Homeಮುಖಪುಟಕೆಲಸದ ಅವಧಿ ಬಳಿಕ ಯಾವುದೇ ಕರೆಗಳು, ಇಮೇಲ್‌ಗಳಿಗೆ ಉತ್ತರಿಸಬೇಕಿಲ್ಲ : ಸಂಪರ್ಕ ಕಡಿತ ಹಕ್ಕು ಮಸೂದೆ...

ಕೆಲಸದ ಅವಧಿ ಬಳಿಕ ಯಾವುದೇ ಕರೆಗಳು, ಇಮೇಲ್‌ಗಳಿಗೆ ಉತ್ತರಿಸಬೇಕಿಲ್ಲ : ಸಂಪರ್ಕ ಕಡಿತ ಹಕ್ಕು ಮಸೂದೆ ಹೇಳುವುದೇನು?

- Advertisement -
- Advertisement -

ದೇಶದಲ್ಲಿ ಕಾರ್ಪೋರೇಟ್ ಸಂಸ್ಥೆಗಳು ಉದ್ಯೋಗಿಗಳ ಮೇಲೆ ಅತೀವ ಕೆಲಸದ ಹೊರೆಯನ್ನು ಹೇರಿ ಅವರ ಖಾಸಗಿ ಜೀವನವನ್ನು ಕಿತ್ತುಕೊಳ್ಳುವ ಮೂಲಕ ಮಾನಸಿಕ ಒತ್ತಡಕ್ಕೆ ತಳ್ಳುತ್ತಿರುವ ಪರಿಸ್ಥಿತಿ ಗಂಭೀರ ಹಂತಕ್ಕೆ ತಲುಪಿದೆ. ಅದಾಗ್ಯೂ ಕೆಲ ಕಾರ್ಪೋರೇಟ್‌ ಬಂಡವಾಳಶಾಹಿಗಳು ಕೆಲಸದ ಅವಧಿಯನ್ನು ಇನ್ನಷ್ಟು ಹೆಚ್ಚಿಸುವ ಮೂಲಕ ಉದ್ಯೋಗಿಗಳನ್ನು ಇನ್ನಷ್ಟು ಸಂಕಷ್ಟಕ್ಕೆ ನೂಕಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕೆ ಪೂರಕವಾಗಿಯೇ ಸರ್ಕಾರಗಳು ಕೂಡ ವರ್ತಿಸುತ್ತಿವೆ.

ಇಂತಹ ಸಂದರ್ಭದಲ್ಲಿ ದೇಶದ ಸಂಸತ್ತಿನಲ್ಲಿ ಮಹತ್ವದ ಮಸೂದೆಯೊಂದು ಮಂಡನೆಯಾಗಿದೆ. ಅದೇ ‘ಸಂಪರ್ಕ ಕಡಿತ ಹಕ್ಕು ಮಸೂದೆ’ (Right to Disconnect Bill). ಅಧಿಕೃತ ಕೆಲಸದ ಸಮಯದ ನಂತರ ಮತ್ತು ರಜಾದಿನಗಳಲ್ಲಿ ಕೆಲಸಕ್ಕೆ ಸಂಬಂಧಿಸಿದ ಕರೆಗಳು, ಸಂದೇಶಗಳು ಮತ್ತು ಇಮೇಲ್‌ಗಳನ್ನು ನಿರಾಕರಿಸುವ ಕಾನೂನುಬದ್ಧ ಹಕ್ಕನ್ನು ಉದ್ಯೋಗಿಗಳಿಗೆ ನೀಡುವ ಈ ಮಹತ್ವದ ಮಸೂದೆಯನ್ನು ಎನ್‌ಸಿಪಿ (ಎಸ್‌ಪಿ) ಸಂಸದೆ ಸುಪ್ರಿಯಾ ಸುಳೆ ಶುಕ್ರವಾರ (ಡಿಸೆಂಬರ್ 5) ಲೋಕಸಭೆಯಲ್ಲಿ ಮಂಡಿಸಿದ್ದಾರೆ.

ಸಂಪರ್ಕ ಕಡಿತ ಹಕ್ಕು ಮಸೂದೆ ಹೇಳುವುದೇನು?

