Homeಮುಖಪುಟಕೆಲಸದ ಅವಧಿ ಬಳಿಕ ಯಾವುದೇ ಕರೆಗಳು, ಇಮೇಲ್‌ಗಳಿಗೆ ಉತ್ತರಿಸಬೇಕಿಲ್ಲ : ಸಂಪರ್ಕ ಕಡಿತ ಹಕ್ಕು ಮಸೂದೆ...

ಕೆಲಸದ ಅವಧಿ ಬಳಿಕ ಯಾವುದೇ ಕರೆಗಳು, ಇಮೇಲ್‌ಗಳಿಗೆ ಉತ್ತರಿಸಬೇಕಿಲ್ಲ : ಸಂಪರ್ಕ ಕಡಿತ ಹಕ್ಕು ಮಸೂದೆ ಹೇಳುವುದೇನು?

- Advertisement -
- Advertisement -

ದೇಶದಲ್ಲಿ ಕಾರ್ಪೋರೇಟ್ ಸಂಸ್ಥೆಗಳು ಉದ್ಯೋಗಿಗಳ ಮೇಲೆ ಅತೀವ ಕೆಲಸದ ಹೊರೆಯನ್ನು ಹೇರಿ ಅವರ ಖಾಸಗಿ ಜೀವನವನ್ನು ಕಿತ್ತುಕೊಳ್ಳುವ ಮೂಲಕ ಮಾನಸಿಕ ಒತ್ತಡಕ್ಕೆ ತಳ್ಳುತ್ತಿರುವ ಪರಿಸ್ಥಿತಿ ಗಂಭೀರ ಹಂತಕ್ಕೆ ತಲುಪಿದೆ. ಅದಾಗ್ಯೂ ಕೆಲ ಕಾರ್ಪೋರೇಟ್‌ ಬಂಡವಾಳಶಾಹಿಗಳು ಕೆಲಸದ ಅವಧಿಯನ್ನು ಇನ್ನಷ್ಟು ಹೆಚ್ಚಿಸುವ ಮೂಲಕ ಉದ್ಯೋಗಿಗಳನ್ನು ಇನ್ನಷ್ಟು ಸಂಕಷ್ಟಕ್ಕೆ ನೂಕಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕೆ ಪೂರಕವಾಗಿಯೇ ಸರ್ಕಾರಗಳು ಕೂಡ ವರ್ತಿಸುತ್ತಿವೆ.

ಇಂತಹ ಸಂದರ್ಭದಲ್ಲಿ ದೇಶದ ಸಂಸತ್ತಿನಲ್ಲಿ ಮಹತ್ವದ ಮಸೂದೆಯೊಂದು ಮಂಡನೆಯಾಗಿದೆ. ಅದೇ ‘ಸಂಪರ್ಕ ಕಡಿತ ಹಕ್ಕು ಮಸೂದೆ’ (Right to Disconnect Bill). ಅಧಿಕೃತ ಕೆಲಸದ ಸಮಯದ ನಂತರ ಮತ್ತು ರಜಾದಿನಗಳಲ್ಲಿ ಕೆಲಸಕ್ಕೆ ಸಂಬಂಧಿಸಿದ ಕರೆಗಳು, ಸಂದೇಶಗಳು ಮತ್ತು ಇಮೇಲ್‌ಗಳನ್ನು ನಿರಾಕರಿಸುವ ಕಾನೂನುಬದ್ಧ ಹಕ್ಕನ್ನು ಉದ್ಯೋಗಿಗಳಿಗೆ ನೀಡುವ ಈ ಮಹತ್ವದ ಮಸೂದೆಯನ್ನು ಎನ್‌ಸಿಪಿ (ಎಸ್‌ಪಿ) ಸಂಸದೆ ಸುಪ್ರಿಯಾ ಸುಳೆ ಶುಕ್ರವಾರ (ಡಿಸೆಂಬರ್ 5) ಲೋಕಸಭೆಯಲ್ಲಿ ಮಂಡಿಸಿದ್ದಾರೆ.

ಸಂಪರ್ಕ ಕಡಿತ ಹಕ್ಕು ಮಸೂದೆ ಹೇಳುವುದೇನು?

