Homeಮುಖಪುಟಕೆಲಸದ ಅವಧಿ ಬಳಿಕ ಯಾವುದೇ ಕರೆಗಳು, ಇಮೇಲ್‌ಗಳಿಗೆ ಉತ್ತರಿಸಬೇಕಿಲ್ಲ : ಸಂಪರ್ಕ ಕಡಿತ ಹಕ್ಕು ಮಸೂದೆ...

ಕೆಲಸದ ಅವಧಿ ಬಳಿಕ ಯಾವುದೇ ಕರೆಗಳು, ಇಮೇಲ್‌ಗಳಿಗೆ ಉತ್ತರಿಸಬೇಕಿಲ್ಲ : ಸಂಪರ್ಕ ಕಡಿತ ಹಕ್ಕು ಮಸೂದೆ ಹೇಳುವುದೇನು?

- Advertisement -
- Advertisement -

ದೇಶದಲ್ಲಿ ಕಾರ್ಪೋರೇಟ್ ಸಂಸ್ಥೆಗಳು ಉದ್ಯೋಗಿಗಳ ಮೇಲೆ ಅತೀವ ಕೆಲಸದ ಹೊರೆಯನ್ನು ಹೇರಿ ಅವರ ಖಾಸಗಿ ಜೀವನವನ್ನು ಕಿತ್ತುಕೊಳ್ಳುವ ಮೂಲಕ ಮಾನಸಿಕ ಒತ್ತಡಕ್ಕೆ ತಳ್ಳುತ್ತಿರುವ ಪರಿಸ್ಥಿತಿ ಗಂಭೀರ ಹಂತಕ್ಕೆ ತಲುಪಿದೆ. ಅದಾಗ್ಯೂ ಕೆಲ ಕಾರ್ಪೋರೇಟ್‌ ಬಂಡವಾಳಶಾಹಿಗಳು ಕೆಲಸದ ಅವಧಿಯನ್ನು ಇನ್ನಷ್ಟು ಹೆಚ್ಚಿಸುವ ಮೂಲಕ ಉದ್ಯೋಗಿಗಳನ್ನು ಇನ್ನಷ್ಟು ಸಂಕಷ್ಟಕ್ಕೆ ನೂಕಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕೆ ಪೂರಕವಾಗಿಯೇ ಸರ್ಕಾರಗಳು ಕೂಡ ವರ್ತಿಸುತ್ತಿವೆ.

ಇಂತಹ ಸಂದರ್ಭದಲ್ಲಿ ದೇಶದ ಸಂಸತ್ತಿನಲ್ಲಿ ಮಹತ್ವದ ಮಸೂದೆಯೊಂದು ಮಂಡನೆಯಾಗಿದೆ. ಅದೇ ‘ಸಂಪರ್ಕ ಕಡಿತ ಹಕ್ಕು ಮಸೂದೆ’ (Right to Disconnect Bill). ಅಧಿಕೃತ ಕೆಲಸದ ಸಮಯದ ನಂತರ ಮತ್ತು ರಜಾದಿನಗಳಲ್ಲಿ ಕೆಲಸಕ್ಕೆ ಸಂಬಂಧಿಸಿದ ಕರೆಗಳು, ಸಂದೇಶಗಳು ಮತ್ತು ಇಮೇಲ್‌ಗಳನ್ನು ನಿರಾಕರಿಸುವ ಕಾನೂನುಬದ್ಧ ಹಕ್ಕನ್ನು ಉದ್ಯೋಗಿಗಳಿಗೆ ನೀಡುವ ಈ ಮಹತ್ವದ ಮಸೂದೆಯನ್ನು ಎನ್‌ಸಿಪಿ (ಎಸ್‌ಪಿ) ಸಂಸದೆ ಸುಪ್ರಿಯಾ ಸುಳೆ ಶುಕ್ರವಾರ (ಡಿಸೆಂಬರ್ 5) ಲೋಕಸಭೆಯಲ್ಲಿ ಮಂಡಿಸಿದ್ದಾರೆ.

