Homeಕರೋನಾ ತಲ್ಲಣತಮಿಳುನಾಡಿನಲ್ಲಿ ಸಂಪೂರ್ಣ ಲಾಕ್‌ಡೌನ್ ಅಗತ್ಯವಿಲ್ಲ: ಆರೋಗ್ಯ ಸಚಿವ ಮಾ ಸುಬ್ರಮಣಿಯನ್

ತಮಿಳುನಾಡಿನಲ್ಲಿ ಸಂಪೂರ್ಣ ಲಾಕ್‌ಡೌನ್ ಅಗತ್ಯವಿಲ್ಲ: ಆರೋಗ್ಯ ಸಚಿವ ಮಾ ಸುಬ್ರಮಣಿಯನ್

- Advertisement -
- Advertisement -

ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ಅಗತ್ಯವಿಲ್ಲ ಎಂದು ತಮಿಳುನಾಡು ಆರೋಗ್ಯ ಸಚಿವ ಮಾ ಸುಬ್ರಮಣಿಯನ್ ಮಂಗಳವಾರ ಹೇಳಿದ್ದಾರೆ. ದೇಶದ ಇತರ ರಾಜ್ಯಗಳಂತೆ ತಮಿಳುನಾಡಿನಲ್ಲೂ ಕೊರೊನಾ ಪ್ರಕರಣವು ಹೆಚ್ಚುತ್ತಿದೆ. ಮಂಗಳವಾರದಂದು ದೆಹಲಿ ಮುಖ್ಯಮಂತ್ರಿ ಕೂಡಾ ದೆಹಲಿಯಲ್ಲಿ ಲಾಕ್‌ಡೌನ್‌ ಮಾಡುವುದಿಲ್ಲ ಎಂದು ಹೇಳಿದ್ದಾರೆ.

“ಸದ್ಯಕ್ಕೆ ಸಂಪೂರ್ಣ ಲಾಕ್‌ಡೌನ್ ಅಗತ್ಯವಿಲ್ಲ. ಆರ್ಥಿಕತೆಯ ಮೇಲೆ ಪರಿಣಾಮ ಬೀರಬಾರದು ಎಂದು ಸಿಎಂ ಪ್ರತಿಪಾದಿಸಿದ್ದಾರೆ” ಎಂದು ಸುಬ್ರಮಣಿಯನ್ ಚೆನ್ನೈನಲ್ಲಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ತಮಿಳುನಾಡಿನಲ್ಲಿ ಕಳೆದ 24 ಗಂಟೆಗಳಲ್ಲಿ 13,990 ಹೊಸ ಕೋವಿಡ್ ಪ್ರಕರಣಗಳು ಮತ್ತು 11 ಸಾವುಗಳು ವರದಿಯಾಗಿವೆ.

ಇದನ್ನೂ ಓದಿ:ಕೊರೊನಾ: ರಾಜ್ಯದಲ್ಲಿ ಒಂದೇ ದಿನ ಬರೋಬ್ಬರಿ 12 ಸಾವಿರ ಕೇಸ್, ಬೆಂಗಳೂರಿನಲ್ಲಿ 9 ಸಾವಿರ ಪ್ರಕರಣ

ರಾಜ್ಯ ಆರೋಗ್ಯ ಇಲಾಖೆಯ ಪ್ರಕಾರ, ತಮಿಳುನಾಡಿನಲ್ಲಿ ಪ್ರಸ್ತುತ 62,767 ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 2,547 ರೋಗಿಗಳು ಈ ಕಾಯಿಲೆಯಿಂದ ಚೇತರಿಸಿಕೊಂಡಿದ್ದಾರೆ.

ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ತಮಿಳುನಾಡು ಸರ್ಕಾರ ಸೋಮವಾರ ಕೋವಿಡ್ ನಿರ್ಬಂಧಗಳನ್ನು ಜನವರಿ 31 ರವರೆಗೆ ವಿಸ್ತರಿಸಿತ್ತು.

