Homeಮುಖಪುಟಕೆಲಸದ ಅವಧಿ ಬಳಿಕ ಯಾವುದೇ ಕರೆಗಳು, ಇಮೇಲ್‌ಗಳಿಗೆ ಉತ್ತರಿಸಬೇಕಿಲ್ಲ : ಸಂಪರ್ಕ ಕಡಿತ ಹಕ್ಕು ಮಸೂದೆ...

ಕೆಲಸದ ಅವಧಿ ಬಳಿಕ ಯಾವುದೇ ಕರೆಗಳು, ಇಮೇಲ್‌ಗಳಿಗೆ ಉತ್ತರಿಸಬೇಕಿಲ್ಲ : ಸಂಪರ್ಕ ಕಡಿತ ಹಕ್ಕು ಮಸೂದೆ ಹೇಳುವುದೇನು?

- Advertisement -
- Advertisement -

ದೇಶದಲ್ಲಿ ಕಾರ್ಪೋರೇಟ್ ಸಂಸ್ಥೆಗಳು ಉದ್ಯೋಗಿಗಳ ಮೇಲೆ ಅತೀವ ಕೆಲಸದ ಹೊರೆಯನ್ನು ಹೇರಿ ಅವರ ಖಾಸಗಿ ಜೀವನವನ್ನು ಕಿತ್ತುಕೊಳ್ಳುವ ಮೂಲಕ ಮಾನಸಿಕ ಒತ್ತಡಕ್ಕೆ ತಳ್ಳುತ್ತಿರುವ ಪರಿಸ್ಥಿತಿ ಗಂಭೀರ ಹಂತಕ್ಕೆ ತಲುಪಿದೆ. ಅದಾಗ್ಯೂ ಕೆಲ ಕಾರ್ಪೋರೇಟ್‌ ಬಂಡವಾಳಶಾಹಿಗಳು ಕೆಲಸದ ಅವಧಿಯನ್ನು ಇನ್ನಷ್ಟು ಹೆಚ್ಚಿಸುವ ಮೂಲಕ ಉದ್ಯೋಗಿಗಳನ್ನು ಇನ್ನಷ್ಟು ಸಂಕಷ್ಟಕ್ಕೆ ನೂಕಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕೆ ಪೂರಕವಾಗಿಯೇ ಸರ್ಕಾರಗಳು ಕೂಡ ವರ್ತಿಸುತ್ತಿವೆ.

ಇಂತಹ ಸಂದರ್ಭದಲ್ಲಿ ದೇಶದ ಸಂಸತ್ತಿನಲ್ಲಿ ಮಹತ್ವದ ಮಸೂದೆಯೊಂದು ಮಂಡನೆಯಾಗಿದೆ. ಅದೇ ‘ಸಂಪರ್ಕ ಕಡಿತ ಹಕ್ಕು ಮಸೂದೆ’ (Right to Disconnect Bill). ಅಧಿಕೃತ ಕೆಲಸದ ಸಮಯದ ನಂತರ ಮತ್ತು ರಜಾದಿನಗಳಲ್ಲಿ ಕೆಲಸಕ್ಕೆ ಸಂಬಂಧಿಸಿದ ಕರೆಗಳು, ಸಂದೇಶಗಳು ಮತ್ತು ಇಮೇಲ್‌ಗಳನ್ನು ನಿರಾಕರಿಸುವ ಕಾನೂನುಬದ್ಧ ಹಕ್ಕನ್ನು ಉದ್ಯೋಗಿಗಳಿಗೆ ನೀಡುವ ಈ ಮಹತ್ವದ ಮಸೂದೆಯನ್ನು ಎನ್‌ಸಿಪಿ (ಎಸ್‌ಪಿ) ಸಂಸದೆ ಸುಪ್ರಿಯಾ ಸುಳೆ ಶುಕ್ರವಾರ (ಡಿಸೆಂಬರ್ 5) ಲೋಕಸಭೆಯಲ್ಲಿ ಮಂಡಿಸಿದ್ದಾರೆ.

ಸಂಪರ್ಕ ಕಡಿತ ಹಕ್ಕು ಮಸೂದೆ ಹೇಳುವುದೇನು?