ಸಂಪರ್ಕ ಕಡಿತ ಹಕ್ಕು ಮಸೂದೆ ಹೇಳುವುದೇನು?

ಅಧಿಕೃತ ಕೆಲಸದ ಸಮಯದ ನಂತರ ಮತ್ತು ರಜಾದಿನಗಳಲ್ಲಿ ಕೆಲಸಕ್ಕೆ ಸಂಬಂಧಿಸಿದ ಕರೆಗಳು, ಸಂದೇಶಗಳು ಮತ್ತು ಇಮೇಲ್‌ಗಳಿಗೆ ಪ್ರತಿಕ್ರಿಯಿಸುವಂತೆ ಉದ್ಯೋಗಿಗಳನ್ನು ಒತ್ತಾಯಿಸಬಾರದು ಎಂದು ಈ ಮಸೂದೆ ಹೇಳುತ್ತದೆ. ಶಿಸ್ತು ಕ್ರಮದ ಭಯವಿಲ್ಲದೆ, ಕರೆಗಳು ಮತ್ತು ಇಮೇಲ್‌ಗಳನ್ನು ನಿರಾಕರಿಸುವ ಹಕ್ಕನ್ನು ಇದು ಪ್ರತಿಯೊಬ್ಬ ಕೆಲಸಗಾರರಿಗೆ ನೀಡುತ್ತದೆ.

ಉದ್ಯೋಗಿಗಳು ಕೆಲಸದ ಸಮಯದ ನಂತರ ಕೆಲಸಕ್ಕೆ ಸಂಬಂಧಿಸಿದ ಕರೆಗಳು, ಇಮೇಲ್‌ಗಳು ಅಥವಾ ಸಂದೇಶಗಳಿಗೆ ಉತ್ತರಿಸುವ ಅಗತ್ಯವಿಲ್ಲ. ಪ್ರತಿಕ್ರಿಯಿಸಲು ನಿರಾಕರಿಸಿದ್ದಕ್ಕಾಗಿ ಯಾವುದೇ ಉದ್ಯೋಗಿ ವಿರುದ್ದ ಶಿಸ್ತು ಕ್ರಮ ಕೈಗೊಳ್ಳುವಂತಿಲ್ಲ. ಈ ನಿಯಮ ಫೋನ್ ಕರೆಗಳು, ಪಠ್ಯ ಸಂದೇಶಗಳು, ಇಮೇಲ್‌ಗಳು, ವಿಡಿಯೋ ಕರೆಗಳು ಮುಂತಾದ ಎಲ್ಲಾ ರೀತಿಯ ಸಂವಹನಕ್ಕೂ ಅನ್ವಯಿಸುತ್ತದೆ. ಅಗತ್ಯವಿದ್ದರೆ, ಉದ್ಯೋಗದಾತರು ಮತ್ತು ಉದ್ಯೋಗಿಗಳು ತುರ್ತು ಸಂಪರ್ಕ ನಿಯಮಗಳ ಬಗ್ಗೆ ಪರಸ್ಪರ ಪೂರ್ವ ಒಪ್ಪಂದ ಮಾಡಿಕೊಂಡಿರಬೇಕು. ಕಾನೂನು ಉಲ್ಲಂಘಿಸುವ ಸಂಸ್ಥೆಗಳಿಗೆ ಒಟ್ಟು ಉದ್ಯೋಗಿ ಸಂಭಾವನೆಯ ಶೇಕಡಾ 1 ರಷ್ಟು ದಂಡ ವಿಧಿಸಲು ಮಸೂದೆ ಪ್ರಸ್ತಾಪಿಸಿದೆ.