ಅಧಿಕೃತ ಕೆಲಸದ ಸಮಯದ ನಂತರ ಮತ್ತು ರಜಾದಿನಗಳಲ್ಲಿ ಕೆಲಸಕ್ಕೆ ಸಂಬಂಧಿಸಿದ ಕರೆಗಳು, ಸಂದೇಶಗಳು ಮತ್ತು ಇಮೇಲ್‌ಗಳಿಗೆ ಪ್ರತಿಕ್ರಿಯಿಸುವಂತೆ ಉದ್ಯೋಗಿಗಳನ್ನು ಒತ್ತಾಯಿಸಬಾರದು ಎಂದು ಈ ಮಸೂದೆ ಹೇಳುತ್ತದೆ. ಶಿಸ್ತು ಕ್ರಮದ ಭಯವಿಲ್ಲದೆ, ಕರೆಗಳು ಮತ್ತು ಇಮೇಲ್‌ಗಳನ್ನು ನಿರಾಕರಿಸುವ ಹಕ್ಕನ್ನು ಇದು ಪ್ರತಿಯೊಬ್ಬ ಕೆಲಸಗಾರರಿಗೆ ನೀಡುತ್ತದೆ.

ಉದ್ಯೋಗಿಗಳು ಕೆಲಸದ ಸಮಯದ ನಂತರ ಕೆಲಸಕ್ಕೆ ಸಂಬಂಧಿಸಿದ ಕರೆಗಳು, ಇಮೇಲ್‌ಗಳು ಅಥವಾ ಸಂದೇಶಗಳಿಗೆ ಉತ್ತರಿಸುವ ಅಗತ್ಯವಿಲ್ಲ. ಪ್ರತಿಕ್ರಿಯಿಸಲು ನಿರಾಕರಿಸಿದ್ದಕ್ಕಾಗಿ ಯಾವುದೇ ಉದ್ಯೋಗಿ ವಿರುದ್ದ ಶಿಸ್ತು ಕ್ರಮ ಕೈಗೊಳ್ಳುವಂತಿಲ್ಲ. ಈ ನಿಯಮ ಫೋನ್ ಕರೆಗಳು, ಪಠ್ಯ ಸಂದೇಶಗಳು, ಇಮೇಲ್‌ಗಳು, ವಿಡಿಯೋ ಕರೆಗಳು ಮುಂತಾದ ಎಲ್ಲಾ ರೀತಿಯ ಸಂವಹನಕ್ಕೂ ಅನ್ವಯಿಸುತ್ತದೆ. ಅಗತ್ಯವಿದ್ದರೆ, ಉದ್ಯೋಗದಾತರು ಮತ್ತು ಉದ್ಯೋಗಿಗಳು ತುರ್ತು ಸಂಪರ್ಕ ನಿಯಮಗಳ ಬಗ್ಗೆ ಪರಸ್ಪರ ಪೂರ್ವ ಒಪ್ಪಂದ ಮಾಡಿಕೊಂಡಿರಬೇಕು. ಕಾನೂನು ಉಲ್ಲಂಘಿಸುವ ಸಂಸ್ಥೆಗಳಿಗೆ ಒಟ್ಟು ಉದ್ಯೋಗಿ ಸಂಭಾವನೆಯ ಶೇಕಡಾ 1 ರಷ್ಟು ದಂಡ ವಿಧಿಸಲು ಮಸೂದೆ ಪ್ರಸ್ತಾಪಿಸಿದೆ.

ತುರ್ತು ನಿಯಮಗಳು

ನೌಕರರ ವೈಯಕ್ತಿಕ ಸಮಯವನ್ನು ರಕ್ಷಿಸುವುದರ ಜೊತೆಗೆ, ನಿಜವಾದ ತುರ್ತು ಪರಿಸ್ಥಿತಿಗಳನ್ನು ಪರಿಹರಿಸಲು ಒಂದು ಕಾರ್ಯವಿಧಾನವನ್ನು ಸಹ ಮಸೂದೆ ಪ್ರಸ್ತಾಪಿಸುತ್ತದೆ. ಕೆಲಸದ ಸಮಯದ ನಂತರ ನೌಕರರನ್ನು ಸಂಪರ್ಕಿಸಲು ಪರಸ್ಪರ ಒಪ್ಪಿದ ನಿಯಮಗಳನ್ನು ರೂಪಿಸಲು ಸಮಿತಿಯನ್ನು ಸ್ಥಾಪಿಸಲು ಇದು ಸಲಹೆ ನೀಡುತ್ತದೆ.

