Homeಕರ್ನಾಟಕಟೌನ್ ಹಾಲ್ ಹೊರಗೆ ಯಾವುದೇ ಪ್ರತಿಭಟನೆ ನಡೆಸುವಂತಿಲ್ಲ...!!

ಟೌನ್ ಹಾಲ್ ಹೊರಗೆ ಯಾವುದೇ ಪ್ರತಿಭಟನೆ ನಡೆಸುವಂತಿಲ್ಲ…!!

- Advertisement -
- Advertisement -

ಬೆಂಗಳೂರಿನ ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್ ಹೊರಗೆ ಪ್ರತಿಭಟನೆ ನಡೆಸಲು ಅವಕಾಶ ನೀಡಬಾರದು ಎಂಬ ನಿರ್ಣಯವನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇಂದು(ಶನಿವಾರ) ಅಂಗೀಕರಿಸಿತು. ಟೌನ್ ಹಾಲ್ ನಿಂದ ಬಿಬಿಎಂಪಿ ಗೆ ಆದಾಯ ಗಳಿಸಲು ಸಾಧ್ಯವಾಗದ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಬೆಂಗಳೂರು ಮೇಯರ್ ಗೌತಮ್ ಕುಮಾರ್ ಹೇಳಿದ್ದಾರೆ.

“ಟೌನ್ ಹಾಲ್ ಹೊರಗಿನ ಜಾಗವನ್ನು ವಿವಿಧ ಸಂಘಟನೆಗಳು ದಿನನಿತ್ಯ ವಿವಿಧ ಪ್ರತಿಭಟನೆಗಳಿಗೆ ಬಳಸಿಕೊಳ್ಳುತ್ತಿವೆ ಇದರಿಂದಾಗಿ ಕಾರ್ಯಕ್ರಮಗಳಿಗೆ ಟೌನ್ ಹಾಲನ್ನು ಬಾಡಿಗೆಗೆ ಪಡೆಯಲು ಜನರು ಮುಂದೆ ಬರುತ್ತಿಲ್ಲ” ಎಂದು ಮೇಯರ್ ಗೌತಮ್ ಕುಮಾರ್ ಹೇಳಿದ್ದಾರೆ.

ಟೌನ್ ಹಾಲ್ ನ ಹೊರಗೆ ಪ್ರತಿಭಟನೆ ನಡೆಸಲು ಅನುಮತಿ ನೀಡಬಾರದು ಎಂದು ಬಿಬಿಎಂಪಿ ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡಿದೆ ಎಂದು ಅವರು ಹೇಳಿದ್ದಾರೆ. ಪ್ರತಿಭಟನೆಗಾಗಿ ಫ್ರೀಡಂ ಪಾರ್ಕ್‌ನಂತಹ ಸ್ಥಳಗಳನ್ನು ಹಾಗೂ ನಗರದ ಇತರ ಗೊತ್ತುಪಡಿಸಿದ ಸ್ಥಳಗಳನ್ನು ಬಳಸಿಕೊಳ್ಳಬಹುದು ಎಂದಿದ್ದಾರೆ.

ಕಾರ್ಯಸೂಚಿಯನ್ನು ಮೇಯರ್ ಪರಿಚಯಿಸಿದರು. ಯಾವುದೆ ಚರ್ಚೆಯಿಲ್ಲದೆ ನಿರ್ಣಯವನ್ನು ಬಿಜೆಪಿ ಕೌನ್ಸಿಲರ್‌ಗಳ ಸರಳ ಬಹುಮತದೊಂದಿಗೆ ಅಂಗೀಕರಿಸಲಾಯಿತು.

ನಟ ಹಾಗೂ ಪ್ರಗತಿಪರ ಹೋರಾಟಗಾರ ಚೇತನ್ ಕುಮಾರ್ “ಟೌನ್ ಹಾಲ್ ಮುಂದೆ ಯಾವುದೇ ಪ್ರತಿಭಟನೆಗೆ ಅವಕಾಶ ಕೊಡುವುದಿಲ್ಲವೆಂದು ಬಿ.ಬಿ.ಎಂ.ಪಿ ಆದೇಶ ಹೊರಡಿಸಲು ಮುಂದಾಗಿದೆ. ಇದು ಪ್ರಜಾಪ್ರಭುತ್ವದ ಧ್ವನಿಗಳನ್ನು ಮತ್ತು ಭಿನ್ನಾಭಿಪ್ರಾಯಗಳನ್ನು ಹತ್ತಿಕ್ಕುವ ಹುನ್ನಾರವಾಗಿದೆ. ಪ್ರತಿಭಟನೆಯಿಂದ ಟೌನ್ ಹಾಲ್ ಗೆ ಆದಾಯ ಕಡಿಮೆ ಆಗಿದೆ ಎಂದು ಮೇಯರ್ ಹೇಳಿಕೆ ನೀಡಿದ್ದಾರೆ. ಸಾರ್ವಜನಿಕರ ಧ್ವನಿಯ ವಿರೋದಿಯಾಗಿರುವ ಈ ಮೇಯರ್ ಗೆ ಸರ್ಕಾರಕ್ಕೆ ಆದಾಯ ಮಾಡಿಕೊಡುವ ಉದ್ದೇಶವಿದ್ದರೆ, 1% ಜನಸಂಖ್ಯೆ ಇರುವ ಶ್ರೀಮಂತರ ಮೇಲೆ ತೆರಿಗೆಯನ್ನ ಹೆಚ್ಚಿಸಲಿ, ಸಾಂವಿಧಾನಿಕ ಹಕ್ಕುಗಳನ್ನ ಉಲ್ಲಂಘಿಸುವ ಕೆಲಸ ಬೇಡ” ಎಂದಿದ್ದಾರೆ.

ಜನರ ಪ್ರತಿಭಟಿಸುವ ಹಕ್ಕನ್ನು ಬಿಜೆಪಿ ಕಸಿದುಕೊಳ್ಳಲು ಹೊರಟಿದೆ ಎಂದು ವಿರೋಧ ಪಕ್ಷಗಳು ನಿರ್ಣಯದ ವಿರುದ್ಧ ಕಿಡಿ ಕಾರಿದೆ. ಅಲ್ಲದೆ ಮಾರ್ಚ್ 3 ಕ್ಕೆ ಪ್ರತಿಭಟನೆಯ ಎಚ್ಚರಿಕೆ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...