Homeಕರೋನಾ ತಲ್ಲಣತಮಿಳುನಾಡಿನಲ್ಲಿ ಸಂಪೂರ್ಣ ಲಾಕ್‌ಡೌನ್ ಅಗತ್ಯವಿಲ್ಲ: ಆರೋಗ್ಯ ಸಚಿವ ಮಾ ಸುಬ್ರಮಣಿಯನ್

ತಮಿಳುನಾಡಿನಲ್ಲಿ ಸಂಪೂರ್ಣ ಲಾಕ್‌ಡೌನ್ ಅಗತ್ಯವಿಲ್ಲ: ಆರೋಗ್ಯ ಸಚಿವ ಮಾ ಸುಬ್ರಮಣಿಯನ್

- Advertisement -
- Advertisement -

ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ಅಗತ್ಯವಿಲ್ಲ ಎಂದು ತಮಿಳುನಾಡು ಆರೋಗ್ಯ ಸಚಿವ ಮಾ ಸುಬ್ರಮಣಿಯನ್ ಮಂಗಳವಾರ ಹೇಳಿದ್ದಾರೆ. ದೇಶದ ಇತರ ರಾಜ್ಯಗಳಂತೆ ತಮಿಳುನಾಡಿನಲ್ಲೂ ಕೊರೊನಾ ಪ್ರಕರಣವು ಹೆಚ್ಚುತ್ತಿದೆ. ಮಂಗಳವಾರದಂದು ದೆಹಲಿ ಮುಖ್ಯಮಂತ್ರಿ ಕೂಡಾ ದೆಹಲಿಯಲ್ಲಿ ಲಾಕ್‌ಡೌನ್‌ ಮಾಡುವುದಿಲ್ಲ ಎಂದು ಹೇಳಿದ್ದಾರೆ.

“ಸದ್ಯಕ್ಕೆ ಸಂಪೂರ್ಣ ಲಾಕ್‌ಡೌನ್ ಅಗತ್ಯವಿಲ್ಲ. ಆರ್ಥಿಕತೆಯ ಮೇಲೆ ಪರಿಣಾಮ ಬೀರಬಾರದು ಎಂದು ಸಿಎಂ ಪ್ರತಿಪಾದಿಸಿದ್ದಾರೆ” ಎಂದು ಸುಬ್ರಮಣಿಯನ್ ಚೆನ್ನೈನಲ್ಲಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ತಮಿಳುನಾಡಿನಲ್ಲಿ ಕಳೆದ 24 ಗಂಟೆಗಳಲ್ಲಿ 13,990 ಹೊಸ ಕೋವಿಡ್ ಪ್ರಕರಣಗಳು ಮತ್ತು 11 ಸಾವುಗಳು ವರದಿಯಾಗಿವೆ.

ಇದನ್ನೂ ಓದಿ:ಕೊರೊನಾ: ರಾಜ್ಯದಲ್ಲಿ ಒಂದೇ ದಿನ ಬರೋಬ್ಬರಿ 12 ಸಾವಿರ ಕೇಸ್, ಬೆಂಗಳೂರಿನಲ್ಲಿ 9 ಸಾವಿರ ಪ್ರಕರಣ

ರಾಜ್ಯ ಆರೋಗ್ಯ ಇಲಾಖೆಯ ಪ್ರಕಾರ, ತಮಿಳುನಾಡಿನಲ್ಲಿ ಪ್ರಸ್ತುತ 62,767 ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 2,547 ರೋಗಿಗಳು ಈ ಕಾಯಿಲೆಯಿಂದ ಚೇತರಿಸಿಕೊಂಡಿದ್ದಾರೆ.

ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ತಮಿಳುನಾಡು ಸರ್ಕಾರ ಸೋಮವಾರ ಕೋವಿಡ್ ನಿರ್ಬಂಧಗಳನ್ನು ಜನವರಿ 31 ರವರೆಗೆ ವಿಸ್ತರಿಸಿತ್ತು.