ಅಧಿಕೃತ ಕೆಲಸದ ಸಮಯದ ನಂತರ ಮತ್ತು ರಜಾದಿನಗಳಲ್ಲಿ ಕೆಲಸಕ್ಕೆ ಸಂಬಂಧಿಸಿದ ಕರೆಗಳು, ಸಂದೇಶಗಳು ಮತ್ತು ಇಮೇಲ್‌ಗಳಿಗೆ ಪ್ರತಿಕ್ರಿಯಿಸುವಂತೆ ಉದ್ಯೋಗಿಗಳನ್ನು ಒತ್ತಾಯಿಸಬಾರದು ಎಂದು ಈ ಮಸೂದೆ ಹೇಳುತ್ತದೆ. ಶಿಸ್ತು ಕ್ರಮದ ಭಯವಿಲ್ಲದೆ, ಕರೆಗಳು ಮತ್ತು ಇಮೇಲ್‌ಗಳನ್ನು ನಿರಾಕರಿಸುವ ಹಕ್ಕನ್ನು ಇದು ಪ್ರತಿಯೊಬ್ಬ ಕೆಲಸಗಾರರಿಗೆ ನೀಡುತ್ತದೆ.

ಉದ್ಯೋಗಿಗಳು ಕೆಲಸದ ಸಮಯದ ನಂತರ ಕೆಲಸಕ್ಕೆ ಸಂಬಂಧಿಸಿದ ಕರೆಗಳು, ಇಮೇಲ್‌ಗಳು ಅಥವಾ ಸಂದೇಶಗಳಿಗೆ ಉತ್ತರಿಸುವ ಅಗತ್ಯವಿಲ್ಲ. ಪ್ರತಿಕ್ರಿಯಿಸಲು ನಿರಾಕರಿಸಿದ್ದಕ್ಕಾಗಿ ಯಾವುದೇ ಉದ್ಯೋಗಿ ವಿರುದ್ದ ಶಿಸ್ತು ಕ್ರಮ ಕೈಗೊಳ್ಳುವಂತಿಲ್ಲ. ಈ ನಿಯಮ ಫೋನ್ ಕರೆಗಳು, ಪಠ್ಯ ಸಂದೇಶಗಳು, ಇಮೇಲ್‌ಗಳು, ವಿಡಿಯೋ ಕರೆಗಳು ಮುಂತಾದ ಎಲ್ಲಾ ರೀತಿಯ ಸಂವಹನಕ್ಕೂ ಅನ್ವಯಿಸುತ್ತದೆ. ಅಗತ್ಯವಿದ್ದರೆ, ಉದ್ಯೋಗದಾತರು ಮತ್ತು ಉದ್ಯೋಗಿಗಳು ತುರ್ತು ಸಂಪರ್ಕ ನಿಯಮಗಳ ಬಗ್ಗೆ ಪರಸ್ಪರ ಪೂರ್ವ ಒಪ್ಪಂದ ಮಾಡಿಕೊಂಡಿರಬೇಕು. ಕಾನೂನು ಉಲ್ಲಂಘಿಸುವ ಸಂಸ್ಥೆಗಳಿಗೆ ಒಟ್ಟು ಉದ್ಯೋಗಿ ಸಂಭಾವನೆಯ ಶೇಕಡಾ 1 ರಷ್ಟು ದಂಡ ವಿಧಿಸಲು ಮಸೂದೆ ಪ್ರಸ್ತಾಪಿಸಿದೆ.

ತುರ್ತು ನಿಯಮಗಳು

ನೌಕರರ ವೈಯಕ್ತಿಕ ಸಮಯವನ್ನು ರಕ್ಷಿಸುವುದರ ಜೊತೆಗೆ, ನಿಜವಾದ ತುರ್ತು ಪರಿಸ್ಥಿತಿಗಳನ್ನು ಪರಿಹರಿಸಲು ಒಂದು ಕಾರ್ಯವಿಧಾನವನ್ನು ಸಹ ಮಸೂದೆ ಪ್ರಸ್ತಾಪಿಸುತ್ತದೆ. ಕೆಲಸದ ಸಮಯದ ನಂತರ ನೌಕರರನ್ನು ಸಂಪರ್ಕಿಸಲು ಪರಸ್ಪರ ಒಪ್ಪಿದ ನಿಯಮಗಳನ್ನು ರೂಪಿಸಲು ಸಮಿತಿಯನ್ನು ಸ್ಥಾಪಿಸಲು ಇದು ಸಲಹೆ ನೀಡುತ್ತದೆ.

