Homeಮುಖಪುಟಕೆಲಸದ ಅವಧಿ ಬಳಿಕ ಯಾವುದೇ ಕರೆಗಳು, ಇಮೇಲ್‌ಗಳಿಗೆ ಉತ್ತರಿಸಬೇಕಿಲ್ಲ : ಸಂಪರ್ಕ ಕಡಿತ ಹಕ್ಕು ಮಸೂದೆ...

ಕೆಲಸದ ಅವಧಿ ಬಳಿಕ ಯಾವುದೇ ಕರೆಗಳು, ಇಮೇಲ್‌ಗಳಿಗೆ ಉತ್ತರಿಸಬೇಕಿಲ್ಲ : ಸಂಪರ್ಕ ಕಡಿತ ಹಕ್ಕು ಮಸೂದೆ ಹೇಳುವುದೇನು?

- Advertisement -
- Advertisement -

ದೇಶದಲ್ಲಿ ಕಾರ್ಪೋರೇಟ್ ಸಂಸ್ಥೆಗಳು ಉದ್ಯೋಗಿಗಳ ಮೇಲೆ ಅತೀವ ಕೆಲಸದ ಹೊರೆಯನ್ನು ಹೇರಿ ಅವರ ಖಾಸಗಿ ಜೀವನವನ್ನು ಕಿತ್ತುಕೊಳ್ಳುವ ಮೂಲಕ ಮಾನಸಿಕ ಒತ್ತಡಕ್ಕೆ ತಳ್ಳುತ್ತಿರುವ ಪರಿಸ್ಥಿತಿ ಗಂಭೀರ ಹಂತಕ್ಕೆ ತಲುಪಿದೆ. ಅದಾಗ್ಯೂ ಕೆಲ ಕಾರ್ಪೋರೇಟ್‌ ಬಂಡವಾಳಶಾಹಿಗಳು ಕೆಲಸದ ಅವಧಿಯನ್ನು ಇನ್ನಷ್ಟು ಹೆಚ್ಚಿಸುವ ಮೂಲಕ ಉದ್ಯೋಗಿಗಳನ್ನು ಇನ್ನಷ್ಟು ಸಂಕಷ್ಟಕ್ಕೆ ನೂಕಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕೆ ಪೂರಕವಾಗಿಯೇ ಸರ್ಕಾರಗಳು ಕೂಡ ವರ್ತಿಸುತ್ತಿವೆ.

ಇಂತಹ ಸಂದರ್ಭದಲ್ಲಿ ದೇಶದ ಸಂಸತ್ತಿನಲ್ಲಿ ಮಹತ್ವದ ಮಸೂದೆಯೊಂದು ಮಂಡನೆಯಾಗಿದೆ. ಅದೇ ‘ಸಂಪರ್ಕ ಕಡಿತ ಹಕ್ಕು ಮಸೂದೆ’ (Right to Disconnect Bill). ಅಧಿಕೃತ ಕೆಲಸದ ಸಮಯದ ನಂತರ ಮತ್ತು ರಜಾದಿನಗಳಲ್ಲಿ ಕೆಲಸಕ್ಕೆ ಸಂಬಂಧಿಸಿದ ಕರೆಗಳು, ಸಂದೇಶಗಳು ಮತ್ತು ಇಮೇಲ್‌ಗಳನ್ನು ನಿರಾಕರಿಸುವ ಕಾನೂನುಬದ್ಧ ಹಕ್ಕನ್ನು ಉದ್ಯೋಗಿಗಳಿಗೆ ನೀಡುವ ಈ ಮಹತ್ವದ ಮಸೂದೆಯನ್ನು ಎನ್‌ಸಿಪಿ (ಎಸ್‌ಪಿ) ಸಂಸದೆ ಸುಪ್ರಿಯಾ ಸುಳೆ ಶುಕ್ರವಾರ (ಡಿಸೆಂಬರ್ 5) ಲೋಕಸಭೆಯಲ್ಲಿ ಮಂಡಿಸಿದ್ದಾರೆ.

ಸಂಪರ್ಕ ಕಡಿತ ಹಕ್ಕು ಮಸೂದೆ ಹೇಳುವುದೇನು?

