Homeಕರ್ನಾಟಕಅಕ್ಷಯಪಾತ್ರ (ಇಸ್ಕಾನ್‌)ಗೆ ಹೊರಗುತ್ತಿಗೆಗೆ ವಿರೋಧ: ಶಾಲೆಗಳಲ್ಲಿಯೇ ಬಿಸಿಯೂಟ ತಯಾರಿಸಲು ಆಗ್ರಹ

ಅಕ್ಷಯಪಾತ್ರ (ಇಸ್ಕಾನ್‌)ಗೆ ಹೊರಗುತ್ತಿಗೆಗೆ ವಿರೋಧ: ಶಾಲೆಗಳಲ್ಲಿಯೇ ಬಿಸಿಯೂಟ ತಯಾರಿಸಲು ಆಗ್ರಹ

ಅಕ್ಷಯ ಪಾತ್ರ ಫೌಂಡೇಶನ್ ಒಂದೇ ಬೆಂಗಳೂರಿನ 1,212 ಶಾಲೆಗಳಲ್ಲಿನ 1.83 ಲಕ್ಷ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟವನ್ನು ಒದಗಿಸುತ್ತಿದೆ

- Advertisement -
- Advertisement -

ಅಪೌಷ್ಟಿಕತೆಯ ಕಾರಣಕ್ಕಾಗಿ ಕರ್ನಾಟಕದಲ್ಲಿ ಶಾಲಾ ಮಕ್ಕಳಿಗೆ ನೀಡುತ್ತಿರುವ ಮಧ್ಯಾಹ್ನದ ಬಿಸಿಯೂಟವನ್ನು  ಅಕ್ಷಯಪಾತ್ರ (ಇಸ್ಕಾನ್‌) ಸೇರಿದಂತೆ ಯಾವುದೇ ಕೇಂದ್ರೀಕೃತ ಅಡಿಗೆಮನೆಗಳಿಗೆ ಗುತ್ತಿಗೆ ನೀಡಬಾರದು. ಬಲಿಗೆ ಆಯಾ ಶಾಲೆಗಳಲ್ಲಿಯೇ ಬಿಸಿಯೂಟ ತಯಾರಿಸಿ ವಿತರಿಸಬೇಕೆಂದು ’ಆಹಾರ ನಮ್ಮ ಹಕ್ಕು – ಕರ್ನಾಟಕ’ ವೇದಿಕೆಯು ಆಗ್ರಹಿಸಿದೆ.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಡಾ. ಆರ್. ಮೋಹನ್ ರಾಯ್ ಮತ್ತು ದಾ. ಸಿಲ್ವಿಯಾ ಕರ್ಪಗಂ, ಕರ್ನಾಟಕದಲ್ಲಿ ಗಂಭೀರ ಕಳವಳಕ್ಕೆ ಕಾರಣವಾಗುವಷ್ಟು ಅಪೌಷ್ಠಿಕತೆ ಇದೆ. 3-4 ವರ್ಷ ವಯಸ್ಸಿನ ಮಕ್ಕಳಲ್ಲಿ ಶೇ 21.5% ಮಕ್ಕಳ ಬೆಳವಣಿಗೆ ಕುಂಠಿತವಾಗಿವೆ. 10-19 ವರ್ಷ ವಯಸ್ಸಿನ ಮಕ್ಕಳಲ್ಲಿ ಶೇ 26.5% ಮಕ್ಕಳು ತೆಳ್ಳಗೆ/ಕೃಶವಾಗಿದ್ದಾರೆ. ಶೇ 9% ಹದಿಹರೆಯದ ಹುಡುಗರು ಮತ್ತು ಶೇ 26% ಹದಿಹರೆಯದ ಹುಡುಗಿಯರು ರಕ್ತಹೀನತೆಯಿಂದ ಬಳಲುತ್ತಿದ್ದಾರೆ ಎಂದು ಆತಂಕ ವ್ಯಕ್ತಿಪಡಿಸಿದ್ದರೆ.