ಉದ್ಯೋಗದಾತರು ಮತ್ತು ಉದ್ಯೋಗಿ ಪರಸ್ಪರ ಪೂರ್ವ ಮಾತುಕತೆ ನಡೆಸಿ ಒಪ್ಪಿಕೊಂಡ ಸಮಯದ ಅವಧಿಯಲ್ಲಿ ಯಾವುದೇ ರೀತಿಯ ಸಂವಹನದ ಮೂಲಕ ಸಂಪರ್ಕಿಸಬಹುದು. ನೌಕರರು ಕಚೇರಿ ಸಮಯವನ್ನು ಮೀರಿ ಕೆಲಸ ಮಾಡುತ್ತಿದ್ದರೆ, ಅವರೊಂದಿಗೆ ಸಂವಹನ ನಡೆಸಬಹುದು. ಆದರೆ, ಅವರು ಸಾಮಾನ್ಯ ವೇತನ ದರದಲ್ಲಿ ಅಧಿಕಾವಧಿಗೆ ವೇತನ ಪಡೆಯುತ್ತಿರಬೇಕು ಎಂದು ಮಸೂದೆ ಹೇಳುತ್ತದೆ.

ಈ ಮಸೂದೆಯ ಅಗತ್ಯವೇನು?

ಡಿಜಿಟಲ್ ಸಂವಹನ ಸಾಧನಗಳಿಂದ ಹೆಚ್ಚಿನ ಲಾಭವಿದೆ. ಆದರೆ, ಅವುಗಳ ಮೂಲಕ ಉದ್ಯೋಗಿಗಳು ಕೆಲಸದ ಅವಧಿಯ ಹೊರತಾಗಿಯೂ ನಿರಂತರ ಸಂಪರ್ಕದಲ್ಲಿ ಇರಬೇಕು ಎಂಬ ಸಂಸ್ಕೃತಿ ಬೆಳೆದಿದೆ. ಇದರಿಂದ ಉದ್ಯೋಗಿಗಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ನಿದ್ರಾಹೀನತೆ, ಒತ್ತಡ ಮತ್ತು ಮಾನಸಿಕ ಸುಸ್ತು, ಹಾಗೂ ಸಂದೇಶಗಳಿಗೆ ತಕ್ಷಣ ಪ್ರತಿಕ್ರಿಯಿಸಬೇಕೆಂಬ ಟೆಲಿಪ್ರೆಶರ್ ಅವುಗಳಲ್ಲಿ ಪ್ರಮುಖವಾಗಿವೆ. ಜೊತೆಗೆ, ಕೆಲಸಕ್ಕೆ ಸಂಬಂಧಿಸಿದ ಸಂದೇಶಗಳನ್ನು ನಿರಂತರವಾಗಿ ಪರಿಶೀಲಿಸುವ ಅಭ್ಯಾಸದಿಂದ ‘ಮಾಹಿತಿ ಅತಿಭಾರ’ (info-obesity) ಉಂಟಾಗುತ್ತಿದೆ ಎಂದು ಮಸೂದೆ ಹೇಳುತ್ತದೆ.

ಸುಪ್ರಿಯಾ ಸುಳೆ ಅವರು 2019ರಲ್ಲೂ ಇದೇ ರೀತಿಯ ಮಸೂದೆಯನ್ನು ಮಂಡಿಸಿದ್ದರು. ಇದೀಗ ಡಿಜಿಟಲ್ ಸಂವಹನ ಸಾಧನಗಳ ಮೂಲಕ ಉದ್ಯೋಗಿಗಳ ಮೇಲೆ ಹೇರುತ್ತಿರುವ ಒತ್ತಡವನ್ನು ಇನ್ನಷ್ಟು ವಿವರಿಸಿ ಮತ್ತು ಈ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿ ಹೊಸ ಮಸೂದೆ ಮಂಡಿಸಿದ್ದಾರೆ. ಭಾರತ ಪ್ರಸ್ತುತ ಜಗತ್ತಿನಲ್ಲೇ ಹೆಚ್ಚು ಬೇಡಿಕೆಯಿರುವ ವಾರಕ್ಕೆ 48 ಗಂಟೆಗಳ ಕೆಲಸದ ಮಿತಿಯನ್ನು ಅನುಸರಿಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಿಕ್ಷೆ ಮುಗಿದ 3 ವರ್ಷಗಳ ನಂತರ ಪಾಕಿಸ್ತಾನ ಜೈಲಿನಲ್ಲಿ ಗುಜರಾತ್ ಮೀನುಗಾರ ಸಾವು

2022 ರಲ್ಲಿ ಅಜಾಗರೂಕತೆಯಿಂದ ಅಂತರರಾಷ್ಟ್ರೀಯ ಗಡಿ ರೇಖೆಯನ್ನು ದಾಟಿದ ನಂತರ ಪಾಕಿಸ್ತಾನ ಏಜೆನ್ಸಿಗಳಿಂದ ಬಂಧಿಸಲ್ಪಟ್ಟ ಗುಜರಾತ್‌ನ ಮೀನುಗಾರನೊಬ್ಬ ಜನವರಿ 16 ರಂದು ಕರಾಚಿ ಜೈಲಿನಲ್ಲಿ ಸಾವನ್ನಪ್ಪಿದ್ದಾನೆ. ಮೂರು ವರ್ಷಗಳ ಹಿಂದೆ ಆತನ ಶಿಕ್ಷೆಯನ್ನು...