ಅಧಿಕೃತ ಕೆಲಸದ ಸಮಯದ ನಂತರ ಮತ್ತು ರಜಾದಿನಗಳಲ್ಲಿ ಕೆಲಸಕ್ಕೆ ಸಂಬಂಧಿಸಿದ ಕರೆಗಳು, ಸಂದೇಶಗಳು ಮತ್ತು ಇಮೇಲ್‌ಗಳಿಗೆ ಪ್ರತಿಕ್ರಿಯಿಸುವಂತೆ ಉದ್ಯೋಗಿಗಳನ್ನು ಒತ್ತಾಯಿಸಬಾರದು ಎಂದು ಈ ಮಸೂದೆ ಹೇಳುತ್ತದೆ. ಶಿಸ್ತು ಕ್ರಮದ ಭಯವಿಲ್ಲದೆ, ಕರೆಗಳು ಮತ್ತು ಇಮೇಲ್‌ಗಳನ್ನು ನಿರಾಕರಿಸುವ ಹಕ್ಕನ್ನು ಇದು ಪ್ರತಿಯೊಬ್ಬ ಕೆಲಸಗಾರರಿಗೆ ನೀಡುತ್ತದೆ.

ಉದ್ಯೋಗಿಗಳು ಕೆಲಸದ ಸಮಯದ ನಂತರ ಕೆಲಸಕ್ಕೆ ಸಂಬಂಧಿಸಿದ ಕರೆಗಳು, ಇಮೇಲ್‌ಗಳು ಅಥವಾ ಸಂದೇಶಗಳಿಗೆ ಉತ್ತರಿಸುವ ಅಗತ್ಯವಿಲ್ಲ. ಪ್ರತಿಕ್ರಿಯಿಸಲು ನಿರಾಕರಿಸಿದ್ದಕ್ಕಾಗಿ ಯಾವುದೇ ಉದ್ಯೋಗಿ ವಿರುದ್ದ ಶಿಸ್ತು ಕ್ರಮ ಕೈಗೊಳ್ಳುವಂತಿಲ್ಲ. ಈ ನಿಯಮ ಫೋನ್ ಕರೆಗಳು, ಪಠ್ಯ ಸಂದೇಶಗಳು, ಇಮೇಲ್‌ಗಳು, ವಿಡಿಯೋ ಕರೆಗಳು ಮುಂತಾದ ಎಲ್ಲಾ ರೀತಿಯ ಸಂವಹನಕ್ಕೂ ಅನ್ವಯಿಸುತ್ತದೆ. ಅಗತ್ಯವಿದ್ದರೆ, ಉದ್ಯೋಗದಾತರು ಮತ್ತು ಉದ್ಯೋಗಿಗಳು ತುರ್ತು ಸಂಪರ್ಕ ನಿಯಮಗಳ ಬಗ್ಗೆ ಪರಸ್ಪರ ಪೂರ್ವ ಒಪ್ಪಂದ ಮಾಡಿಕೊಂಡಿರಬೇಕು. ಕಾನೂನು ಉಲ್ಲಂಘಿಸುವ ಸಂಸ್ಥೆಗಳಿಗೆ ಒಟ್ಟು ಉದ್ಯೋಗಿ ಸಂಭಾವನೆಯ ಶೇಕಡಾ 1 ರಷ್ಟು ದಂಡ ವಿಧಿಸಲು ಮಸೂದೆ ಪ್ರಸ್ತಾಪಿಸಿದೆ.

ತುರ್ತು ನಿಯಮಗಳು

ನೌಕರರ ವೈಯಕ್ತಿಕ ಸಮಯವನ್ನು ರಕ್ಷಿಸುವುದರ ಜೊತೆಗೆ, ನಿಜವಾದ ತುರ್ತು ಪರಿಸ್ಥಿತಿಗಳನ್ನು ಪರಿಹರಿಸಲು ಒಂದು ಕಾರ್ಯವಿಧಾನವನ್ನು ಸಹ ಮಸೂದೆ ಪ್ರಸ್ತಾಪಿಸುತ್ತದೆ. ಕೆಲಸದ ಸಮಯದ ನಂತರ ನೌಕರರನ್ನು ಸಂಪರ್ಕಿಸಲು ಪರಸ್ಪರ ಒಪ್ಪಿದ ನಿಯಮಗಳನ್ನು ರೂಪಿಸಲು ಸಮಿತಿಯನ್ನು ಸ್ಥಾಪಿಸಲು ಇದು ಸಲಹೆ ನೀಡುತ್ತದೆ.