ಕರ್ನಾಟಕದ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಕಲಿಯುತ್ತಿರುವ 94% ಕ್ಕೂ ಹೆಚ್ಚು ಮಕ್ಕಳು
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದವರಾಗಿದ್ದರೆ. ಈ ಮಕ್ಕಳಿಗೆ ಅಪೌಷ್ಠಿಕತೆ ಬರಬಾರದೆಂದೇ ಆರಂಭಿಸಿದ ಮಧ್ಯಾಹ್ನದ ಬಿಸಿಯೂಟ ಯೋಜನೆ (ಅಕ್ಷರದಾಸೋಹ) ತನ್ನ ನಿಗಧಿತ ಗುರಿ ಸಾಧಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ನಗರ ಪ್ರದೇಶಗಳಲ್ಲಿ ಶಾಲೆಗಳಲ್ಲಿ ಅಡುಗೆ ತಯಾರಿಸಿದೆ, ಅಕ್ಷಯಪಾತ್ರ (ಇಸ್ಕಾನ್‌) ಸೇರಿದಂತೆ ಹಲವು ಎನ್‌ಜಿಓಗಳು ನಡೆಸುವ ಕೇಂದ್ರೀಕೃತ ಅಡಿಗೆಮನೆಗಳಿಗೆ ಗುತ್ತಿಗೆ ನೀಡುತ್ತಿರುವುದೇ ಕಾರಣವಾಗಿದೆ ಎಂದು ವೇದಿಕೆ ಆರೋಪಿಸಿದೆ.

ಸಂಸತ್ತು ಅಂಗೀಕರಿಸಿದ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013 (ಎನ್‌ಎಫ್‌ಎಸ್‌ಎ) ಅಡಿಯಲ್ಲಿ, ಸರ್ಕಾರಿ ಶಾಲೆಗಳಲ್ಲಿ ತಾಜಾ ಬೇಯಿಸಿದ ಪೌಷ್ಟಿಕ ಊಟವನ್ನು ಪ್ರತಿ ಮಗುವಿನ ಹಕ್ಕು ಎಂದು ಕರೆಯಲಾಗಿದೆ. ಕಾಯಿದೆಯ ಸೆಕ್ಷನ್ 5 (2) ರ ಪ್ರಕಾರ ಈ ಊಟವನ್ನು ಶಾಲಾ ಆಧಾರಿತ ಅಡುಗೆ ಮನೆಗಳಲ್ಲಿ ಬೇಯಿಸಬೇಕು.

ಸಾಕಷ್ಟು ಸ್ಥಳಾವಕಾಶವಿಲ್ಲದ ನಗರ ಪ್ರದೇಶಗಳಲ್ಲಿನ ಶಾಲೆಗಳಿಗೆ ಮಾತ್ರ ಇದರಿಂದ ವಿನಾಯಿತಿ ನೀಡಲಾಗಿದೆ. ಅಂತಹ ಶಾಲೆಗಳಲ್ಲಿ ಎನ್‌ಜಿಒಗಳು ನಡೆಸುವ ಕೇಂದ್ರೀಕೃತ ಅಡಿಗೆಮನೆಗಳಿಂದ ಆಹಾರವನ್ನು ಪೂರೈಸಬಹುದು. ಆದರೆ ಇದನ್ನೆ ನೆಪಮಾಡಿಕೊಂಡು ಬೆಂಗಳೂರು ಜಿಲ್ಲೆಯಲ್ಲಿ 95% ಶಾಲೆಗಳಲ್ಲಿ ಸ್ಥಳಾವಕಾಶ ಇದ್ದರೂ ಸಹ ಅಡುಗೆ ಮಾಡದೇ ಎನ್‌ಜಿಒಗಳಿಗೆ ಗುತ್ತಿಗೆ ನೀಡಲಾಗಿದೆ. ಇತ್ತೀಚೆಗೆ ಗ್ರಾಮೀಣ ಪ್ರದೇಶದ ಶಾಲೆಗಳಿಗೆ ಊಟ ಸರಬರಾಜನ್ನು ಸಹ ಗುತ್ತಿಗೆ ನೀಡಲು ಸರ್ಕಾರ ನಿರ್ಧರಿಸಿದೆ. ಅನೇಕಲ್‌ನಲ್ಲಿರುವ 50 ಶಾಲೆಗಳನ್ನು ಕೇವಲ ಅಕ್ಷಯ ಪಾತ್ರ ಎನ್‌ಜಿಓಗೆ ಹಸ್ತಾಂತರಿಸುವ ಪ್ರಸ್ತಾಪವಿದೆ. ಇದು ಎನ್‌ಎಫ್‌ಎಸ್‌ಎ ನಿಯಮಗಳಿಗೆ ವಿರುದ್ಧವಾಗಿದೆ ಎಂದು ವೇದಿಕೆಯ ದಾ. ಸಿಲ್ವಿಯಾ ಕರ್ಪಗಂ ಆರೋಪಿಸಿದ್ದಾರೆ.