ರಾಜ್ಯ ಸರ್ಕಾರದ ಸುತ್ತೋಲೆ ಪ್ರಕಾರ, “ಜನವರಿ 14 ಮತ್ತು ಜನವರಿ 18 ರ ನಡುವೆ ಯಾವುದೇ ಪೂಜಾ ಸ್ಥಳಗಳಲ್ಲಿ ಭಕ್ತರಿಗೆ ಪ್ರವೇಶವಿಲ್ಲ. ಪೊಂಗಲ್‌ಗಾಗಿ ವಿಶೇಷ ಅಂತರ ಜಿಲ್ಲಾ ಬಸ್‌ಗಳು 75% ದಷ್ಟು ಸಾಮರ್ಥ್ಯದಲ್ಲಿ ಚಲಿಸುತ್ತವೆ”

ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಅನ್ನು ಜನವರಿ 31 ರವರೆಗೆ ವಿಸ್ತರಿಸಲಾಗಿದ್ದು, ಸೋಮವಾರದಿಂದ ಶನಿವಾರದವರೆಗೆ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಜಾರಿಯಲ್ಲಿರುತ್ತದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಜನವರಿ 16 (ಭಾನುವಾರ) ರಂದು ಸಂಪೂರ್ಣ ಲಾಕ್‌ಡೌನ್ ಜಾರಿಯಲ್ಲಿರುತ್ತದೆ.

ಇದನ್ನೂ ಓದಿ:ಕೊರೊನಾ ಉಲ್ಭಣ: ಗುರುವಾರ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿರುವ ಮೋದಿ?

ಕರ್ನಾಟಕದಲ್ಲೂ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು ಇಂದು ಒಂದೇ ದಿನ ಬರೋಬ್ಬರಿ 12,000 ಹೊಸ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 9,020 ಕೇಸ್‌ಗಳು ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ವರದಿಯಾಗಿವೆ.

ಕೊರೊನಾ ಪಾಸಿಟಿವಿಟ್ ದರ 6.33% ರಷ್ಟಿದ್ದು, ಕೊರೊನಾ ಸಂಬಂಧಿತ ಸಮಸ್ಯೆಗಳಿಂದ ಇಂದು ನಾಲ್ವರು ಸಾವನ್ನಪ್ಪಿದ್ದಾರೆ. ಅದರಲ್ಲಿ ಇಬ್ಬರು ಬೆಂಗಳೂರಿನವರಾಗಿದ್ದಾರೆ. ನಿನ್ನೆ ವರದಿಯಾಗಿದ್ದ ಪ್ರಕರಣಗಳಿಗಿಂತ ಇಂದು 27%ದಷ್ಟು ಏರಿಕೆಯಾಗಿದೆ.

ಪ್ರಸ್ತುತ ರಾಜ್ಯದಲ್ಲಿ ಒಟ್ಟು 49,602 ಸಕ್ರಿಯ ಪ್ರಕರಣಗಳಿದ್ದು, ಬೆಂಗಳೂರಿನಲ್ಲಿಯೇ 40 ಸಾವಿರ ಸಕ್ರಿಯ ಪ್ರಕರಣಗಳಿವೆ. ಇಂದು 901 ಮಂದಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. 1,89,499 ಮಂದಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಈ ಕುರಿತು ಆರೋಗ್ಯ ಸಚಿವ ಕೆ.ಸುಧಾಕರ್‌ ಟ್ವೀಟ್ ಮಾಡಿದ್ದಾರೆ.

ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕಳೆದ ವಾರದಿಂದ ರಾಜ್ಯದಲ್ಲಿ ವಾರಾಂತ್ಯದ ಕರ್ಫ್ಯೂ ವಿಧಿಸಲಾಗಿದೆ. ಜೊತೆಗೆ ಈ ಹಿಂದೆ ಜಾರಿಯಲ್ಲಿರುವ ನೈಟ್‌ ಕರ್ಫ್ಯೂ‌ ಅನ್ನು ಜನವರಿ 19 ರವರೆಗೆ ವಿಸ್ತರಿಸಲು ನಿರ್ಧರಿಸಿದೆ. ರಾಜ್ಯಾದ್ಯಂತ ಕರ್ಫ್ಯೂ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಜಾರಿಯಲ್ಲಿರುತ್ತದೆ.

ಇದನ್ನೂ ಓದಿ:ಲೈಂಗಿಕ ದೌರ್ಜನ್ಯ ಪ್ರಕರಣ: ’ಸಂತ್ರಸ್ತೆಯಾಗಿ ಬದುಕುವುದು ಸುಲಭವಲ್ಲ’ 5 ವರ್ಷಗಳ ಪ್ರಯಾಣ ನೆನಪಿಸಿಕೊಂಡ ನಟಿ ಭಾವನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...