Homeಮುಖಪುಟಇನ್ಮುಂದೆ 'ಇಧರ್ ಉಧರ್' ಇಲ್ಲ, ಎನ್‌ಡಿಎ ಜೊತೆ ಶಾಶ್ವತವಾಗಿ ಉಳಿಯುತ್ತೇನೆ: ನಿತೀಶ್ ಕುಮಾರ್

ಇನ್ಮುಂದೆ ‘ಇಧರ್ ಉಧರ್’ ಇಲ್ಲ, ಎನ್‌ಡಿಎ ಜೊತೆ ಶಾಶ್ವತವಾಗಿ ಉಳಿಯುತ್ತೇನೆ: ನಿತೀಶ್ ಕುಮಾರ್

- Advertisement -
- Advertisement -

ಇತ್ತೀಚೆಗಷ್ಟೇ ಮಹಾ ಘಟಬಂಧನ್ ತೊರೆದಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಹಿಂದಿನ ಮೈತ್ರಿಕೂಟವಾದ ಎನ್‌ಡಿಎಗೆ ಮರು ಸೇರ್ಪಡೆಗೊಂಡಿದ್ದಾರೆ. ತಮ್ಮ ಮೇಲಿನ ಟೀಕೆಗಳಿಗೆ ಉತ್ತರಿಸಿರುವ ಅವರು, ‘ಇನ್ಮುಂದೆ ಇಧರ್ ಉಧರ್ (ಇಲ್ಲಿ ಮತ್ತು ಅಲ್ಲಿ) ಇಲ್ಲ; ಎನ್‌ಡಿಎ ಮೈತ್ರಿಕೂಟಕ್ಕೆ ವಾಪಸ್ ಬಂದಿದ್ದು, ಬಿಜೆಪಿಯಿಂದಿಗೆ ಶಾಶ್ವತವಾಗಿ ಉಳಿಯುತ್ತೇವೆ’ ಎಂದು ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ನಿತೀಶ್ ಕುಮಾರ್, ‘ನಾವು (ಬಿಜೆಪಿ-ಜೆಡಿಯು) ಒಟ್ಟಿಗೆ ಇದ್ದೇವೆ ಎಂದು ನಾನು ಈಗಾಗಲೇ ನಿಮಗೆ ಹೇಳಿದ್ದೇನೆ, ಮಧ್ಯದಲ್ಲಿ ಎರಡು ಬಾರಿ ನಾನು “ಇಧರ್ ಉಧರ್” ಹೋಗಿದ್ದೆ. ಆದರೆ ಈಗ ಮತ್ತೊಮ್ಮೆ ನಾನು “ಉಧರ್” ಬಂದಿದ್ದೇನೆ. ನಾನು ಈಗ ಶಾಶ್ವತವಾಗಿ ಅವರೊಟ್ಟಿಗೆ ಇರುತ್ತೇನೆ’ ಎಂದರು.

ನಿನ್ನೆ ದೆಹಲಿಯಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರೊಂದಿಗೆ ನಡೆದ ಸಭೆಯಲ್ಲಿ ವಿಶೇಷ ಪ್ಯಾಕೇಜ್‌ನ ವಿಷಯವನ್ನು ಪ್ರಸ್ತಾಪಿಸಿದ್ದೀರಾ ಎಂಬ ಪ್ರಶ್ನೆಗೆ, ‘ನಮ್ಮ ಬಗ್ಗೆ ಚಿಂತಿಸಬೇಡಿ, 2005 ರಿಂದ ಬಿಹಾರದ ಅಭಿವೃದ್ಧಿಗಾಗಿ ನಾವು ಕೆಲಸ ಮಾಡುತ್ತಿದ್ದೇವೆ. ಅಂದಿನಿಂದ ಕೆಲಸಗಳು ನಡೆಯುತ್ತಿವೆ, ಆದ್ದರಿಂದ ನೀವು ಚಿಂತಿಸಬೇಕಾಗಿಲ್ಲ. ಎಲ್ಲ ಚರ್ಚೆಗಳು ಬಹಳ ಚೆನ್ನಾಗಿ ಮಾಡಲಾಗಿದೆ’ ಎಂದು  ನಿತೀಶ್ ಕುಮಾರ್ ಹೇಳಿದರು.