ಈ ನೀತಿಯಿಂದಾಗಿ ಮಕ್ಕಳಿಗೆ ಪೌಷ್ಠಕಾಂಶದ, ರುಚಿಯಾದ ಮತ್ತು ಬಿಸಿಯಾದ ಊಟ ದೊರೆಯುತ್ತಿಲ್ಲ. ಊಟ ಸರಬರಾಜು ಮಾಡುವ ಎನ್‌ಜಿಓಗಳು ತಮ್ಮ ಟ್ರಿಪ್‌ಗಳನ್ನು ಕಡಿಮೆ ಮಾಡುವುದಕ್ಕಾಗಿ ಕೆಲವು ಶಾಲೆಗಳಿಗೆ ಊಟದ ಸಮಯಕ್ಕಿಂತ ಮುಂಚೇಯೇ ಅಥವಾ ಊಟದ ಸಮಯದ ನಂತರ ಸರಬರಾಜು ಮಾಡಲಾಗುತ್ತಿದೆ. ಕೆಲವು ಶಾಲೆಗಳಿಗೆ ಬಿಸಿಯೂಟ ಮತ್ತು ಹಾಲು ಎರಡನ್ನು ಒಂದೇ ಸಮಯಕ್ಕೆ ನೀಡಲಾಗುತ್ತಿದೆ. ಆದ್ದರಿಂದ ಅದೇ ಶಾಲೆಯಲ್ಲಿ ಅಡುಗೆ ಮಾಡಿದಾಗ ಮಕ್ಕಳು ಹೆಚ್ಚು ಊಟ ಮಾಡುತ್ತಿದ್ದು ಹೊರಗಡೆಯಿಂದ ಸರಬರಾಜು ಆದಾಗ ಮಕ್ಕಳು ಹೊಟ್ಟೆ ತುಂಬಾ ಊಟ ಮಾಡುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಅಲ್ಲದೇ ಇಸ್ಕಾನ್‌ ಊಟದಲ್ಲಿ ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಬಳಸುತ್ತಿಲ್ಲ. ಮೈಸೂರಿನ ಸಿ.ಎಫ್.ಟಿ.ಆರ್.ಐ ನಡೆಸಿದ ಅಧ್ಯಯನವು ಆಹಾರದಲ್ಲಿ ಈರುಳ್ಳಿ ಮತ್ತು ಬೆಳ್ಳುಳ್ಳಿಯ ಬಳಕೆಯು ರುಚಿಯನ್ನು ಹೆಚ್ಚಿಸುವುದರ ಜೊತೆಗೆ ಕಬ್ಬಿಣ ಮತ್ತು ಸತುವು (ಜಿಂಕ್) ಹೀರಿಕೊಳ್ಳುವಿಕೆಯನ್ನು ಹೆಚ್ಚಿಸುತ್ತದೆ ಎಂದು ವರದಿ ನೀಡಿದೆ. ಆದರೆ ಕೇವಲ ಧಾರ್ಮಿಕ ಕಾರಣಕ್ಕಾಗಿ ಈರುಳ್ಳಿ ಬೆಳ್ಳುಳ್ಳಿ ಬಳಸಿದಿರುವುದು ಕರ್ನಾಟಕ ಸರ್ಕಾರದೊಡನೆ ಅವರು ಮಾಡಿಕೊಂಡಿರವು ಒಪ್ಪಂದದ ಸ್ಪಷ್ಟ ಉಲ್ಲಂಘನೆಯಾಗಿದೆ.

