು ಸರ್ಕಾರದಿಂದ ಇದಕ್ಕಾಗಿ ಹಣ ಪಡೆಯುವುದರ ಜೊತೆಗೆ ದೇಶ ವಿದೇಶಗಳಿಂದಳು ದೇಣಿಗೆ ಪಡೆಯುತ್ತಿದೆ. ಸರ್ಕಾರವೇ ಹಣ ನೀಡುವುದರಿಂದ ಮಕ್ಕಳಿಗೆ ಬಿಸಿಯೂಟದ ನೆಪದಲ್ಲಿ ದೇಣಿಗೆ ಪಡೆಯುವುದು ಸಹ ಕಾನೂನಿನ ಉಲ್ಲಂಘಟನೆ ಎಂದು ಡಾ. ಆರ್. ಮೋಹನ್ ರಾಯ್ ದೂರಿದ್ದಾರೆ.

ಇದನ್ನು ವಿರೋಧಿಸಿ ಹಲವು ಹಕ್ಕೊತ್ತಾಯಗಳ ಈಡೇರಿಕೆಗೆ ಆಹಾರ ನಮ್ಮ ಹಕ್ಕು – ಕರ್ನಾಟಕ’ ವೇದಿಕೆಯು ಸರ್ಕಾರವನ್ನು ಒತ್ತಾಯಿಸಿದೆ.

  1. ಸಾಧ್ಯವಾದಷ್ಟು ಶಾಲೆಗಳಲ್ಲಿಯೇ ಶುಚಿ ಮತ್ತು ರುಚಿಯಾದ ಗುಣಮಟ್ಟದ ಆಹಾರ ಮಕ್ಕಳಿಗೆ ತಯಾರಿಸಿ ಸಿಗಬೇಕು. ಹೊಸದಾಗಿ ಕೇಂದ್ರೀಕೃತ ಅಡುಗೆಮನೆಗಳಿಗೆ ಗುತ್ತಿಗೆ ನೀಡಬಾರದು.

2. ಮಕ್ಕಳಿಗೆ ಹಾಲು, ಹಣ್ಣು ಮತ್ತು ತರಕಾರಿಗಳ ಜೊತೆಗೆ ಮೊಟ್ಟೆಗಳನ್ನು ಒದಗಿಸಲು ರಾಜ್ಯ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ಮೊಟ್ಟೆ ತಿನ್ನದ ಮಕ್ಕಳಿಗೆ ಹಣ್ಣು ನೀಡಬಹುದು.

3.  ಹಾಸ್ಟೆಲ್‌ಗಳಲ್ಲಿ ನಿರ್ಧರಿಸುವಂತೆ ಪ್ರತಿ ಮಗುವಿಗೆ ದಿನಕ್ಕೆ 20ರೂ ಅನುದಾನ ನೀಡಿ ಆ ಮೂಲಕ ಗುಣಮಟ್ಟದ ಆಹಾರ ಒದಗಿಸಬೇಕು. ಅಡುಗೆ ಮಾಡುವವರಿಗೆ ಮತ್ತು ಸಹಾಯಕರಿಗೆ ಕನಿಷ್ಠ ವೇತನ ಮಾನದಂಡಗಳು ಪ್ರಕಾರ ಸಂಭಾವನೆ ನೀಡಬೇಕು.

ಈ ಕುರಿತು ಆನೇಕಲ್‌ನ ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಆರ್‌ ರಾಮಮೂರ್ತಿ ಪ್ರತಿಕ್ರಿಯಿಸಿದ್ದು, ನಮ್ಮಲ್ಲಿ ಅಡುಗೆ ಮಾಡುವವರಿಗೆ ಸರ್ಕಾರ ಕಳೆದ ಆರು ತಿಂಗಳಿಂದ ಸಂಬಳ ನೀಡಿಲ್ಲ. ಹಾಗಾಗಿ ಅವರು ಕೆಲಸಕ್ಕೆ ಬರುವುದು ಕಷ್ಟ. ಆದ್ದರಿಂದ ನಮ್ಮ ಶಾಲೆಗಳಿಗೆ ಇಸ್ಕಾನ್‌ನಿಂದ ಊಟ ಸರಬರಾಜು ಮಾಡಬೇಕೆಂದು ಪ್ರಸ್ತಾಪವಿಟ್ಟಿದ್ದೇವೆ ಎಂದು ಹೇಳಿರುವುದಾಗಿ ಡೆಕ್ಕನ್‌ ಹೆರಾಲ್ಡ್‌ ವರದಿ ಮಾಡಿದೆ. ಅಂದರೆ ಸರ್ಕಾರದ ತಪ್ಪಿಗೆ ಶಾಲಾ ಮಕ್ಕಳು ಶಿಕ್ಷೆ ಅನುಭವಸಬೇಕಾಗಿದೆ.

ರಾಜ್ಯದ 5,507 ಸರ್ಕಾರಿ ಶಾಲೆಗಳ 8.73 ಲಕ್ಷ ವಿದ್ಯಾರ್ಥಿಗಳಿಗೆ ಒಟ್ಟು 68 ಎನ್‌ಜಿಒಗಳು ಮಧ್ಯಾಹ್ನದ ಊಟವನ್ನು ನೀಡುತ್ತಿವೆ. ಇದರಲ್ಲಿ ಅಕ್ಷಯ ಪಾತ್ರ ಫೌಂಡೇಶನ್ ಒಂದೇ ಬೆಂಗಳೂರಿನ 1,212 ಶಾಲೆಗಳಲ್ಲಿನ 1.83 ಲಕ್ಷ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟವನ್ನು ಒದಗಿಸುತ್ತಿದೆ.

ಹೆಚ್ಚುವರಿ ಶಾಲೆಗಳನ್ನು ಎನ್‌ಜಿಒಗಳಿಗೆ ಹಸ್ತಾಂತರಿಸುವ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ, ಮತ್ತು ಈ ವರ್ಷದ ಅಂತ್ಯದ ವೇಳೆಗೆ ಬಾಕಿ ಇರುವ ಸಂಬಳವನ್ನು ನೀಡಲಾಗುವುದು ಎಂದು ಶಿಕ್ಷಣ ಇಲಾಖೆಯ ಬಿಸಿಯೂಟ ಯೋಜನೆಯ ಉಸ್ತುವಾರಿ ಜಂಟಿ ನಿರ್ದೇಶಕ ಮಂಜುನಾಥ್ ಎಸ್‌ಸಿ ತಿಳಿಸಿದ್ದಾರೆ.

ಈ ಕುರಿತು ಅಕ್ಷಯಪ್ರಾತ್ರದಿಂದ ಪ್ರತಿಕ್ರಿಯೆ ಪಡೆಯಲು ಯತ್ನಿಸಿದಾಗ ’ಈ ಬಗ್ಗೆ ಪ್ರತಿಕ್ರಿಯಿಸಲು ನಮಗೆ ಹೆಚ್ಚಿನ ಸಮಯ ಬೇಕು’ ಎಂಬ ಪ್ರತಿ ಉತ್ತರ ಬಂದಿದೆ ಎಂದು ಡೆಕ್ಕನ್‌ ಹೆರಾಲ್ಡ್‌ ವರದಿಯಲ್ಲಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...