ಸ್ಥಳದಲ್ಲೇ ದಂಡ ಪಾವತಿಸುವಂತೆ ಸಂಚಾರ ಪೊಲೀಸರು ಒತ್ತಾಯಿಸುವಂತಿಲ್ಲ: ತೆಲಂಗಾಣ ಹೈಕೋರ್ಟ್

ಸಂಚಾರ ನಿಯಮ ಉಲ್ಲಂಘಿಸುವವರ ಬ್ಯಾಂಕ್ ಖಾತೆಗಳಿಂದ ಸ್ವಯಂಚಾಲಿತವಾಗಿ ದಂಡ ಕಡಿತಗೊಳಿಸಬೇಕೆಂದು ಮುಖ್ಯಮಂತ್ರಿ ರೇವಂತ್ ರೆಡ್ಡಿ ಸೂಚಿಸಿದ ಕೆಲವು ದಿನಗಳ ನಂತರ ಮಹತ್ವದ ತೀರ್ಪು ನೀಡಿರುವ ತೆಲಂಗಾಣ ಹೈಕೋರ್ಟ್, ಪೊಲೀಸರು ನಾಗರಿಕರನ್ನು ರಸ್ತೆಯಲ್ಲಿ ನಿಲ್ಲಿಸಿ...

ಎಸ್‌ಸಿ/ಎಸ್‌ಟಿ ಶಾಲೆಗಳ ನವೀಕರಣಕ್ಕೆ ಹಣ ಮಂಜೂರು ಮಾಡದಂತೆ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಮದ್ರಾಸ್ ಹೈಕೋರ್ಟ್ 

ಮಧುರೈ: ತಮಿಳುನಾಡಿನ ಸುಮಾರು 170 ಎಸ್‌ಸಿ/ಎಸ್‌ಟಿ ಶಾಲೆ ಮತ್ತು ಹಾಸ್ಟೆಲ್ ಕಟ್ಟಡಗಳ ದುರಸ್ತಿ ಮತ್ತು ನಿರ್ಮಾಣ ಕಾರ್ಯಗಳಿಗೆ ತಮಿಳುನಾಡು ಆದಿ ದ್ರಾವಿಡರ್ ವಸತಿ ಅಭಿವೃದ್ಧಿ ನಿಗಮ (ಟಿಎಎಚ್‌ಡಿಸಿಒ) 50 ಕೋಟಿ ರೂ.ಗಳನ್ನು ಖರ್ಚು...

ಕೇಂದ್ರ ಸರ್ಕಾರಿ ಅಧಿಕಾರಿಗಳ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳನ್ನು ರಾಜ್ಯ ಸಂಸ್ಥೆ ತನಿಖೆ ಮಾಡಬಹುದು : ಸುಪ್ರೀಂ ಕೋರ್ಟ್

ಕೇಂದ್ರ ಸರ್ಕಾರಿ ನೌಕರರು ಮಾಡುವ ಭ್ರಷ್ಟಾಚಾರ ತಡೆ ಕಾಯ್ದೆಯಡಿಯ ಶಿಕ್ಷಾರ್ಹ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ರಾಜ್ಯ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಲು ಮತ್ತು ಆರೋಪಪಟ್ಟಿ ಸಲ್ಲಿಸಲು ಸಮರ್ಥರು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಗ್ಯಾಂಗ್‌ಸ್ಟರ್‌ಗಳ ವಿರುದ್ಧ ರಾಜ್ಯಾದ್ಯಂತ ಕಾರ್ಯಚರಣೆ ಆರಂಭಿಸಿದ ಪಂಜಾಬ್ ಸರ್ಕಾರ

ಮಾದಕ ವಸ್ತುಗಳ ವಿರುದ್ಧದ ತನ್ನ ಕಾರ್ಯಾಚರಣೆಯಿಂದ ಸ್ಫೂರ್ತಿ ಪಡೆದು, ಪಂಜಾಬ್ ಸರ್ಕಾರ ಮಂಗಳವಾರ ಗ್ಯಾಂಗ್‌ಸ್ಟರ್‌ಗಳ ವಿರುದ್ಧ ರಾಜ್ಯಾದ್ಯಂತ ಅಭಿಯಾನ ಆರಂಭಿಸಿದ್ದು, ಶಸ್ತ್ರಾಸ್ತ್ರ ಪೂರೈಕೆ ಸರಪಳಿಗಳು, ಲಾಜಿಸ್ಟಿಕ್ಸ್, ಅಡಗುತಾಣಗಳು ಮತ್ತು ಸಂವಹನ ಜಾಲಗಳು ಸೇರಿದಂತೆ...