ಅಲ್ಲದೇ ಇದೇ ಸಂಸ್ಥೆಯು ಸರ್ಕಾರದಿಂದ ಇದಕ್ಕಾಗಿ ಹಣ ಪಡೆಯುವುದರ ಜೊತೆಗೆ ದೇಶ ವಿದೇಶಗಳಿಂದಳು ದೇಣಿಗೆ ಪಡೆಯುತ್ತಿದೆ. ಸರ್ಕಾರವೇ ಹಣ ನೀಡುವುದರಿಂದ ಮಕ್ಕಳಿಗೆ ಬಿಸಿಯೂಟದ ನೆಪದಲ್ಲಿ ದೇಣಿಗೆ ಪಡೆಯುವುದು ಸಹ ಕಾನೂನಿನ ಉಲ್ಲಂಘಟನೆ ಎಂದು ಡಾ. ಆರ್. ಮೋಹನ್ ರಾಯ್ ದೂರಿದ್ದಾರೆ.

ಇದನ್ನು ವಿರೋಧಿಸಿ ಹಲವು ಹಕ್ಕೊತ್ತಾಯಗಳ ಈಡೇರಿಕೆಗೆ ಆಹಾರ ನಮ್ಮ ಹಕ್ಕು – ಕರ್ನಾಟಕ’ ವೇದಿಕೆಯು ಸರ್ಕಾರವನ್ನು ಒತ್ತಾಯಿಸಿದೆ.

  1. ಸಾಧ್ಯವಾದಷ್ಟು ಶಾಲೆಗಳಲ್ಲಿಯೇ ಶುಚಿ ಮತ್ತು ರುಚಿಯಾದ ಗುಣಮಟ್ಟದ ಆಹಾರ ಮಕ್ಕಳಿಗೆ ತಯಾರಿಸಿ ಸಿಗಬೇಕು. ಹೊಸದಾಗಿ ಕೇಂದ್ರೀಕೃತ ಅಡುಗೆಮನೆಗಳಿಗೆ ಗುತ್ತಿಗೆ ನೀಡಬಾರದು.

2. ಮಕ್ಕಳಿಗೆ ಹಾಲು, ಹಣ್ಣು ಮತ್ತು ತರಕಾರಿಗಳ ಜೊತೆಗೆ ಮೊಟ್ಟೆಗಳನ್ನು ಒದಗಿಸಲು ರಾಜ್ಯ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ಮೊಟ್ಟೆ ತಿನ್ನದ ಮಕ್ಕಳಿಗೆ ಹಣ್ಣು ನೀಡಬಹುದು.

3.  ಹಾಸ್ಟೆಲ್‌ಗಳಲ್ಲಿ ನಿರ್ಧರಿಸುವಂತೆ ಪ್ರತಿ ಮಗುವಿಗೆ ದಿನಕ್ಕೆ 20ರೂ ಅನುದಾನ ನೀಡಿ ಆ ಮೂಲಕ ಗುಣಮಟ್ಟದ ಆಹಾರ ಒದಗಿಸಬೇಕು. ಅಡುಗೆ ಮಾಡುವವರಿಗೆ ಮತ್ತು ಸಹಾಯಕರಿಗೆ ಕನಿಷ್ಠ ವೇತನ ಮಾನದಂಡಗಳು ಪ್ರಕಾರ ಸಂಭಾವನೆ ನೀಡಬೇಕು.