ತುರ್ತು ನಿಯಮಗಳು

ನೌಕರರ ವೈಯಕ್ತಿಕ ಸಮಯವನ್ನು ರಕ್ಷಿಸುವುದರ ಜೊತೆಗೆ, ನಿಜವಾದ ತುರ್ತು ಪರಿಸ್ಥಿತಿಗಳನ್ನು ಪರಿಹರಿಸಲು ಒಂದು ಕಾರ್ಯವಿಧಾನವನ್ನು ಸಹ ಮಸೂದೆ ಪ್ರಸ್ತಾಪಿಸುತ್ತದೆ. ಕೆಲಸದ ಸಮಯದ ನಂತರ ನೌಕರರನ್ನು ಸಂಪರ್ಕಿಸಲು ಪರಸ್ಪರ ಒಪ್ಪಿದ ನಿಯಮಗಳನ್ನು ರೂಪಿಸಲು ಸಮಿತಿಯನ್ನು ಸ್ಥಾಪಿಸಲು ಇದು ಸಲಹೆ ನೀಡುತ್ತದೆ.

ಉದ್ಯೋಗದಾತರು ಮತ್ತು ಉದ್ಯೋಗಿ ಪರಸ್ಪರ ಪೂರ್ವ ಮಾತುಕತೆ ನಡೆಸಿ ಒಪ್ಪಿಕೊಂಡ ಸಮಯದ ಅವಧಿಯಲ್ಲಿ ಯಾವುದೇ ರೀತಿಯ ಸಂವಹನದ ಮೂಲಕ ಸಂಪರ್ಕಿಸಬಹುದು. ನೌಕರರು ಕಚೇರಿ ಸಮಯವನ್ನು ಮೀರಿ ಕೆಲಸ ಮಾಡುತ್ತಿದ್ದರೆ, ಅವರೊಂದಿಗೆ ಸಂವಹನ ನಡೆಸಬಹುದು. ಆದರೆ, ಅವರು ಸಾಮಾನ್ಯ ವೇತನ ದರದಲ್ಲಿ ಅಧಿಕಾವಧಿಗೆ ವೇತನ ಪಡೆಯುತ್ತಿರಬೇಕು ಎಂದು ಮಸೂದೆ ಹೇಳುತ್ತದೆ.

ಈ ಮಸೂದೆಯ ಅಗತ್ಯವೇನು?

ಡಿಜಿಟಲ್ ಸಂವಹನ ಸಾಧನಗಳಿಂದ ಹೆಚ್ಚಿನ ಲಾಭವಿದೆ. ಆದರೆ, ಅವುಗಳ ಮೂಲಕ ಉದ್ಯೋಗಿಗಳು ಕೆಲಸದ ಅವಧಿಯ ಹೊರತಾಗಿಯೂ ನಿರಂತರ ಸಂಪರ್ಕದಲ್ಲಿ ಇರಬೇಕು ಎಂಬ ಸಂಸ್ಕೃತಿ ಬೆಳೆದಿದೆ. ಇದರಿಂದ ಉದ್ಯೋಗಿಗಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ನಿದ್ರಾಹೀನತೆ, ಒತ್ತಡ ಮತ್ತು ಮಾನಸಿಕ ಸುಸ್ತು, ಹಾಗೂ ಸಂದೇಶಗಳಿಗೆ ತಕ್ಷಣ ಪ್ರತಿಕ್ರಿಯಿಸಬೇಕೆಂಬ ಟೆಲಿಪ್ರೆಶರ್ ಅವುಗಳಲ್ಲಿ ಪ್ರಮುಖವಾಗಿವೆ. ಜೊತೆಗೆ, ಕೆಲಸಕ್ಕೆ ಸಂಬಂಧಿಸಿದ ಸಂದೇಶಗಳನ್ನು ನಿರಂತರವಾಗಿ ಪರಿಶೀಲಿಸುವ ಅಭ್ಯಾಸದಿಂದ ‘ಮಾಹಿತಿ ಅತಿಭಾರ’ (info-obesity) ಉಂಟಾಗುತ್ತಿದೆ ಎಂದು ಮಸೂದೆ ಹೇಳುತ್ತದೆ.

