Homeಕರೋನಾ ತಲ್ಲಣಇನ್ನೂ ಹೆಚ್ಚಿನ ಕೊರೊನಾ ಪರಿಹಾರ ಸಾಧ್ಯವಿಲ್ಲ: ಸುಪ್ರೀಂ‌ಗೆ ಕೇಂದ್ರ ಸರ್ಕಾರ

ಇನ್ನೂ ಹೆಚ್ಚಿನ ಕೊರೊನಾ ಪರಿಹಾರ ಸಾಧ್ಯವಿಲ್ಲ: ಸುಪ್ರೀಂ‌ಗೆ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರ ಹಲವಾರು ಸಮಸ್ಯೆಗಳನ್ನು ಎದುರಿಸಲು ವಿಫಲವಾಗಿದೆ ಎಂದು ಸುಪ್ರೀಂಕೊರ್ಟ್ ಹೇಳಿದೆ.

- Advertisement -
- Advertisement -

ಹಣಕಾಸಿನ ನೀತಿಯಲ್ಲಿ ನ್ಯಾಯಾಲಯಗಳು ಹಸ್ತಕ್ಷೇಪ ಮಾಡಬಾರದು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಹೇಳಿದ್ದು, ಕೊರೊನಾ ಸಾಂಕ್ರಮಿಕದ ಹಿನ್ನಲೆಯಲ್ಲಿ “ವಿವಿಧ ಕ್ಷೇತ್ರಗಳಿಗೆ ಇನ್ನೂ ಹೆಚ್ಚಿನ ಪರಿಹಾರ ನೀಡಲು ಸಾಧ್ಯವಿಲ್ಲ” ಎಂದು ಮಾಹಿತಿ ನೀಡಿದೆ.

ರಿಯಲ್ ಎಸ್ಟೇಸ್ ಸೇರಿದಂತೆ ಇನ್ನೂ ಹೆಚ್ಚಿನ ವಲಯಗಳಿಗೆ ನೆರವು ನೀಡಬೇಕು ಎಂಬ ಬೇಡಿಕೆಗೆ ಕೇಂದ್ರವು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ, “ಆರ್ಥಿಕ ನೀತಿಯು ಸರ್ಕಾರದ ನಿಯಂತ್ರಣದ್ದಾಗಿದ್ದು, ನ್ಯಾಯಾಲಯ ಇದರಲ್ಲಿ ಹಸ್ತಕ್ಷೇಪ ಮಾಡಬಾರದು. 2 ಕೋಟಿವರೆಗಿನ ಚಕ್ರ ಬಡ್ಡಿಯನ್ನು ಮನ್ನಾ ಮಾಡುವುದರ ಜೊತೆಗೆ ಇನ್ನೂ ಹೆಚ್ಚಿನ ಪರಿಹಾರ ನೀಡಿದರೆ ಅದು ರಾಷ್ಟ್ರದ ಆರ್ಥಿಕತೆ ಮತ್ತು ಬ್ಯಾಂಕಿಂಗ್ ಕ್ಷೇತ್ರಕ್ಕೆ ಹಾನಿಯುಂಟು ಮಾಡುತ್ತದೆ” ಎಂದು ಹೇಳಿದೆ.

ಆದರೆ ಕೇಂದ್ರ ಸರ್ಕಾರ ಸಲ್ಲಿಸಿರುವ ಅಫಿಡವಿಟ್ ’’ತೃಪ್ತಿಕರವಾಗಿಲ್ಲ” ಎಂದು ಸುಪ್ರೀಂಕೋರ್ಟ್ ಹೇಳಿದ್ದು, ಒಂದು ವಾರದಲ್ಲಿ ಹೊಸ ಅಫಿಡವಿಟ್ ಸಲ್ಲಿಸುವಂತೆ ಕೇಂದ್ರಕ್ಕೆ ಸೂಚಿಸಿದೆ.

ಇದನ್ನೂ ಓದಿ: ಕೊರೊನಾದಿಂದ 551 ವೈದ್ಯರ ಸಾವು: ಭಾರತೀಯ ವೈದ್ಯಕೀಯ ಸಂಘಟನೆಯ ದತ್ತಾಂಶ
2 ಕೋಟಿವರೆಗಿನ ಸಾಲದ ಮರುಪಾವತಿ ಮೇಲಿನ ಬಡ್ಡಿಯನ್ನು ಮನ್ನಾ ಮಾಡಲು ಸಿದ್ಧ ಎಂದು ಸರ್ಕಾರ ಕಳೆದ ವಾರ ಸುಪ್ರೀಂಕೋರ್ಟ್ ತಿಳಿಸಿತ್ತು. ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ತೆಗೆದುಕೊಂಡ ಸಾಲಗಳಿಗೆ, ಶೈಕ್ಷಣಿಕ, ವಸತಿ, ಗ್ರಾಹಕ ವಸ್ತುಗಳು ಮತ್ತು ವಾಹನ ಸಾಲಗಳಿಗೆ ಮತ್ತು ಕ್ರೆಡಿಟ್ ಕಾರ್ಡ್ ಬಾಕಿಗಾಗಿ ಈ ಬಡ್ಡಿ ಮನ್ನಾ ಅನ್ವಯಿಸುತ್ತದೆ.

ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಸಣ್ಣ ಸಾಲಗಾರರಿಗೆ ಸಹಾಯ ಮಾಡಲು ಮುಂದೂಡಲ್ಪಟ್ಟ ಇಎಂಐಗಳ ಮೇಲಿನ ಬಡ್ಡಿ ಮನ್ನಾದ ವಿಚಾರಣೆ ಆಲಿಸುತ್ತಿದ್ದ ಸುಪ್ರೀಂಕಕೋರ್ಟ್, “ಅರ್ಜಿದಾರರು ಎತ್ತಿದ ಹಲವಾರು ಸಮಸ್ಯೆಗಳನ್ನು ಎದುರಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ” ಎಂದು ಹೇಳಿದೆ.

ರಿಯಲ್ ಎಸ್ಟೇಟ್ ಮತ್ತು ವಿದ್ಯುತ್ ಉತ್ಪಾದಕರ ಕಳವಳಗಳನ್ನು ಹೊಸ ಅಫಿಡವಿಟ್‌ಗಳಲ್ಲಿ ಪರಿಗಣಿಸಲು ಸರ್ಕಾರವನ್ನು ಕೇಳಲಾಯಿತು.

ಇದನ್ನೂ ಓದಿ: 10 ಕೋಟಿ ಜನರನ್ನು ತೀವ್ರ ಬಡತನಕ್ಕೆ ದೂಡಲಿದೆ ಕೊರೊನಾ: ವಿಶ್ವಬ್ಯಾಂಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...