ಅಧಿಕೃತ ಕೆಲಸದ ಸಮಯದ ನಂತರ ಮತ್ತು ರಜಾದಿನಗಳಲ್ಲಿ ಕೆಲಸಕ್ಕೆ ಸಂಬಂಧಿಸಿದ ಕರೆಗಳು, ಸಂದೇಶಗಳು ಮತ್ತು ಇಮೇಲ್‌ಗಳಿಗೆ ಪ್ರತಿಕ್ರಿಯಿಸುವಂತೆ ಉದ್ಯೋಗಿಗಳನ್ನು ಒತ್ತಾಯಿಸಬಾರದು ಎಂದು ಈ ಮಸೂದೆ ಹೇಳುತ್ತದೆ. ಶಿಸ್ತು ಕ್ರಮದ ಭಯವಿಲ್ಲದೆ, ಕರೆಗಳು ಮತ್ತು ಇಮೇಲ್‌ಗಳನ್ನು ನಿರಾಕರಿಸುವ ಹಕ್ಕನ್ನು ಇದು ಪ್ರತಿಯೊಬ್ಬ ಕೆಲಸಗಾರರಿಗೆ ನೀಡುತ್ತದೆ.

ಉದ್ಯೋಗಿಗಳು ಕೆಲಸದ ಸಮಯದ ನಂತರ ಕೆಲಸಕ್ಕೆ ಸಂಬಂಧಿಸಿದ ಕರೆಗಳು, ಇಮೇಲ್‌ಗಳು ಅಥವಾ ಸಂದೇಶಗಳಿಗೆ ಉತ್ತರಿಸುವ ಅಗತ್ಯವಿಲ್ಲ. ಪ್ರತಿಕ್ರಿಯಿಸಲು ನಿರಾಕರಿಸಿದ್ದಕ್ಕಾಗಿ ಯಾವುದೇ ಉದ್ಯೋಗಿ ವಿರುದ್ದ ಶಿಸ್ತು ಕ್ರಮ ಕೈಗೊಳ್ಳುವಂತಿಲ್ಲ. ಈ ನಿಯಮ ಫೋನ್ ಕರೆಗಳು, ಪಠ್ಯ ಸಂದೇಶಗಳು, ಇಮೇಲ್‌ಗಳು, ವಿಡಿಯೋ ಕರೆಗಳು ಮುಂತಾದ ಎಲ್ಲಾ ರೀತಿಯ ಸಂವಹನಕ್ಕೂ ಅನ್ವಯಿಸುತ್ತದೆ. ಅಗತ್ಯವಿದ್ದರೆ, ಉದ್ಯೋಗದಾತರು ಮತ್ತು ಉದ್ಯೋಗಿಗಳು ತುರ್ತು ಸಂಪರ್ಕ ನಿಯಮಗಳ ಬಗ್ಗೆ ಪರಸ್ಪರ ಪೂರ್ವ ಒಪ್ಪಂದ ಮಾಡಿಕೊಂಡಿರಬೇಕು. ಕಾನೂನು ಉಲ್ಲಂಘಿಸುವ ಸಂಸ್ಥೆಗಳಿಗೆ ಒಟ್ಟು ಉದ್ಯೋಗಿ ಸಂಭಾವನೆಯ ಶೇಕಡಾ 1 ರಷ್ಟು ದಂಡ ವಿಧಿಸಲು ಮಸೂದೆ ಪ್ರಸ್ತಾಪಿಸಿದೆ.

ತುರ್ತು ನಿಯಮಗಳು

ನೌಕರರ ವೈಯಕ್ತಿಕ ಸಮಯವನ್ನು ರಕ್ಷಿಸುವುದರ ಜೊತೆಗೆ, ನಿಜವಾದ ತುರ್ತು ಪರಿಸ್ಥಿತಿಗಳನ್ನು ಪರಿಹರಿಸಲು ಒಂದು ಕಾರ್ಯವಿಧಾನವನ್ನು ಸಹ ಮಸೂದೆ ಪ್ರಸ್ತಾಪಿಸುತ್ತದೆ. ಕೆಲಸದ ಸಮಯದ ನಂತರ ನೌಕರರನ್ನು ಸಂಪರ್ಕಿಸಲು ಪರಸ್ಪರ ಒಪ್ಪಿದ ನಿಯಮಗಳನ್ನು ರೂಪಿಸಲು ಸಮಿತಿಯನ್ನು ಸ್ಥಾಪಿಸಲು ಇದು ಸಲಹೆ ನೀಡುತ್ತದೆ.