‘ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ‘ನನ್ನ ಹೆಸರೇ’ ಆಸರೆ’: ಪ್ರಿಯಾಂಕ್ ಖರ್ಗೆ ಆಕ್ರೋಶ 

ಬೆಂಗಳೂರು: ಮುಳುಗುವವನಿಗೆ ಹುಲ್ಲು ಕಡ್ಡಿಯ ಆಸರೆ ಎನ್ನುವಂತೆ, ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ನನ್ನ ಹೆಸರೇ ಆಸರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ "ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು...

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ ರದ್ದುಗೊಳಿಸಲು ಸಾಂವಿಧಾನಿಕ ತಿದ್ದುಪಡಿಗೆ ಒತ್ತಾಯ : ತಮಿಳುನಾಡು ಸಿಎಂ ಸ್ಟಾಲಿನ್

ವಿಧಾನಸಭೆ ಅಧಿವೇಶನದಲ್ಲಿ ರಾಜ್ಯಪಾಲರು ವಾರ್ಷಿಕ ಭಾಷಣ ಮಾಡುವ ಸಂಪ್ರದಾಯವನ್ನು ರದ್ದುಗೊಳಿಸುವ ಸಾಂವಿಧಾನಿಕ ತಿದ್ದುಪಡಿಗೆ ಒತ್ತಾಯಿಸುವುದಾಗಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಘೋಷಿಸಿದ್ದಾರೆ. ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲ ಆರ್‌.ಎನ್‌ ರವಿ ನಡುವೆ ಜಟಾಪಟಿ ನಡೆದು,...

ಅಸ್ಸಾಂ| ದನ ಕಳ್ಳತನದ ಶಂಕೆಯಿಂದ ಗುಂಪು ದಾಳಿ; ಓರ್ವ ಸಾವು-ನಾಲ್ವರ ಸ್ಥಿತಿ ಗಂಭೀರ

ದನ ಕಳ್ಳತನದ ಶಂಕೆಯ ಮೇಲೆ ಗುಂಪೊಂದು ದಾಳಿ ಮಾಡಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ, ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ (ಜ.19) ಅಸ್ಸಾಂನ ಕೊಕ್ರಜಾರ್‌ನಲ್ಲಿ ನಡೆದಿದೆ. ಬಲಿಪಶುಗಳು, ರಸ್ತೆ ನಿರ್ಮಾಣ ಯೋಜನೆಯೊಮದರಲ್ಲಿ...

ಕರ್ನಾಟಕ: ಐದು ವರ್ಷಗಳಲ್ಲಿ ಎಸ್‌ಸಿ/ಎಸ್‌ಟಿಗಳ ಮೇಲಿನ ಅಪರಾಧಗಳು ಶೇ. 37.7 ರಷ್ಟು ಏರಿಕೆ; ಬೆಂಗಳೂರಿನದೇ ಅಗ್ರಸ್ಥಾನ

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (SC/ST) ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಕಠಿಣ ಕಾನೂನುಗಳಿದ್ದರೂ, ಈ ಸಮುದಾಯಗಳ ಮೇಲಿನ ಅಪರಾಧಗಳು ಕಳೆದ ಐದು ವರ್ಷಗಳಲ್ಲಿ ಶೇ. 37.74 ರಷ್ಟು ಹೆಚ್ಚಾಗಿದ್ದು,...

‘ನಿತಿನ್ ನಬಿನ್ ನನ್ನ ಬಾಸ್, ನಾನು ಕೆಲಸಗಾರ..’; ಬಿಜೆಪಿ ನೂತನ ಮುಖ್ಯಸ್ಥರನ್ನು ಸ್ವಾಗತಿಸಿದ ಪ್ರಧಾನಿ ಮೋದಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಅತ್ಯಂತ ಕಿರಿಯ ವಯಸ್ಸಿನ ನಿತಿನ್ ನಬಿನ್ ಅವರನ್ನು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದರು. ಪಕ್ಷದ ಪರಂಪರೆಯನ್ನು ಮುಂದುವರಿಸುವ 'ಸಹಸ್ರಮಾನದ' ವ್ಯಕ್ತಿ ಎಂದು ಕರೆದರು. "ಪಕ್ಷದ...