ಉದ್ಯೋಗದಾತರು ಮತ್ತು ಉದ್ಯೋಗಿ ಪರಸ್ಪರ ಪೂರ್ವ ಮಾತುಕತೆ ನಡೆಸಿ ಒಪ್ಪಿಕೊಂಡ ಸಮಯದ ಅವಧಿಯಲ್ಲಿ ಯಾವುದೇ ರೀತಿಯ ಸಂವಹನದ ಮೂಲಕ ಸಂಪರ್ಕಿಸಬಹುದು. ನೌಕರರು ಕಚೇರಿ ಸಮಯವನ್ನು ಮೀರಿ ಕೆಲಸ ಮಾಡುತ್ತಿದ್ದರೆ, ಅವರೊಂದಿಗೆ ಸಂವಹನ ನಡೆಸಬಹುದು. ಆದರೆ, ಅವರು ಸಾಮಾನ್ಯ ವೇತನ ದರದಲ್ಲಿ ಅಧಿಕಾವಧಿಗೆ ವೇತನ ಪಡೆಯುತ್ತಿರಬೇಕು ಎಂದು ಮಸೂದೆ ಹೇಳುತ್ತದೆ.

ಈ ಮಸೂದೆಯ ಅಗತ್ಯವೇನು?

ಡಿಜಿಟಲ್ ಸಂವಹನ ಸಾಧನಗಳಿಂದ ಹೆಚ್ಚಿನ ಲಾಭವಿದೆ. ಆದರೆ, ಅವುಗಳ ಮೂಲಕ ಉದ್ಯೋಗಿಗಳು ಕೆಲಸದ ಅವಧಿಯ ಹೊರತಾಗಿಯೂ ನಿರಂತರ ಸಂಪರ್ಕದಲ್ಲಿ ಇರಬೇಕು ಎಂಬ ಸಂಸ್ಕೃತಿ ಬೆಳೆದಿದೆ. ಇದರಿಂದ ಉದ್ಯೋಗಿಗಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ನಿದ್ರಾಹೀನತೆ, ಒತ್ತಡ ಮತ್ತು ಮಾನಸಿಕ ಸುಸ್ತು, ಹಾಗೂ ಸಂದೇಶಗಳಿಗೆ ತಕ್ಷಣ ಪ್ರತಿಕ್ರಿಯಿಸಬೇಕೆಂಬ ಟೆಲಿಪ್ರೆಶರ್ ಅವುಗಳಲ್ಲಿ ಪ್ರಮುಖವಾಗಿವೆ. ಜೊತೆಗೆ, ಕೆಲಸಕ್ಕೆ ಸಂಬಂಧಿಸಿದ ಸಂದೇಶಗಳನ್ನು ನಿರಂತರವಾಗಿ ಪರಿಶೀಲಿಸುವ ಅಭ್ಯಾಸದಿಂದ ‘ಮಾಹಿತಿ ಅತಿಭಾರ’ (info-obesity) ಉಂಟಾಗುತ್ತಿದೆ ಎಂದು ಮಸೂದೆ ಹೇಳುತ್ತದೆ.

ಸುಪ್ರಿಯಾ ಸುಳೆ ಅವರು 2019ರಲ್ಲೂ ಇದೇ ರೀತಿಯ ಮಸೂದೆಯನ್ನು ಮಂಡಿಸಿದ್ದರು. ಇದೀಗ ಡಿಜಿಟಲ್ ಸಂವಹನ ಸಾಧನಗಳ ಮೂಲಕ ಉದ್ಯೋಗಿಗಳ ಮೇಲೆ ಹೇರುತ್ತಿರುವ ಒತ್ತಡವನ್ನು ಇನ್ನಷ್ಟು ವಿವರಿಸಿ ಮತ್ತು ಈ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿ ಹೊಸ ಮಸೂದೆ ಮಂಡಿಸಿದ್ದಾರೆ. ಭಾರತ ಪ್ರಸ್ತುತ ಜಗತ್ತಿನಲ್ಲೇ ಹೆಚ್ಚು ಬೇಡಿಕೆಯಿರುವ ವಾರಕ್ಕೆ 48 ಗಂಟೆಗಳ ಕೆಲಸದ ಮಿತಿಯನ್ನು ಅನುಸರಿಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ವಲಸೆ ಕಾರ್ಮಿಕನ ಎನ್‌ಕೌಂಟರ್ ಪ್ರಕರಣ: ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಆದೇಶ

ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪ ಎದುರಿಸುತ್ತಿದ್ದ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಎನ್‌ಕೌಂಟರ್ ಪ್ರಕರಣವನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರಿಂದ ಸ್ವತಂತ್ರ ತನಿಖೆಗೆ ವಹಿಸಿ ಸೋಮವಾರ...

ಇದು ಇರಾಕ್ ಅಲ್ಲ, ಇರಾನ್ ಜೊತೆಗಿನ ಸಂಘರ್ಷ ‘ಅಂತ್ಯವಿಲ್ಲದ ಯುದ್ಧವಲ್ಲ’ : ಅಮೆರಿಕ ರಕ್ಷಣಾ ಕಾರ್ಯದರ್ಶಿ

ಇಸ್ರೇಲ್ ಜೊತೆಗೂಡಿ ಇರಾನ್ ಮೇಲೆ ಅಮೆರಿಕ ನಡೆಸುತ್ತಿರುವ ಜಂಟಿ ದಾಳಿಯು 'ಅಂತ್ಯವಿಲ್ಲದ್ದು' ಅಥವಾ ಸುದೀರ್ಘವಾದುದ್ದಲ್ಲ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಸೋಮವಾರ (ಮಾ.2) ತಿಳಿಸಿದ್ದಾರೆ. ಈ ಸಂಘರ್ಷವು ಅನಿರ್ದಿಷ್ಟಾವಧಿಯವರೆಗೆ ಮುಂದುವರಿಯುವುದಿಲ್ಲ...

ಉತ್ತರ ಪ್ರದೇಶ| ಶಾಲಾ ಬಸ್ಸಿನ ನೆಲಹಾಸು ಕುಸಿದು 7 ವರ್ಷದ ಬಾಲಕಿ ಸಾವು; ಇಬ್ಬರ ಬಂಧನ

ಉತ್ತರ ಪ್ರದೇಶದ ಅಲಿಗಢದಲ್ಲಿ ಶಾಲಾ ಬಸ್ಸಿನ ನೆಲಹಾಸು ಕುಸಿದು ಕೆಳಗೆ ಬಿದ್ದ ಏಳು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಖಾಸಗಿ ಶಾಲೆಯ ವ್ಯವಸ್ಥಾಪಕ ಮತ್ತು ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು...

ಇಸ್ರೇಲ್-ಇರಾನ್ ಸಂಘರ್ಷ: ನವದೆಹಲಿಯಲ್ಲಿ 24×7 ನಿಯಂತ್ರಣ ಕೊಠಡಿ ಸ್ಥಾಪಿಸಿದ ತೆಲಂಗಾಣ

ಹೈದರಾಬಾದ್: ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರ ನಿರ್ದೇಶನಗಳನ್ನು ಅನುಸರಿಸಿ, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಮಧ್ಯಪ್ರಾಚ್ಯದಲ್ಲಿರುವ ತೆಲಂಗಾಣ ನಾಗರಿಕರಿಗೆ ಸಹಾಯ ಮಾಡಲು ನವದೆಹಲಿಯ ತೆಲಂಗಾಣ ಭವನದಲ್ಲಿ 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಪ್ರಯಾಣ...

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಡ್ರೋನ್ ದೋಣಿ ಡಿಕ್ಕಿ; ಭಾರತೀಯ ಸಿಬ್ಬಂದಿ ಸಾವು

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಮಾನವರಹಿತ ಡ್ರೋನ್ ದೋಣಿ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನವು ಪ್ರದೇಶದಾದ್ಯಂತ ಉಲ್ಬಣಗೊಳ್ಳುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು ಹಡಗಿನಲ್ಲಿದ್ದ...