ಉದ್ಯೋಗದಾತರು ಮತ್ತು ಉದ್ಯೋಗಿ ಪರಸ್ಪರ ಪೂರ್ವ ಮಾತುಕತೆ ನಡೆಸಿ ಒಪ್ಪಿಕೊಂಡ ಸಮಯದ ಅವಧಿಯಲ್ಲಿ ಯಾವುದೇ ರೀತಿಯ ಸಂವಹನದ ಮೂಲಕ ಸಂಪರ್ಕಿಸಬಹುದು. ನೌಕರರು ಕಚೇರಿ ಸಮಯವನ್ನು ಮೀರಿ ಕೆಲಸ ಮಾಡುತ್ತಿದ್ದರೆ, ಅವರೊಂದಿಗೆ ಸಂವಹನ ನಡೆಸಬಹುದು. ಆದರೆ, ಅವರು ಸಾಮಾನ್ಯ ವೇತನ ದರದಲ್ಲಿ ಅಧಿಕಾವಧಿಗೆ ವೇತನ ಪಡೆಯುತ್ತಿರಬೇಕು ಎಂದು ಮಸೂದೆ ಹೇಳುತ್ತದೆ.

ಈ ಮಸೂದೆಯ ಅಗತ್ಯವೇನು?

ಡಿಜಿಟಲ್ ಸಂವಹನ ಸಾಧನಗಳಿಂದ ಹೆಚ್ಚಿನ ಲಾಭವಿದೆ. ಆದರೆ, ಅವುಗಳ ಮೂಲಕ ಉದ್ಯೋಗಿಗಳು ಕೆಲಸದ ಅವಧಿಯ ಹೊರತಾಗಿಯೂ ನಿರಂತರ ಸಂಪರ್ಕದಲ್ಲಿ ಇರಬೇಕು ಎಂಬ ಸಂಸ್ಕೃತಿ ಬೆಳೆದಿದೆ. ಇದರಿಂದ ಉದ್ಯೋಗಿಗಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ನಿದ್ರಾಹೀನತೆ, ಒತ್ತಡ ಮತ್ತು ಮಾನಸಿಕ ಸುಸ್ತು, ಹಾಗೂ ಸಂದೇಶಗಳಿಗೆ ತಕ್ಷಣ ಪ್ರತಿಕ್ರಿಯಿಸಬೇಕೆಂಬ ಟೆಲಿಪ್ರೆಶರ್ ಅವುಗಳಲ್ಲಿ ಪ್ರಮುಖವಾಗಿವೆ. ಜೊತೆಗೆ, ಕೆಲಸಕ್ಕೆ ಸಂಬಂಧಿಸಿದ ಸಂದೇಶಗಳನ್ನು ನಿರಂತರವಾಗಿ ಪರಿಶೀಲಿಸುವ ಅಭ್ಯಾಸದಿಂದ ‘ಮಾಹಿತಿ ಅತಿಭಾರ’ (info-obesity) ಉಂಟಾಗುತ್ತಿದೆ ಎಂದು ಮಸೂದೆ ಹೇಳುತ್ತದೆ.

ಸುಪ್ರಿಯಾ ಸುಳೆ ಅವರು 2019ರಲ್ಲೂ ಇದೇ ರೀತಿಯ ಮಸೂದೆಯನ್ನು ಮಂಡಿಸಿದ್ದರು. ಇದೀಗ ಡಿಜಿಟಲ್ ಸಂವಹನ ಸಾಧನಗಳ ಮೂಲಕ ಉದ್ಯೋಗಿಗಳ ಮೇಲೆ ಹೇರುತ್ತಿರುವ ಒತ್ತಡವನ್ನು ಇನ್ನಷ್ಟು ವಿವರಿಸಿ ಮತ್ತು ಈ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿ ಹೊಸ ಮಸೂದೆ ಮಂಡಿಸಿದ್ದಾರೆ. ಭಾರತ ಪ್ರಸ್ತುತ ಜಗತ್ತಿನಲ್ಲೇ ಹೆಚ್ಚು ಬೇಡಿಕೆಯಿರುವ ವಾರಕ್ಕೆ 48 ಗಂಟೆಗಳ ಕೆಲಸದ ಮಿತಿಯನ್ನು ಅನುಸರಿಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...