ಸುಪ್ರಿಯಾ ಸುಳೆ ಅವರು 2019ರಲ್ಲೂ ಇದೇ ರೀತಿಯ ಮಸೂದೆಯನ್ನು ಮಂಡಿಸಿದ್ದರು. ಇದೀಗ ಡಿಜಿಟಲ್ ಸಂವಹನ ಸಾಧನಗಳ ಮೂಲಕ ಉದ್ಯೋಗಿಗಳ ಮೇಲೆ ಹೇರುತ್ತಿರುವ ಒತ್ತಡವನ್ನು ಇನ್ನಷ್ಟು ವಿವರಿಸಿ ಮತ್ತು ಈ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿ ಹೊಸ ಮಸೂದೆ ಮಂಡಿಸಿದ್ದಾರೆ. ಭಾರತ ಪ್ರಸ್ತುತ ಜಗತ್ತಿನಲ್ಲೇ ಹೆಚ್ಚು ಬೇಡಿಕೆಯಿರುವ ವಾರಕ್ಕೆ 48 ಗಂಟೆಗಳ ಕೆಲಸದ ಮಿತಿಯನ್ನು ಅನುಸರಿಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಸ್ಮಾನ್ ಹಾದಿ ಹತ್ಯೆ : ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಮೂಲಕ ಭಾರತಕ್ಕೆ ಪರಾರಿಯಾಗಿದ್ದಾರೆ ಎಂದ ಬಾಂಗ್ಲಾ ಪೊಲೀಸರು

ಬಾಂಗ್ಲಾದೇಶದ ರಾಜಕೀಯ ಕಾರ್ಯಕರ್ತ ಉಸ್ಮಾನ್ ಹಾದಿ ಹತ್ಯೆಯ ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಗಡಿಯ ಮೂಲಕ ಭಾರತಕ್ಕೆ ಪಲಾಯನ ಮಾಡಿದ್ದಾರೆ ಎಂದು ಢಾಕಾ ಮೆಟ್ರೋಪಾಲಿಟನ್ ಪೊಲೀಸರು (ಡಿಎಂಪಿ) ತಿಳಿಸಿದ್ದಾರೆ ಎಂದು ದಿ ಡೈಲಿ...

ರಾಷ್ಟ್ರಪಿತನ‌ ಹೆಸರನ್ನೇ ಅಳಿಸುವ ಪಿತೂರಿಯನ್ನು ಸೋಲಿಸೋಣ : ಸಿಎಂ ಸಿದ್ದರಾಮಯ್ಯ

ನರೇಗಾ ಯೋಜನೆಗೆ ಮರುನಾಮಕರಣದ ಮೂಲಕ ರಾಷ್ಟ್ರಪಿತನ ಹೆಸರನ್ನೇ ಅಳಿಸಲು ಹೊರಟಿರುವ ಪ್ರಯತ್ನವನ್ನು ವಿಫಲಗೊಳಿಸಬೇಕು. ಗ್ರಾಮೀಣ ಆರ್ಥಿಕತೆಯನ್ನೇ ಹಾಳು ಮಾಡುವ ಹುನ್ನಾರ ಬಿಜೆಪಿಯದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿಯ ಭಾರತ್...

ವಿದ್ಯಾರ್ಥಿಗಳ ಪ್ರತಿಭಟನೆ: ರಾಜಕೀಯ ನಾಯಕರನ್ನು ಗೃಹಬಂಧನದಲ್ಲಿ ಇರಿಸಿದ ಜಮ್ಮು-ಕಾಶ್ಮೀರ ಪೊಲೀಸರು

ಸರ್ಕಾರ ಮೀಸಲಾತಿ ನೀತಿಯನ್ನು ತರ್ಕಬದ್ಧಗೊಳಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಜೆ & ಕೆ ವಿದ್ಯಾರ್ಥಿಗಳು ಪ್ರತಿಭಟನೆ ಘೋಷಿಸುತ್ತಿದ್ದಂತೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶನಿವಾರ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಸಂಸದ ಮತ್ತು ಪೀಪಲ್ಸ್...