ಈ ಕುರಿತು ಆನೇಕಲ್‌ನ ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಆರ್‌ ರಾಮಮೂರ್ತಿ ಪ್ರತಿಕ್ರಿಯಿಸಿದ್ದು, ನಮ್ಮಲ್ಲಿ ಅಡುಗೆ ಮಾಡುವವರಿಗೆ ಸರ್ಕಾರ ಕಳೆದ ಆರು ತಿಂಗಳಿಂದ ಸಂಬಳ ನೀಡಿಲ್ಲ. ಹಾಗಾಗಿ ಅವರು ಕೆಲಸಕ್ಕೆ ಬರುವುದು ಕಷ್ಟ. ಆದ್ದರಿಂದ ನಮ್ಮ ಶಾಲೆಗಳಿಗೆ ಇಸ್ಕಾನ್‌ನಿಂದ ಊಟ ಸರಬರಾಜು ಮಾಡಬೇಕೆಂದು ಪ್ರಸ್ತಾಪವಿಟ್ಟಿದ್ದೇವೆ ಎಂದು ಹೇಳಿರುವುದಾಗಿ ಡೆಕ್ಕನ್‌ ಹೆರಾಲ್ಡ್‌ ವರದಿ ಮಾಡಿದೆ. ಅಂದರೆ ಸರ್ಕಾರದ ತಪ್ಪಿಗೆ ಶಾಲಾ ಮಕ್ಕಳು ಶಿಕ್ಷೆ ಅನುಭವಸಬೇಕಾಗಿದೆ.

ರಾಜ್ಯದ 5,507 ಸರ್ಕಾರಿ ಶಾಲೆಗಳ 8.73 ಲಕ್ಷ ವಿದ್ಯಾರ್ಥಿಗಳಿಗೆ ಒಟ್ಟು 68 ಎನ್‌ಜಿಒಗಳು ಮಧ್ಯಾಹ್ನದ ಊಟವನ್ನು ನೀಡುತ್ತಿವೆ. ಇದರಲ್ಲಿ ಅಕ್ಷಯ ಪಾತ್ರ ಫೌಂಡೇಶನ್ ಒಂದೇ ಬೆಂಗಳೂರಿನ 1,212 ಶಾಲೆಗಳಲ್ಲಿನ 1.83 ಲಕ್ಷ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟವನ್ನು ಒದಗಿಸುತ್ತಿದೆ.

ಹೆಚ್ಚುವರಿ ಶಾಲೆಗಳನ್ನು ಎನ್‌ಜಿಒಗಳಿಗೆ ಹಸ್ತಾಂತರಿಸುವ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ, ಮತ್ತು ಈ ವರ್ಷದ ಅಂತ್ಯದ ವೇಳೆಗೆ ಬಾಕಿ ಇರುವ ಸಂಬಳವನ್ನು ನೀಡಲಾಗುವುದು ಎಂದು ಶಿಕ್ಷಣ ಇಲಾಖೆಯ ಬಿಸಿಯೂಟ ಯೋಜನೆಯ ಉಸ್ತುವಾರಿ ಜಂಟಿ ನಿರ್ದೇಶಕ ಮಂಜುನಾಥ್ ಎಸ್‌ಸಿ ತಿಳಿಸಿದ್ದಾರೆ.

ಈ ಕುರಿತು ಅಕ್ಷಯಪ್ರಾತ್ರದಿಂದ ಪ್ರತಿಕ್ರಿಯೆ ಪಡೆಯಲು ಯತ್ನಿಸಿದಾಗ ’ಈ ಬಗ್ಗೆ ಪ್ರತಿಕ್ರಿಯಿಸಲು ನಮಗೆ ಹೆಚ್ಚಿನ ಸಮಯ ಬೇಕು’ ಎಂಬ ಪ್ರತಿ ಉತ್ತರ ಬಂದಿದೆ ಎಂದು ಡೆಕ್ಕನ್‌ ಹೆರಾಲ್ಡ್‌ ವರದಿಯಲ್ಲಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...