ನಾಗ್ಪುರ ಕಾರ್ಖಾನೆ ಸ್ಫೋಟ: ಸ್ಫೋಟಕ ಕಂಪನಿಯ ಒಂಬತ್ತು ನಿರ್ದೇಶಕರ ಬಂಧನ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 18 ಜನರು ಸಾವನ್ನಪ್ಪಿದ್ದು, ಸ್ಫೋಟಕ ತಯಾರಿಕಾ ಕಂಪನಿಯ ಒಂಬತ್ತು ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇಲ್ಲಿನ ಕಲ್ಮೇಶ್ವರ ಪೊಲೀಸರು ಎಸ್‌ಬಿಎಲ್ ಎನರ್ಜಿ...

ಅಪ್ರಾಪ್ತ ಮಗಳ ಮರ್ಯಾದೆಗೇಡು ಹತ್ಯೆ : ದಂಪತಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದ ಅಲಹಾಬಾದ್‌ ಹೈಕೋರ್ಟ್

ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ, 2014ರಲ್ಲಿ ತಮ್ಮ ಅಪ್ರಾಪ್ತ ಮಗಳು ಮತ್ತು ಬಾಡಿಗೆದಾರರನ್ನು ಕೊಲೆ ಮಾಡಿದ್ದ ದಂಪತಿಗೆ ಜೀವಾವಧಿ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಖಾಯಂಗೊಳಿಸಿದೆ. ನ್ಯಾಯಮೂರ್ತಿ ಜೆ.ಜೆ. ಮುನೀರ್ ಮತ್ತು ನ್ಯಾಯಮೂರ್ತಿ ವಿನಯ್ ಕುಮಾರ್ ದ್ವಿವೇದಿ...

ಇಸ್ರೇಲ್-ಇರಾನ್ ಸಂಘರ್ಷ: ಕೇರಳದ ಗಲ್ಫ್ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ, ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧಾರ

ತಿರುವನಂತಪುರಂ: ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಪ್ರಚಲಿತ ಅಶಾಂತಿಯನ್ನು ಗಮನದಲ್ಲಿಟ್ಟುಕೊಂಡು, ಸಾಮಾನ್ಯ ಶಿಕ್ಷಣ ಇಲಾಖೆಯು ಗಲ್ಫ್ ರಾಷ್ಟ್ರಗಳಲ್ಲಿನ ಕೇಂದ್ರಗಳಲ್ಲಿ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ.   ಮಾರ್ಚ್ 5 ರಂದು ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ...

ಚಿಕ್ಕಬಳ್ಳಾಪುರ| ಆಯತುಲ್ಲಾ ಖಮೇನಿ ಹತ್ಯೆ; ಅಲಿಪುರದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ

ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಖಮೇನಿ ಹತ್ಯೆಯಿಂದ ನೊಂದಿರುವ ಗೌರಿಬಿದನೂರು ತಾಲ್ಲೂಕಿನ ಅಲಿಪುರ ಗ್ರಾಮದ ಶಿಯಾ ಸಮುದಾಯವು, ಗ್ರಾಮದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ...

ಸೌದಿ ಅರೇಬಿಯಾ | ಡ್ರೋನ್ ದಾಳಿ ಬಳಿಕ ರಾಸ್ ತನುರಾ ಸಂಸ್ಕರಣಾಗಾರ ಮುಚ್ಚಿದ ತೈಲ ದೈತ್ಯ ಅರಾಮ್ಕೊ

ಸೌದಿ ಅರೇಬಿಯಾದ ಸರ್ಕಾರಿ ಸ್ವಾಮ್ಯದ ತೈಲ ದೈತ್ಯ ಸಂಸ್ಥೆ ಅರಾಮ್ಕೊ ಡ್ರೋನ್ ದಾಳಿಗೆ ಒಳಗಾದ ನಂತರ ತನ್ನ ರಾಸ್ ತನುರಾ ತೈಲ ಸಂಸ್ಕರಣಾಗಾರವನ್ನು ಮುಚ್ಚಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಯಿಟರ್ಸ್ ಸೋಮವಾರ (ಫೆ.2)...