ಆರ್‌ಎಸ್‌ಎಸ್‌-ಬಿಜೆಪಿ ಸಂಘಟನಾ ಶಕ್ತಿ ಶ್ಲಾಘಿಸಿದ ದಿಗ್ವಿಜಯ ಸಿಂಗ್‌ಗೆ ಶಶಿ ತರೂರ್‌ ಬೆಂಬಲ : ಪವನ್‌ ಖೇರಾ ತಿರುಗೇಟು

ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಆರ್‌ಎಸ್‌ಎಸ್‌ನ ಸಂಘಟನಾ ಶಕ್ತಿಯನ್ನು ಶ್ಲಾಘಿಸಿ ಹೇಳಿಕೆ ನೀಡಿರುವುದು ಪಕ್ಷದೊಳಗೆ ಮುಜುಗರ, ಅಸಮಾಧಾನ ಮತ್ತು ಅಪಸ್ವರಕ್ಕೆ ಕಾರಣವಾಗಿದೆ ಎಂಬ ಚರ್ಚೆಗಳು ನಡೆಯುತ್ತಿವೆ. ಆದರೆ, ಸಿಂಗ್ ಹೇಳಿಕೆಯನ್ನು ಕಾಂಗ್ರೆಸ್‌...

ಕೋಗಿಲು ಬಳಿ ಒತ್ತುವರಿ ತೆರವು: ಕಳವಳ ವ್ಯಕ್ತಪಡಿಸಿದ ಕಾಂಗ್ರೆಸ್ ಹೈಕಮಾಂಡ್: ಪರಿಹಾರ ಕ್ರಮ ಜಾರಿಗೆ ತರುವಂತೆ ಸಿಎಂ, ಡಿಸಿಎಂಗೆ ಒತ್ತಾಯ 

ಬೆಂಗಳೂರು ಉತ್ತರದ ಕೋಗಿಲು ಲೇಔಟ್ ಬಳಿ ನಡೆದ ಮನೆಗಳ ತೆರವು ಪ್ರಕರಣ ಇದೀಗ ಕಾಂಗ್ರೆಸ್ ಪಕ್ಷದೊಳಗೆ ಬಿರುಕಿಗೂ ಕಾರಣವಾಗಿದೆ. ಮನೆಗಳ ತೆರವು ವಿಚಾರ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ಆಡಳಿತ ಪಕ್ಷಕ್ಕೆ ಅಹಿತಕರವಾಗಿ ಪರಿಣಮಿಸುತ್ತಿದ್ದಂತೆಯೇ...

ಛತ್ತೀಸ್‌ಗಢ : ಹಿಂಸಾಚಾರಕ್ಕೆ ತಿರುಗಿದ ಕಲ್ಲಿದ್ದಲು ಗಣಿ ವಿರೋಧಿ ಹೋರಾಟ : ಹಲವು ಪೊಲೀಸರಿಗೆ ಗಾಯ, ವಾಹನಗಳಿಗೆ ಬೆಂಕಿ

ಛತ್ತೀಸ್‌ಗಢದ ರಾಯ್‌ಗಢ ಜಿಲ್ಲೆಯ ತಮ್ನಾರ್ ಪ್ರದೇಶದಲ್ಲಿ ಕಲ್ಲಿದ್ದಲು ಗಣಿಗಾರಿಕೆ ಯೋಜನೆಯನ್ನು ವಿರೋಧಿಸಿ ಶನಿವಾರ (ಡಿ.27) ನಡೆದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಂಡಿದ್ದು, ಪೊಲೀಸ್ ಸಿಬ್ಬಂದಿ ಸೇರಿದಂತೆ ಕನಿಷ್ಠ ಎಂಟು ಜನರು ಗಾಯಗೊಂಡಿದ್ದಾರೆ ಮತ್ತು...