ಬಿಜೆಪಿಯೊಂದಿಗೆ ರಾಜ್ಯದಲ್ಲಿ ಸರ್ಕಾರ ರಚಿಸಿದ ನಂತರ ನಿತೀಶ್ ಕುಮಾರ್ ಮೊದಲ ಬಾರಿಗೆ ಬುಧವಾರ ರಾಷ್ಟ್ರ ರಾಜಧಾನಿಯಲ್ಲಿ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ಈ ಬಗ್ಗೆ ಎಕ್ಸ್‌ನಲ್ಲಿ ಹಂಚಿಕೊಂಡಿರುವ ಗೃಹ ಸಚಿವ ಅಮಿತ್ ಶಾ, ‘ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಭೇಟಿಯಾದರು. ಪ್ರಧಾನಿ ನರೇಂದ್ರ ಮೋದಿ ಮತ್ತು ನಿತೀಶ್ ಕುಮಾರ್ ಅವರ ನಾಯಕತ್ವದಲ್ಲಿ ಎನ್‌ಡಿಎ ಸರ್ಕಾರವು ಬಿಹಾರದಲ್ಲಿ ಉತ್ತಮ ಆಡಳಿತ ಮತ್ತು ಅಭಿವೃದ್ಧಿಯನ್ನು ತ್ವರಿತಗೊಳಿಸುತ್ತದೆ ಎಂದು ನನಗೆ ವಿಶ್ವಾಸವಿದೆ’ ಎಂದು ಹೇಳಿದ್ದಾರೆ.

ಇದಕ್ಕೂ ಮುನ್ನ ನಿತೀಶ್ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದರು. ಈಗ ಶಾಶ್ವತವಾಗಿ ಎನ್‌ಡಿಎ ಜೊತೆ ಇರುತ್ತೇನೆ ಎಂದು ಹೇಳಿದರು.

ಲೋಕಸಭೆ ಚುನಾವಣೆಯಲ್ಲಿನ ಸೀಟು ಹಂಚಿಕೆ ಕುರಿತು ಮಾತನಾಡಿ, ‘ಈ ಬಗ್ಗೆ ಚರ್ಚಿಸುವುದರ ಹಿಂದೆ ಯಾವುದೇ ತರ್ಕವಿಲ್ಲ, ಸೀಟು ಹಂಚಿಕೆ ಮಾಡಲಾಗುತ್ತದೆ. ಅವರಿಗೆ ಮೊದಲಿನಿಂದಲೂ ತಿಳಿದಿದೆ’ ಎಂದು ಹೇಳಿದರು.

ಬಿಹಾರದಲ್ಲಿ ಬಿಜೆಪಿ ಬೆಂಬಲದೊಂದಿಗೆ ಹೊಸ ಸರ್ಕಾರ ರಚಿಸಲು ಮಹಾಘಟಬಂಧನ್ (ಮಹಾ ಮೈತ್ರಿ) ಮತ್ತು ಇಂಡಿಯಾ ಬಣವನ್ನು ತ್ಯಜಿಸಿದ ನಂತರ ಜನತಾ ದಳ (ಯುನೈಟೆಡ್) ಮುಖ್ಯಸ್ಥರ ಮೊದಲ ಭೇಟಿ ಇದಾಗಿದೆ.

ಇದನ್ನೂ ಓದಿ; ಉತ್ತರಾಖಂಡ ಹಿಂಸಾಚಾರ: ನಾಲ್ವರು ಸಾವು, 100ಕ್ಕೂ ಅಧಿಕ ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...