ಉದ್ಯೋಗದಾತರು ಮತ್ತು ಉದ್ಯೋಗಿ ಪರಸ್ಪರ ಪೂರ್ವ ಮಾತುಕತೆ ನಡೆಸಿ ಒಪ್ಪಿಕೊಂಡ ಸಮಯದ ಅವಧಿಯಲ್ಲಿ ಯಾವುದೇ ರೀತಿಯ ಸಂವಹನದ ಮೂಲಕ ಸಂಪರ್ಕಿಸಬಹುದು. ನೌಕರರು ಕಚೇರಿ ಸಮಯವನ್ನು ಮೀರಿ ಕೆಲಸ ಮಾಡುತ್ತಿದ್ದರೆ, ಅವರೊಂದಿಗೆ ಸಂವಹನ ನಡೆಸಬಹುದು. ಆದರೆ, ಅವರು ಸಾಮಾನ್ಯ ವೇತನ ದರದಲ್ಲಿ ಅಧಿಕಾವಧಿಗೆ ವೇತನ ಪಡೆಯುತ್ತಿರಬೇಕು ಎಂದು ಮಸೂದೆ ಹೇಳುತ್ತದೆ.

ಈ ಮಸೂದೆಯ ಅಗತ್ಯವೇನು?

ಡಿಜಿಟಲ್ ಸಂವಹನ ಸಾಧನಗಳಿಂದ ಹೆಚ್ಚಿನ ಲಾಭವಿದೆ. ಆದರೆ, ಅವುಗಳ ಮೂಲಕ ಉದ್ಯೋಗಿಗಳು ಕೆಲಸದ ಅವಧಿಯ ಹೊರತಾಗಿಯೂ ನಿರಂತರ ಸಂಪರ್ಕದಲ್ಲಿ ಇರಬೇಕು ಎಂಬ ಸಂಸ್ಕೃತಿ ಬೆಳೆದಿದೆ. ಇದರಿಂದ ಉದ್ಯೋಗಿಗಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ನಿದ್ರಾಹೀನತೆ, ಒತ್ತಡ ಮತ್ತು ಮಾನಸಿಕ ಸುಸ್ತು, ಹಾಗೂ ಸಂದೇಶಗಳಿಗೆ ತಕ್ಷಣ ಪ್ರತಿಕ್ರಿಯಿಸಬೇಕೆಂಬ ಟೆಲಿಪ್ರೆಶರ್ ಅವುಗಳಲ್ಲಿ ಪ್ರಮುಖವಾಗಿವೆ. ಜೊತೆಗೆ, ಕೆಲಸಕ್ಕೆ ಸಂಬಂಧಿಸಿದ ಸಂದೇಶಗಳನ್ನು ನಿರಂತರವಾಗಿ ಪರಿಶೀಲಿಸುವ ಅಭ್ಯಾಸದಿಂದ ‘ಮಾಹಿತಿ ಅತಿಭಾರ’ (info-obesity) ಉಂಟಾಗುತ್ತಿದೆ ಎಂದು ಮಸೂದೆ ಹೇಳುತ್ತದೆ.

ಸುಪ್ರಿಯಾ ಸುಳೆ ಅವರು 2019ರಲ್ಲೂ ಇದೇ ರೀತಿಯ ಮಸೂದೆಯನ್ನು ಮಂಡಿಸಿದ್ದರು. ಇದೀಗ ಡಿಜಿಟಲ್ ಸಂವಹನ ಸಾಧನಗಳ ಮೂಲಕ ಉದ್ಯೋಗಿಗಳ ಮೇಲೆ ಹೇರುತ್ತಿರುವ ಒತ್ತಡವನ್ನು ಇನ್ನಷ್ಟು ವಿವರಿಸಿ ಮತ್ತು ಈ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿ ಹೊಸ ಮಸೂದೆ ಮಂಡಿಸಿದ್ದಾರೆ. ಭಾರತ ಪ್ರಸ್ತುತ ಜಗತ್ತಿನಲ್ಲೇ ಹೆಚ್ಚು ಬೇಡಿಕೆಯಿರುವ ವಾರಕ್ಕೆ 48 ಗಂಟೆಗಳ ಕೆಲಸದ ಮಿತಿಯನ್ನು ಅನುಸರಿಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...