ತ್ರಿಪುರಾ: ಮಸೀದಿಗೆ ಮದ್ಯದ ಬಾಟಲಿಗಳನ್ನು ಇಟ್ಟು ಬೆಂಕಿ ಹಚ್ಚಲು ಯತ್ನ: ಬಜರಂಗದಳ ಧ್ವಜ ಕಟ್ಟಿದ ದುಷ್ಕರ್ಮಿಗಳು

ತ್ರಿಪುರಾದ ಧಲೈ ಜಿಲ್ಲೆಯ ಮಸೀದಿಯನ್ನು ಅಪವಿತ್ರಗೊಳಿಸಲಾಗಿದೆ ಎಂದು ಆರೋಪಿಸಲಾಗಿದೆ, ಇದನ್ನು ಸ್ಥಳೀಯ ಮುಸ್ಲಿಂ ಸಮುದಾಯವನ್ನು ಬೆದರಿಸುವ ಮತ್ತು ಹಿಂಸಾಚಾರವನ್ನು ಪ್ರಚೋದಿಸುವ ಉದ್ದೇಶಪೂರ್ವಕ ಪ್ರಯತ್ನ ಎಂದು ನಿವಾಸಿಗಳು ಮತ್ತು ಮಸೀದಿ ಅಧಿಕಾರಿಗಳು ಹೇಳಿದ್ದಾರೆ.  ಮನು-ಚೌಮಾನು ರಸ್ತೆಯಲ್ಲಿರುವ...

‘ಇಸ್ರೇಲ್ ಗಾಝಾಗೆ ಪಾಠ ಕಲಿಸಿದಂತೆ ಬಾಂಗ್ಲಾದೇಶಕ್ಕೂ ಕಲಿಸಬೇಕು’ : ನರಮೇಧ, ಜನಾಂಗೀಯ ಹತ್ಯೆಗೆ ಹಪಹಪಿಸಿದ ಬಿಜೆಪಿ ನಾಯಕ

"ಇಸ್ರೇಲ್ ಗಾಝಾಗೆ ಕಲಿಸಿದಂತೆ ಬಾಂಗ್ಲಾದೇಶಕ್ಕೂ ಪಾಠ ಕಲಿಸಬೇಕು" ಎಂದು ಬಿಜೆಪಿ ಹಾಗೂ ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ನೀಡಿದ ಹೇಳಿಕೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಖಂಡನೆ ವ್ಯಕ್ತವಾಗಿದೆ. ಡಿಸೆಂಬರ್...

“ನನಗೆ ಏನೂ ಆಗುವುದಿಲ್ಲ”: ಅತ್ಯಾಚಾರ ಮಾಡಿ ಸಂತ್ರಸ್ತೆಗೆ ಧಮ್ಕಿ ಹಾಕಿದ ಬಿಜೆಪಿ ಕೌನ್ಸಿಲರ್ ಪತಿ 

ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಬಿಜೆಪಿ ಕೌನ್ಸಿಲರ್ ಒಬ್ಬರ ಪತಿ ಮಹಿಳೆಯೊಬ್ಬರ ಮೇಲೆ ಚಾಕು ತೋರಿಸಿ ಅತ್ಯಾಚಾರ ಎಸಗಿ, ಅದರ ವಿಡಿಯೋ ಮಾಡಿ, ನಂತರ ಅದನ್ನು ತೋರಿಸಿ ಪದೇ ಪದೇ ಲೈಂಗಿಕ ಸಂಬಂಧ ಹೊಂದುವಂತೆ...

ಅರಾವಳಿ ಬೆಟ್ಟಗಳ ಹೊಸ ವ್ಯಾಖ್ಯಾನಕ್ಕೆ ದೇಶದಾದ್ಯಂತ ತೀವ್ರ ವಿರೋಧ : ಸ್ವಯಂ ಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್

ಅರಾವಳಿ ಬೆಟ್ಟಗಳ ಹೊಸ ವ್ಯಾಖ್ಯಾನದಿಂದ ಪರಿಸರದ ಮೇಲಾಗುವ ಹಾನಿಯ ಕುರಿತು ದೇಶದ ಜನರು ತೀವ್ರ ಆತಂಕ ಮತ್ತು ಕಳವಳ ವ್ಯಕ್ತಪಡಿಸುತ್ತಿರುವ ಹಿನ್ನೆಲೆ, ಸುಪ್ರೀಂ ಕೋರ್ಟ್‌ ಈ ಕುರಿತು ಸ್ವಯಂ ಪ್ರೇರಿತ (Suo Motu...