ರಾಜ್ಯ ಸರ್ಕಾರದ ಸುತ್ತೋಲೆ ಪ್ರಕಾರ, “ಜನವರಿ 14 ಮತ್ತು ಜನವರಿ 18 ರ ನಡುವೆ ಯಾವುದೇ ಪೂಜಾ ಸ್ಥಳಗಳಲ್ಲಿ ಭಕ್ತರಿಗೆ ಪ್ರವೇಶವಿಲ್ಲ. ಪೊಂಗಲ್‌ಗಾಗಿ ವಿಶೇಷ ಅಂತರ ಜಿಲ್ಲಾ ಬಸ್‌ಗಳು 75% ದಷ್ಟು ಸಾಮರ್ಥ್ಯದಲ್ಲಿ ಚಲಿಸುತ್ತವೆ”

ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಅನ್ನು ಜನವರಿ 31 ರವರೆಗೆ ವಿಸ್ತರಿಸಲಾಗಿದ್ದು, ಸೋಮವಾರದಿಂದ ಶನಿವಾರದವರೆಗೆ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಜಾರಿಯಲ್ಲಿರುತ್ತದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಜನವರಿ 16 (ಭಾನುವಾರ) ರಂದು ಸಂಪೂರ್ಣ ಲಾಕ್‌ಡೌನ್ ಜಾರಿಯಲ್ಲಿರುತ್ತದೆ.

ಇದನ್ನೂ ಓದಿ:ಕೊರೊನಾ ಉಲ್ಭಣ: ಗುರುವಾರ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿರುವ ಮೋದಿ?

ಕರ್ನಾಟಕದಲ್ಲೂ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು ಇಂದು ಒಂದೇ ದಿನ ಬರೋಬ್ಬರಿ 12,000 ಹೊಸ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 9,020 ಕೇಸ್‌ಗಳು ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ವರದಿಯಾಗಿವೆ.

ಕೊರೊನಾ ಪಾಸಿಟಿವಿಟ್ ದರ 6.33% ರಷ್ಟಿದ್ದು, ಕೊರೊನಾ ಸಂಬಂಧಿತ ಸಮಸ್ಯೆಗಳಿಂದ ಇಂದು ನಾಲ್ವರು ಸಾವನ್ನಪ್ಪಿದ್ದಾರೆ. ಅದರಲ್ಲಿ ಇಬ್ಬರು ಬೆಂಗಳೂರಿನವರಾಗಿದ್ದಾರೆ. ನಿನ್ನೆ ವರದಿಯಾಗಿದ್ದ ಪ್ರಕರಣಗಳಿಗಿಂತ ಇಂದು 27%ದಷ್ಟು ಏರಿಕೆಯಾಗಿದೆ.

ಪ್ರಸ್ತುತ ರಾಜ್ಯದಲ್ಲಿ ಒಟ್ಟು 49,602 ಸಕ್ರಿಯ ಪ್ರಕರಣಗಳಿದ್ದು, ಬೆಂಗಳೂರಿನಲ್ಲಿಯೇ 40 ಸಾವಿರ ಸಕ್ರಿಯ ಪ್ರಕರಣಗಳಿವೆ. ಇಂದು 901 ಮಂದಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. 1,89,499 ಮಂದಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಈ ಕುರಿತು ಆರೋಗ್ಯ ಸಚಿವ ಕೆ.ಸುಧಾಕರ್‌ ಟ್ವೀಟ್ ಮಾಡಿದ್ದಾರೆ.

ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕಳೆದ ವಾರದಿಂದ ರಾಜ್ಯದಲ್ಲಿ ವಾರಾಂತ್ಯದ ಕರ್ಫ್ಯೂ ವಿಧಿಸಲಾಗಿದೆ. ಜೊತೆಗೆ ಈ ಹಿಂದೆ ಜಾರಿಯಲ್ಲಿರುವ ನೈಟ್‌ ಕರ್ಫ್ಯೂ‌ ಅನ್ನು ಜನವರಿ 19 ರವರೆಗೆ ವಿಸ್ತರಿಸಲು ನಿರ್ಧರಿಸಿದೆ. ರಾಜ್ಯಾದ್ಯಂತ ಕರ್ಫ್ಯೂ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಜಾರಿಯಲ್ಲಿರುತ್ತದೆ.

ಇದನ್ನೂ ಓದಿ:ಲೈಂಗಿಕ ದೌರ್ಜನ್ಯ ಪ್ರಕರಣ: ’ಸಂತ್ರಸ್ತೆಯಾಗಿ ಬದುಕುವುದು ಸುಲಭವಲ್ಲ’ 5 ವರ್ಷಗಳ ಪ್ರಯಾಣ ನೆನಪಿಸಿಕೊಂಡ ನಟಿ ಭಾವನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...